ನನ್ನ ಮನೆಗೆ ಐಟಿ ದಾಳಿಯಾದರೆ ಈ ವ್ಯಕ್ತಿಯ ದಾಖಲೆಗಳು ಸಿಗುತ್ತದೆ: ಕುಮಾರಸ್ವಾಮಿ
Team Udayavani, Oct 22, 2019, 11:08 AM IST
ಹಾಸನ: ನನ್ನ ಮನೆಗೆ ಐಟಿಯವರು ಬಂದ್ರೆ ನನ್ನ ಮನೆಯಲ್ಲಿ ಇರುವುದು ಯಡಿಯೂರಪ್ಪ ಅವರ ದಾಖಲೆಗಳೇ ಎಂದು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಹೇಳಿದರು.
ಹಾಸನಾಂಬೆಯ ದರ್ಶನಕ್ಕೆ ಬಂದಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ನಾನು ಸಿಎಂ ಆಗಿ ಲೂಟಿ ಮಾಡಿಲ್ಲ, ಜನಗಳ ಆಸ್ತಿ ಸಂಪಾದನೆ ಮಾಡಿದ್ದೇನೆ. ದೇವೇಗೌಡರಿಗೆ ರಾಜ್ಯ ಬಿಡಿ ಎಂದು ನಾನೇ ಹೇಳುತ್ತೇನೆ. ಅವರು ಸೋತಿರಬಹುದು, ಆದರೆ ಅವರು ದೇಶದಲ್ಲಿ ಇರಬೇಕು. ಅವರಿಗೆ ಅಧಿಕಾರ ಬೇಡ,ಆದರೆ ಮತ್ತೊಂದು ಕ್ರಾಂತಿಯಾಗಬೇಕು. ಇಲ್ಲವಾದ್ರೆ ದೇಶ ಹಾಳಾಗಲಿದೆ, ಈಗಾಗಲೇ ತುರ್ತು ಪರಿಸ್ಥಿತಿ ನಿರ್ಮಾಣವಾಗಿದೆ. ಯಾರಾದರೂ ನೇತೃತ್ವ ವಹಿಸಿಕೊಳ್ಳದೇ ಇದ್ದರೆ ದೇಶಕ್ಕೆ ಕಷ್ಟಕಾಲ ಬರಲಿದೆ ಎಂದರು.
ದೇವೇಗೌಡರು ಹಾಸನದಿಂದಲೇ ಲೋಕಸಭಾ ಚುನಾವಣೆಗೆ ನಿಲ್ಲಬೇಕಿತ್ತು. ಲೋಕಸಭೆಯಲ್ಲಿ ಗೌಡರು ಇರಬೇಕಿತ್ತು ಎಂದು ಪಶ್ವತ್ತಾಪ ವ್ಯಕ್ತಪಡಿಸಿದ ಕುಮಾರಸ್ವಾಮಿ, ನಾವು ಹೆದರಿ ಕೂರೋದಿಲ್ಲ, ರಾಜ್ಯ, ದೇಶದಲ್ಲಿ ನಡೆಯುತ್ತಿರುವ ದುರಾಡಳಿತದ ಬಗ್ಗೆ ದನಿ ಎತ್ತಬೇಕಿದೆ. ಚುನಾವಣಾ ಫಲಿತಾಂಶಕ್ಕೂ ದೇಶದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಸಂಬಂಧ ಇಲ್ಲ. ದೇಶದಲ್ಲಿ ಬದಲಾವಣೆಗೆ ಒಂದು ವೇದಿಕೆ ಬೇಕು. ಸತ್ಯಸಂಗತಿಗಳನ್ನು ಧೈರ್ಯವಾಗಿ ಹೇಳಬೇಕಿದೆ ಎಂದರು.
ಉಪಚುನಾವಣೆಯ ಬಗ್ಗೆ ಮಾತನಾಡಿದ ಮಾಜಿ ಸಿಎಂ, 15 ಕ್ಷೇತ್ರಗಳ ಉಪ ಚುನಾವಣೆ ಗಂಭೀರವಾಗಿ ಎದುರಿಸುತ್ತೇವೆ. ಯಾವುದೇ ಮೈತ್ರಿ ಇಲ್ಲ. ಎಲ್ಲೆಡೆ ಅಭ್ಯರ್ಥಿಗಳನ್ನು ಹಾಕುತ್ತೇವೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ