Hasan: ಫೋನ್ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು
Team Udayavani, Apr 12, 2024, 7:00 AM IST
ಹಾಸನ: ನಾನು ದೂರವಾಣಿ ಕದ್ದಾಲಿಸುವ ಕೆಲಸ ಮಾಡಿದ್ದರೆ ನನ್ನ ಸರಕಾರವನ್ನು ಯಾಕೆ ಬೀಳಿಸಿಕೊಳ್ಳುತ್ತಿದ್ದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸಚಿವ ಚಲುವರಾಯಸ್ವಾಮಿಗೆ ತಿರುಗೇಟು ನೀಡಿದರು.
ಅರಕಲಗೂಡು ರಾಮನಾಥಪುರದಲ್ಲಿ ಗುರುವಾರ ಚುನಾವಣ ಪ್ರಚಾರದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೂರವಾಣಿ ಕದ್ದಾಲಿಸಿದ್ದರೆ ತನಿಖೆ ಮಾಡಿಕೊಳ್ಳಲಿ. ಈವರೆಗೆ ತನಿಖೆ ಮಾಡಿದ್ದಾರಲ್ಲ, ಅದೇನಾಯಿತು ಎಂದು ತರಾಟೆಗೆ ತೆಗೆದುಕೊಂಡರು.
ಆದಿಚುಂಚನಗಿರಿ ಮಠಕ್ಕೆ ಪರ್ಯಾಯವಾಗಿ ಮಠ ಮಾಡಿದ್ದರು ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಬೇರೆ ಸಮುದಾಯಗಳಲ್ಲಿ ಎಷ್ಟು ಮಠಗಳಿಲ್ಲ? ನಮ್ಮ ಸಮುದಾಯದಲ್ಲಿಯೂ ಮಠಗಳ ಸಂಖ್ಯೆ ಹೆಚ್ಚಲಿ, ಆ ಮೂಲಕ ಬೆಳವಣಿಗೆ ಆಗಲಿ ಎಂದು ಸಹಾಯ ಮಾಡಿದ್ದೆವು. ಅದರಲ್ಲಿ ಏನಿದೆ ? ಅದನ್ನೂ ರಾಜಕೀಯಕ್ಕೆ ಬಳಸಿಕೊಳ್ಳಬೇಕಾ ಎಂದು ಪ್ರಶ್ನಿಸಿದರು.
ಸ್ವಾಮೀಜಿಯವರನ್ನು ಭೇಟಿ ಮಾಡಲು ಅವರು ಎಷ್ಟು ಜನ ಹೋಗಿದ್ದರು ಎಂಬುದು ಎಲ್ಲರಿಗೂ ಗೊತ್ತಿದೆ. ನಾವು ಸ್ವಾಮೀಜಿಯವರನ್ನು ಭೇಟಿಯಾದರೆ ಮಾತ್ರ ರಾಜಕೀಯಕ್ಕೆ ಬಳಸಿಕೊಳ್ಳುತ್ತೇವೆ ಎನ್ನುವುದು ಯಾಕೆ? ಹೊಸ ವರ್ಷದ ಮೊದಲ ದಿನ ನಮ್ಮ ಸಮುದಾಯದ ಗುರು-ಹಿರಿಯರ ಭೇಟಿಯಾಗಿ ಆಶೀರ್ವಾದ ಪಡೆಯುತ್ತೇವೆ. ಅದೇನು ಅಪರಾಧವಾ? ನಾನು ಸಿ.ಎಂ. ಆಗಿದ್ದಾಗ 140 ಮಠಗಳಿಗೆ ಅನುದಾನ ನೀಡಿದ್ದೆ. ಮಠಗಳು ಮಾಡುತ್ತಿರುವ ಒಳ್ಳೆಯ ಕೆಲಸಗಳಿಗೆ ಸಹಕಾರ ನೀಡಿದ್ದೆ. ಇದೇನು ಹೊಸದಲ್ಲ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್