ರಾಜಕಾರಣದ ಬಗ್ಗೆ ಪ್ರಸ್ತಾಪ ಮಾಡಿಲ್ಲ : ಕೋಡಿಮಠ ಶ್ರೀ
Team Udayavani, Sep 12, 2021, 8:30 PM IST
ಅರಸೀಕೆರೆ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಬೆಂಗಳೂರಿನಲ್ಲಿ ನಡೆಯುತ್ತಿದ್ದ ವಿವಾಹ ಕಾರ್ಯಕ್ರಮದಲ್ಲಿ ತಮ್ಮನ್ನು ಭೇಟಿ ಮಾಡಿ ಆಶೀರ್ವಾದ ಪಡೆದರೇ ಹೊರತು, ರಾಜಕಾರಣದ ಬಗ್ಗೆ ಯಾವುದೇ ವಿಷಯ ಪ್ರಸ್ತಾಪ ಮಾಡಿಲ್ಲ ಎಂದು ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದ ಪೀಠಾಧ್ಯಕ್ಷ ಡಾ.ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಹೇಳಿದರು.
ತಾಲೂಕಿನ ಹಾರನಹಳ್ಳಿ ಸುಕ್ಷೇತ್ರ ಕೋಡಿಮಠದಲ್ಲಿ ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿ, ಬೆಂಗಳೂರಿನ ವಿವಾಹ ಕಾರ್ಯಕ್ರಮಕ್ಕೆ ತಾವು ಹೋದಾಗ ಅಲ್ಲಿಗೆ ಸಿದ್ದರಾಮಯ್ಯನವರು ಬಂದಿದ್ದರು, ಕೋವಿಡ್ ಸಂಕಷ್ಟ ಪರಿಸ್ಥಿತಿ ಹಾಗೂ ಇತರೆ ವಿಷಯಗಳ ಬಗ್ಗೆ ಕೆಲವು ನಿಮಿಷ ವಿಚಾರ ಮಂಥನ ನಡೆದು ನಂತರ ಆಶೀರ್ವಾದ ಪಡೆದರು ಎಂದರು.
ಇದನ್ನೂ ಓದಿ:ಸರ್ಕಾರಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ : ಸಚಿವ ಶಿವರಾಮ ಹೆಬ್ಬಾರ
ಈ ಸಂದರ್ಭದಲ್ಲಿ ರಾಜ್ಯ ರಾಜಕಾರಣ ಸೇರಿದಂತೆ ಅತ್ಯಂತ ಸೂಕ್ಷ್ಮ ವಿಷಯಗಳನ್ನು ಯಾರೂ ಪ್ರಸ್ತಾಪ ಮಾಡಿಲ್ಲ. ರಾಜಕಾರಣದಲ್ಲಿ ಧರ್ಮ ಇರಬೇಕೇ ಹೊರತು ಧರ್ಮದಲ್ಲಿ ರಾಜಕಾರಣ ಬೇರೆಸುವುದು ಸರಿಯಲ್ಲ ಎಂದರಲ್ಲದೆ, ಒಳ್ಳೆಯ ಕೆಲಸ ಕಾರ್ಯಗಳು ಅಥವಾ ಸಮಸ್ಯೆಗಳ ಪರಿಹಾರದ ಬಗ್ಗೆ ಸೂಕ್ತ ಮಾರ್ಗದರ್ಶನ ಪಡೆಯುವುದು ಅನಾದಿಕಾಲದ ರಾಜ ವಂಶದ ಆಡಳಿತದಲ್ಲಿ ಬೆಳೆದು ಬಂದಿರುವ ಗುರು ಪರಂಪರೆಯ ಸಂಪ್ರದಾಯವಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ