ಕರಿಯಮ್ಮ, ಮಲ್ಲಿಗಮ್ಮ ದೇವಿಯರ ಮಹಾರಥೋತ್ಸವ


Team Udayavani, May 3, 2019, 1:50 PM IST

has-2

ಅರಸೀಕೆರೆ: ನಗರದ ಗ್ರಾಮದೇವತೆ ಗಳಾದ ಕರಿಯಮ್ಮದೇವಿ ಮತ್ತು ಮಲ್ಲಿ ಗಮ್ಮ ದೇವಿಯವರ 50ನೇ ವರ್ಷದ ಸುವರ್ಣ ಸಂಭ್ರಮದ ಮಹಾ ರಥೋತ್ಸ ವವು ಗುರುವಾರ ಮಧ್ಯಾಹ್ನದಂದು ಶಾಸಕ ಕೆ.ಎಂ.ಶಿವಲಿಂಗೇಗೌಡರ ಸಮ್ಮು ಖದಲ್ಲಿ ಸಹಸ್ರಾರು ಭಕ್ತಾದಿಗಳ ನಡುವೆ ವಿಜೃಂಭಣೆಯಿಂದ ನಡೆಯಿತು.

ವಿಶೇಷ ಪೂಜೆ: ನಗರದ ಗ್ರಾಮ ದೇವತೆಗಳಾದ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ 50ನೇ ವರ್ಷದ ಮಹಾರಥೋತ್ಸವದ ಅಂಗ ವಾಗಿ ಗುರುವಾರ ಬೆಳಗ್ಗೆ ಮೂಲ ಸನ್ನಿಧಿಯಲ್ಲಿ ವಿಶೇಷ ಪೂಜಾ ಕೈಂಕರ್ಯ ಗಳನ್ನು ಸಂಪ್ರದಾಯದಂತೆ ಶಾಸ್ತ್ರೋಕ್ತ ವಾಗಿ ನೆರವೇರಿಸಲಾಯಿತು.

ಮೂಲ ದೇವತೆ ಸನ್ನಿಧಿಯ ಆವರಣದಲ್ಲಿನ ಮಹಾರಥಕ್ಕೆ ವಿವಿಧ ಬಣ್ಣ,ಬಣ್ಣಗಳ ಬಾವುಟಗಳು ಮತ್ತು ಬಗೆ,ಬಗೆಯ ಹೂವು, ಹಾರಗಳಿಂದ ವಿನೂತನವಾಗಿ ಶೃಂಗರಿಸಿ ಪೂಜಾ ಕೈಂಕರ್ಯವನ್ನು ನಡೆಸಲಾಯಿತು.

ಮೆರುಗು ನೀಡಿದ ಮಂಗಳ ವಾದ್ಯ: ಮಂಗಳವಾದ್ಯಗಳಾದ ಚಿಟ್ಟೆ ಮೇಳ, ಕರಡೇ ವಾದ್ಯ, ತಮಟೆ ವಾದ್ಯಗಳು ಚೆಲುವರಾಯಸ್ವಾಮಿ, ದೂತ ರಾಯಸ್ವಾಮಿ, ಮಲ್ಲಿಗಮ್ಮದೇವಿ ಹಾಗೂ ಕೆಂಚರಾಯಸ್ವಾಮಿ ದೇವರು ಗಳ ಕುಣಿತ ಭಕ್ತ ಸಮೂಹಕ್ಕೆ ಆಕರ್ಷಣೆ ಕೇಂದ್ರ ಬಿಂದುವಾಗಿತ್ತು.

ಮಧ್ಯಾಹ್ನ 1.20 ಗಂಟೆಗೆ ಮಹಾ ರಥದಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮದೇವಿಯ ಉತ್ಸವಮೂರ್ತಿ ಗಳನ್ನು ಕೂರಿಸಿದ ನಂತರ ಮಹಾರಥಕ್ಕೆ ಪೂಜೆ ಸಲ್ಲಿಸುವ ಮೂಲಕ ರಥಾ ರೋಹಣಕ್ಕೆ ಚಾಲನೆ ನೀಡುತ್ತಿದಂತೆ ಜಾತ್ರಾ ಮಹೋತ್ಸವದಲ್ಲಿ ನೆರದಿದ್ದ ಸಹಸ್ರಾರು ಭಕ್ತರು ಶ್ರೀದೇವಿ ನಾಮ ಸ್ಮರಣೆಯಲ್ಲಿ ಬಾಳೇಹಣ್ಣು ಹಾಗೂ ದವನ ಪುಷ್ಪಗಳನ್ನು ಮಹಾರಥದ ಮೇಲೆ ಎಸೆದು ತಮ್ಮ ಭಕ್ತಿಭಾವನೆಗಳನ್ನು ಸಮರ್ಪಿಸಿದರು.

ಗ್ರಾಮದೇವತೆ ದೇವಾಲಯ ಆಡ ಳಿತ ಸಮಿತಿ ಅಧ್ಯಕ್ಷರು ಮತ್ತು ಸದಸ್ಯರು ಸೇರಿದಂತೆ ಅನೇಕ ಗಣ್ಯರು ಮಹಾ ರಥೋತ್ಸವದಲ್ಲಿ ಭಾಗವಹಿಸಿ ದೇವರಿಗೆ ಧನ್ಯತಾ ಭಾವನೆಯ ಭಕ್ತಿ ಸಮರ್ಪಣೆ ಯನ್ನು ಮಾಡಿದರು. ಮಹಾರಥೋತ್ಸವ ನೇರವೇರಿದ ನಂತರ ದೇವಾಲಯ ಅಕ್ಕಪಕ್ಕದಲ್ಲಿ, ರಸ್ತೆಯ ಬದಿಗಳಲ್ಲಿ ಸಾರ್ವಜನಿಕರಿಗೆ ಪಾನಕ ಮತ್ತು ನೀರು ಮಜ್ಜಿಗೆ ಹಾಗೂ ಕೊಸಂಬರಿ ಪ್ರಸಾದ ವಿತರಿಸಲಾಯಿತು. ದೇವಾಲಯ ಆಡಳಿತ ಸಮಿತಿ ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಿತ್ತು.

ಅಂಬಾರಿ ಮೆರವಣಿಗೆ: ಶುಕ್ರವಾರ ಸಂಜೆ 4 ಗಂಟೆಗೆ ಶ್ರೀದೇವಿಯವರ ಮೂಲಸನ್ನಿಧಿಯಿಂದ ಸಕಲ ಬಿರು ದಾವಳಿಗಳ ಜೊತೆಗೆ ಮಂಗಳ ವಾದ್ಯ ಗಳೊಂದಿಗೆ ಹಾಗೂ ಸಾಂಸ್ಕೃತಿಕ ಕಲಾ ತಂಡಗಳ ಪ್ರದರ್ಶನದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಆನೆಯ ಅಂಬಾರಿ ಯಲ್ಲಿ ಕರಿಯಮ್ಮದೇವಿ ಮತ್ತು ಮಲ್ಲಿಗಮ್ಮ ದೇವಿಯವರ ಆದ್ದೂರಿ ಮೆರವಣಿಗೆಯನ್ನ ಏರ್ಪಡಿಸಲಾಗಿದೆ. ಭಕ್ತಾದಿಗಳು ತಮ್ಮ ತಮ್ಮ ಮನೆಗಳ ಮುಂದೆ ತಳಿರು ತೋರಣ ಹಾಗೂ ರಂಗೋಲಿ ಹಾಕುವ ಮೂಲಕ ಮೆರವಣಿಗೆಯನ್ನು ಸ್ವಾಗತಿಸಲು ಸಜ್ಜಾಗುವಮತೆ ದೇವಾಲಯ ಸಮಿತಿ ಮನವಿ ಮಾಡಿದೆ.

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.