ಹೇಮೆ ಬಲ ಮೇಲ್ದಂಡೆ ನಾಲೆಗೆ ನೀರು ಬಿಡಲು ಆಗ್ರಹ


Team Udayavani, Aug 3, 2019, 3:00 AM IST

heme

ಅರಕಲಗೂಡು: ಹೇಮಾವತಿ ಬಲ ಮೇಲ್ದಂಡೆ ನಾಲೆಗೆ ನೀರು ಹರಿಸಿ ಪ್ರಾಣಿ ಪಕ್ಷಿಗಳ ಜೀವ ರಕ್ಷಿಸುವಂತೆ ಒತ್ತಾಯಿಸಿ ಶಾಸಕ ಎ.ಟಿ.ರಾಮಸ್ವಾಮಿ ತಮ್ಮ ಕಾರ್ಯಕರ್ತರೊಂದಿಗೆ ಹೇಮಾವತಿ ಮುಖ್ಯ ಎಂಜಿನಿಯರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು. ಗೊರೂರು ಹೇಮಾವತಿ ಮುಖ್ಯ ಎಂಜಿನಿಯರ್‌ ಕಚೇರಿ ಮುಂದೆ ನೂರಾರು ಕಾರ್ಯಕರ್ತರೊಂದಿಗೆ ಹೇಮಾವತಿ ಬಲ ಮೇಲ್ದಂಡೆ ನಾಲೆಗಳಿಗೆ ನೀರು ಬಿಡುವ ಮೂಲಕ ಆ ವ್ಯಾಪ್ತಿಯ ಕೆರೆಕಟ್ಟೆಗಳನ್ನು ತುಂಬಿಸಿ ಜಾನುವಾರುಗಳ ಜೀವ ಉಳಿಸುವಂತೆ ಒತ್ತಾಯಸಿದರು.

ನಂತರ ಮುಖ್ಯ ಎಂಜಿನಿಯರ್‌ ಅವರೊಂದಿಗೆ ಚರ್ಚಿಸಿದ ಶಾಸಕ ಎ.ಟಿ.ರಾಮಸ್ವಾಮಿ, ನೀರು ಬಿಡಲು ಅಧಿಕಾರಿಗಳು ಅಸಹಾಯಕರು ಎಂದು ತಿಳಿದಾಗ, ಕಚೇರಿಯಿಂದ ಹೊರಬಂದು ತಮ್ಮ ಕಾರ್ಯಕರ್ತರೊಂದಿಗೆ ಚರ್ಚಿಸಿ ಅಣೆಕಟ್ಟೆಯಿಂದ ನದಿಗೆ ಬಿಟ್ಟಿರುವ ನೀರನ್ನು ನಾವೇ ನಿಲ್ಲಿಸಿ ನಾಲೆಗಳ ಬಾಗಿಲನ್ನು ತೆರೆಯುವ ಮೂಲಕ ನಾಲೆಗಳಿಗೆ ನೀರು ಹರಿಸುವ ಕಾರ್ಯಕ್ಕೆ ಮುಂದಾಗೋಣ. ಎಲ್ಲರೂ ನದಿಯ ತೀರಕ್ಕೆ ತೆರಳ್ಳೋಣ ಎಂದು ತಿಳಿಸಿ ಕಾರ್ಯಕರ್ತರೊಂದಿಗೆ ಪ್ರತಿಭಟನೆಯ ಮೂಲಕವೇ ತೆರಳಿದರು.

ಬಂಧನ: ಶಾಸಕರ ನಿಲುವನ್ನು ತಿಳಿದ ಪೊಲೀಸರು ಮುಂಜಾಗ್ರತೆಯಾಗಿ ನದಿಗೆ ಪ್ರವೇಶಿಸುವ ಬಾಗಿಲನ್ನು ಮುಚ್ಚಿ ಪೊಲೀಸ್‌ ಭದ್ರತೆ ಕಲ್ಪಿಸಿದರು. ಸ್ಥಳಕ್ಕೆ ಬಂದ ಪ್ರತಿಭಟನಾಕಾರರು, ದ್ವಾರದ ಮುಖ್ಯ ಬಾಗಿಲ ಬೀಗ ಮುರಿದು ಒಳನುಗ್ಗಲು ಪ್ರಯತ್ನಿಸಿದಾಗ, ಪ್ರತಿಭಟನಾಕಾರನ್ನು ಪೊಲೀಸರು ತಡೆದರು. ಪೊಲೀಸರ ವರ್ತನೆಯಿಂದ ಕೋಪಿತಗೊಂಡ ಶಾಸಕರು, ಪ್ರತಿಭಟನೆಗೆ ಮುಂದಾದರು. ಆಗ ಪೊಲೀಸರು ಶಾಸಕ ಎ.ಟಿ.ರಾಮಸ್ವಾಮಿ ಮತ್ತು ಕಾರ್ಯಕರ್ತರನ್ನು ಬಂಧಿಸಿ ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಸಂಕಷ್ಟ ತಪ್ಪಿಸಿ ರೈತರನ್ನು ಉಳಿಸಿ: ಹಾಸನ ಜಿಲ್ಲೆಯಲ್ಲಿ ವಾಡಿಕೆ ಮಳೆ 187 ಮಿ.ಮೀ. ಆಗಬೇಕಾಗಿತ್ತು. ಆದರೆ ಈ ಭಾರಿ ಕೇವಲ 67 ಮಿ.ಮೀ ಆಗಿದೆ. ಇಂತಹ ಪರಿಸ್ಥಿತಿಯಲ್ಲಿ ಕೆರೆಕಟ್ಟೆಗಳಲ್ಲಿ ನೀರು ಇಲ್ಲದೇ ಒಣಗಿವೆ. ಜಾನುವಾರುಗಳಿಗೆ ಕುಡಿಯಲು ನೀರು ಇಲ್ಲದೇ ಪರಿತಪಿಸುವ ಪರಿಸ್ಥಿತಿ ಈಗಲೇ ತಲೆದೋರಿದೆ. ಮುಂದೆ ಹೇಗೆ ಎಂಬ ಆತಂಕವಾಗುತ್ತಿದೆ. ಇದನ್ನು ಮನಗಂಡು ರಾಜ್ಯ ಸರ್ಕಾರ ಕೂಡಲೇ ನಮ್ಮ ನದಿಯ ನೀರನ್ನು ನಮಗೆ ನೀಡಿದ ನಂತರ ಬೇರೆಯವರಿಗೆ ಹರಿಸಲಿ ಎಂದು ಎಚ್ಚರಿಕೆ ನೀಡಿದರು.

ಒಳಹರಿವಿಗಿಂತ ಹೊರಹರಿವೇ ಹೆಚ್ಚು: ಹೇಮಾವತಿ ನದಿಯ ತಪ್ಪಲಿನಲ್ಲಿ ಮಳೆ ಪ್ರಮಾಣ ಗಣನೀಯವಾಗಿ ಕುಸಿದಿರುವ ಪರಿಣಾಮ ನದಿಗೆ 4000 ಕ್ಯೂಸೆಕ್‌ ಒಳಹರಿವು ಇದ್ದರೆ, ನದಿಯಿಂದ ಕೆಆರ್‌ಎಸ್‌ಗೆ 5000 ಕ್ಯೂಸೆಕ್‌ ನೀರನ್ನು 5 ದಿನಗಳಿಂದ ಬಿಡಲಾಗುತ್ತಿದೆ. ಈಗ ನದಿಯಲ್ಲಿ 15 ಟಿಎಂಸಿ ನೀರು ಇದ್ದು, ಉಪಯೋಗಕ್ಕೆ 11 ಟಿಎಂಸಿ ನೀರು ಮಾತ್ರ ಬಳಕೆಯಾಗಲಿದೆ. ಉಳಿದ 4 ಟಿಎಂಸಿ ಉಪಯೋಗಕ್ಕೆ ಬಾರದೇ ತಟಸ್ಥ ನೀರಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಕೂಡಲೇ ಸಲಹಾ ಸಮಿತಿ ಸಭೆ ಕರೆದು ನಾಲೆಗಳಿಗೆ ನೀರು ಹರಿಸುವಂತೆ ಒತ್ತಾಯಿಸಿದರು.

ಮುಖ್ಯಮಂತ್ರಿ ಒನ್‌ ಮ್ಯಾನ್‌ ಆರ್ಮಿ: ರಾಜ್ಯ ಸರ್ಕಾರ ಅಸ್ಥಿತ್ವಕ್ಕೆ ಬಂದು ದಿನಗಳೇ ಕಳೆದರೂ ಮುಖ್ಯಮಂತ್ರಿಯನ್ನು ಹೊರತುಪಡಿಸಿ ಉಳಿದ ಯಾವುದೇ ಸಚಿವರ ನೇಮಕಾತಿ ಆಗದೇ ಸರ್ಕಾರದ ಆಡಳಿತ ವ್ಯವಸ್ಥೆ ಕುಸಿದಿದೆ. ಎಲ್ಲಾ ಇಲಾಖಾ ಅಧಿಕಾರವನ್ನು ಮುಖ್ಯಮಂತ್ರಿಗಳೇ ನಿರ್ವಹಿಸುವ ಮೂಲಕ ಏಕ ಚಕ್ರಾಧಿಪತಿಯಂತೆ ವರ್ತಿಸುತ್ತಿದ್ದಾರೆ. ಇವರಿಗೆ ರಾಜ್ಯದಲ್ಲಿ ತಲೆದೋರಿರುವ ಭೀಕರ ಬರಗಾಲದ ಬಗ್ಗೆ ಚಿಂತೆಯೇ ಇಲ್ಲ ಎಂದು ಕಟುವಾಗಿ ಟೀಕಿಸಿದರು.

ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಜೆಡಿಎಸ್‌ ಮುಖಂಡ ದೊಡ್ಡಮಗ್ಗೆ ರಂಗಸ್ವಾಮಿ, ಜೆಡಿಎಸ್‌ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡರಾದ ಮುತ್ತಿಗೆ ರಾಜೇಗೌಡ, ಯೋಗೇಶ್‌, ಶಶಿಕುಮಾರ್‌, ರವಿಕುಮಾರ್‌, ನರಸೇಗೌಡ, ಕಿಶೋರ್‌, ಚೌಡೇಗೌಡ, ಎಚ್‌.ಮಾದೇಶ್‌, ಎಪಿಎಂಸಿ ಮಾಜಿ ಅಧ್ಯಕ್ಷ ಹೊನ್ನರಸೇಗೌಡ ಮತ್ತಿತರರು ಉಪಸ್ಥಿತರಿದ್ದರು.

ಪತ್ರ ಬರೆದ ಮಾರನೇ ದಿನ ನೀರು ಬಿಡುಗಡೆ: ರಾಜ್ಯ ಸರ್ಕಾರ ಹೇಮಾವತಿ ಬಲ ಮೇಲ್ದಂಡೆಗೆ ನೀರು ಹರಿಸುವಂತೆ ಕೋರಿ ಜು.28 ರಂದು ಪತ್ರ ಬರೆದ್ದೇನೆ. ನದಿಯಲ್ಲಿ 2892 ಅಡಿ ನೀರು ಇದ್ದು, ಈ ನೀರನ್ನು ನದಿಗೆ ಹರಿಸಿದರೆ, ನದಿ ಹಿನ್ನೀರಿನಲ್ಲಿರುವ ಬಲ ಮೇಲ್ದಂಡೆ ನಾಲೆಗೆ ನೀರು ಹರಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಮೊದಲು ನಾಲೆಗೆ ಆದ್ಯತೆ ಕೊಡುವಂತೆ ಪತ್ರದಲ್ಲಿ ಮನವಿ ಮಾಡಿದ್ದೆ.

ಆದರೆ, ನಾನು ಪತ್ರ ಬರೆದ ಮಾರನೇ ದಿನವೇ ನದಿಗೆ 3000 ಕ್ಯೂಸೆಕ್‌ ನೀರನ್ನು ಹರಿದು ಬಿಡಲಾಗುತ್ತಿದೆ. ಈ ನಿರ್ಧಾರ ಸರಿಯಲ್ಲ. ಈ ಕೂಡಲೇ ಸರ್ಕಾರ ಮಧ್ಯ ಪ್ರವೇಶಿಸಿ ನಮ್ಮ ನಾಲಾ ವ್ಯಾಪ್ತಿಯ ರೈತರ ಸಂಕಷ್ಟಕ್ಕೆ ಕೈಜೋಡಿಸಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆಗೆ ಮುಂದಾಗಬೇಕಾಗುತ್ತದೆ ಎಂದು ಸರ್ಕಾರಕ್ಕೆ ಶಾಸಕ ಎ.ಟಿ.ರಾಮಸ್ವಾಮಿ ಎಚ್ಚರಿಕೆ ನೀಡಿದರು.

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.