ರೇವಣ್ಣ ಆಪ್ತರ ಮನೆ ಮೇಲೆ ಐಟಿ ದಾಳಿ


Team Udayavani, Apr 17, 2019, 3:00 AM IST

revanna

ಹಾಸನ: ಲೋಕಸಭಾ ಚುನಾವಣಾ ಪ್ರಕ್ರಿಯೆ ಆರಂಭವಾದ ನಂತರ ಜೆಡಿಎಸ್‌ ಬೆಂಬಲಿಗರ ನಿವಾಸದ ಮೇಲೆ 2 ಸುತ್ತಿನ ಆದಾಯ ತೆರಿಗೆ ದಾಳಿ ನಡೆದಿದೆ.

ಮಂಗಳವಾರ ಮುಂಜಾನೆ ಹಾಸನ ನಗರದಲ್ಲಿ ವಿಧಾನ ಪರಿಷತ್‌ ಮಾಜಿ ಸದಸ್ಯ ಪಟೇಲ್‌ ಶಿವರಾಂ ಸೇರಿ ಐವರು ಜೆಡಿಎಸ್‌ ಬೆಂಬಲಿಗರ ನಿವಾಸ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಹೊಳೆನರಸೀಪುರದಲ್ಲಿಯೂ ಸಚಿವ ರೇವಣ್ಣ ಅವರ ಬೆಂಬಲಿಗರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಗೌಡರ ಸಂಬಂಧಿಗಳೇ ಟಾರ್ಗೆಟ್‌: ಹಾಸನದ ಕುವೆಂಪು ನಗರದಲ್ಲಿರುವ ವಿಧಾನಪರಿಷತ್‌ ಸದಸ್ಯ ಪಟೇಲ್‌ ಶಿವರಾಂ, ಕೆ.ಆರ್‌.ಪುರಂನಲ್ಲಿರುವ ಎಚ್‌ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಹೊನ್ನವಳ್ಳಿ ಸತೀಶ್‌, ವಿದ್ಯಾನಗರದಲ್ಲಿರುವ ಪ್ರಥಮ ದರ್ಜೆ ಗುತ್ತಿಗೆದಾರ ಕಾರ್ಲೆ ಇಂದ್ರೇಶ್‌, ಕ್ರಷರ್‌ ಮಾಲೀಕ ನ್ಯಾಮನಹಳ್ಳಿ ಅನಂತ್‌, ಹೊಳೆನರಸೀಪುರ ತಾಲೂಕು ಹರದನಹಳ್ಳಿಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಸಂಬಂಧಿ ಜಿಪಂ ಮಾಜಿ ಸದಸ್ಯ ದೇವೇಗೌಡ ಉರುಫ್ ಪಾಪಣ್ಣಿ ಅವರ ನಿವಾಸದ ಮೇಲೆ ದಾಳಿ ನಡೆದಿದೆ.

ದಾಖಲೆಗಳ ಪರಿಶೀಲನೆ: ಮಂಗಳವಾರ ಏಕ ಕಾಲದಲ್ಲಿ ಐದೂ ಕಡೆ ಐಟಿ ದಾಳಿ ಆರಂಭವಾಯಿತು. ಸಿಆರ್‌ಪಿಎಫ್ ಯೋಧರ ರಕ್ಷಣೆಯೊಂದಿಗೆ ಜೊತೆ ಇನ್ನೋವಾ ಕಾರುಗಳಲ್ಲಿ ಐವರ ನಿವಾಸಗಳ ಬಳಿ ಪ್ರತ್ಯೇಕವಾಗಿ ಬಂದಿಳಿದ ಐಟಿ ಅಧಿಕಾರಿಗಳು ಮನೆಯ ಬಾಗಿಲುಗಳನ್ನು ಭದ್ರಪಡಿಸಿಕೊಂಡು ದಾಖಲೆಗಳನ್ನು ವಶಕ್ಕೆ ಪಡೆದುಕೊಂಡು ಪರಿಶೀಲಿಸಿದರು. ಸಂಜೆವರೆಗೂ ದಾಖಲೆಗಳ ಪರಿಶೀಲನೆ ಮುಂದುವರಿದಿತ್ತು. ನಗದು ಸಿಕ್ಕಿರುವ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಹೊಳೆನರಸೀಪುರದಲ್ಲಿ ರೇವಣ್ಣ ಅವರ ಆಪ್ತ ತರಕಾರಿ ವ್ಯಾಪಾರಿ ರಾಜೇಶ್‌ ಎಂಬವರ ಮನೆಗೂ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರೇವಣ್ಣ ಅವರ ಒಡೆತನದ ಚನ್ನಾಂಬಿಕಾ ಚಿತ್ರಮಂದಿರದ ಮೇಲೂ ದಾಳಿ ನಡೆದಿದೆ ಎಂದು ತಿಳಿದು ಬಂದಿದೆ. ಎರಡು ದಿನಗಳ ಹಿಂದೆ ರೇವಣ್ಣ ಅವರ ಆಪ್ತ ಸಹಾಯಕ ಹಾಸನ ಡೇರಿ ನೌಕರ ಬೋರೇಗೌಡ ಅವರ ನಿವಾಸದ ಮೇಲೂ ದಾಳಿ ನಡೆದರೂ ಅವರ ಬಳಿ ಏನೂ ಸಿಕ್ಕಿರಲಿಲ್ಲ.

ಮಾಹಿತಿ ನೀಡಿದರೂ 7 ಕೋಟಿ ರೂ. ಹಿಡಿಯಲಿಲ್ಲ
ಹಾಸನ: ಐಟಿ ದಾಳಿಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಆದಾಯತೆರಿಗೆ ಪಾವತಿ ಮಾಡದವರು, ಅಕ್ರಮ ಸಂಪತ್ತು ಹೊಂದಿದ್ದವರ ಮೇಲೆ ದಾಳಿ ನಡೆಸಲಿ. ಆದರೆ ಜೆಡಿಎಸ್‌ ಬೆಂಬಲಿಗರ ನಿವಾಸಗಳ ಮೇಲೆ ಐಟಿ ದಾಳಿ ನಡೆಸಿ ಅವರು ಚುನಾವಣಾ ಪ್ರಚಾರಕ್ಕೆ ಹೋಗದಂತೆ ಮನೆಯಲ್ಲಿಯೇ ಕೂಡಿ ಹಾಕಿಕೊಳ್ಳಲಾಗಿದೆ ಸಚಿವ ಎಚ್‌.ಡಿ.ರೇವಣ್ಣ ಅವರು ಆಕ್ರೋಶ ವ್ಯಕ್ತಪಡಿಸಿದರು.

ಜೆಡಿಎಸ್‌ ಮುಖಂಡರ ಮನೆ ಮೇಲೆ ಪದೇ ಪದೇ ದಾಳಿ ನಡೆಸುವ ಐಟಿ ಅಧಿಕಾರಿಗಳು ಮಾಹಿತಿ ನೀಡಿದರೂ ಬಿಜೆಪಿ ಮುಖಂಡರ ಮನೆ ಮೇಲೆ ದಾಳಿ ನಡೆಸುತ್ತಿಲ್ಲ. ಎರಡು ದಿನಗಳ ಹಿಂದೆ ಹಾಸನದ ರಿಂಗ್‌ ರಸ್ತೆಯಲ್ಲಿ ಬಿಜೆಪಿಯವರು 7 ಕೋಟಿ ರೂ. ನಗದು ಸಾಗಾಣೆ ಮಾಡುತ್ತಿರುವ ಬಗ್ಗೆ ಮಾಹಿತಿ ನೀಡಿದರೂ ಐಟಿ ಅಧಿಕಾರಿಗಳು ಕ್ರಮ ಕೈಗೊಳ್ಳಲಿಲ್ಲ ಎಂದು ಆಪಾದಿಸಿದರು.

ದೇವೇಗೌಡರ ಕುಟುಂಬದವರಿಗೆ ನೋವು ಕೊಟ್ಟವರ್ಯಾರೂ ಉಳಿದಿಲ್ಲ. ಐಟಿ ದಾಳಿಯ ಹಿಂದಿನ ಗುಟ್ಟಿನ ವಿಷಯಗಳನ್ನು ಚುನಾವಣೆ ಮುಗಿದ ನಂತರ ಬಹಿರಂಗಪಡಿಸುವೆ ಎಂದು ರೇವಣ್ಣ ಅವರು ಹೇಳಿದರು.

ಟಾಪ್ ನ್ಯೂಸ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.