ಸರ್ಕಾರಿ ಯೋಜನೆ ಸಮರ್ಪಕವಾಗಿ ಜಾರಿಯಾಗಬೇಕು


Team Udayavani, Apr 17, 2022, 2:17 PM IST

Untitled-1

ಜಾವಗಲ್‌: ಸರ್ಕಾರದ ಯೋಜನೆಗಳು ಸಮರ್ಪಕವಾಗಿ ಅನುಷ್ಠಾನಗೊಳಿಸುವಲ್ಲಿ ಅಧಿಕಾರಿಗಳು ಹಾಗೂ ಸಾರ್ವಜನಿಕರ ಸಹಕಾರ ಅತ್ಯಗತ್ಯವೆಂದು ಶಾಸಕ ಕೆ.ಎಸ್‌.ಲಿಂಗೇಶ್‌ ತಿಳಿಸಿದರು.

ಜಾವಗಲ್‌ ಹೋಬಳಿ ಉಂಡಿಗನಾಳು ಗ್ರಾಮದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಜಿಲ್ಲಾಧಿಕಾರಿಗಳ ನಡಿಗೆ ಹಳ್ಳಿ ಕಡೆಗೆ(ಗ್ರಾಮವಾಸ್ತವ್ಯ) ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕಂದಾಯ ಇಲಾಖೆ ಎಲ್ಲ ಇಲಾಖೆ ಗಳ ಮಾತೃ ಇಲಾಖೆಯಾಗಿದೆ. ಕಂದಾಯ ಇಲಾಖೆ ಹಾಗೂ ಭೂಮಾ ಪನ ಇಲಾಖೆ ರೈತರ ಹಿತದೃಷ್ಟಿಗಾಗಿ ಸಮನಯ್ವತೆಯಿಂದ ಕಾರ್ಯ ನಿರ್ವಹಿಸಿ ರೈತರ ಸಮಸ್ಯೆ ಬಗೆಹರಿಸಿಕೊಡಬೇಕೆಂದರು.

ಸ್ಥಳೀಯ ಜನ ಪ್ರತಿನಿಧಿಗಳು ಗ್ರಾಮಗಳ ಅಭಿವೃದ್ಧಿ ಕಾರ್ಯಗಳೊಂದಿಗೆ ಜನ ಸಾಮಾನ್ಯರಿಗೆ ಸಂಬಂಧಿಸಿದ ವಿವಿಧ ಮಾಸಾಶನ ಮಂಜೂರಾತಿ, ಖಾತೆ ಬದ ಲಾವಣೆ ಮುಂತಾದ ಕೆಲಸ ಕಾರ್ಯ ನಿರ್ವಹಿಸುವ ಮೂಲಕ ದಲ್ಲಾಳಿ ಹಾವಳಿ ತಪ್ಪಿಸುವಂತೆ ಸಲಹೆ ನೀಡಿದರು. ಉಂಡಿಗನಾಳು ಗ್ರಾಪಂ ವ್ಯಾಪ್ತಿಯಲ್ಲಿ ಈಗಾಗಲೇ 8-10 ಕೋಟಿ ರೂ.ವೆಚ್ಚದಲ್ಲಿ ವಿವಿಧ ರಸ್ತೆಗಳ ಕಾಮಗಾರಿ ಮಾಡಿಸಲಾಗಿದೆ ಎಂದರು. ಘನತ್ಯಾಜ್ಯ ವಿಲೇವಾರಿ ಘಟಕ, ಸ್ಮಶಾನಕ್ಕೆ ಜಮೀನು ಕಾಯ್ದಿರಿಸಲಾಗುತ್ತಿದೆ ಎಂದರು.

ಸ್ಥಳದಲ್ಲೇ ಸಮಸ್ಯೆಗಳಿಗೆ ಪರಿಹಾರ: ಅರಸೀಕೆರೆ ತಾಲೂಕು ತಹಶೀಲ್ದಾರ್‌ ವಿಭಾ ವಿದ್ಯಾ ರಾಥೋಡ್‌ ಮಾತನಾಡಿ, ಯೋಜನೆ ಉತ್ತಮ ವಾಗಿದ್ದು ಸ್ಥಳದಲ್ಲಿಯೇ ಹಲವಾರು ಸಮಸ್ಯೆ ಪರಿಹರಿಸಿಕೊಳ್ಳಬಹುದು. ತಾಲೂಕು ಕಚೇರಿಯೊಂದಿಗೆ ಸಾರ್ವಜನಿಕರು ನೇರ ಸಂಪರ್ಕ ಹೊಂದಿ ತಮ್ಮ ಕೆಲಸ ಕಾರ್ಯ ಮಾಡಿಸಿಕೊಳ್ಳುವಂತೆ ತಿಳಿಸಿದರು.

ಶಾಚಾಲಯ ವ್ಯವಸ್ಥೆಗೆ ಬೇಡಿಕೆ: ತಾಪಂ ಕಾರ್ಯ ನಿರ್ವಹಣಾಧಿಕಾರಿ ನಟರಾಜು ಮಾತನಾಡಿ, ಅಂಗನವಾಡಿ ಶಾಲೆ, ಕಾಲೇಜುಗಳಲ್ಲಿ , ಕಡ್ಡಾಯವಾಗಿ ಶೌಚಾಲಯ ವ್ಯವಸ್ಥೆ ಇರಬೇಕೆಂದರು. ಕೆಲವೆಡೆ ಹೊಸದಾಗಿ ಶೌಚಾಲಯ ಸೌಲಭ್ಯ ಮಾಡಿಸಿ ಕೊಳ್ಳುವಂತೆ ತಿಳಿಸಿದರು.

ಗ್ರೇಡ್‌-2 ತಹಶೀಲ್ದಾರ್‌ ಪಾಲಾಕ್ಷ, ಸಮಾಜಕಲ್ಯಾಣ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಗೋಪಾಲಪ್ಪ, ಕೃಷಿ ಇಲಾಖೆ ಸುಬ್ರಹ್ಮಣ್ಯ, ಬಸವರಾಜು ಕಟ್ಟಿಮನಿ, ಕೆಪಿಟಿಸಿಎಲ್‌ನ ಪುಟ್ಟರಾಜು, ಭೂಮಾಪನ ಇಲಾಖೆ ಹರೀಶ್‌ ಕುಮಾರ್‌, ಪಿಡಿಒ ವಾಣಿ ಶ್ರೀ, ಶಿರಸ್ತೇದಾರ್‌ ಶಿವಶಂಕರ್‌, ಭಾಗ್ಯಲಕ್ಷ್ಮೀಬಾಂಡ್‌, ಎನ್‌ಎಸ್‌ಸಿ ಬಾಂಡ್‌ ವಿವಿಧ ಮಾಸಾಶನ ಸೇರಿದಂತೆ ವಿವಿಧ ಮಂಜೂರಾತಿ ಪತ್ರ ವಿತರಿಸಲಾಯಿತು.

ಗ್ರಾಪಂ ಅಧ್ಯಕ್ಷೆ ನವೀನ ಸಿದ್ದರಾಜು, ಉಪಾಧ್ಯಕ್ಷ ಬೃಂಗೇಶ್‌, ಸದಸ್ಯರುಗಳು, ಜಿಪಂ ಎಇಇ ರಂಗನಾಥ್‌, ಬಿಸಿಎಂ ಇಲಾಖೆ ನಾರಾಯಣ್‌, ಲೋಕೋಪ ಯೋಗಿ ಇಲಾಖೆ ಏಇಇ ಉಮೇಶ್‌, ಪ್ರಕಾಶ್‌, ಎಪಿಎಂಸಿ ವಸಂತ್‌ ಕುಮಾರ್‌, ಎಂಐನ ರವೀಶ, ಪಶುಪಾಲನಾ ಇಲಾಖೆ ಡಾ.ಶಶಿಕಾಂತ್‌, ಆರ್‌ಐ ಗೋವಿಂದ ರಾಜು, ಸಿಡಿಪಿಒ ಶಂಕರಮೂರ್ತಿ ಗ್ರಾಮ ಲೆಕ್ಕಿಗರು ಸೇರಿದಂತೆ ತಾಲೂಕಿನ ವಿವಿಧ ಇಲಾಖೆಗಳ ಮುಖ್ಯಸ್ಥ ಸುತ್ತ ಮುತ್ತಲ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು. ಸಭೆಯಲ್ಲಿ ಸಲ್ಲಿಸಲಾಗಿದ್ದ 64 ಅರ್ಜಿಗಳ ಪೈಕಿ ಹಲವಾರು ಅರ್ಜಿಗಳನ್ನು ತಹಶೀಲ್ದಾರ್‌ ಪರೀಶಿಲಿಸಿ ಇತ್ಯರ್ಥಗೊಳಿಸಿದರು.

ಟಾಪ್ ನ್ಯೂಸ್

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

1-weeeqwe

ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಇಂದಿನಿಂದ ದ್ವಿತೀಯ ಪಿಯು-2 ಪರೀಕ್ಷೆ: 1.5 ಲಕ್ಷ ವಿದ್ಯಾರ್ಥಿಗಳ ನೋಂದಣಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.