ಸಾಮಾನ್ಯ ಸಭೆಯಲ್ಲಿ ಪುರಸಭೆ ಅಧ್ಯಕ್ಷರ-ಮುಖ್ಯಾಧಿಕಾರಿ ವಾಗ್ವಾದ


Team Udayavani, Aug 14, 2022, 4:30 PM IST

ಸಾಮಾನ್ಯ ಸಭೆಯಲ್ಲಿ ಪುರಸಭೆ ಅಧ್ಯಕ್ಷರ-ಮುಖ್ಯಾಧಿಕಾರಿ ವಾಗ್ವಾದ

ಹೊಳೆನರಸೀಪುರ: ಪುರಸಭೆ ಅಧ್ಯಕ್ಷರ ಗಮನಕ್ಕೆ ಬಾರದೇ ಅಜೆಂಡಾ ನಕಲನ್ನು ಪುರಸಭೆ ಮುಖ್ಯಾಧಿ ಕಾರಿ ಅವರು ತಯಾರಿಸಿದ್ದಾರೆ ಎಂದು ಪುರಸಭೆ ಅಧ್ಯಕ್ಷೆ ಸುಧಾನಳಿನಿ ತೀವ್ರ ಆಕ್ಷೇಪ ಪಡಿಸಿದ ಪ್ರಸಂಗ ಪಟ್ಟಣದ ಹೇಮಾವತಿ ನಿರೀಕ್ಷಣ ಮಂದಿರದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ನಡೆಯಿತು.

ಪುರಸಭೆ ಕಚೇರಿಯಲ್ಲಿ ಅಧ್ಯಕ್ಷರ ಗಮನಕ್ಕೆ ಬಾರದೇ ಎಲ್ಲಾ ಕಾರ್ಯಚಟುವಟಿಕೆ ಗಳು ನಡೆಯು ತ್ತಿದೆ. ಅಧ್ಯಕ್ಷರ ಟೇಬಲ್‌ಗೆ ಸಹಿ ಹಾಕುವ ಕಡತಗಳನ್ನು ಹೇಳದೆ ಕೇಳದೆ ತೆಗೆದುಕೊಂಡು ಹೋಗುತ್ತಾರೆ. ಕಡತ ಗಳು ಮಾಯವಾಗುತ್ತವೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಡಿ. ಶಾಂತಲಾ ಅವರ ಮೇಲೆ ಪುರಸಭೆ ಅಧ್ಯಕ್ಷೆ ಸುಧಾನಳಿನಿ ಅವರು ಹರಿಹಾಯ್ದರು. ಮುಖ್ಯಾಧಿಕಾರಿಗಳು ಯಾವುದನ್ನು ನನ್ನ ಗಮನಕ್ಕೆ ತರದೇ ಸರ್ವಾಧಿಕಾರಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಇವರ ವರ್ತನೆ ಖಂಡನೀಯ ಎಂದು ಅಕ್ರೋಶ ವ್ಯಕ್ತಪಡಿಸಿದರು.

ಅಧ್ಯಕ್ಷರು ಹಾಗೂ ಮುಖ್ಯಾಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆಯಿತು. ಇದಕ್ಕೆ ದ್ವನಿಗೂಡಿಸಿದ 11 ನೇ ವಾರ್ಡಿನ ಸದಸ್ಯ ಕೆ.ಆರ್‌. ಸುಬ್ರಮಣ್ಯ ರವರು ಜನರ ಹಿತಾ ಕಾಯುವ ಅಧ್ಯಕ್ಷರ ಲೋಪ ದೋಷದಿಂದ ಅಧಿಕಾರಿಗಳು ಹಿಡಿತದಲ್ಲಿಲ್ಲ. ಅಧ್ಯ ಕ್ಷರ ಸಹಿ ಇಲ್ಲದೆ ಕಡತಗಳು, ಅಜೆಂಡಾ ತಯಾರಾಗು ತ್ತಿರುವುದು ಹೇಗೆ ಸಾಧ್ಯ ಎಂದು ಗಂಭೀರವಾಗಿ ಆರೋಪ ಮಾಡಿದರು.

ಜಿಲ್ಲಾಧಿಕಾರಿಗಳ ಆದೇಶ ಮತ್ತು ಸೂಚನೆಗಳು ಪಾಲನೆ ಆಗುತ್ತಿಲ್ಲ. ನಾಮನಿರ್ದೇಶಿತ ಬಿಜೆಪಿ ಸದಸ್ಯ ಪ್ರಸನ್ನ ಅವರು ಮಾತನಾಡಿ ಸಭೆಯಲ್ಲಿ ನಡೆಯುವ ನಡಾವಳಿಕೆ ಯನ್ನು ನಡಾವಳಿ ಪುಸ್ತಕದಲ್ಲಿ ನಮೂದಿಸುವುದೇ ಇಲ್ಲ. ತಮಗೆ ಇಷ್ಟ ಬಂದಂತೆ ನಡಾವಳಿಗಳನ್ನು ಎಲ್ಲೋ ಕುಳಿತು ದಾಖಲಿಸುವುದು ನಡೆಯುತ್ತಿದೆ ಎಂದು ದೂರಿದರು. ಪುರಸಭೆಯಲ್ಲಿ ಬಯೋ ಮೆಟ್ರಿಕ್‌ ಅಳವಡಿಸುವಂತೆ ಹಲವಾರು ಬಾರಿ ಗಮ ನಕ್ಕೆ ತಂದರು ಕಾರ್ಯಗತ ಗೊಳಿಸಿಲ್ಲ. ಪಟ್ಟಣದ ಯುಜಿಡಿ ಕೊಳಚೆ ನೀರು ಹೇಮೆ ನದಿಗೆ ಹರಿಯು ತ್ತಿದೆ. ಇದನ್ನು ತಡೆಗಟ್ಟಲು ಕ್ರಮವಹಿಸಿಲ್ಲ ಎಂದು ಮುಖ್ಯಾಧಿಕಾರಿ ವಿ.ಡಿ.ಶಾಂತಲಾ ವಿರುದ್ಧ ಅಸಮಾಧಾನ ವ್ಯಕ್ತ ಪಡಿಸಿದರು.

ಪಟ್ಟಣದ ಎಲ್ಲಾ ವಾರ್ಡ್‌ಗಳಲ್ಲಿ ಒಳಚರಂಡಿ ವ್ಯವಸ್ಥೆ ಹದಗೆಟ್ಟಿದೆ. ತುರ್ತು ದುರಸ್ತಿಗೆ ಸ್ವತ್ಛತಾ ಯಂತ್ರ ಕಳಿಸುವಂತೆ ಮಾಹಿತಿ ನೀಡಿದರೆ, ಬಂದ ಸಿಬ್ಬಂದಿ ಹಣಕ್ಕಾಗಿ ಬೇಡಿಕೆ ಇಟ್ಟು ಮರಳುತ್ತಿದ್ದಾರೆ ಎಂದು ಪುರಸಭೆ ಸದಸ್ಯರು ಅಪಾದನೆ ಮಾಡಿದರು. ಈ ರೀತಿ ಹಣಕ್ಕಾಗಿ ಬೇಡಿಕೆಯಿಡುವುದು ಕಾನೂನು ಬಾಹಿರ. ಈ ಬಗ್ಗೆ ದೂರು ಬಂದರೆ ಶಿಸ್ತು ಕ್ರಮ ಕೈಗೊಳ್ಳುವೆ ಎಂದು ಅಧ್ಯಕ್ಷರು ಎಚ್ಚರಿಕೆ ನೀಡಿದರು.

ಅಧ್ಯಕ್ಷರು ಮತ್ತು ಮುಖ್ಯಾಧಿಕಾರಿಗಳ ನಡುವೆ ಹೊಂದಾಣಿಕೆ ಇಲ್ಲದೆ ಸಮಸ್ಯೆಗಳು ಬಗೆಹರಿಯು ತ್ತಿಲ್ಲ. ಸಾರ್ವಜನಿಕರಿಗೆ ಉತ್ತರ ಕೊಡದೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು 17 ನೇ ವಾರ್ಡಿನ ಪುರಸಭೆ ಸದಸ್ಯ ನಿಂಗಯ್ಯ ಬೇಸರ ಹೊರಹಾಕಿದ್ದಾರೆ.

ಟಾಪ್ ನ್ಯೂಸ್

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ

8

ʼAadujeevithamʼ Twitter review: ಪೃಥ್ವಿರಾಜ್‌ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?

12-baikampady

Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Revanna 2

BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್‌ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್‌.ಡಿ.ರೇವಣ್ಣ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.