ಅಕ್ರಮ ಭೂ ಮಂಜೂರಾತಿ: ದಾಖಲೆಗಳ ನಾಶದ ಹುನ್ನಾರ


Team Udayavani, Oct 21, 2019, 3:00 AM IST

akrama-bhooo

ಹಾಸನ: ಹೇಮಾವತಿ ಮತ್ತು ಯಗಚಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರ ಪುನರ್ವಸತಿಗೆ ಭೂಮಿ ಮಂಜೂರು ಮಾಡುವಲ್ಲಿ ನಡೆದಿರುವ ಅಕ್ರಮ ಮುಚ್ಚಿ ಹಾಕಲು ದಾಖಲೆಗಳನ್ನೇ ಸುಟ್ಟು ಹಾಕುವ ಹುನ್ನಾರ ನಡೆದಿದೆ ಎಂದು ಜೆಡಿಎಸ್‌ ಮುಖಂಡ, ಮಾಜಿ ಸಚಿವ ಎಚ್‌.ಡಿ.ರೇವಣ್ಣ ಅವರು ಆತಂಕ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಳುಗಡೆ ಸಂತ್ರಸ್ತರಿಗೆ ಪರ್ಯಾಯವಾಗಿ ಭೂಮಿ ಮಂಜೂರು ಮಾಡುವಾಗ ಮುಳುಗಡೆ ಸಂತ್ತಸ್ತರ ಸರ್ಟಿಫಿಕೇಟ್‌ಗಳನ್ನು ಪಡೆದು, ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿದ್ದಾರೆ ಎಂಬ ಆರೋಪಗಳು ಬಂದ ಹಿನ್ನಲೆಯಲ್ಲಿ ಹಾಸನ ಉಪ ವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಅವರ ಅಧ್ಯಕ್ಷತೆಯ ತನಿಖಾ ಸಮಿತಿಯು 2015 ರ ಜನವರಿಯಿಂದ 2018ರ ನವೆಂಬರ್‌ 30 ರ ಅವಧಿಯಲ್ಲಿ ಅಕ್ರಮ ನಡೆದಿರುವುದನ್ನು ಪತ್ತೆ ಹಚ್ಚಿತ್ತು. ಸುಮಾರು 1,674 ಎಕರೆ ಅಕ್ರಮವಾಗಿ ಮಂಜೂರಾಗಿದೆ ಎಂದೂ ಸಮಿತಿಯು ವರದಿ ಸಲ್ಲಿಸಿತ್ತು.

ಈ ಸಂಬಂಧ ಜಿಲ್ಲಾಧಿಕಾರಿಯವರು ಅಕ್ರಮ ಮಂಜೂರಾತಿ ರದ್ದು ಪಡಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ವಿಶೇಷ ಭೂ ಸ್ವಾಧೀನಾಧಿಕಾರಿಯವರಿಗೆ ಆದೇಶಿಸಿದ್ದರು. ಅಕ್ರಮವಾಗಿ ಭೂಮಿ ಮಂಜೂರಾತಿ ಮಾಡಿಸಿಕೊಂಡಿರುವವರ ವಿರುದ್ದ ಅವರಿಗೆ ಸಹಕರಿಸಿದವರ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲು ಮಾಡುವಂತೆಯೂ ಸೂಚಿಸಿದ್ದರು. ಆದರೆ ಜಿಲ್ಲಾಧಿಕಾರಿಯವರು ಸೂಚನೆ ನೀಡಿ 17 ದಿನಗಳಾದರೂ ಇನ್ನೂ ಏಕೆ ಕ್ರಿಮಿನಲ್‌ ಪ್ರಕರಣ ದಾಖಲು ಮಾಡಿಲ್ಲ ಎಂದು ಪ್ರಶ್ನಿಸಿದರು.

ಅಕ್ರಮ ಮುಚ್ಚಿಹಾಕಲು ಯತ್ನ: ಈ ಅಕ್ರಮ ಮುಚ್ಚಿ ಹಾಕಲು ಕಾಣದ ಕೈಗಳು ಪ್ರಯತ್ನಿಸುತ್ತಿವೆ. ಭೂ ಮಂಜೂರಾತಿಯ ದಾಖಲೆಗಳನ್ನು ಸುಟ್ಟು ಹಾಕುವ ಸಂಚು ಕೂಡ ನಡೆಯುತ್ತಿದೆ. ತಕ್ಷಣ ಕ್ರಿಮಿನಲ್‌ ಪ್ರಕರಣ ದಾಖಲು ಮಾಡದಿದ್ದರೆ ದಾಖಲೆಗಳು ನಾಶವಾಗಬಹುದು. ಇದಕ್ಕೆಲ್ಲ ಜಿಲ್ಲಾಧಿಕಾರಿಯವರೇ ಹೊಣೆಗಾರರಾಗಬೇಕಾಗುತ್ತದೆ ಎಂದು ರೇವಣ್ಣ ಎಚ್ಚರಿಸಿದರು.

ಸಿಎಂ, ಕಂದಾಯ ಸಚಿವರಿಗೆ ಮನವಿ: ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿರುವವರು ಜಿಲ್ಲಾಧಿಕಾರಿಯವರ ಮೇಲೆ ಪ್ರಭಾವ ಬೀರಿ ಕ್ರಿಮಿನಲ್‌ ಪ್ರಕರಣ ದಾಖಲಿಸದಂತೆ ಒತ್ತಡ ತಂದಿದ್ದಾರೆ. ಜಿಲ್ಲಾಧಿಕಾರಿಯವರೂ ಕ್ರಮ ಕೈಗೊಳ್ಳದಂತೆ ಅಧಿಕಾರಿಗಳಿಗೆ ಮೌಖೀಕ ಸೂಚನೆ ನೀಡಿದ್ದಾರೆ ಎಂಬ ಮಾಹಿತಿ ನನಗೆ ಬಂದಿದೆ. ತಕ್ಷಣ ಕ್ರಮ ಕೈಗೊಳ್ಳುವಂತೆ ತಾವು ಮುಖ್ಯಮಂತ್ರಿಯವರು ಮತ್ತು ಕಂದಾಯ ಸಚಿವರಿಗೆ ಮನವಿ ಮಾಡುವುದಾಗಿಯೂ ಅವರು ಸ್ಪಷ್ಟಪಡಿಸಿದರು.

ಕಾನೂನು ಹೋರಾಟ: ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಅಕ್ರಮವಾಗಿ ಭೂಮಿ ಮಂಜೂರು ಮಾಡಿಸಿಕೊಂಡಿರುವವರ ಹಾಗೂ ಅವರಿಗೆ ಸಹಕಾರ ನೀಡಿದವರ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ಕಾನೂನು ಹೋರಾಟಕ್ಕೂ ನಾನು ಮತ್ತು ನನ್ನ ಪಕ್ಷ ಸಿದ್ಧ ಎಂದ ರೇವಣ್ಣ ಅವರು, ಅದಕ್ಕೆ ಅವಕಾಶ ನೀಡದಂತೆ ಕ್ರಮ ಜಾರಿಯಾಗಬಹುದೆಂಬ ವಿಶ್ವಾಸವಿದೆ ಎಂದರು.

ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ: ಈ ಸರ್ಕಾರದಲ್ಲಿ ಪ್ರಾಮಾಣಿಕ ಅಧಿಕಾರಿಗಳಿಗೆ ಉಳಿಗಾಲವಿಲ್ಲ. ಮುಳುಗಡೆ ಸಂತ್ರಸ್ತರ ಹೆಸರಿನಲ್ಲಿ ಅಕ್ರಮವಾಗಿ ಭೂಮಿ ಮಂಜೂರಾಗಿದೆ ಎಂದು ವರದಿ ನೀಡಿದ ತಕ್ಷಣವೇ ತನಿಖಾ ಸಮಿತಿಯ ಅಧ್ಯಕ್ಷರಾಗಿದ್ದ ಹಾಸನ ಉಪ ವಿಭಾಗಾಧಿಕಾರಿ ಎಚ್‌.ಎಲ್‌.ನಾಗರಾಜ್‌ ಅವರಿಗೆ ಸ್ಥಳ ತೋರಿಸದೇ ಎತ್ತಂಗಡಿ ಮಾಡಲಾಗಿಯಿತು.

ಅದರ ಬೆನ್ನ ಹಿಂದೆಯೇ ಶಿಸ್ತಿನ ಅಧಿಕಾರಿ ಎಂದೇ ಗುರ್ತಿಸಿದ್ದ ಸಕಲೇಶಪುರ ತಹಶೀಲ್ದಾರ್‌ ರಕ್ಷಿತ್‌ ಅವರನ್ನೂ ವರ್ಗಾವಣೆ ಮಾಡಿ, ಮಂಜುನಾಥ್‌ ಎಂಬವರನ್ನು ಸಕಲೇಶಪುರ ತಹಸೀಲ್ದಾರ್‌ ಹುದ್ದೆಗೆ ವರ್ಗ ಮಾಡಲಾಗಿದೆ. ಸಕಲೇಶಪುರ ತಾಲೂಕಿನಲ್ಲಿಯೇ ಸುಮಾರು 1000 ಕರೆ ಅಕ್ರಮವಾಗಿ ಭೂಮಿ ಮಂಜೂರಾಗಿರುವುದನ್ನು ತಹಸೀಲ್ದಾರ್‌ ರಕ್ಷಿತ್‌ ಪತ್ತೆ ಹಚ್ಚಿ ಕ್ರಮ ಕೈಗೊಂಡಿದ್ದರು. ಈಗ ಅವರನ್ನೂ ತಕ್ಷಣ ವರ್ಗ ಮಾಡಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಮೇಲೆ ಸಿಎಂ ದ್ವೇಷ: ಬೇರೆ, ಬೇರೆ ಜಿಲ್ಲೆಗಳಲ್ಲಿ ಅಕ್ರಮ ಎಸಗಿ ಅಮಾನತಾಗಿರುವ ಅಧಿಕಾರಿಗಳನ್ನು ಈಗ ಹಾಸನ ಜಿಲ್ಲೆಗೆ ಸರ್ಕಾರ ವರ್ಗ ಮಾಡುತ್ತಿದೆ. ಭ್ರಷ್ಟ ಅಧಿಕಾರಿಗಳನ್ನು ಹಾಸನ ಜಿಲ್ಲೆಗೆ ಮಂಜೂರು ಮಾಡಲೂ ಇಂತಿಷ್ಟು ಎಂದು ದರ ನಿಗದಿಪಡಿಸಿ ವಸೂಲಿ ಆದ ನಂತರವೇ ವರ್ಗ ಮಾಡಲಾಗಿದೆ ಎಂದ ರೇವಣ್ಣ ಅವರು, ದಕ್ಷ, ಪ್ರಾಮಾಣಿಕ ಅಧಿಕಾರಿಗಳನ್ನು ಹಾಸನ ಜಿಲ್ಲೆಯಿಂದ ವರ್ಗ ಮಾಡುವ ಮೂಲಕ ಹಾಸನ ಜಿಲ್ಲೆಯ ಮೇಲೆ ಮುಖ್ಯಮಂತ್ರಿಯವರು ದ್ವೇಷ ಸಾಧಿಸುತ್ತಿದ್ದಾರೆ. ಇಂಥ ದ್ವೇಷದ ರಾಜಕಾರಣ ಒಳ್ಳೆಯದಲ್ಲ ಎಂದೂ ರೇವಣ್ಣ ಹೇಳಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.