ಆಶಾ ಕಾರ್ಯಕರ್ತೆಯರಿಗೆ ಗೌರವ ಸಲ್ಲಿಸಿ: ಶಾಸಕ
Team Udayavani, May 19, 2020, 7:56 AM IST
ಹಾಸನ: ಕೊರೊನಾ ನಿಯಂತ್ರಣ ಕಾರ್ಯದಲ್ಲಿ ಆಶಾ ಕಾರ್ಯಕರ್ತೆಯರು ತಮ್ಮ ಕುಟುಂಬವನ್ನೂ ಲೆಕ್ಕಿಸದೆ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರಿಗೆ ಗೌರವ ಸಲ್ಲಿಸಬೇಕಾದದ್ದು ನಮ್ಮೆಲ್ಲರ ಕರ್ತವ್ಯ ಎಂದು ಶಾಸಕ ಪ್ರೀತಂ ಜೆ.ಗೌಡ ತಿಳಿಸಿದರು.
ನಗರದ ಬೀರನಹಳ್ಳಿಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಆಯುಷ್ ಇಲಾಖೆಯ ವತಿಯಿಂದ ಆಶಾ ಕಾರ್ಯಕರ್ತೆಯರಿಗೆ ನೀಡು ತ್ತಿರುವ ಚವನ್ಪ್ರಾಶ್ ವಿತರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಆಶಾ ಕಾರ್ಯಕರ್ತೆಯರಿಗೆ ರೋಗ ನಿರೋಧಕ ಶಕ್ತಿಯನ್ನು ವೃದಿಟಛಿಸುವ ಸಲುವಾಗಿ ಆಯುಷ್ ಚವನ್ಪ್ರಾಶ್ ನೀಡಲಾಗುತ್ತಿದೆ ಎಂದರು.
ಕೊರೋನಾ ವಿರುದಟಛಿದ ಹೋರಾಟ ದಲ್ಲಿ ಆಶಾ ಕಾರ್ಯಕರ್ತೆಯರು ಅವಿರತವಾದ ಸೇವೆ ಸಲ್ಲಿಸಿದ್ದಾರೆ. ಹಾಗಾಗಿ ಅವರ ಆರೋಗ್ಯ ದೃಷ್ಟಿಯಿಂದ ಅವರ ಆರೋಗ್ಯದ ಕಡೆ ಸರ್ಕಾರ ಇನ್ನೂ ಹೆಚ್ಚು ಗಮನಹರಿಸಬೇಕು ಎಂದರು.
ಜಿಲ್ಲಾ ಆಯುಷ್ ಅಧಿಕಾರಿ ಡಾ. ವೀಣಾಲತಾ, ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ನಾಗೇಶ್, ರಾಷ್ಟ್ರೀಯ ನಗರ ಆರೋಗ್ಯ ಅಭಿಯಾನದ ಜಿಲ್ಲಾ ವ್ಯವ ಸ್ಥಾಪಕ ಯಶ್ವಂತ್, ತಾಲೂಕು ಪಂಚಾ ಯತಿ ಸದಸ್ಯ ಪ್ರದೀಪ್ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.