ಹಾಸನ ಪೊಲೀಸ್‌ ಲೇಔಟ್‌ನಲ್ಲಿ ಅನ್ಯಾಯ: ಪ್ರತಿಭಟನೆ


Team Udayavani, Jan 14, 2022, 12:17 PM IST

1-hasan-2

ಹಾಸನ: ಪೊಲೀಸ್‌ ಬಡಾವಣೆ ನಿವೇಶನಗಳ ಹಂಚಿಕೆ ಹಾಗೂ ದರ ನಿಗದಿಯಲ್ಲಿ ವಂಚನೆ ಮಾಡಲಾಗುತ್ತಿದೆ ಎಂದು ಅರ್ಜಿದಾರರು ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆಗೆ ಮುಂದಾದ ಘಟನೆ ಬುಧವಾರ ರಾತ್ರಿ ನಡೆದಿದೆ.

ನಗರದ ಹೊರ ವಲಯದ ಸತ್ಯಮಂಗಲದ ಹೌಸಿಂಗ್‌ ಬೋರ್ಡ್‌ ಬಡಾವಣೆ ಸಮೀಪ ಪೊಲೀಸ್‌ ಅಧಿಕಾರಿಗಳ ಮತ್ತು ಸಿಬ್ಬಂದಿಯವರ ಗೃಹ ನಿರ್ಮಾಣ ಸಹಕಾರ ಸಂಘದಿಂದ ನಿರ್ಮಿಸಿರುವ ವಸತಿ ಬಡಾವಣೆ ಯಲ್ಲಿ ಪೊಲೀಸ್‌ ಸಿಬ್ಬಂದಿ ಜತೆಗೆ ಬೇರೆಯವರೂ ನಿವೇಶನಕ್ಕೆ ಅರ್ಜಿ ಸಲ್ಲಿಸಿ ಹಣ ಪಾವತಿ ಮಾಡಿದ್ದಾರೆ.

ಹಾಸನದಲ್ಲಿ ಈ ಹಿಂದೆ ಎಸ್ಪಿಯಾಗಿದ್ದ ಎ.ಎನ್‌.ಪ್ರಕಾಶ್‌ ಗೌಡ ಅಧ್ಯಕ್ಷ, ಉಪಾಧ್ಯಕ್ಷ ಎಚ್‌.ಪಿ.ಶ್ರೀಧರ್‌ ಅವರು ಉಪಾಧ್ಯಕ್ಷರಾಗಿರುವ ಸಂಘದ ವಸತಿ ಬಡಾವಣೆ ಯನ್ನು ಎಸ್‌ಆರ್‌ ಡೆವಲಪರ್ ಅಭಿವೃದ್ಧಿಪಡಿಸಿದ್ದು, ನಿವೇಶನಗಳ ಹಂಚಿಕೆ ಸಂಬಂಧ ಬುಧವಾರ ಸಂಜೆ ಬಡಾವಣೆ ಬಳಿ ಸಭೆ ಕರೆಯಲಾಗಿತ್ತು. ಈ ಹಿಂದೆಯೇ ಒಂದೇ ಬಾರಿಗೆ ಸಂಪೂರ್ಣ ಹಣ ಪಾವತಿಸುವವರಿಗೆ ಚದರ ಅಡಿಗೆ 700 ರೂ, ಕಂತುಗಳಲ್ಲಿ ಹಣ ಪಾವತಿಸಿರುವವರಿಗೆ 725 ರೂ. ಗಳಂತೆ ನಿಗದಿ ಮಾಡಲಾಗಿತ್ತು. ಆದರೆ ಬುಧವಾರ ಸಂಜೆ ನಡೆದ ಸಭೆಯಲ್ಲಿ ನಿವೇಶನಗಳಿಗೆ ಈ ಹಿಂದೆ ಪೂರ್ಣ ಮೊತ್ತ ಪಾವತಿ ಮಾಡಿದವರೂ ಹೆಚ್ಚುವರಿ ಚದರ ಅಡಿಗೆ 145 ರೂ. ಪಾವತಿ ಮಾಡಬೇಕು. ನಿವೇ ಶನ ಚದರ ಅಡಿಗೆ ಬದಲಾಗಿ ಚದರ ಮೀಟರ್‌ಗಳಲ್ಲಿ ಹಂಚಿಕೆ ಮಾಡಲಾಗುವುದು ಎಂದು ಹೇಳಿದಾಗ ಹಣ ಪಾವತಿ ಮಾಡಿದ್ದವರು ಸಂಘದ ಪದಾಧಿಕಾರಿಗಳ ಮೇಲೆ ಆಕ್ರೋಶ ವ್ಯಕ್ತಪಡಿಸಿ, ನಮಗೆ ಅನ್ಯಾಯ ಮಾಡುತ್ತಿದ್ದೀರಿ ಎಂದು ಆರೋಪಿಸಿ ಪ್ರತಿಭಟನೆಗೆ ಮುಂದಾದರು.

ಈ ಸಂದರ್ಭದಲ್ಲಿ ಅಧ್ಯಕ್ಷ ಪ್ರಕಾಶ್‌ ಗೌಡ ಮಾಹಿತಿ ನೀಡದೆ ಸಭೆಯಿಂದ ನಿರ್ಗಮಿಸಿದರು. ರಾತ್ರಿ 11 ಗಂಟೆವರೆಗೂ ಪ್ರತಿಭಟನೆ ನಡೆಸಿದ ನೂರಾರು ಜನ ಇದುವರೆಗೂ ನಿವೇಶನದ ಅಭಿವೃದ್ಧಿ ಮಾಡದಿದ್ದರೂ ಹೆಚ್ಚುವರಿ ಹಣ ನೀಡಬೇಕೆಂದು ಈಗ ಹೇಳಿ ನಮಗೆ ಅನ್ಯಾಯ ಮಾಡಲಾಗುತ್ತಿದೆ. ಕಳೆದ 6 ವರ್ಷಗಳ ಹಿಂದೆಯೇ ನಾವು ಹಣ ಪಾವತಿ ಮಾಡಿ ದ್ದೇವೆ. ಮೊದಲು ಹಣ ಪಾವತಿಸಿದವರಿಗೆ ಸತ್ಯ ಮಂಗಲ ಹೌಸಿಂಗ್‌ಬೋರ್ಡ್‌ ಸಮೀಪ, ಕಂತುಗಳಲ್ಲಿ ವಿಳಂಬವಾಗಿ ಹಣ ಕಟ್ಟಿದವರಿಗೆ ದೂರದಲ್ಲಿ ನಿವೇಶನ ನೀಡುವುದಾಗಿ ಹೇಳುತ್ತಿದ್ದಾರೆ ಎಂದು ಅಳಲು ತೋಡಿಕೊಂಡ ನಿವೇಶನದಾರರು, ಈ ಮೊದಲು ನಿಗದಿ ಮಾಡಿದಂತೆ ನಮಗೆ ನಿವೇಶನ ಕೊಡಬೇಕೆಂದು ಪಟ್ಟು ಹಿಡಿದ್ದಾರೆ. ಮತ್ತೂಂದು ಸಭೆ ನಡೆಸಿ ನ್ಯಾಯ ಸಿಗುವವರೆಗೂ ಹೋರಾಟ ನಡೆಸುತ್ತೇವೆ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Amit Shah

Modi 3.0 ಅವಧಿಯಲ್ಲಿ ನಕ್ಸಲ್‌ ಮುಕ್ತ ದೇಶ: ಅಮಿತ್‌ ಶಾ

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.