ಪಿಯು ಕಾಲೇಜಿನಲ್ಲಿ ಮೂಲ ಸೌಕರ್ಯ ಕೊರತೆ


Team Udayavani, Sep 17, 2019, 4:07 PM IST

hasan-tdy-1

ಸಕಲೇಶಪುರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು.

ಸಕಲೇಶಪುರ: ಪಟ್ಟದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜು ಮೂಲಭೂತ ಸೌಕರ್ಯಗಳಿಂದ ವಂಚಿತವಾಗಿದೆ. ಇದರಿಂದ ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನೂರಾರು ವಿದ್ಯಾರ್ಥಿಗಳು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ.

ಬ್ರಿಟಿಷರ ಕಾಲದಲ್ಲಿ ನಿರ್ಮಾಣವಾದ ಪಿಯು ಕಾಲೇಜು ತನ್ನದೇ ಅದ ಇತಿಹಾಸವನ್ನು ಹೊಂದಿದ್ದು ಆದರೆ ಇತ್ತೀಚಿನ ದಿನಗಳಲ್ಲಿ ಕಾಲೇಜು ಅಭಿವೃದ್ಧಿ ಯಿಂದ ವಂಚಿತವಾಗುತ್ತಿದೆ. ಕಾಲೇಜು ಆಡಳಿತ ವರ್ಗದ ಬೇಜವಾಬ್ದಾರಿತನದಿಂದಾಗಿ ನೂರಾರು ಹೆಣ್ಣುಮಕ್ಕಳು ಶೌಚಾಲಯವಿದ್ದರೂ ಶೌಚಾಲಯಗಳಿಗೆ ಬೀಗ ಹಾಕಿರುವ ಕಾರಣ ಪರದಾಡುವ ಪರಿಸ್ಥಿತಿ ಉಂಟಾಗಿದೆ.

250 ವಿದ್ಯಾರ್ಥಿಗಳ ವ್ಯಾಸಂಗ: ಈ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ನಡೆಯುತ್ತಿದ್ದು, ಸುಮಾರು 250ಕ್ಕೂ ಹೆಚ್ಚು ಗಂಡು ಹಾಗೂ ನೂರಕ್ಕೂ ಹೆಚ್ಚು ಹೆಣ್ಣುಮಕ್ಕಳು ವ್ಯಾಸಂಗ ಕ್ಕಾಗಿ ಬರುತ್ತಿದ್ದಾರೆ. ಬಹುತೇಕ ಗ್ರಾಮೀಣ ಭಾಗ ಗಳಿಂದಲೇ ನಿತ್ಯ ಹದಿನೈದರಿಂದ ಮೂವತ್ತು ಕಿ.ಮೀ. ದೂರದ ಊರುಗಳಿಂದ ಬರುತ್ತಾರೆ. ತಾಲೂಕಿನ ಹೆತ್ತೂರು, ವನಗೂರು ಕೂಡುರಸ್ತೆ, ದೋಣಿಗಾಲ್, ಹುರುಡಿ, ಬಾಳ್ಳುಪೇಟೆ, ನಾರ್ವೆ, ಉದೇವಾರ ಸೇರಿದಂತೆ ವಿವಿಧ ಗ್ರಾಮೀಣ ಪ್ರದೇಶದ ವಿದ್ಯಾರ್ಥಿ ಗಳು ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗಕ್ಕೆ ದಾಖಲಾಗಿದ್ದಾರೆ. ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 3.15 ವರೆಗೂ ತರಗತಿಗಳು ನಿತ್ಯ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ತರಗತಿಗೆ ಬರುವ ವಿದ್ಯಾರ್ಥಿಗಳು ತಮ್ಮ ಊರುಗಳನ್ನು ಬೆಳಗ್ಗೆ 7.30 ಇಂದ 8 ಗಂಟೆ ಹೊತ್ತಿಗೆ ಬಿಟ್ಟು ಬಸ್ಸು ಹತ್ತಿ ಬರಬೇಕಾಗಿದೆ. ಆದರೆ ಕಾಲೇಜಿಗೆ ಬಂದರೆ ಶೌಚಾಲಯವಿಲ್ಲ.

ಶೌಚಾಲಯಕ್ಕೆ ಬೀಗ: ಶೌಚಾಲಯಕ್ಕಾಗಿ ವಿದ್ಯಾರ್ಥಿ ಗಳು ಈ ಮೊದಲು ಕಾಲೇಜಿನ ಹಳೆಯ ಶೌಚಾಲ ಯವನ್ನು ಆಶ್ರಯಿಸಿದ್ದರು. ಆದರೆ ಅದನ್ನು ತಿಂಗಳು ಗಟ್ಟಲೆ ನಿರ್ವಹಣೆ ಮಾಡದ ಕಾರಣ ಅದಕ್ಕೆ ವಿದ್ಯಾರ್ಥಿಗಳೇ ಕಾರಣ ಎಂದು ಈಗ ಬೀಗ ಹಾಕ ಲಾಗಿದೆ. ಅದರ ಕೀ ಅನ್ನು ಉಪನ್ಯಾಸಕರೇ ಇಟ್ಟುಕೊಂಡಿದ್ದು, ಇವರು ಮಾತ್ರ ಬೇಕಾದಾಗ ಬೀಗ ತೆಗೆದುಹೋಗಿ ಬರುತ್ತಾರೆ ಎಂಬ ಆರೋಪವಿದೆ. ವಿದ್ಯಾರ್ಥಿಗಳು ಮೂತ್ರ ವಿಸರ್ಜಿಸಲು ಪರದಾಡಬೇಕಾಗಿದೆ.

ಗಂಡುಮಕ್ಕಳು ಪದೇ ಪದೇ ಎದ್ದು ಕಾಲೇಜಿನ ಹಿಂಭಾಗದಲ್ಲಿ ಮೂತ್ರ ವಿರ್ಸಜನೆಗೆ ತೆರಳಿದರೆ ಹೆಣ್ಣು ಮಕ್ಕಳ ಪಾಡಾಂತೂ ಯಾರಿಗೂ ಹೇಳದ ಪರಿಸ್ಥಿತಿ ನಿರ್ಮಾಣವಾಗಿದೆ.

ನೀರು ಕುಡಿಯಲೂ ಹಿಂದೇಟು: ಇನ್ನೊಂದು ಶೌಚಾಲಯ ನಿರ್ಮಾಣವಾಗಿದೆ. ಆದರೆ ಇದರ ಕೀಯನ್ನು ಕೆಲವು ಮಹಿಳಾ ಉಪನ್ಯಾಸಕಿಯರೇ ಬೀಗ ಹಾಕಿ ಅದರ ಕೀ ತಮ್ಮ ಬಳಿ ಇಟ್ಟುಕೊಂಡಿದ್ದಾರೆ. ಕಾಲೇಜಿನಲ್ಲಿ ಇರುವ ಎರಡು ಶೌಚಾಲಯದಲ್ಲಿ ಒಂದನ್ನು ಪುರುಷ ಉಪನ್ಯಾಸಕರು ಹಾಗೂ ಇನ್ನೊಂದನ್ನು ಮಹಿಳಾ ಉಪನ್ಯಾಸಕಿಯರು ಬಳ ಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳಿಗೆ ಶೌಚಕ್ಕೆ ಹೋಗ ಬೇಕೆಂಬ ಭಯದಿಂದ ನೀರು ಕುಡಿಯಲೂ ಸಹ ಹಿಂದೇಟು ಹಾಕುವಂತಾಗಿದೆ. ಈ ಬಗ್ಗೆ ಬಹಿರಂಗವಾಗಿ ಯಾರಿಗಾದರೂ ಹೇಳಿದರೆ ಅಂತಹ ವಿದ್ಯಾರ್ಥಿಗಳಿಗೆ ಕಿರುಕುಳ ನೀಡಲಾಗುತ್ತದೆ. ಇನ್ನು ಕಿಡಿಗೇಡಿ ವಿದ್ಯಾರ್ಥಿಗಳು ಶೌಚಾಲಯವನ್ನು ಗಲೀಜು ಮಾಡುವುದರಿಂದ ಉಪನ್ಯಾಸಕರೇ ಶೌಚಾಲಯದ ಕೀ ಇಟ್ಟುಕೊಳ್ಳಲು ಕಾರಣವಾಗಿದೆ ಎಂಬ ಮಾತುಗಳು ಸಹ ಕೇಳಿ ಬರುತ್ತಿದೆ.

ಗುರುತಿನ ಚೀಟಿ ಕೊಟ್ಟಿಲ್ಲ: ಕಾಲೇಜು ಜೂನ್‌ ತಿಂಗಳಲ್ಲೇ ಶುರುವಾಗಿದೆ. ಎರಡು ತಿಂಗಳಾದರೂ ಪ್ರಥಮ ಪಿಯುಸಿಯ ಯಾವೊಬ್ಬ ವಿದ್ಯಾರ್ಥಿಗೂ ಇದುವರೆಗೂ ಗುರುತಿನ ಚೀಟಿ ಕೊಟ್ಟಿಲ್ಲ. ಪರೀಕ್ಷೆಗಳು ಶುರುವಾಗಿವೆ. ಐಡಿ ಕಾರ್ಡ್‌ ಇಲ್ಲದೇ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಬಸ್‌ಗಳಲ್ಲಿ, ಹಾಸ್ಟೆಲ್ಗಳಲ್ಲಿ ಕೇಳಿದರೆ ತೋರಿಸಲು ಗುರುತಿನ ಚೀಟಿ ಇಲ್ಲದೇ ವಿದ್ಯಾರ್ಥಿಗಳು ಪರಿಪರಿ ಯಾಗಿ ಓಲೈಸಬೇಕಾಗಿದೆ.

ಕುಡಿಯುವ ನೀರು ಇಲ್ಲ: ಈ ಕಾಲೇಜಿಗೆ ಹಲವು ದಶಕಗಳ ಇತಿಹಾಸವಿದ್ದರೂ ಕುಡಿವ ನೀರಿಲ್ಲ. ನೀರಿ ಗಾಗಿ ಪ್ರೌಢಶಾಲೆ ನಲ್ಲಿಗಳನ್ನು ಆಶ್ರಯಿಸ ಬೇಕಾಗಿದೆ. ಬೈಸಿಕೊಂಡು ನೀರು ಕುಡಿಯಬೇಕಿದ್ದು ತುರ್ತು ನೀರು ಬೇಕೆಂದರೂ ಗುಟುಕು ನೀರು ಸಿಗುವುದಿಲ್ಲ.

ಸ್ಯಾನಿಟರಿ ಪ್ಯಾಡ್‌ ವಿತರಿಸಿಲ್ಲ: ಕಾಲೇಜು ವಿದ್ಯಾರ್ಥಿ ನಿಯರಿಗೆಂದು ಸರ್ಕಾರವು ಸ್ಯಾನಿಟರಿ ಪ್ಯಾಡ್‌ಗಳನ್ನು ವಿತರಿಸುತ್ತಿದೆ. ಆದರೆ ಕಾಲೇಜಿನಲ್ಲಿ ಮಹಿಳಾ ಉಪ ನ್ಯಾಸಕಿಯರು ಇದ್ದರೂ ಸಹ ವಿದ್ಯಾರ್ಥಿನಿಯರಿಗೆ ಸ್ಯಾನಿಟರಿ ಪ್ಯಾಡ್‌ ವಿತರಿಸಿಲ್ಲ ಹಾಗೂ ಈ ಬಗ್ಗೆ ಜಾಗೃತಿಯನ್ನೂ ಮೂಡಿಸಿಲ್ಲ ಎಂಬ ಆರೋಪಗಳಿದೆ.

ಹೆಚ್ಚುವರಿ ಕೊಠಡಿಗಳು ಉಪಯೋಗಕ್ಕಿಲ್ಲ: ಕಾಲೇಜು ವಿದ್ಯಾರ್ಥಿಗಳ ಉಪಯೋಗಕ್ಕಾಗಿ ಹೆಚ್ಚು ವರಿಯಾಗಿ ಎರಡು ಕೊಠಡಿಗಳು ನಿರ್ಮಾಣವಾಗಿ ಸುಮಾರು ಒಂದು ವರ್ಷವಾಗುತ್ತ ಬಂದಿದ್ದರೂ ಇದನ್ನು ಉಪಯೋಗಿಸಲು ಮುಂದಾಗಿರುವುದಿಲ್ಲ.

ಯಾರು ಹೊಣೆ?: ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿ ಗಳ ಸಂಖ್ಯೆ ಕ್ಷೀಣಿಸುತ್ತಿದೆ. ಇಲ್ಲಿ ದಾಖಲಾಗಲು ಯಾರೂ ಬಯಸುತ್ತಿಲ್ಲ. ಫ‌ಲಿತಾಂಶವೂ ಕೂಡ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತ ಬರುತ್ತಿದೆ. ಈ ಕಾಲೇಜಿನ ಆವರಣದಲ್ಲೇ ಪ್ರೌಢಶಾಲೆಯೂ ಇದೆ. ಅಲ್ಲಿ ವ್ಯಾಸಂಗ ಮಾಡಿದವರೂ ಕೂಡ ಈ ಕಾಲೇಜಿಗೆ ದಾಖಲಾಗಲು ಮುಂದಾ ಗುತ್ತಿಲ್ಲ. ಎಲ್ಲಾ ವಿದ್ಯಾರ್ಥಿನಿಯರು ಪಕ್ಕದಲ್ಲೇ ಇರುವ ಬಾಲಕಿಯರ ಕಾಲೇಜಿಗೆ ದಾಖಲಾಗುತ್ತಿದ್ದಾರೆ.

ಕಾಲೇಜಿನಲ್ಲಿ ಇಷ್ಟೆಲ್ಲಾ ಸಮಸ್ಯೆಗಳಿದ್ದರೂ ಇದನ್ನು ಬಹಿರಂಗಪಡಿಸಲು ವಿದ್ಯಾರ್ಥಿಗಳು ಅಂಜುತ್ತಿದ್ದಾರೆ. ಇಷ್ಟೆಲ್ಲಾ ದುರವಸ್ಥೆಯಿಂದ ಒದ್ದಾಡುತ್ತಿರುವ ಈ ಕಾಲೇಜಿಗೆ ಮುಕ್ತಿ ದೊರಕಿಸಬೇಕಿದೆ. ಸೌಕರ್ಯಗಳ ಕೊರತೆ ಎನ್ನುವುದಕ್ಕಿಂತ ಸೌಕರ್ಯಗಳ ಕೃತಕ ಅಭಾವ ಸೃಷ್ಟಿಸಿರುವ ಕಾಲೇಜಿನ ಪ್ರಾಂಶುಪಾಲರು ಇನ್ನಾದರೂ ಎಚ್ಚೆತ್ತು ಕಾಲೇಜಿನ ಅಭಿವೃದ್ಧಿ ಮಾಡಲು ಮುಂದಾಗಬೇಕಾಗಿದೆ.

 

● ಸುಧೀರ್‌ ಎಸ್‌.ಎಲ್

ಟಾಪ್ ನ್ಯೂಸ್

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.