ಸಚಿವ ರೇವಣ್ಣ ಆಪ್ತರ ಮೇಲೆ ಐಟಿ ದಾಳಿ
Team Udayavani, Apr 16, 2019, 9:46 AM IST
ಹಾಸನ: ಕರ್ನಾಟಕದಲ್ಲಿ ಪ್ರಥಮ ಹಂತದ ಲೋಕಸಭಾ ಚುನಾವಣೆಗೆ ಕೇವಲ ಎರಡು ದಿನಗಳು ಬಾಕಿ ಉಳಿದಿರುವಂತೆ ವಿವಿಧ ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆಯೂ ಜೋರಾಗಿದೆ. ಇನ್ನು ಮಂಗಳವಾರದಂದು ಬಹಿರಂಗ ಪ್ರಚಾರಕ್ಕೆ ತೆರೆಬೀಳಲಿರುವುದರಿಂದ ಆ ಬಳಿಕ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಹಣ-ಹೆಂಡ ಮತ್ತು ಇತರೇ ಆಮಿಷಗಳನ್ನು ಒಡ್ಡುವ ಸಾಧ್ಯತೆಗಳಿರುವುದಿಂದ ರಾಜ್ಯದ ಪ್ರಭಾವಿ ರಾಜಕೀಯ ನಾಯಕರ ಆಪ್ತರ ಚಲನವಲನಗಳ ಮೇಲೆ ಆದಾಯ ತೆರಿಗೆ ಇಲಾಖೆಯು ಹದ್ದಿನ ಕಣ್ಣಿಟ್ಟಿದೆ.
ಇದಕ್ಕೆ ಪೂರಕವಾಗಿ ಇಂದು ಬೆಳಿಗ್ಗೆ ಹಾಸನ ಜಿಲ್ಲೆಯ ವಿವಿಧ ಕಡೆಗಳಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸಚಿವ ಹೆಚ್.ಡಿ. ರೇವಣ್ಣ ಅವರ ಮೂವರು ಆಪ್ತರ ನಿವಾಸ, ಕಚೇರಿ ಸೇರಿದಂತೆ ಪೆಟ್ರೋಲ್ ಬಂಕ್ ಹಾಗೂ ಮರದ ಮಿಲ್ ಗಳಿಗೆ ದಾಳಿ ನಡೆಸಿರುವ ಆದಾಯ ತೆರಿಗೆ ಇಲಾಖೆಯ 8 ಜನ ಅಧಿಕಾರಿಗಳಿದ್ದ ತಂಡ ಅಲ್ಲೆಲ್ಲಾ ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿವೆ.
ರೇವಣ್ಣ ಅವರ ಆಪ್ತ ಕಾರ್ಲೆ ಇಂದ್ರೇಶ್ ಅವರ ಫ್ಯಾಕ್ಟರಿ ಹಾಗೂ ಗೆಸ್ಟ್ ಹೌಸ್ ಮೇಲೆ ದಾಳಿ ನಡೆದಿದೆ. ಎರಡು ಕಾರುಗಳಲ್ಲಿ ಬಂದ ಅಧಿಕಾರಿಗಳು ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕಾರ್ಲೆ ಇಂದ್ರೇಶ್ ಅವರ ಫ್ಯಾಕ್ಟರಿ ಮೇಲೆ ದಾಳಿ ನಡೆಸಿ ದಾಖಲೆಗಳ ತಪಾಸಣೆ ನಡೆಸುತ್ತಿದ್ದಾರೆ.
ಇನ್ನು ಹೊಳೇನರಸೀಪುರದ ಹರದನಹಳ್ಳಿಯಲ್ಲಿರುವ ಪಾಪಣ್ಣಿ ಅವರ ಮನೆಯಲ್ಲೂ ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಾರೆ. ಇನ್ನು ಜೆಡೆಎಸ್ ಜಿಲ್ಲಾ ಪಂಚಾಯತ್ ಸದಸ್ಯ ತಿಪ್ಪೇಗೌಡ ಅವರ ಮನೆಯ ಮೇಲೂ ಆದಾಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ವಿಧನಪರಿಷತ್ ಸದಸ್ಯ ಪಟೇಲ್ ಶಿವರಾಂ ಅವರ ಮನೆಯ ಮೇಲೂ ಆದಾಯ ತೆರಿಗೆ ದಾಳಿ ನಡೆದಿದೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ