ಗಣೇಶ ವಿಸರ್ಜನೆ ವೇಳೆ ಪೋಲಿಸರ ನಡೆ ವಿರುದ್ದ ಆಕ್ರೋಶ: ಪರಸ್ಪರ ತಳ್ಳಾಟ


Team Udayavani, Sep 11, 2021, 9:19 PM IST

incident held at hasana

ಸಕಲೇಶಪುರ: ಗಣೇಶ ವಿಸರ್ಜನಾ ವೇಳೆಯಲ್ಲಿ ಯುವಕರ ಗುಂಪೊಂದು ಪೋಲಿಸರನ್ನು ತಳ್ಳಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ.

ಶುಕ್ರವಾರ ಸಂಜೆ ತಾಲೂಕು ವಿ.ಎಚ್.ಪಿ ಭಜರಂಗದಳದ ವತಿಯಿಂದ ಪ್ರತಿಷ್ಠಾಪಿಸಲಾಗಿದ್ದ 5ನೇ ವರ್ಷದ ರಾಮದೂತ ಗಣಪತಿ ವಿಸರ್ಜನೆ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ನೂರಾರು ಯುವಕರು ಭಾಗಿಯಾಗಿದ್ದರು. ಎಸ್.ಎಮ್ ಟವರ್ಸ್ ಸಮೀಪ ವಾದ್ಯವೃಂದದವರನ್ನು ವಾಹನ ಸಂಚಾರಕ್ಕೆ ಅನುವು ಮಾಡಿಕೊಡಲು ಬೇರೆ ಮಾರ್ಗದಲ್ಲಿ ಹೋಗಿ ಎಂದು ನಗರ ಠಾಣೆ ಪಿಎಸ್ಐ ಬಸವರಾಜ್ ಚಿಂಚೋಳಿ ಅವರು ಹೇಳಿದಕ್ಕೆ ಕೆಲವು ಯುವಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಪಿಎಸ್ಐ ಬಸವರಾಜ್ ಚಿಂಚೋಳಿ ಅವರು ಡೋಲು ಬಾರಿಸುತ್ತಿದ್ದ ಓರ್ವನ ಕೋಲು ಕಿತ್ತು ಕೊಂಡಿದ್ದಾರೆ.  ಇದನ್ನು ನೋಡಿದ ಸಂಘ ಪರಿವಾರದ ಯುವಕನೋರ್ವ ಎಸ್.ಐ ಬಳಿಯಿಂದ ಡೋಲಿನ ಕೋಲನ್ನು ಕಿತ್ತುಕೊಂಡು ವಾದ್ಯವೃಂದದವರಿಗೆ ನೀಡಿದ್ದಾನೆ.  ಬಸವರಾಜ್ ಚಿಂಚೋಳಿ  ಹಾಗೂ ಸಂಘ ಪರಿವಾರದ ಕಾರ್ಯಕರ್ತರ ನಡುವೆ ಮಾತಿನ ಚಕಮಕಿಯಾಗಿರುವುದನ್ನು ಕೆಲವರು ಮೊಬೈಲ್ ಮೂಲಕ ಸೆರೆ ಹಿಡಿದಿರುವುದನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

ಇದನ್ನೂ ಓದಿ:2022 ಚುನಾವಣೆ ಟಾರ್ಗೆಟ್ : ‘ಜನ್ ಮನ್ ವಿಜಯ್’ ಅಭಿಯಾನಕ್ಕೆ ಅಖಿಲೇಶ್ ಯಾದವ್ ಚಾಲನೆ

ಕೋವಿಡ್ ಸಮಯದಲ್ಲಿ ನೂರಾರು ಜನರನ್ನು ಸೇರಿಸಿ ಪೋಲಿಸರ ವಿರುದ್ದ ಗೂಂಡಾ ವರ್ತನೆ ಮಾಡಿರುವ ಭಜರಂಗದಳ ಕಾರ್ಯಕರ್ತರ ವಿರುದ್ದ ಪ್ರಕರಣ ದಾಖಲಿಸಬೇಕೆಂದು ಪ್ರಗತಿ ಪರ ಸಂಘಟನೆಗಳು ಆಗ್ರಹಿಸಿದ್ದು ಇದೇ ವೇಳೆ ತಾವೇ ಸ್ವತ: ಮಾಸ್ಕ್ ಧರಿಸದೆ ಸರಿಯಾಗಿ ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ನಗರ ಠಾಣೆ ಪಿಎಸ್ಐ ಬಸವರಾಜ್ ಚಿಂಚೋಳಿ ಅವರು ಎಡವಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಿಮವಾಗಿ ಭಜರಂಗದಳ ದಕ್ಷಿಣ ಪ್ರಾಂತ ಸಹ ಸಂಚಾಲಕ ರಘು ಪತ್ರಿಕಾ ಹೇಳಿಕೆ ನೀಡಿ ಪೋಲಿಸರು ಮೆರವಣಿಗೆಯಲ್ಲಿ ಎಲ್ಲಾ ರೀತಿಯ ಸಹಕಾರ ನೀಡಿದ್ದಾರೆ. ಮೆರವಣಿಗೆಯ ದಾರಿ ಕುರಿತು ನಡೆದ ಮಾತಿನ ಚಕಮಕಿಯನ್ನು ಕೆಲವರು ವಿಡಿಯೋ ಮಾಡಿ ಕೆಟ್ಟದಾಗಿ ಬಿಂಬಿಸಿದ್ದಾರೆ. ಭಜರಂಗದಳ ಸಂಘಟನೆ ಕಾನೂನು ಸುವ್ಯವಸ್ಥೆಗೆ ಸದಾ ಬದ್ದವಾಗಿದ್ದು, ಈ ಘಟನೆ ಕುರಿತು ಅಪಪ್ರಚಾರ ಸರಿಯಲ್ಲ ಎಂದಿದ್ದಾರೆ.

ಗಣೇಶೋತ್ಸವ ಆಚರಿಸುವ ಕುರಿತು ಸರ್ಕಾರದ ಪರಿಷ್ಕೃತ ಮಾರ್ಗಸೂಚಿ ವಿರುದ್ಧವಾಗಿ ಭಜರಂಗದಳ ಮತ್ತು ವಿಶ್ವಹಿಂದೂ ಪರಿಷತ್ ಗಣಪತಿ ಪ್ರತಿಷ್ಠಾಪನೆ ಮತ್ತು ವಿಸರ್ಜನೆ ನಡೆಸಿ ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನಲೆಯಲ್ಲಿ 14 ಜನರ ಮೇಲೆ ಸುಮೋಟೋ ಕೇಸ್ ದಾಖಲುಮಾಡಲಾಗಿದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.