ಎಚ್‌ಡಿಡಿ, ರೇವಣ್ಣ ತೀರ್ಮಾನವೇ ಅಂತಿಮ


Team Udayavani, Nov 16, 2021, 3:18 PM IST

ಎಚ್‌ಡಿಡಿ, ರೇವಣ್ಣ ತೀರ್ಮಾನವೇ ಅಂತಿಮ

ಹೊಳೆನರಸೀಪುರ: ಡಿ.10 ರಾಜ್ಯ ವಿಧಾನಪರಿಷತ್‌ಗೆ ನಡೆಯಲಿರುವ 25 ಸ್ಥಾನಗಳ ಪೈಕಿ ಸ್ಥಳೀಯ ಸಂಸ್ಥೆ ಸದಸ್ಯರ ಮತದಾನ ನಡೆಯಬೇಕಿದ್ದು, ಹಾಸನ ಕ್ಷೇತ್ರದಿಂದಲೂ ಓರ್ವರಿಗೆ ಅವಕಾಶ ಇದೆ ಎಂದು ಸಂಸದ ಪ್ರಜ್ವಲ್‌ ರೇವಣ್ಣ ನುಡಿದರು.

ಪಟ್ಟಣದ ಚನ್ನಾಂಬಿಕ ಕನ್ವನ್ಷೇನಲ್‌ ಹಾಲ್‌ ನಲ್ಲಿ ನಡೆದ ತಾಲೂಕು ಜೆಡಿಎಸ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡುತ್ತಿದ್ದ ಅವರು ಪ್ರಸ್ತುತ ಈ ಚುನಾವಣೆಯಲ್ಲಿ ಸೂಕ್ತ ಅಭ್ಯರ್ಥಿಗಳ ಆಯ್ಕೆ ಮಾಜಿ ಪ್ರಧಾನಿ ದೇವೇಗೌಡ ಮತ್ತು ಶಾಸಕ ರೇವಣ್ಣ ಅವರ ತಿರ್ಮಾನೆವೇ ಅಂತಿಮ ಎಂದು ತಿಳಿಸಿದರು.

ಜಿಲ್ಲೆಯ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿನ ಕಾರ್ಯಕರ್ತರುಭವಾನಿ ರೇವಣ್ಣಅವರಿಗೆಪಕ್ಷದಿಂದ ಟಿಕೆಟ್‌ ನೀಡುವಂತೆ ಒತ್ತಾಯ ಬರುತ್ತಿದೆ. ಅದರಂತೆ ನಮ್ಮ ಇಂದಿನ ಸಭೆಯಲ್ಲಿ ಭಾಗವಹಿಸಿರುವ ಕಾರ್ಯಕರ್ತರು ಮತ್ತು ಮುಖಂಡರು ಆಗ್ರಹ ಪಡಿಸುತ್ತಿರುವುದನ್ನು ಗಮನಿಸಿದ್ದೇನೆ.ಈ ಚುನಾವಣೆಗೆ ಹಿರಿಯರು ನಿರ್ಧರಿಸುವ ಅಭ್ಯರ್ಥಿಯನ್ನು ನಾವು ಕಣಕ್ಕೆ ಇಳಿಸುತ್ತೇವೆ. ಅವರನ್ನು ನಮ್ಮ ಮತದಾರರು ಬೆಂಬಲಿಸಿ ಅತಿ ಹೆಚ್ಚಿನ ಅಂತರದಲ್ಲಿ ಗೆಲ್ಲಿಸುವುದು ನಿಮ್ಮಗಳಕೆಲಸವಾಗಬೇಕು ಎಂದು ತಿಳಿಸಿದರು.

ಕೆಲವರು ಎಲ್ಲ ಸ್ಥಾನಗಳು ಇವರಕುಟುಂಬಕ್ಕೆ ಬೇಕೆ ಎಂಬ ಪ್ರಶ್ನೆ ಸಾರ್ವಜನಿಕವಾಗಿ ಎದ್ದಿದೆ. ಆದರೆ, ಇಲ್ಲಿ ಒಂದು ಅಂಶ ನಿಖರವಾಗಿ ಗೊತ್ತಾಗಬೇಕಿದೆ. ನಮ್ಮ ಕುಟುಂಬದವರೆಅಗಬೇಕೆಂಬಇರಾದೆ ನಮ್ಮಗಳದಲ್ಲ, ಇಂದು ನೀವುಗಳು ಭವಾನಿ ರೇವಣ್ಣ ಅವರಿಗೆ ಮಾತ್ರ ಟಿಕೆಟ್‌ ನೀಡುವಂತೆ ತಿಳಿಸುತ್ತಿದ್ದೀರಿ. ಆದರೆ, ಇದೇ ಅಂತಿಮವಲ್ಲ,ಪಕ್ಷಯಾರನ್ನೇ ಅಭ್ಯರ್ಥಿಯಾಗಿಸಿದರೂ ಎಲ್ಲರೂ ಒಮ್ಮತದಿಂದ ಗೆಲ್ಲಿಸಬೇಕು ಎಂದು ಹೇಳಿದ ಅವರು ನಮ್ಮ ಕಾರ್ಯಕರ್ತರುಮತ್ತು ಮುಖಂಡರು ನಮ್ಮಗಳ ಮೇಲೆ ಅತಿಯಾದ ಒತ್ತಡ ಹೇರಬೇಡಿ, ಏಕೆಂದರೆ ಈ

ಚುನಾವಣೆಯಲ್ಲಿಅಭ್ಯರ್ಥಿಯಾಗಿಸುವ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ರೇವಣ್ಣ ಅವರ ನಿಲುವೇ ಅಂತಿಮ ಅವರು ಅತೀ ಶೀಘ್ರವಾಗಿ ಅಭ್ಯರ್ಥಿಯಾರೆಂಬುದನ್ನು ಪ್ರಕಟಗೊಳಿಸಲಿದ್ದಾರೆ. ಏಕೆಂದರೆ ಈಗಾಗಲೆ ಕಾರ್ಯಕರ್ತರು ಮತ್ತು ಮುಖಂಡರುಗಳಲ್ಲಿ ಅಭ್ಯರ್ಥಿ ಯಾರು ಎಂಬ ಪ್ರಶ್ನೆ ಎದ್ದಿದೆ. ಅದಕ್ಕೆ ಇತೀ ಹಾಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.

ಪ್ರಜ್ವಲ್‌ ರೇವಣ್ಣ ಅವರ ಮಾತು ಮುಗಿಯುತಿದ್ದಂತೆ ಶಾಸಕ ಎಚ್‌.ಡಿ.ರೇವಣ್ಣ ಮಾತನಾಡಿ, ಕಾರ್ಯಕರ್ತರ ಅನಿಸಿಕೆ ಮತ್ತು ಮುಖಂಡರು ಮಾತನ್ನು ಆಲಿಸಿದ್ದೇನೆ. ಜಿಲ್ಲೆಯಲ್ಲಿ ಕಳೆದ 2 ದಿನಗಳಿಂದ ನಡೆದಿರುವ ಪಕ್ಷದ ಕಾರ್ಯಕರ್ತರ ಸಭೆಗಳಲ್ಲಿ ಭವಾನಿ ರೇವಣ್ಣ ಅವರ ಹೆಸರು ಬರುತ್ತಿದೆ. ನಮ್ಮ ಕಾರ್ಯಕರ್ತರ ಮತ್ತು ಮುಖಂಡರ ಅನಿಸಿಕೆಗಳನ್ನು ದೇವೇಗೌಡರ ಗಮನಕ್ಕೂ ತರಲಾಗುತ್ತದೆ. ಅಂತಿಮವಾಗಿ ಗೌಡರು ಕೈಗೊಳ್ಳುವ ನಿರ್ಧಾರವೇ ಅಂತಿಮ ಎಂದರು.

ತಾವು ಶಾಸಕರಾದ ನಂತರ ತಾಲೂಕು ಹಾಗು ಜಿಲ್ಲೆಗೆ ಅವಶ್ಯವಾಗಿ ಶಿಕ್ಷಣ ಕ್ಷೇತ್ರದಲ್ಲಿ ಸರ್ಕಾರಿ ಶಿಕ್ಷಣ ಸಂಸ್ಥೆಗಳ ಬಗ್ಗೆ ಮಾಹಿತಿ ನೀಡಿದರು. ಸಭೆಯವೇದಿಕೆಯಲ್ಲಿ ದಲಿತ ಮುಖಂಡಲಕ್ಕೂರು ಬಸವರಾಜು, ತಾಪಂ ಮಾಜಿಸದಸ್ಯಮಲ್ಲಿಕಾರ್ಜುನ್‌, ತಾಲೂಕು ಜೆಡಿಎಸ್‌ ಅಧ್ಯಕ್ಷ ಪುಟ್ಟ ಸೋಮಪ್ಪ , ದೊಡ್ಡಮಲ್ಲೇಗೌಡ, ತಾಪಂ ಮಾಜಿ ಅಧ್ಯಕ್ಷೆ ರಾಜೇಶ್ವರಿ, ಪುರಸಭೆ ಅಧ್ಯಕ್ಷೇ ವೀಣಾ, ಉಪಾಧ್ಯಕ್ಷೆ ತ್ರೀಲೋಚನಾ ಹಾಜರಿದ್ದರು. ತಾಪಂ ಮಾಜಿ ಸದಸ್ಯ ಜವರೇಗೌಡ ಕಾರ್ಯಕ್ರಮವನ್ನು ನಿರೂಪಿಸಿದರು.

ಭವಾನಿ ರೇವಣ್ಣಗೆ ಅಭೂತಪೂರ್ವ ಸ್ವಾಗತ : ಕಾರ್ಯಕರ್ತರ ಸಭೆ ಆರಂಭಗೊಂಡ ಕೆಲ ನಿಮಿ ಷಗಳ ನಂತರ ಭವಾನಿ ರೇವಣ್ಣ ಅವರು ಸಭೆಗೆ ಆಗಮಿಸಿದರು. ಅವರ ಆಗಮನ ಆಗುತ್ತಿದ್ದಂತೆ ಸಭೆಯಲ್ಲಿ ಕುಳಿತಿದ್ದವರು ಎದ್ದು ನಿಂತು ಭವಾನಿ ರೇವಣ್ಣ ಅವರನ್ನು ಗೌರವದಿಂದ ಸ್ವಾಗತಿಸಿ ವೇದಿಕೆಗೆ ಕಳುಹಿಸಿಕೊಟ್ಟರು. ಸಭೆಯಲ್ಲಿ ಹಳ್ಳಿಮೈಸೂರು ಭಾಗದ ಕಡೆಯಿಂದ ಬಾಲು, ಹೊಳೆನರಸೀಪುರ ಪಟ್ಟಣದಿಂದ ಪುರಸಭೆ ಮಾಜಿ ಅಧ್ಯಕ್ಷ ಲಕ್ಷ್ಮಣ್‌, ಮುತ್ತಿಗೆರಾಜೇಗೌಡ,ಜಿಪಂ ಮಾಜಿ ಸದಸ್ಯ ಎಚ್‌. ವೈ.ಚಂದ್ರಶೇಖರ್‌ ಮತ್ತೆ ಹಲವರು ಮಾತನಾಡಿ ಭವಾನಿ ರೇವಣ್ಣ ಅವರೇ ಸೂಕ್ತ ಅಭ್ಯರ್ಥಿ ಎಂದು ತಮ್ಮ ಇಂಗಿತವನ್ನು ವ್ಯಕ್ತ ಪಡಿಸಿದರು. ಇನ್ನೇರಡು ಮೂರು ದಿನಗಳಲ್ಲಿ ಉಳಿದ ತಾಲೂಕುಕೇಂದ್ರಗಳಲ್ಲಿ ಪಕ್ಷದಕಾರ್ಯಕರ್ತರ ಸಭೆ ನಡೆಸಿ ಅಭ್ಯರ್ಥಿಯಾರೆಂಬುದನ್ನು ಪ್ರಕಟಿಸಲಾಗುವುದು. ಯಾರೊಬ್ಬರೂ ಪಕ್ಷದ ಹಿರಿಯರುಕೈಗೊಳ್ಳುವ ತಿರ್ಮಾನಕ್ಕೆ ಬದ್ಧರಾಗಿ ಅವರು ಸೂಚಿಸುವ ಅಭ್ಯರ್ಥಿ ಗೆಲುವಿಗೆ ಸಹಕರಿಸಬೇಕು. ●ರೇವಣ್ಣ. ಜೆಡಿಎಸ್‌ ವರಿಷ್ಠ

ಟಾಪ್ ನ್ಯೂಸ್

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ

ಎಚ್‌ಡಿಕೆ ಕಾಲದಲ್ಲೂ ತೈಲ ದರ ಏರಿಸಿದ್ದರು: ಸಿದ್ಧರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

police crime

ಗೇಮಿಂಗ್‌ ಜೋನ್‌ ದುರಂತ: ಇನ್ನೂ ಇಬ್ಬರು ಪೊಲೀಸ್‌ ವಶಕ್ಕೆ

police USA

ಅಮೆರಿಕದಲ್ಲಿ 2 ಪ್ರತ್ಯೇಕ ಶೂಟೌಟ್‌: ಇಬ್ಬರು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.