ಗಾಳಿ ಮಳೆಗೆ ಕುಸಿದ ಮನೆಗಳು: ಅಪಾರ ನಷ್ಟ

ನೀರಿನ ಸಮಸ್ಯೆ ನಿವಾರಣೆಗೆ ನೋಡೆಲ್‌ ಅಧಿಕಾರಿಗಳ ನೇಮಕ

Team Udayavani, May 14, 2019, 9:45 AM IST

hasan-tdy-2..

ಹೊಳೆನರಸೀಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ಅತಿವೃಷ್ಟಿ ಅನಾವೃಷಿ ತುರ್ತುಸಭೆ ನಡೆಸಿದರು.

ಹೊಳೆನರಸೀಪುರ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಗಳು ಕುಸಿದು ಅಪಾರ ನಷ್ಟವಾಗಿದೆ ಎಂದು ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ನುಡಿದರು.

ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ಸಾಕಷ್ಟು ನಷ್ಟಕ್ಕೆ ಕಾರಣ ವಾಗಿದೆ ಎಂದರು.

ಕುಡಿಯುವ ನೀರಿನ ಸಮಸ್ಯೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಬಾರದೇ ಕುಡಿಯುವ ನೀರಿನ ಕೊರತೆಯಿಂದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮೂರು ಹೋಬಳಿ ಗಳಿಗೆ ಮೂವರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಸಂಪೂರ್ಣ ತನಿಕೆ ನಡೆಸಿ ಪೂರ್ಣ ಮಾಹಿತಿ ನೀಡಿ ಸಂಕಷ್ಟದಲ್ಲಿರುವ ಜನತೆಗೆ ಸಹಕಾರ ನೀಡಲು ಮುಂದಾಗ ಬೇಕೆಂದು ಮನವಿ ಮಾತನಾಡಿದರು.

ನೋಡೆಲ್ ಅಧಿಕಾರಿಗಳ ನೇಮಕ: ತಾಲೂಕಿ ನಲ್ಲಿ ಮುಂಗಾರು ಮಳೆಯಿಂದಾಗಿ ಸಂಭವಿಸ ಬಹುದಾದ ನಷ್ಟಗಳನ್ನು ತಡೆಯಲು ಮುನ್ನೆಚ್ಚ ರಿಗೆ ಕ್ರಮವಾಗಿ ಮೂರು ಹೋಬಳಿಗಳಿಗೂ ಒಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.

ತಾಲೂಕಿನ ಕಸಬಾ ಹೋಬಳಿಗೆ ಪಶು ಸಂಗೋಪನಾ ಇಲಾಖೆಯ ವೈದ್ಯ ಡಾ.ತಿಪ್ಪೇ ಸ್ವಾಮಿ, ಹಳೇಕೋಟೆ ಹೋಬಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಲಿಂಗು ಹಾಗು ಹಳ್ಳಿಮೈಸೂರು ಹೋಬಳಿಗೆ ಲೊಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನ್‌ ಅವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಯಿತು.

ಮಳೆಯಿಂದ ಮನೆಗಳಿಗೆ ಹಾನಿ: ಈಗಾಗಲೇ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ತಾಲೂಕಿನ ಅತ್ತಿಚೌಡೇನಹಳ್ಳಿ ಗ್ರಾಮದ ಸುಬ್ಬೇಗೌಡ‌, ಅವರಿಗೆ ಸೇರಿದ ವಾಸದ ಮನೆ ಬಿರುಗಾಳಿಯಿಂದ ನೆಲಕಚ್ಚಿದೆ, ಶಿಗರನಹಳ್ಳಿ ಗ್ರಾಮದ ಶಾರದಮ್ಮ ಅವರಿಗೆ ಸೇರಿದ 15 ಸಾವಿರ ಬಾಳೆಗಿಡಗಳಲ್ಲಿ ಶೇ. 40 ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಶಿಗರನಹಳ್ಳೀ ರಾಮೇಗೌಡ ಅವರ ಮನೆ ನೆಲಕಚ್ಚಿದೆ. ಕಾಮ ಸಮುದ್ರದ ಶಿವಣ್ಣ ಅವರಿಗೆ ಸೇರಿದ ಮನೆಗೆ ಅಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ಆಹಾರ ಪದಾರ್ಥಗಳು ಸೇರಿದಂತೆ ಸಾಕಷ್ಟು ಸುಟ್ಟುಕರಕಲಾಗಿದೆ.

ಅದೇ ರೀತಿ ಮಲ್ಲಪ್ಪನಹಳ್ಳಿ ಗ್ರಾಮ ವೃತ್ತಕ್ಕೆ ಸೇರಿದ ಕೃಷ್ಣಾಪುರ, ಸಂಕನಹಳ್ಳೀ, ಪಟ್ಟಣದ ಮಹದೇವಮ್ಮ, ಗಿರೀಶ್‌, ಬಂಡಿಶೆಟ್ಟಿಹಳ್ಳಿಯ ಯೋಗಣ್ಣ, ಗನ್ನಿಕಟ ಹುಲಿವಾಲ ಕಂಬೇಗೌಡ ಅವರಿಗೆ ಸೇರಿದ ಚಾವಣಿ ಸೇರಿದಂತೆ ಸಾಕಷ್ಟು ನಷ್ಟವಾಗಿದೆ. ಇದೇ ರೀತಿ ತಾಲೂಕಿನ ಹಾವಿನ ಮಾರನಹಳ್ಳಿ ಗ್ರಾಮದ ಕಮಲಮ್ಮ, ಬೋರೇ ಗೌಡ, ಶಾಂತಮ್ಮ ಹಾಗೂ ಕಾಳೇಗೌಡರಿಗೆ ಸೇರಿದ ಮನೆಗಳ ಹೆಂಚುಗಳು ಬಿರುಗಾಳಿಗೆ ತೂರಿ ಹೋಗಿ ಸಾಕಷ್ಟು ನಷ್ಟಕ್ಕೆ ಕಾರಣವಾಗಿದೆ.

ಈ ಬಗ್ಗೆ ತಾಲೂಕು ಆಡಳಿತ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್‌ ತಿಳಿಸಿ ಸರ್ಕಾರ ನೀಡಿರು ಸುತ್ತೋಲೆ ಪ್ರಕಾರ ನಷ್ಟಕ್ಕೆ ಒಳಗಾಗಿರುವವರಿಗೆ ಸರ್ಕಾರದಿಂದ ಹಣ ಪಾವತಿಸಲು ಕ್ರಮಕೈಗೊಳ್ಳ ಲಾಗುವುದೆಂದು ತಿಳಿಸಿದರು.

ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ತುರ್ತು ಸಭೇಯಲ್ಲಿ ತಾಪಂ ಇಒ ಕೆ.ಯೋಗೇಶ್‌, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿ ಮಹೇಶ್‌, ಜಿಪಂ ಎಂಜಿನಿಯರ್‌ ಪ್ರಭು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.

Ad

ಟಾಪ್ ನ್ಯೂಸ್

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Indonesia: ಇಂಡೋನೇಷ್ಯಾದ ತನಿಂಬಾರ್‌ ದ್ವೀಪಪ್ರದೇಶದಲ್ಲಿ 6.7 ತೀವ್ರತೆಯ ಪ್ರಬಲ ಭೂಕಂಪ

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

Toxic Movie: ಯಶ್‌ ʼಟಾಕ್ಸಿಕ್‌ʼಗೆ ಮ್ಯೂಸಿಕ್‌ ನೀಡಲು ದೊಡ್ಡ ಸಂಭಾವನೆ ಕೇಳಿದ ಅನಿರುದ್ಧ್?

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

San Rechal:ಆರ್ಥಿಕ ಸಂಕಷ್ಟ-ಜನಪ್ರಿಯ ರೂಪದರ್ಶಿ ಸ್ಯಾನ್‌ ತಂದೆ ನಿವಾಸದಲ್ಲಿ ನೇ*ಣಿಗೆ ಶರಣು

4

SarojaDevi;ಯಶಸ್ಸಿನ ಉತ್ತುಂಗದಲ್ಲೇ ಮದುವೆ..ಪತಿ ನಿಧನ,ಕಷ್ಟದಲ್ಲೇ ದಿನ ಕಳೆದ ಗಟ್ಟಿಗಿತ್ತಿ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Mangaluru: ಕೆಂಪುಕಲ್ಲು, ಮರಳು ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ಮಳೆಯಲ್ಲೇ ಪ್ರತಿಭಟನೆ

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು

Kidnapped: ಮಾಲಿಯಲ್ಲಿ ಶಸ್ತ್ರಸಜ್ಜಿತರಿಂದ ಮೂವರು ಭಾರತೀಯರ ಅಪಹರಣ… ಇನ್ನೂ ಸಿಗದ ಸುಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Coffee-Price

ದಿಢೀರ್‌ 5,000 ರೂ. ಕುಸಿದ ಕಾಫಿ ಧಾರಣೆ!

Untitled-1

ಎ.ಆರ್.ಟಿ.ಒ ಕಚೇರಿಯಲ್ಲಿ ಮಧ್ಯವರ್ತಿಯ ಹುಟ್ಟುಹಬ್ಬ ಆಚರಣೆ: ಸಾರ್ವಜನಿಕರ ಆಕ್ರೋಶ

R.Ashok

ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ: ಆರ್‌.ಅಶೋಕ್‌

KNrajanna

ಹಾಸನದಲ್ಲಿ ಎಚ್‌.ಡಿ.ದೇವೇಗೌಡ, ರೇವಣ್ಣರನ್ನು ಹಾಡಿ ಹೊಗಳಿದ ಸಚಿವ ಕೆ.ಎನ್‌.ರಾಜಣ್ಣ!

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

Hassan: ಹೃದಯಾಘಾತದಿಂದ ಮೃತಪಟ್ಟವರ ಮನೆಗೆ ವೈದ್ಯರ ತಂಡ ಭೇಟಿ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

Kannada Movies: ಟ್ರೇಲರ್‌ನಲ್ಲಿ ʼಜೂನಿಯರ್‌ʼ, ʼಎಕ್ಕʼ ಮಿಂಚು

8

Mangaluru: ಜಪ್ಪು ಮಹಾಕಾಳಿಪಡ್ಪು ರೈಲ್ವೇ ಕೆಳ ಸೇತುವೆ; ಅಕ್ಟೋಬರ್‌ಗೆ ಗಡುವು

7

Surathkal: ನಿಂತಿದ್ದ ನರ್ಮ್ ಬಸ್‌ಗಳ ಮರು ಸಂಚಾರ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

Land Acquisition: ಭೂಸ್ವಾಧೀನ ಹೋರಾಟದಲ್ಲಿ ಕಾಣದ ಕೈಗಳ ಕೈವಾಡ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

ಪತನಗೊಂಡ ವಿಮಾನದಲ್ಲಿ ಯಾವುದೇ ಸಮಸ್ಯೆ ಕಂಡುಬಂದಿಲ್ಲ.. ಏರ್ ಇಂಡಿಯಾ ಸಿಇಒ ಮೊದಲ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.