![court](https://www.udayavani.com/wp-content/uploads/2024/07/court-7-415x231.jpg)
ಕರಿಯಮ್ಮ, ಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ
Team Udayavani, May 3, 2019, 1:50 PM IST
![has-2](https://www.udayavani.com/wp-content/uploads/2019/05/has-2-620x301.jpg)
ಅರಸೀಕೆರೆ: ನಗರದ ಗ್ರಾಮದೇವತೆ ಗಳಾದ ಕರಿಯಮ್ಮದೇವಿ ಮತ್ತು ಮಲ್ಲಿ ಗಮ್ಮ ದೇವಿಯವರ 50ನೇ ವರ್ಷದ ಸುವರ್ಣ ಸಂಭ್ರಮದ ಮಹಾ ರಥೋತ್ಸ ವವು ಗುರುವಾರ ಮಧ್ಯಾಹ್ನದಂದು ಶಾಸಕ ಕೆ.ಎಂ.ಶಿವಲಿಂಗೇಗೌಡರ ಸಮ್ಮು ಖದಲ್ಲಿ ಸಹಸ್ರಾರು ಭಕ್ತಾದಿಗಳ ನಡುವೆ ವಿಜೃಂಭಣೆಯಿಂದ ನಡೆಯಿತು.
ವಿಶೇಷ ಪೂಜೆ: ನಗರದ ಗ್ರಾಮ ದೇವತೆಗಳಾದ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ 50ನೇ ವರ್ಷದ ಮಹಾರಥೋತ್ಸವದ ಅಂಗ ವಾಗಿ ಗುರುವಾರ ಬೆಳಗ್ಗೆ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ಸಂಪ್ರದಾಯದಂತೆ ಶಾಸ್ತ್ರೋಕ್ತ ವಾಗಿ ನೆರವೇರಿಸಲಾಯಿತು.
ಮೂಲ ದೇವತೆ ಸನ್ನಿಧಿಯ ಆವರಣದಲ್ಲಿನ ಮಹಾರಥಕ್ಕೆ ವಿವಿಧ ಬಣ್ಣ,ಬಣ್ಣಗಳ ಬಾವುಟಗಳು ಮತ್ತು ಬಗೆ,ಬಗೆಯ ಹೂವು, ಹಾರಗಳಿಂದ ವಿನೂತನವಾಗಿ ಶೃಂಗರಿಸಿ ಪೂಜಾ ಕೈಂಕರ್ಯವನ್ನು ನಡೆಸಲಾಯಿತು.
ಮೆರುಗು ನೀಡಿದ ಮಂಗಳ ವಾದ್ಯ: ಮಂಗಳವಾದ್ಯಗಳಾದ ಚಿಟ್ಟೆ ಮೇಳ, ಕರಡೇ ವಾದ್ಯ, ತಮಟೆ ವಾದ್ಯಗಳು ಚೆಲುವರಾಯಸ್ವಾಮಿ, ದೂತ ರಾಯಸ್ವಾಮಿ, ಮಲ್ಲಿಗಮ್ಮದೇವಿ ಹಾಗೂ ಕೆಂಚರಾಯಸ್ವಾಮಿ ದೇವರು ಗಳ ಕುಣಿತ ಭಕ್ತ ಸಮೂಹಕ್ಕೆ ಆಕರ್ಷಣೆ ಕೇಂದ್ರ ಬಿಂದುವಾಗಿತ್ತು.
ಮಧ್ಯಾಹ್ನ 1.20 ಗಂಟೆಗೆ ಮಹಾ ರಥದಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮದೇವಿಯ ಉತ್ಸವಮೂರ್ತಿ ಗಳನ್ನು ಕೂರಿಸಿದ ನಂತರ ಮಹಾರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಾ ರೋಹಣಕ್ಕೆ ಚಾಲನೆ ನೀಡುತ್ತಿದಂತೆ ಜಾತ್ರಾ ಮಹೋತ್ಸವದಲ್ಲಿ ನೆರದಿದ್ದ ಸಹಸ್ರಾರು ಭಕ್ತರು ಶ್ರೀದೇವಿ ನಾಮ ಸ್ಮರಣೆಯಲ್ಲಿ ಬಾಳೇಹಣ್ಣು ಹಾಗೂ ದವನ ಪುಷ್ಪಗಳನ್ನು ಮಹಾರಥದ ಮೇಲೆ ಎಸೆದು ತಮ್ಮ ಭಕ್ತಿಭಾವನೆಗಳನ್ನು ಸಮರ್ಪಿಸಿದರು.
ಗ್ರಾಮದೇವತೆ ದೇವಾಲಯ ಆಡ ಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಅನೇಕ ಗಣ್ಯರು ಮಹಾ ರಥೋತ್ಸವದಲ್ಲಿ ಭಾಗವಹಿಸಿ ದೇವರಿಗೆ ಧನ್ಯತಾ ಭಾವನೆಯ ಭಕ್ತಿ ಸಮರ್ಪಣೆ ಯನ್ನು ಮಾಡಿದರು. ಮಹಾರಥೋತ್ಸವ ನೇರವೇರಿದ ನಂತರ ದೇವಾಲಯ ಅಕ್ಕಪಕ್ಕದಲ್ಲಿ, ರಸ್ತೆಯ ಬದಿಗಳಲ್ಲಿ ಸಾರ್ವಜನಿಕರಿಗೆ ಪಾನಕ ಮತ್ತು ನೀರು ಮಜ್ಜಿಗೆ ಹಾಗೂ ಕೊಸಂಬರಿ ಪ್ರಸಾದ ವಿತರಿಸಲಾಯಿತು. ದೇವಾಲಯ ಆಡಳಿತ ಸಮಿತಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಿತ್ತು.
ಅಂಬಾರಿ ಮೆರವಣಿಗೆ: ಶುಕ್ರವಾರ ಸಂಜೆ 4 ಗಂಟೆಗೆ ಶ್ರೀದೇವಿಯವರ ಮೂಲಸನ್ನಿಧಿಯಿಂದ ಸಕಲ ಬಿರು ದಾವಳಿಗಳ ಜೊತೆಗೆ ಮಂಗಳ ವಾದ್ಯ ಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಆನೆಯ ಅಂಬಾರಿ ಯಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ ಆದ್ದೂರಿ ಮೆರವಣಿಗೆಯನ್ನ ಏರ್ಪಡಿಸಲಾಗಿದೆ. ಭಕ್ತಾದಿಗಳು ತಮ್ಮ ತಮ್ಮ ಮನೆಗಳ ಮುಂದೆ ತಳಿರು ತೋರಣ ಹಾಗೂ ರಂಗೋಲಿ ಹಾಕುವ ಮೂಲಕ ಮೆರವಣಿಗೆಯನ್ನು ಸ್ವಾಗತಿಸಲು ಸಜ್ಜಾಗುವಮತೆ ದೇವಾಲಯ ಸಮಿತಿ ಮನವಿ ಮಾಡಿದೆ.
ಟಾಪ್ ನ್ಯೂಸ್
![court](https://www.udayavani.com/wp-content/uploads/2024/07/court-7-415x231.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
![Kohli IPL 2024](https://www.udayavani.com/wp-content/uploads/2024/07/Kohli-IPL-2024-150x103.jpg)
Champions Trophy; ಕೊಹ್ಲಿ ಪಾಕ್ನಲ್ಲಿ ಆಡಲಿ: ಯೂನಿಸ್ ಖಾನ್
![1-tatoo](https://www.udayavani.com/wp-content/uploads/2024/07/1-tatoo-150x84.jpg)
Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!
![1-wewqewq](https://www.udayavani.com/wp-content/uploads/2024/07/1-wewqewq-2-150x98.jpg)
Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.