![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
ಗಾಳಿ ಮಳೆಗೆ ಕುಸಿದ ಮನೆಗಳು: ಅಪಾರ ನಷ್ಟ
ನೀರಿನ ಸಮಸ್ಯೆ ನಿವಾರಣೆಗೆ ನೋಡೆಲ್ ಅಧಿಕಾರಿಗಳ ನೇಮಕ
Team Udayavani, May 14, 2019, 9:45 AM IST
![hasan-tdy-2..](https://www.udayavani.com/wp-content/uploads/2019/05/hasan-tdy-2..-3-620x290.jpg)
ಹೊಳೆನರಸೀಪುರ ತಾಲೂಕು ಕಚೇರಿ ಸಭಾಂಗಣದಲ್ಲಿ ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಅತಿವೃಷ್ಟಿ ಅನಾವೃಷಿ ತುರ್ತುಸಭೆ ನಡೆಸಿದರು.
ಹೊಳೆನರಸೀಪುರ: ತಾಲೂಕಿನಲ್ಲಿ ಸುರಿದ ಗಾಳಿ ಮಳೆಯಿಂದ ಗ್ರಾಮೀಣ ಪ್ರದೇಶಗಳಲ್ಲಿ ಮನೆ ಗಳು ಕುಸಿದು ಅಪಾರ ನಷ್ಟವಾಗಿದೆ ಎಂದು ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ನುಡಿದರು.
ತಾಲೂಕು ಕಚೇರಿ ಸಭಾಂಗಣದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಪ್ರಸ್ತುತ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ಸಾಕಷ್ಟು ನಷ್ಟಕ್ಕೆ ಕಾರಣ ವಾಗಿದೆ ಎಂದರು.
ಕುಡಿಯುವ ನೀರಿನ ಸಮಸ್ಯೆ: ತಾಲೂಕಿನ ಗ್ರಾಮೀಣ ಪ್ರದೇಶಗಳಲ್ಲಿ ಮಳೆ ಬಾರದೇ ಕುಡಿಯುವ ನೀರಿನ ಕೊರತೆಯಿಂದ ಜನತೆ ಸಂಕಷ್ಟ ಎದುರಿಸುವಂತಾಗಿದೆ ಎಂಬ ದೂರಿನ ಹಿನ್ನೆಲೆಯಲ್ಲಿ ತಾಲೂಕಿನ ಮೂರು ಹೋಬಳಿ ಗಳಿಗೆ ಮೂವರು ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ಸಂಪೂರ್ಣ ತನಿಕೆ ನಡೆಸಿ ಪೂರ್ಣ ಮಾಹಿತಿ ನೀಡಿ ಸಂಕಷ್ಟದಲ್ಲಿರುವ ಜನತೆಗೆ ಸಹಕಾರ ನೀಡಲು ಮುಂದಾಗ ಬೇಕೆಂದು ಮನವಿ ಮಾತನಾಡಿದರು.
ನೋಡೆಲ್ ಅಧಿಕಾರಿಗಳ ನೇಮಕ: ತಾಲೂಕಿ ನಲ್ಲಿ ಮುಂಗಾರು ಮಳೆಯಿಂದಾಗಿ ಸಂಭವಿಸ ಬಹುದಾದ ನಷ್ಟಗಳನ್ನು ತಡೆಯಲು ಮುನ್ನೆಚ್ಚ ರಿಗೆ ಕ್ರಮವಾಗಿ ಮೂರು ಹೋಬಳಿಗಳಿಗೂ ಒಬ್ಬರಂತೆ ನೋಡೆಲ್ ಅಧಿಕಾರಿಗಳನ್ನು ನೇಮಕ ಮಾಡಿ ತಕ್ಷಣ ಕಾರ್ಯಪ್ರವೃತ್ತರಾಗುವಂತೆ ಸೂಚಿಸಿದರು.
ತಾಲೂಕಿನ ಕಸಬಾ ಹೋಬಳಿಗೆ ಪಶು ಸಂಗೋಪನಾ ಇಲಾಖೆಯ ವೈದ್ಯ ಡಾ.ತಿಪ್ಪೇ ಸ್ವಾಮಿ, ಹಳೇಕೋಟೆ ಹೋಬಳಿಗೆ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ಲಿಂಗು ಹಾಗು ಹಳ್ಳಿಮೈಸೂರು ಹೋಬಳಿಗೆ ಲೊಕೋಪಯೋಗಿ ಇಲಾಖೆಯ ಎಇಇ ಮಲ್ಲಿಕಾರ್ಜುನ್ ಅವರನ್ನು ನೋಡೆಲ್ ಅಧಿಕಾರಿಗಳಾಗಿ ನೇಮಕ ಮಾಡಲಾಯಿತು.
ಮಳೆಯಿಂದ ಮನೆಗಳಿಗೆ ಹಾನಿ: ಈಗಾಗಲೇ ತಾಲೂಕಿನ ಗ್ರಾಮಿಣ ಪ್ರದೇಶಗಳಲ್ಲಿ ಕಳೆದೆರಡು ದಿನಗಳಿಂದ ಬಿರುಗಾಳಿ ಸಮೇತ ಬಿದ್ದ ಮಳೆಯಿಂದ ತಾಲೂಕಿನ ಅತ್ತಿಚೌಡೇನಹಳ್ಳಿ ಗ್ರಾಮದ ಸುಬ್ಬೇಗೌಡ, ಅವರಿಗೆ ಸೇರಿದ ವಾಸದ ಮನೆ ಬಿರುಗಾಳಿಯಿಂದ ನೆಲಕಚ್ಚಿದೆ, ಶಿಗರನಹಳ್ಳಿ ಗ್ರಾಮದ ಶಾರದಮ್ಮ ಅವರಿಗೆ ಸೇರಿದ 15 ಸಾವಿರ ಬಾಳೆಗಿಡಗಳಲ್ಲಿ ಶೇ. 40 ಕ್ಕೂ ಹೆಚ್ಚು ಗಿಡಗಳು ನೆಲಕಚ್ಚಿವೆ. ಶಿಗರನಹಳ್ಳೀ ರಾಮೇಗೌಡ ಅವರ ಮನೆ ನೆಲಕಚ್ಚಿದೆ. ಕಾಮ ಸಮುದ್ರದ ಶಿವಣ್ಣ ಅವರಿಗೆ ಸೇರಿದ ಮನೆಗೆ ಅಕಸ್ಮಿಕ ಬೆಂಕಿ ತಗುಲಿ ಮನೆಯಲ್ಲಿದ್ದ ಆಹಾರ ಪದಾರ್ಥಗಳು ಸೇರಿದಂತೆ ಸಾಕಷ್ಟು ಸುಟ್ಟುಕರಕಲಾಗಿದೆ.
ಅದೇ ರೀತಿ ಮಲ್ಲಪ್ಪನಹಳ್ಳಿ ಗ್ರಾಮ ವೃತ್ತಕ್ಕೆ ಸೇರಿದ ಕೃಷ್ಣಾಪುರ, ಸಂಕನಹಳ್ಳೀ, ಪಟ್ಟಣದ ಮಹದೇವಮ್ಮ, ಗಿರೀಶ್, ಬಂಡಿಶೆಟ್ಟಿಹಳ್ಳಿಯ ಯೋಗಣ್ಣ, ಗನ್ನಿಕಟ ಹುಲಿವಾಲ ಕಂಬೇಗೌಡ ಅವರಿಗೆ ಸೇರಿದ ಚಾವಣಿ ಸೇರಿದಂತೆ ಸಾಕಷ್ಟು ನಷ್ಟವಾಗಿದೆ. ಇದೇ ರೀತಿ ತಾಲೂಕಿನ ಹಾವಿನ ಮಾರನಹಳ್ಳಿ ಗ್ರಾಮದ ಕಮಲಮ್ಮ, ಬೋರೇ ಗೌಡ, ಶಾಂತಮ್ಮ ಹಾಗೂ ಕಾಳೇಗೌಡರಿಗೆ ಸೇರಿದ ಮನೆಗಳ ಹೆಂಚುಗಳು ಬಿರುಗಾಳಿಗೆ ತೂರಿ ಹೋಗಿ ಸಾಕಷ್ಟು ನಷ್ಟಕ್ಕೆ ಕಾರಣವಾಗಿದೆ.
ಈ ಬಗ್ಗೆ ತಾಲೂಕು ಆಡಳಿತ ವರದಿಯನ್ನು ತಯಾರಿಸಿ ಸರ್ಕಾರಕ್ಕೆ ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿ ಸರ್ಕಾರ ನೀಡಿರು ಸುತ್ತೋಲೆ ಪ್ರಕಾರ ನಷ್ಟಕ್ಕೆ ಒಳಗಾಗಿರುವವರಿಗೆ ಸರ್ಕಾರದಿಂದ ಹಣ ಪಾವತಿಸಲು ಕ್ರಮಕೈಗೊಳ್ಳ ಲಾಗುವುದೆಂದು ತಿಳಿಸಿದರು.
ತಹಶೀಲ್ದಾರ್ ಕೆ.ಆರ್.ಶ್ರೀನಿವಾಸ್ ಅವರ ಅಧ್ಯಕ್ಷತೆಯಲ್ಲಿ ಸೇರಿದ್ದ ತುರ್ತು ಸಭೇಯಲ್ಲಿ ತಾಪಂ ಇಒ ಕೆ.ಯೋಗೇಶ್, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧಿಕಾರಿ ಮಹೇಶ್, ಜಿಪಂ ಎಂಜಿನಿಯರ್ ಪ್ರಭು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-415x250.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![2-chithapura](https://www.udayavani.com/wp-content/uploads/2024/07/2-chithapura-150x90.jpg)
Chittapur: ಪಟ್ಟಣದ ಹೊರವಲಯದಲ್ಲಿ ಯುವಕನ ಶವ ಪತ್ತೆ: ಕೊಲೆ ಶಂಕೆ
![Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ](https://www.udayavani.com/wp-content/uploads/2024/07/chirate-1-150x90.jpg)
Leopard… ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ… ಭಯಭೀತರಾದ ಜನ
![Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ](https://www.udayavani.com/wp-content/uploads/2024/07/BUILDING-1-150x84.jpg)
Navi Mumbai: ಬೆಳ್ಳಂಬೆಳಗ್ಗೆ ಮೂರೂ ಅಂತಸ್ತಿನ ಕಟ್ಟಡ ಕುಸಿತ… ಹಲವರು ಸಿಲುಕಿರುವ ಶಂಕೆ
![Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು](https://www.udayavani.com/wp-content/uploads/2024/07/BIKE-7-150x86.jpg)
Tragedy: ಚಲಿಸುತ್ತಿದ್ದ ಬೈಕ್ ಮೇಲೆ ಬಿದ್ದ ಮರ… ಯುವಕ ಸ್ಥಳದಲ್ಲೇ ಮೃತ್ಯು
![1-24-saturday](https://www.udayavani.com/wp-content/uploads/2024/07/1-24-saturday-2-150x90.jpg)
Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.