ತಾಲೂಕಿನ ಎಳನೀರಿಗೆ ಹೆಚ್ಚಿದ ಬೇಡಿಕೆ

ಮೈಸೂರು, ಬೆಂಗಳೂರು, ದೆಹಲಿ, ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಗೋವಾಕ್ಕೆ ರವಾನೆ

Team Udayavani, May 27, 2019, 1:29 PM IST

hasan-tdy-3..

ಚನ್ನರಾಯಪಟ್ಟಣ ತಾಲೂಕು ಅಡಗೂರು ಗೇಟಿನಲ್ಲಿ ರೈತರಿಂದ ಕೊಂಡ ಎಳನೀರನ್ನು ಮಹರಾಷ್ಟ್ರ ರಾಜ್ಯಕ್ಕೆ ರವಾನಿಸಲು ಲಾರಿಗೆ ತುಂಬಲಾಗುತ್ತಿದೆ.

ಚನ್ನರಾಯಪಟ್ಟಣ: ಮುಂಗಾರು ಪ್ರಾರಂಭವಾದರೂ ಬಿಸಿಲ ಬೇಗೆ ದಿನೇ ದಿನೇ ಹೆಚ್ಚುತ್ತಿರುವು ದರಿಂದ ತಾಲೂಕಿನ ಎಳನೀರಿಗೆ ಎಲ್ಲಿಲ್ಲದ ಬೇಡಿಕೆ ಬಂದಿದ್ದು ಹೊರ ಜಿಲ್ಲೆ ಹಾಗೂ ಹೊರ ರಾಜ್ಯಕ್ಕೆ ರವಾನಿಸಲಾಗುತ್ತಿದೆ.

ರಾಜ್ಯದ ಮೈಸೂರು, ಬೆಂಗಳೂರ‌ಲ್ಲದೇ ದೇಶದ ರಾಜ್ಯದಾನಿ ದೆಹಲಿ ಸೇರಿದಂತೆ ಹೊರ ರಾಜ್ಯಗಳಾದ ಮಹಾರಾಷ್ಟ್ರ, ತಮಿಳುನಾಡು, ಆಂಧ್ರಪ್ರದೇಶ ಹಾಗೂ ಗೋವಾ ರಾಜ್ಯಕ್ಕೆ ಚನ್ನರಾಯಪಟ್ಟಣದ ರೈತರು ಬೆಳೆದಿರುವ ಲಕ್ಷಾಂತರ ಎಳನೀರು ನಿತ್ಯ ಹತ್ತಾರು ಲಾರಿಯಲ್ಲಿ ರಫ್ತಾಗುತ್ತಿದೆ, ಇದರಿಂದ ಉತ್ತಮ ಎಳನೀರು ಬಿಡುವ ತೆಂಗಿನ ತೋಟದ ಮಾಲೀಕರ ಮೊಗದಲ್ಲಿ ಕೊಂಚ ಸಂತಸ ಕಾಣಲಾರಂಭಿಸಿದೆ.

ಮುಂಗಾರಿನಲ್ಲೂ ಬಿಸಿಲ ಬೇಗೆ: ಬಡವರ ಊಟಿ ಎಂದೇ ಖ್ಯಾತಿ ಪಡೆದಿರುವ ಹಾಸನ ಜಿಲ್ಲೆಯಲ್ಲಿ 38 ಡಿಗ್ರಿಗೂ ಹೆಚ್ಚಿನ ತಾಪಮಾನ ಇರುವುದರಿಂದ ಜಿಲ್ಲೆಯಲ್ಲಿ ತಾಲೂಕಿನ ಎಳನೀರಿಗೆ ಬಹಳ ಬೇಡಿಕೆ ಇದೆ. ತಾಲೂಕು ಅರೆಮಲೆನಾಡು ಪ್ರದೇಶ ಆಗಿರುವುದರಿಂದ ಎಳನೀರು ಕುಡಿಯಲು ತುಂಬಾ ಸವಿಯಾಗಿದ್ದು ದಣಿವಾರಿಸುವಲ್ಲಿ ನೈಸರ್ಗಿಕ ಪಾನೀಯದಲ್ಲಿ ಮೊದಲನೇ ಸ್ಥಾನದಲ್ಲಿದೆ.

ಕುಸಿದ ಅಂತರ್ಜಲ: ಬರಗಾಲ ಆವರಿಸಿರುವುದರಿಂದ ಅಂತರ್ಜಲ ಕುಸಿದಿದ್ದು, ಕೊಳವೆ ಬಾವಿಯಲ್ಲಿ ನೀರಿಲ್ಲದೇ ರೈತರು ತರಕಾರಿ ಹಾಗೂ ಇತರ ಬೆಳೆ ಬೆಳೆಯಲು ಸಾಧ್ಯವಾಗದೇ ಆರ್ಥಿಕವಾಗಿ ತೊಂದರೆ ಅನುಭವಿಸುತ್ತಿದ್ದಾರೆ. ಈ ವೆಳೆಯಲ್ಲಿ ತೆಂಗಿನ ತೋಟ ಹೊಂದಿರುವ ರೈತರು ತೆಂಗಿನ ಕಾಯಿ ಹಾಗೂ ಕೊಬ್ಬರಿಯಿಂದ ಹಣಗಳಿಸಿ ಕುಟುಂಬ ನಿರ್ವಹಣೆ ಮಾಡೋಣ ಎಂದರೆ ಬೆಲೆ ಸಲ್ಪಮಟ್ಟಿಗೆ ಕುಸಿದಿದೆ.

ತೋಟಕ್ಕೆ ಹೋಗಿ ಖರೀದಿ: ಈಗಾಗಲೇ ತೆಂಗಿನ ಮರದಲ್ಲಿನ ಕಾಯಿ ಕಿತ್ತು ಕೊಬ್ಬರಿಗಾಗಿ ಶೇಖರಣೆ ಮಾಡಿರುವ ರೈತರ ಸ್ಥಿತಿ ಹೇಳತೀರದು. ರೈತರು ಕುಟುಂಬ ನಿರ್ವಹಣೆ ಮಾಡಲು ಹಣ ಇಲ್ಲದೇ ತೆಂಗಿನ ಮರದಲ್ಲಿನ ಎಳನೀರು ಮಾರಾಟ ಮಾಡುತ್ತಿದ್ದಾರೆ. ಬೇಸಿಗೆ ರೀತಿ ಬಿಸಿಲಿನ ತಾಪ ಇರುವುದರಿಂದ ಎಳನೀರಿಗೆ ಬಂಪರ್‌ ಬೆಲೆ ಸಿಕ್ಕಿದೆ ಒಂದು ಎಳನೀರಿಗೆ ತೋಟದಲ್ಲಿಯೇ 13ರಿಂದ 15ರೂ. ನೀಡಿ ವರ್ತಕರು ಖರೀದಿಸುತ್ತಾರೆ.

ಕಲ್ಪತರು ತಾಲೂಕಿನಲ್ಲಿಯೇ ಒಂದು ಎಳನೀರಿಗೆ ಮಾರುಕಟ್ಟೆಯಲ್ಲಿ 25 ರಿಂದ 30 ರೂ. ಕೊಟ್ಟು ಸಾರ್ವಜನಿಕರು ದಾಹ ನೀಗಿಸಿಕೊಳ್ಳುತ್ತಿದ್ದಾರೆ. ಸ್ಥಳೀಯ ಮಾರುಕಟ್ಟೆಯಲ್ಲಿನ ಬೆಲೆ ಹಾಗೂ ಬಿಸಿಲಿನ ಝಳವನ್ನು ಮನಗಂಡಿರುವ ರೈತರು ತಮ್ಮ ತೋಟಕ್ಕೆ ಬಂದು ಎಳನೀರು ಖರೀದಿ ಮಾಡುವ ವರ್ತಕರಿಗೆ ಹೆಚ್ಚು ಹಣ ನೀಡುವಂತೆ ಬೇಡಿಕೆ ಇಡುತ್ತಿದ್ದಾರೆ. ಇದೇ ರೀತಿ ಬಿಸಿಲ ತಾಪಮಾನ ಹೆಚ್ಚಿದರೆ ತೋಟದಲ್ಲಿಯೇ 20 ರೂ. ನೀಡಿ ಎಳನೀರು ಕೊಳ್ಳುವ ಪರಿಸ್ಥಿತಿ ವರ್ತಕರದ್ದಾಗಿರುತ್ತದೆ.

● ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.