ಅಕ್ರಮ ಗಣಿಗಾರಿಕೆ: ಟ್ರ್ಯಾಕ್ಟರ್‌ ವಶ


Team Udayavani, May 8, 2019, 2:34 PM IST

hasan-tdy-2..

ಅಕ್ರಮ ಗಣಿಗಾರಿಕೆಯ ಮೇಲೆ ತಹಶೀಲ್ದಾರ್‌ ಶಿವರಾಜ್‌ ದಾಳಿ ನಡೆಸಿ ಪರಿಶೀಲಿಸಿದರು.

ಅರಕಲಗೂಡು: ಅಕ್ರಮ ಗಣಿಗಾರಿಕೆ ಮೇಲೆ ತಹಶೀಲ್ದಾರ್‌ ಶಿವರಾಜ್‌ ದಾಳಿ, ಟ್ರ್ಯಾಕ್ಟರ್‌ ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡ ಘಟನೆ ನಡೆದಿದೆ.

ಹಲವಾರು ವರ್ಷಗಳಿಂದ ಪಟ್ಟಣದ ಹೊರ ವಲಯದಲ್ಲಿ ಕಾನೂನು ಕಣ್ಣಿಗೆ ಮಣ್ಣೆರಚಿ ನಡೆಯು ತ್ತಿದ್ದ‌ ಕಲ್ಲು ಗಣಿಗಾರಿಕೆಯ ಸ್ಥಳ ಹಂದಿಕಟ್ಟೆಬಾರೆಗೆ ತಮ್ಮ ಸಿಬ್ಬಂದಿಯೊಂದಿಗೆ ತೆರಳಿ ಏಕಾ ಏಕಿ ದಾಳಿ ನಡೆಸಿದರು.

ಕೆಲಸಗಾರರು ಪರಾರಿ: ದಾಳಿ ಸಂದರ್ಭದಲ್ಲಿ ಕಲ್ಲು ಬ್ಲಾಸ್ಟ್‌ ಮಾಡಲು ಬಳಸುವ ಕಂಪ್ರಸರ್‌ , ಟ್ರ್ಯಾಕ್ಟರ್‌ ಹಾಗೂ 15ಕ್ಕೂ ಹೆಚ್ಚು ಜನ ಕೆಲಸಗಾರರು ಟ್ರ್ಯಾಕ್ಟರ್‌ನಲ್ಲಿ ಜಲ್ಲಿ ತುಂಬುತ್ತಿದ್ದರು. ತಹಶೀಲ್ದಾರ್‌ ವಾಹನ ಕಂಡ ಜನರು ಕಂಪ್ರಸರ್‌ ಹಾಗೂ ಟ್ರ್ಯಾಕ್ಟರ್‌ ಬಿಟ್ಟು ಪರಾರಿಯಾದರು.

22 ಎಕರೆಯಲ್ಲಿ ಅಕ್ರಮ ಗಣಿಗಾರಿಕೆ: ಅರಕಲ ಗೂಡು ಪಟ್ಟಣಕ್ಕೆ ಸೇರಿರುವ ತಾಲೂಕು ಕಚೇರಿ ಪೋಲೀಸ್‌ ಠಾಣೆಯಿಂದ 1.5 ಕಿ.ಮೀ. ದೂರದಲ್ಲಿ ಪ್ರತಿ ದಿನ ಬ್ಲಾಸ್ಟ್‌ ಮಾಡುತ್ತಿದ್ದರೂ ಶಬ್ಧ ಕೇಳಿದರು ಕೇಳದಂತೆ ಮೌನವಾಗಿದ್ದ ಅಧಿಕಾರಿಗಳು ಇದನ್ನೇ ಬಂಡವಾಳ ಮಾಡಿಕೊಂಡು ಕೆಲ ಪುಡಿ ರಾಜಕಾರಣಿ ಗಳು ಸರ್ಕಾರಿ ಭೂಮಿ ಸರ್ವೆ ನಂ 246ರಲ್ಲಿ 22 ಎಕರೆಯನ್ನು 8-10 ಜನರು ಅಕ್ರಮವಾಗಿ ಗಣಿಗಾರಿಕೆ ನಡೆಸುತ್ತಿದ್ದರು. ಈ ವ್ಯಕ್ತಿಗಳು ಯಾರಿಗೂ ಹೆದರದೇ ರಾಜಾರೋಷವಾಗಿ ತಮ್ಮ ಕೆಲಸವನ್ನು ಮಾಡಿಕೊಳ್ಳುತ್ತಿದ್ದರೂ ಈ ಬಗ್ಗೆ ಸಂಬಂಧ ಪಟ್ಟ ಅಧಿಕಾರಿಗಳು ಗಮನ ಹರಿಸಿರಲಿಲ್ಲ. ಅಕ್ರಮ ಗಣಿಗಾರಿಕೆ ತಡೆಗೆ ಕ್ರಮ: ಸಾರ್ವಜನಿಕರ ದೂರಿನ ಮೇರೆಗೆ ಗಣಿಗಾರಿಕೆಯ ಮೇಲೆ ನಡೆಸಿದ ತಹಶೀಲ್ದಾರ್‌ ಗಣಿಗಾರಿಕೆ ಸ್ಥಳ ಕಂಡು ಆಶ್ಚರ್ಯಗೊಂಡರು. ಭೂಮಿಯ ಮಟ್ಟದಿಂದ 80 ರಿಂದ 90 ಅಡಿ ಭೂಮಿಯನ್ನು ಅಗೆದಿರುವು ದನ್ನು ಕಂಡುಕುಪಿತರಾದ ತಹಶೀಲ್ದಾರ್‌ ಈ ಗಣಿಗಾರಿಕೆ ನಡೆಸುತ್ತಿರುವ ವ್ಯಕ್ತಿ ಯಾರೇ ಆಗಿದ್ದರೂ ಪರವಾಗಿಲ್ಲ ಅಂತವರಿಗೆ ಬುದ್ದಿ ಕಲಿಸೋಣ, ಇವರ ಮೇಲೆ ಕ್ರಮಕ್ಕೆ ಮುಂದಾಗುವುದಾಗಿ ತಿಳಿಸಿ ಮುಂದೆ ಈ ಸ್ಥಳಕ್ಕೆ ವಾಹನಗಳು ಬರದಂತೆ ಸಂಪರ್ಕ ರಸ್ತೆಗಳನ್ನು ಗುಂಡಿ ತೆಗೆಸಿ ಕಡಿವಾಣ ಹಾಕೋಣ ಎಂದು ಕಂದಾಯಾಧಿಕಾರಿ ಶಿವಕುಮಾರ್‌ ಅವರಿಗೆ ಆದೇಶಿಸಿದರು.

ಪೊಲೀಸರಿಗಾಗಿ ಕಾಯ್ದ ತಹಶೀಲ್ದಾರ್‌: ಗಣಿಗಾರಿಕೆ ಸ್ಥಳಕ್ಕೆ ದಾಳಿ ನಡೆಸಿದ ನಂತರ ಟ್ರ್ಯಾಕ್ಟರ್‌ ವಶಪಡಿಸಿಕೊಳ್ಳಲು ಸ್ಥಳಕ್ಕೆ ಪೋಲೀಸರನ್ನು ಬರುವಂತೆ ದೂರವಾಣಿ ಮೂಲಕ ತಿಳಿಸಿದರು. ಆದರೆ ಪೋಲೀಸರ ಬರುವಿಕೆಗಾಗಿ 2 ಗಂಟೆಗಳ ಕಾಲ ಸ್ಥಳದಲ್ಲೇ ಕಾದು ಕುಳಿತರು ಬರಲಿಲ್ಲ. ನಂತರ ಬಂದ ಒಬ್ಬರು ದೆಫೇದಾರ್‌ ಬಂದರು.

ಕಣ್ಣೊರೆಸುವ ನಾಟಕ? ಗಣಿಗಾರಿಕೆಯಿಂದ ತೊಂದರೆಯಾಗುತ್ತಿರುವ ಬಗ್ಗೆ ಸುತ್ತಮುತ್ತಲಿನ ಸಾರ್ವಜನಿಕರು ಎಷ್ಟು ವರ್ಷಗಳಿಂದ ಇದರಿಂದ ತೊಂದರೆಗೆ ಒಳಗಾಗಿ ಇದರ ವಿರುದ್ಧ ಧ್ವನಿ ಎತ್ತಿದ್ದರೂ ಯಾವುದೇ ಪ್ರಯೋಜನವಾಗಿರಲಿಲ್ಲ. ದೂರು ನೀಡಿದರೆ ಅದೇ ಅಧಿಕಾರಿಗಳು ಗಣಿಗಾರಿಕೆ ಮಾಡುವವರಿಗೆ ಇಂತಹ ವ್ಯಕ್ತಿ ದೂರು ನೀಡಿದ್ದಾನೆ ಎಂದು ತಿಳಿಸಿ ದೂರು ನೀಡಿದವರ ಮೇಲೆ ಗಲಾಟೆಯನ್ನು ಮಾಡಿರುವ ಅನೇಕ ನಿದರ್ಶನ ಗಳಿವೆ. ನಮ್ಮ ಜಮೀನಿನಲ್ಲಿ ವ್ಯವಸಾಯ ನಿಲ್ಲಿಸಿ ಎಷ್ಟೋ ವರ್ಷಗಳು ಕಳೆದಿದೆ. ಅರೆಮಾದನಹಳ್ಳಿ, ಅಡಿಕೆಬೊಮ್ಮನಹಳ್ಳಿ, ಕೋಟೆಹಿಂದಲ ಕೊಪ್ಪಲು, ಎ.ಡಿ.ಕಾಲೋನಿಗಳ ಮನೆಯ ಗೋಡೆಗಳು ಬಿರುಕು ಬಿಟ್ಟಿವೆ. ಇಷ್ಟೆಲ್ಲಾ ನಡೆಯುತ್ತಿದ್ದರೂ ಮೌನವಾಗಿರುವ ಅಧಿಕಾರಿಗಳು ಯಾವುದೋ ಒತ್ತಡಕ್ಕೆ ಮಣಿದು ದಾಳಿ ನಡೆಸಿದ್ದಾ ರಂದು ಸ್ಥಳೀಯರು ಆಪಾದಿಸಿದ್ದಾರೆ.

ಟಾಪ್ ನ್ಯೂಸ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.