ಮಾಳೇಗೆರೆಯಲ್ಲಿ ಬಸ್ ತಂಗುದಾಣ ನಿರ್ಮಿಸಲು ಒತ್ತಾಯ
Team Udayavani, Aug 27, 2019, 4:59 PM IST
ಪ್ರವಾಹ ಸಂತ್ರಸ್ತರಿಗೆ ಪರಿಹಾರ ಮತ್ತು ಪುನರ್ವಸತಿ ಕಲ್ಪಿಸುವಂತೆ ಆಗ್ರಹಿಸಿ ಹಾಸನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಬೇಲೂರು: ತಾಲೂಕಿನ ಕೋಗಿಲಮನೆ ಗ್ರಾಪಂ ವ್ಯಾಪ್ತಿಯ ಗ್ರಾಮಗಳಿಂದ ದಿನನಿತ್ಯ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಸಾರ್ವ ಜನಿಕರು ಸಂಚರಿಸುತ್ತಿದ್ದು, ಮದ ಘಟ್ಟ ರಸ್ತೆಯ ಶನೇಶ್ವರ ದೇಗುಲ ಸಮೀಪ ಬಸ್ ತಂಗುದಾಣ ನಿರ್ಮಿಸುವಂತೆ ಜನ ಪ್ರತಿನಿಧಿಗಳು ಹಾಗೂ ಅಧಿ ಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ತಾಲೂಕಿನ ಬಿಕ್ಕೋಡು ಹೋಬಳಿ ಕೋಗಿಲಮನೆ ಗ್ರಾಪಂಗೆ ಸೇರುವ ಮಾಳೇಗೆರೆ ಹಳೇಊರು, ಹೊಸಕೊಪ್ಪಲು, ಚಲುವೇಗೌಡನ ಕೊಪ್ಪಲು ಹಾಗೂ ಮಾಳೇಗೆರೆ ಕಾಲೋನಿಗಳಿಂದ ದಿನನಿತ್ಯ ಸಾಕಷ್ಟು ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಬೇಲೂರು, ಬಿಕ್ಕೋಡು ಹಾಸನಕ್ಕೆ ಪ್ರಯಾಣಿ ಸುತ್ತಿದ್ದು ಮಳೆ ಬಿಸಿಲೆನ್ನದೆ ಮರದ ಕೆಳಗೆ ನೀಲ್ಲಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಶಾಲಾ ಮಕ್ಕಳ ಪರದಾಟ: ಬೇಸಿಗೆ ಸಮಯದಲ್ಲಿ ರಸ್ತೆ ಪಕ್ಕದ ಮರದ ಕೆಳಗೆ ನಿಲ್ಲಬಹುದು. ಆದರೆ ಮಳೆಗಾಲದಲ್ಲಿ ಶಾಲಾ ಕಾಲೇಜಿಗೆ ತೆರಳುವ ಮಕ್ಕಳು ಪಠ್ಯಪುಸ್ತಕ ಹಾಗೂ ನೋಟ್ ಬುಕ್ಸ್ ಹಾಗೂ ಇನ್ನಿತರೆ ವಸ್ತುಗಳೆಲ್ಲ ಮಳೆ ನೀರಿನಲ್ಲಿ ನೆನೆಯುವುದಲ್ಲದೇ, ರಸ್ತೆ ಪಕ್ಕದಲ್ಲಿ ನಿಲ್ಲುವ ನೀರಿನಿಂದ ಬಟ್ಟೆಗಳೆಲ್ಲ ಕೊಳೆಯಾಗುತ್ತದೆ. ಶಾಲಾ ಕಾಲೇಜುಗಳಿಗೆ ತೆರಳಿದರೆ ಶಿಕ್ಷಕರು ಮತ್ತು ಉಪನ್ಯಾಸಕರಿಂದ ಬೈಸಿಕೊಳ್ಳುವುದು ಅನಿವಾರ್ಯವಾಗಿದೆ.
ವೃದ್ಧರು ಮಳೆಯರು, ಮಕ್ಕಳಿಗೂ ತೊಂದರೆ ಆಗುತ್ತಿರುವುದರಿಂದ ನಮಗೆ ತಕ್ಷಣವೇ ಮದಘಟ್ಟ ರಸ್ತೆಯ ಮಾಳೇಗೆರೆ ಶನೇಶ್ವರ ದೇಗುಲ ಸಮೀಪ ಬಸ್ ತಂಗುದಾಣ ನಿರ್ಮಿಸಬೇಕು. ಇಲ್ಲದಿದ್ದಲ್ಲಿ ಜನ ಪ್ರತಿನಿಧಿಗಳು ಹಾಗೂ ಅಧಿಕಾರಿಗಳ ವಿರುದ್ಧ ಮಾಳೇಗೆರೆ ಶನೇಶ್ವರ ದೇಗುಲ ಸಮೀಪ ಬಸ್ಗಳನ್ನು ತಡೆದು ಪ್ರತಿಭಟಿಸ ಬೇಕಾಗುತ್ತದೆ ಎಂದು ಈ ಭಾಗದ ಗ್ರಾಮಸ್ಥರು ಎಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Mukhtar Ansari: ಕುಖ್ಯಾತ ಗ್ಯಾಂಗ್ಸ್ಟರ್, 5 ಬಾರಿ ಶಾಸಕ ಅನ್ಸಾರಿ ಸಾವು
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್