ಪೊಲೀಸ್‌ ಪರಿವಾರಕ್ಕೆ ಹೈಟೆಕ್‌ ವಸತಿಗೃಹ


Team Udayavani, Jan 21, 2020, 3:00 AM IST

police-pariva

ಚನ್ನರಾಯಪಟ್ಟಣ: ಇಟಾಲಿಯನ್‌ ಕಿಚನ್‌, ಸೋಲಾರ್‌ ವಾಟರ್‌ ಬಿಸಿನೀರು, ನೆಲಕ್ಕೆ ಗ್ರಾನೈಟ್‌ ಕಲ್ಲು, ನಿರಂತರ ಹೇಮಾವತಿ ನದಿ ನೀರು, ಪ್ರತಿ ಬೆಡ್‌ ರೂಮಿಗೆ ಕಬೋರ್ಡ್‌, ವಾಹನ ನಿಲ್ಲಿಸಲು ಅಗತ್ಯ ಪಾರ್ಕಿಂಗ್‌ ಸ್ಥಳ ಹೀಗೆ ಮಹಾನಗರಗಳಲ್ಲಿ ಇರುವ ರೀತಿಯಲ್ಲಿ ಪಟ್ಟಣದ ಗ್ರಾಮಾಂತರ ಪೊಲೀಸ್‌ ಠಾಣೆ ಸಮೀಪದಲ್ಲಿ ಪೊಲೀಸ್‌ ಪರಿವಾರಕ್ಕೆ ಹೈಟೆಕ್‌ ವಸತಿಗೃಹಗಳು ಸಿದ್ಧಗೊಂಡಿವೆ.

ಸುಸಜ್ಜಿತ ಆಧುನಿಕ ಸೌಲಭ್ಯದ ವಸತಿ ಗೃಹಗಳನ್ನು ಪಟ್ಟಣದಲ್ಲಿನ ಗ್ರಾಮಾಂತರ ಪೊಲೀಸ್‌ ಠಾಣೆ ಹಾಗೂ ವೃತ್ತನಿರೀಕ್ಷಕರ ಕಚೇರಿ ಸಮೀಪದಲ್ಲಿ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿಯೇ ಕರ್ನಾಟಕ ಪೊಲೀಸ್‌ ಹೌಸಿಂಗ್‌ ಕಾರ್ಪೋರೇಷನ್‌ ವತಿಯಿಂದ ರಾಜ್ಯ ಸರ್ಕಾರ ನಿರ್ಮಾಣ ಮಾಡಿಕೊಡುತ್ತಿದೆ. ನೂತನವಾಗಿ ತಲೆ ಎತ್ತುತ್ತಿರುವ ವಸತಿಗೃಹದಿಂದ ಅನೇಕ ಪೊಲೀಸ್‌ ಕುಟುಂಬಗಳು ಹರ್ಷಗೊಂಡಿವೆ.

ಕೋಟ್ಯಂತರ ರೂ. ವೆಚ್ಚ: ಸರ್ಕಾರದಿಂದ ಸುಮಾರು 5.10 ಕೋಟಿ ರೂ. ವೆಚ್ಚದಲ್ಲಿ ಮೂರು ಅಪಾರ್ಟ್‌ಮೆಂಟ್‌ ನಿರ್ಮಾಣ ಮಾಡುತ್ತಿದ್ದು, ಅದರಲ್ಲಿ 36 ಮನೆಗಳು ಇವೆ, ಚನ್ನರಾಯಪಟ್ಟಣಕ್ಕೆ ಎರಡು ಅಪಾರ್ಟ್‌ಮೆಂಟ್‌ ಬಿಡುಗಡೆಯಾಗಿದ್ದು, ಒಂದು ನುಗ್ಗೇಹಳ್ಳಿ ಹೋಬಳಿ ಕೇಂದ್ರದಲ್ಲಿನ ಪೊಲೀಸರಿಗೆ ಮಂಜೂರಾಗಿತ್ತು. ಆದರೆ ನಗರದಲ್ಲಿ ನೂತನವಾಗಿ ಸಂಚಾರ ಪೊಲೀಸ್‌ ಠಾಣೆ ಇರುವುದರಿಂದ ಅಲ್ಲಿನ ಸಿಬ್ಬಂದಿಗಳ ಅನುಕೂಲಕ್ಕಾಗಿ ಇಲಾಖೆ ಅಧಿಕಾರಿಗಳು ಚನ್ನರಾಯಪಟ್ಟಣದಲ್ಲಿ ನಿರ್ಮಾಣ ಮಾಡಿಸುತ್ತಿದ್ದಾರೆ.

ಪಾಳು ಬಿದ್ದ ಜಾಗದಲ್ಲಿ ಹೈಟೆಕ್‌ ಗೃಹಗಳು: ಪೊಲೀಸ್‌ ಇಲಾಖೆಗೆ ಸೇರಿದ್ದ ನಿವೇಶನ ಹಲವು ವರ್ಷದಿಂದ ಪಾಳು ಬಿದ್ದಿತ್ತು. ಈಜಾಗವನ್ನು ಇಲಾಖೆ ಸದ್ಬಳಕೆ ಮಾಡಿಕೊಂಡಿದೆ. ನೂತನವಾಗಿ ನಿರ್ಮಾಣ ಗೊಂಡಿದ್ದರೂ ವಸತಿ ಗೃಹದ ಬಳಿಯಲ್ಲಿ ಶತಮಾನಗ ಹಿಂದೆ ಪೊಲೀಸ್‌ ಸಿಬ್ಬಂದಿಗಾಗಿ ನಿರ್ಮಾಣ ಮಾಡಿರುವ ಹೆಂಚಿನ ಮನೆಗಳಿವೆ ಅವುಗಳನ್ನು ತೆರವು ಮಾಡಿ ಆ ಸ್ಥಳದಲ್ಲಿಯೂ ಉತ್ತಮವಾಗಿ ವಸತಿಗೃಹ ನಿರ್ಮಾಣ ಮಾಡಬಹುದಾಗಿದ್ದು ಈ ಬಗ್ಗೆ ಇಲಾಖೆ ಮೇಲಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಗಮನ ಹರಿಸಬೇಕಿದೆ.

ಹೋಬಳಿ ಕೇಂದ್ರದಲ್ಲಿ ಸಾಕಷ್ಟು ಮನೆ ಇವೆ: ತಾಲೂಕಿನಲ್ಲಿ ಹಿರೀಸಾವೆ, ನುಗ್ಗೇಹಳ್ಳಿ ಹಾಗೂ ಶ್ರವಣಬೆಳಗೊಳ ಹೋಬಳಿ ಕೇಂದ್ರದಲ್ಲಿ ಪೊಲೀಸ್‌ ಠಾಣೆ ಇದ್ದು ಅಲ್ಲಿನ ಸಿಬ್ಬಂದಿಗೆ ಅಗತ್ಯ ಇರುವಷ್ಟು ವಸತಿ ಗೃಹಗಳಿವೆ, ನುಗ್ಗೇಹಳ್ಳಿ ಹಾಗೂ ಶ್ರವಣಬೆಳಗೊಳದಲ್ಲಿ ಅನೇಕ ವಸತಿ ಗೃಹಗಳು ಖಾಲಿ ಇವೆ. ಅಲ್ಲಿನ ಸಿಬ್ಬಂದಿ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪಟ್ಟಣ ಪ್ರದೇಶಗಳಲ್ಲಿ ವಾಸ ಮಾಡುತ್ತಿರುವುದರಿಂದ ಖಾಲಿ ಇವೆ ಎನ್ನಲಾಗುತ್ತಿದೆ.

ಕೆಲವರು ಸ್ವಂತ ಮನೆಯಲ್ಲಿ ವಾಸ: ಪಟ್ಟಣದಲ್ಲಿ ನಿರ್ಮಾಣ ಮಾಡುತ್ತಿರುವ ವಸತಿ ಗೃಹಗಳು ಸಿಬ್ಬಂದಿಗೆ ಸಾಕಾಗಲಿವೆ ಅನೇಕ ಮಂದಿ ಪಟ್ಟಣಗಳಲ್ಲಿ ಸ್ವಂತ ಮನೆ ನಿರ್ಮಿಸಿಕೊಂಡು ವಾಸವಿದ್ದಾರೆ. ಇನ್ನು ಹಲವು ಮಂದಿ ತಾಲೂಕಿನವರಾಗಿದ್ದು, ತಮ್ಮ ಸ್ವಗ್ರಾಮದಿಂದಲೇ ನಿತ್ಯ ಕರ್ತವ್ಯಕ್ಕೆ ಆಗಮಿಸುತ್ತಿದ್ದಾರೆ, ಅನ್ಯ ತಾಲೂಕು, ಜಿಲ್ಲೆಯಿಂದ ಇಲ್ಲಿ ಸೇವೆ ಸಲ್ಲಿಸುತ್ತಿರುವವರಿಗೆ ವಸತಿ ಗೃಹಗಳು ಸಾಕಾಗಲಿವೆ.

ಏನೇನು ಸೌಲಭ್ಯವಿದೆ?: ನೂತನ ವಸತಿ ಗೃಹವು ಎರಡು ಮಲಗುವ ಕೊಠಡಿ ಹೊಂದಿದ್ದು, ಒಂದರಲ್ಲಿ ಅಟ್ಯಾಚ್‌ ಬಾತ್‌ರೂಂ ವ್ಯವಸ್ಥೆ ಮಾಡಲಾಗಿದೆ. ಸ್ನಾನಕ್ಕಾಗಿ ಸೋಲಾರ್‌ ಬಿಸಿ ನೀರಿನ ವ್ಯವಸ್ಥೆ, ಕುಡಿಯಲು ಪುರಸಭೆಯಿಂದ ಹೇಮಾವತಿ ನೀರು ನೀಡಲಾಗುತ್ತಿದ್ದು, ದಿನದ 24 ತಾಸು ಅಡುಗೆ ಕೋಣೆ ಹಾಗೂ ಸ್ನಾನದ ಕೊಠೆಡಿಗೆ ನೀರಿನ ಸೌಲಭ್ಯವಿದೆ. ಬೈಕ್‌ ನಿಲ್ಲಿಸಲು ಜಾಗವನ್ನು ಮಾಡಲಾಗಿದೆ.

ಹೆಂಚಿನ ಮನೆ ತೆರವು ಮಾಡಿ: ಪೊಲೀಸ್‌ ಕಾಲೋನಿಯಲ್ಲಿ ಸುಮಾರು 25ಕ್ಕೂ ಹೆಚ್ಚು ಹಂಚಿನ ಮನೆಗಳಿದ್ದು, ಅವು ಸ್ವತಂತ್ರ ಪೂರ್ವದಲ್ಲಿ ನಿರ್ಮಾಣ ಮಾಡಲಾಗಿದೆ. ಬಹುತೇಕ ಎಲ್ಲಾ ಮನೆಗಳು ಶಿಥಿಲಗೊಂಡಿರುವುದರಿಂದ ಪಾಳುಬಿದ್ದಿವೆ. ಆದರೂ ಐದು ಮಂದಿ ಪೇದೆ ಅದರಲ್ಲಯೇ ವಾಸವಾಗಿದ್ದಾರೆ. ಈಗಾಗಲೆ ಇವುಗಳನ್ನು ತೆರವು ಮಾಡಲು ಇಲಾಖೆಯ ಅಧಿಕಾರಿಗಳು ಸಂಬಂಧಪಟ್ಟವರೊಂದಿಗೆ ಪತ್ರ ವ್ಯವಹಾರ ಮಾಡಿದ್ದಾರೆ. ಅಲ್ಲಿಂದ ತೆರವು ಮಾಡಲು ಅನುಮತಿ ಬರಬೇಕಿದೆ.

ಇಲಾಖೆಯಿಂದ ವಸತಿ ಪಡೆಯುವ ಸಿಬ್ಬಂದಿ ಅರ್ಜಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಗೆ ಅರ್ಜಿ ಸಲ್ಲಿಸಿದ್ದು, ಅವರಲ್ಲಿ ಹಿರಿತನದ ಆಧಾರದ ಮೇಲೆ ನೀಡಲಾಗುತ್ತದೆ. ನಗರ ಠಾಣೆ, ಗ್ರಾಮಾಂತ ಹಾಗೂ ಸಂಚಾರಿ ಠಾಣೆ ಸಿಬ್ಬಂದಿಗೆ ಮೊದಲ ಆದ್ಯತೆ ನೀಡಲಾಗಿದೆ. ಅಗತ್ಯಕ್ಕಿಂತ ಹೆಚ್ಚು ಅರ್ಜಿಗಳು ಬಂದಿದ್ದರೆ ಲಾಟರಿ ಮೂಲಕ ಹೈಟೆಕ್‌ ಮನೆಯನ್ನು ಇಲಾಖೆ ಮೇಲಧಿಕಾರಿಗಳು ಅಲಾಟ್‌ ಮಾಡಲಿದ್ದಾರೆ.
-ಬಿ.ಜಿ.ಕುಮಾರ್‌, ವೃತ್ತ ನಿರೀಕ್ಷಕ

* ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.