ಮಳೆಗಾಲ ಸಮೀಪಿಸಿದರೂ ಮುಗಿಯದ ಹೆದ್ದಾರಿ ದುರಸ್ತಿ

ಶಿರಾಡಿ ಘಾಟಿಯ ದೋಣಿಗಾಲ್‌ನಿಂದ ಅಡ್ಡ ಹೊಳೆಯವರೆಗೆ ಸುಮಾರು 25ಕ್ಕೂ ಹೆಚ್ಚು ಸ್ಥ ಳಗಳಲ್ಲಿ ಭೂಕುಸಿತ

Team Udayavani, Jun 17, 2019, 10:58 AM IST

hasan-tdy-1..

ಸಕಲೇಶಪುರ ತಾಲೂಕಿನ ದೋಣಿಗಾಲ್ ಸಮೀಪ ದುರಸ್ತಿಗೊಳ್ಳುತ್ತಿರುವ ರಸ್ತೆ.

ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ 75ರ ಶಿರಾಡಿ ಘಾಟಿಯಲ್ಲಿ ಕಳೆದ ವರ್ಷದ ಮಳೆಗಾಲದಲ್ಲಿ ಅಡ್ಡಹೊಳೆಯಿಂದ ಮಾರನಹಳ್ಳಿಯವರೆಗೆ ಸಂಭವಿಸಿದ ಭೂಕುಸಿತದಿಂದ ಸೃಷ್ಟಿಯಾದ ಹಲವು ಅಪಾಯಕಾರಿ ಸ್ಥಳಗಳಲ್ಲಿ ಶಾಶ್ವತ ಕಾಮಗಾರಿ ಮಾಡದಿರುವುದು ಆತಂಕಕಾರಿ ಸಂಗತಿಯಾಗಿದೆ.

ಭೂಕುಸಿತ: ಕಳೆದ ವರ್ಷ ಸುರಿದ ಅತಿವೃಷ್ಟಿಯಿಂದಾಗಿ ರಾಷ್ಟ್ರೀಯ ಹೆದ್ದಾರಿ 75 ತಾಲೂಕಿನ ದೋಣಿಗಾಲ್ನಿಂದ ಅಡ್ಡಹೊಳೆಯವರೆಗೆ ಸುಮಾರು 25ಕ್ಕೂ ಹೆಚ್ಚು ಸ್ಥಳಗಳಿಲ್ಲಿ ಭೂಕುಸಿತ ಉಂಟಾಗಿ ಹೆದ್ದಾರಿ ಆಗಾಗ ಬಂದ್‌ ಆಗಿತ್ತು. ತಾಲೂಕಿನ ಮಾರನಹಳ್ಳಿ ಸಮೀಪ ಗುಡ್ಡ ಕುಸಿದ‌ು ಟ್ಯಾಂಕರ್‌ವೊಂದು ಪ್ರಪಾತಕ್ಕೆ ಉರುಳಿ ಅದರಲ್ಲಿದ್ದ ಚಾಲಕ ಹಾಗೂ ಕ್ಲೀನರ್‌ ನೀರಿನಲ್ಲಿ ಮೃತಪಟ್ಟಿದ್ದರು. ಚಾಲಕನ ಮೃತದೇಹವನ್ನು ಸತತ ಕಾರ್ಯಾಚರಣೆ ನಡೆಸಿ ತೆಗೆಯಲಾಗಿತ್ತು.

ನಿರಂತರ ಅಪಘಾತ: ನಿರಂತರವಾಗಿ ಭೂಕುಸಿತ ಸಂಭವಿಸುತ್ತಲೇ ಇದ್ದ ಕಾರಣದಿಂದ ಕಳೆದ ವರ್ಷ ಆ.13ರಿಂದ ನವೆಂಬರ್‌ ಮಧ್ಯ ಭಾಗದವರೆಗೂ ಈ ಮಾರ್ಗದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿತ್ತು. ಪರಿಣಾಮವಾಗಿ ಬೆಂಗಳೂರು- ಮಂಗಳೂರು ನಡುವಿನ ವಾಹನ ಸಂಚಾರ ಮತ್ತು ಸರಕು ಸಾಗಣೆಯ ಮೇಲೆ ಬಲವಾದ ಹೊಡೆತ ಬಿದ್ದಿತ್ತು.

ಕಾಮಗಾರಿ ವಿಳಂಬ: ಅಡ್ಡಹೊಳೆಯಿಂದ ಮಾರನ ಹಳ್ಳಿಯವರೆಗೆ ಸುಮಾರು 12 ಕಡೆಗಳಲ್ಲಿ ಗುಡ್ಡ ಕುಸಿದು ರಸ್ತೆಯ ಮೇಲೆ ಬಿದ್ದಿದ್ದರೆ, 13 ಕಡೆಗಳಲ್ಲಿ ಹೆದ್ದಾರಿಯ ಬದಿಯ ತಡೆಗೋಡೆ ಕುಸಿದು ಆಳವಾದ ಕಣಿವೆಗೆ ಉರುಳಿತ್ತು. ರಸ್ತೆಯ ಮೇಲೆ ಬಿದ್ದಿದ್ದ ಮಣ್ಣನ್ನು ತೆರವು ಮಾಡಿರುವುದು ಮತ್ತು ತಡೆಗೋಡೆ ಕುಸಿದ ಸ್ಥಳಗಳಲ್ಲಿ ಮರಳಿನ ಚೀಲ ಪೇರಿಸಿ, ಬಣ್ಣದ ರಿಬ್ಬನ್‌ ಕಟ್ಟಿ ಎಚ್ಚರಿಕೆ ನೀಡಿರುವುದರ ಹೊರತಾಗಿ ಯಾವ ಕೆಲಸವೂ ಆಗಿಲ್ಲ.ಇನ್ನು ಕೆಲವಡೆ ಟಿಪ್ಪರ್‌ಗಳ ಮುಖಾಂತರ ಕುಸಿದ ರಸ್ತೆಯ ಬದಿಯಲ್ಲಿ ಮಣ್ಣು ಸುರಿಯಲಾಗಿದ್ದು ಆದರೆ ಇದು ಮಳೆಗಾಲದಲ್ಲಿ ಉಳಿಯುವುದು ಅನುಮಾನವಾಗಿದೆ.

ಎತ್ತಿನ ಹೊಳೆ ಕಾಮಗಾರಿಯಿಂದ ಆಪತ್ತು: ಕಳೆದ ಬಾರಿ ಗುಡ್ಡ ಕುಸಿದಿದ್ದ ಬಹುತೇಕ ಸ್ಥಳಗಳಲ್ಲಿ ಈ ಬಾರಿಯೂ ಅಪಾಯದ ಸ್ಥಿತಿಯೇ ಇದೆ. ಅರ್ಧ ಜರಿದು ನಿಂತಿರುವ ಮಣ್ಣಿನ ರಾಶಿ, ಕಲ್ಲು ಬಂಡೆಗಳು ಕೆಳಕ್ಕೆ ಉರುಳಲು ಕಾದು ಕುಳಿತಿವೆ. ಇತ್ತೀಚೆಗೆ ಸುರಿದ ಸಣ್ಣ ಮಳೆಗೆ ಕೆಲವು ಕಡೆ ಮಣ್ಣಿನ ರಾಶಿ ತುಸು ಕೆಳಕ್ಕೆ ಜಾರಿರುವುದು ಕಂಡುಬರುತ್ತಿದೆ. ಜೊತೆಗೆ ಬೃಹತ್‌ ಯಂತ್ರಗಳನ್ನು ಬಳಸಿ ಎತ್ತಿನಹೊಳೆ ಕಾಮಗಾರಿ ಸಹ ಅಲ್ಲಲ್ಲಿ ಹೆದ್ದಾರಿ ಬದಿ ಮಾಡುತ್ತಿರುವುದು ಮತ್ತಷ್ಟು ಆತಂಕ ತಂದಿದೆ.

ಏಕಮುಖ ಸಂಚಾರದಿಂದ ಟ್ರಾಫಿಕ್‌ ಜಾಮ್‌: ಕೆಲವೆಡೆ ಇನ್ನು ಏಕಮುಖ ವಾಹನ ಸಂಚಾರಕ್ಕೆ ಮಾತ್ರ ಅವಕಾಶವಿದ್ದು, ಇದರಿಂದ ಹಲವು ಸಂದರ್ಭಗಳಲ್ಲಿ ಸರಾಗ ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿ ವಾಹನಗಳ ದಟ್ಟಣಿಯುಂಟಾಗಿ ವಾಹನ ಚಾಲಕರು ತೊಂದರೆ ಅನುಭವಿಸಬೇಕಾಗಿದೆ. ಹೆದ್ದಾರಿಯುದ್ದಕ್ಕೂ ಮತ್ತೆ ಭೂಕುಸಿತ ಸಂಭವಿಸಿದಂತೆ ತಡೆಯುವ ಸಂಬಂಧ ಅಧ್ಯಯನ ನಡೆಸಿ, ವರದಿ ನೀಡಲು ಎರಡು ಸಮಿತಿಗಳನ್ನು ನೇಮಿಸಲಾಗಿತ್ತು. ಬೆಂಗಳೂ ರಿನ ಭಾರತೀಯ ವಿಜ್ಞಾನ ಸಂಸ್ಥೆಯ ಮಣ್ಣು ಎಂಜಿನಿಯರಿಂಗ್‌ ವಿಭಾಗದ ಪ್ರೊ.ಬಿ.ಆರ್‌. ಶ್ರೀನಿವಾಸಮೂರ್ತಿ ನೇತೃತ್ವದ ಸಮಿತಿ ನೀಡಿದ್ದ ವರದಿ ಆಧರಿಸಿ, ಶಾಶ್ವತವಾಗಿ ಭೂಕುಸಿತ ತಡೆಗೆ ಕಾಮಗಾರಿ ಕೈಗೊಳ್ಳಲು ಪ್ರಸ್ತಾವನೆ ಸಿದ್ಧಪಡಿಸಲಾಗಿತ್ತು. ಆದರೆ ಈ ವರದಿಯನ್ನು ಅನುಷ್ಠಾನಕ್ಕೆ ತರಲಾಗಿಲ್ಲ. ಭರ್ಜರಿ ಮಳೆ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಉಳಿದಿವೆ.

ಕೊನೆಯ ಹಂತದಲ್ಲಿ ಶಿರಾಡಿ ಘಾಟಿಯಲ್ಲಿ ಭೂಕುಸಿತ ತಡೆ ಕಾಮಗಾರಿ ಆರಂಭಕ್ಕೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ತಾಲೂಕಿನಲ್ಲಿದ್ದ ರಾಷ್ಟ್ರೀಯ ಹೆದ್ದಾರಿ 75 ಉಪವಿಭಾಗದ ಕಚೇರಿ ಸ್ಥಳಾಂತರ ವಾಗಿದ್ದು ಈ ಹಿನ್ನೆಲೆಯಲ್ಲಿ ಹೆದ್ದಾರಿ ಕಾಮಗಾರಿ ಕುರಿತು ಮಾಹಿತಿ ನೀಡುವವರೆ ಇಲ್ಲದಂತಾಗಿದೆ.

ಅಪಾಯಕಾರಿ ಸ್ಥಳದ ದುರಸ್ತಿ: ಹೆಸರು ಹೇಳಲು ಇಚ್ಛಿಸದ ಹೆದ್ದಾರಿ ಎಂಜಿನಿಯರ್‌ ಒಬ್ಬರು ದೂರ ವಾಣಿಯಲ್ಲಿ ಮಾತನಾಡಿ, ಈಗಾಗಲೇ 3 ಅಪಾ¿ ುಕಾರಿ ಸ್ಥಳಗಳನ್ನು ದುರಸ್ತಿ ಮಾಡಲಾಗಿದ್ದು 4ನೇ ಅಪಾಯಕಾರಿ ಸ್ಥಳವನ್ನು ಇದೀಗ ದುರಸ್ತಿ ಮಾಡಲಾಗುತ್ತಿದೆ. ಕೆಲವೊಂದು ಕಾರಣಗಳಿಂದ ಕಾಮಗಾರಿ ತಡವಾಗಿ ಆಗುತ್ತಿದೆ ಎಂದರು.

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.