ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!


Team Udayavani, May 20, 2023, 4:09 PM IST

ಚನ್ನರಾಯಪಟ್ಟಣಕ್ಕೆ ಮತ್ತೂಮ್ಮೆ ಬರದ ಭೀತಿ!

ಚನ್ನರಾಯಪಟ್ಟಣ: ತಾಲೂಕಿಗೆ ಪ್ರಸಕ್ತ 2023ನೇ ಸಾಲಿನಲ್ಲಿಯೂ ಪೂರ್ವ ಮುಂಗಾರು ಕೈಕೊಟ್ಟ ಪರಿಣಾಮ ಮತ್ತೂಮ್ಮೆ ಬರದ ಭೀತಿ ಎದುರಾಗುವ ಲಕ್ಷಣಗಳು ಗೋಚರವಾಗುತ್ತಿದೆ.

ತಾಲೂಕಿನಲ್ಲಿ ಪೂರ್ವ ಮುಂಗಾರು ವಾಡಿಕೆಯಂತೆ ಹೆಚ್ಚು ಮಳೆಯಾಗಿದೆ. ಆದರೆ, ರೈತರು ಕೃಷಿ ಮಾಡಲು ಯೋಗ್ಯವಾರುವ ರೀತಿಯಲ್ಲಿ ಮಳೆ ಆಗಿಲ್ಲ. ವಾಡಿಕೆಯಂತೆ 106.4 ಮಿ.ಮೀ.ಮಳೆಯಾಗಬೇಕಿತ್ತು. ಆದರೆ, 128 ಮಿ.ಮೀ. ಮಳೆಯಾಗಿದೆ. ಅಗತ್ಯಕ್ಕಿಂತ ಹೆಚಚು ಮಳೆಯಾದರೂ ಪೂರ್ವ ಮುಂಗಾರು ಕೂಡಾ ವೈಫ‌ಲ್ಯ ಹೊಂದಿದೆ.

ಬಿತ್ತನೆಯಲ್ಲಿ ಹಿನ್ನೆಡೆ: ಅಗತ್ಯಕ್ಕಿಂತ ಹೆಚ್ಚು ಮಳೆಯಾಗಿದೆ. ಈ ಮಳೆ ಕೇವಲ ಮೂರು ದಿವಸ ಸುರಿದಿರುವುದು ಬಿಟ್ಟರೆ, ತಾಲೂಕಿನಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಪೂರ್ವ ಮುಂಗಾರು ಬೆಳೆಗಳ ಬಿತ್ತನೆಗೆ ಹಿನ್ನಡೆಯಾಗಿದೆ. ಈಗಾಗಲೇ ತಾಲೂಕಿನಲ್ಲಿ ಮೂರು ವಾರಿ ವರಣನ ಆಗಮನದಿಂದ ರೈತ ಸಂತಸಪಟ್ಟು ತಮ್ಮ ಕೃಷಿ ಭೂಮಿ ಅಣಿ ಮಾಡಿ ಬಿತ್ತನೆಗೆ ಸಕಲ ರೀತಿಯಲ್ಲಿ ಸಿದ್ಧರಾಗಿ ಮಳೆಯನ್ನು ಎದುರು ನೋಡುತ್ತಿದ್ದಾರೆ, ಈ ವಾರದಲ್ಲಿ ಮಳೆ ಬಾರದೆ ಹೋದರೆ ತಾಲೂಕಿನಲ್ಲಿ ಧಾನ್ಯ ಬೆಳೆ ಮಾಡುವುದನ್ನು ರೈತ ಕೈ ಬಿಟ್ಟು ಬರದ ಭೀತಿಗೆ ಸಿಲುಕಲಿದ್ದಾರೆ.

ದ್ವಿದಳದ ಕೊರತೆ: ತಾಲೂಕಿನಲ್ಲಿ 40,441 ಹೆಕ್ಟೇರ್‌ ಪ್ರದೇಶ ದ್ವಿದಳ ಬೆಳೆಗೆ ಯೋಗ್ಯವಾಗಿದ್ದು, ಪ್ರಸಕ್ತ ವರ್ಷ 447 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬೆಳೆ ಮಾಡಿದ್ದು, ಶೇ.31ರಷ್ಟು ಪ್ರದೇಶದಲ್ಲಿ ಬಿತ್ತನೆಯಾಗಿದೆ. ಹೆಸರು 130 ಹೆಕ್ಟೇರ್‌, ಹಲಸಂದೆ 172 ಹೆಕ್ಟೇರ್‌ ಪ್ರದೇಶ ಉದ್ದು, ಎಳ್ಳು ಬಿತ್ತನೆ ಮಾಡಿಲ್ಲ, 130 ಹೆಕ್ಟೇರ್‌ ಪ್ರದೇಶದಲ್ಲಿ ಮುಸುಕಿನ ಜೋಳ ಬಿತ್ತನೆ ಆಗಿದೆ ಹೊಸದಾಗಿ 5 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ.

ಇನ್ನೇನಿದ್ದರು ರಾಗಿ ಜೋಳೆ: ತಾಲೂಕಿನಲ್ಲಿ ಮಳೆ ಕೃಷಿಗೆ ಯೋಗ್ಯವಾಗದ ರೀತಿಯಲ್ಲಿ ಬೀಳದೆ ಇರುವುದರಿಂದ ಈ ವಾರದಲ್ಲಿ ಮಳೆ ಆಗದೆ ಹೋದರೆ ರೈತರು ದ್ವಿದಳ ಧಾನ್ಯ ಬೆಳೆಯನ್ನು ಬಿಟ್ಟು ರಾಗಿ ಹಾಗೂ ಮುಸುಕಿನ ಜೋಳ ಬೆಳೆಯ ಕಡೆ ಮುಖ ಮಾಡಬೇಕಿದೆ.

ಮುಂಗಾರು ಎದುರು ನೋಡುತ್ತಿರುವ ರೈತ: ಪೂರ್ವ ಮುಂಗಾರು ಉತ್ತಮವಾಗಿ ಆಗಿದ್ದರೆ ತಾಲೂಕಿನ ರೈತರು ಧನ್ಯಾ ಬೆಳೆಗಳನ್ನು ಮಾಡಿ ಮನೆ ವೆಚ್ಚಕ್ಕೆ ಹಣ ನೋಡುತ್ತಿದ್ದರು ಹಾಗೂ ರಾಸುಗಳ ಮೇವಿಗಾಗಿ ಜೋಳ ಬೆಳೆಯಲು ಮುಂದಾಗುತ್ತಿದ್ದ. ಆದರೆ, ಪೂರ್ವ ಮುಂಗಾರು ಸಂಪೂರ್ಣ ಕೈಕೊಟ್ಟಿದೆ. ಹಾಗಾಗಿ, ವಿಧಿ ಇಲ್ಲದೆ ಜೂನ್‌ ಮೊದಲ ವಾರಕ್ಕೆ ಪ್ರಾರಂಭವಾಗುವ ಮುಂಗಾರನ್ನು ಎದುರು ನೋಡುವಂತಾಗಿದೆ.

ಮಳೆ ಆಗಮನದ ನಿರೀಕ್ಷೆ: ಬುಧವಾರದಿಂದ ಮೂರು ಹದ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಜೂ.4ರ ನಂತರ ನೈರುತ್ಯ ಮುಂಗಾರು ಕೇರಳ ಪ್ರವೇಶ ಮಾಡಲಿದ್ದು, ಜೂ.9ರಂದು ರಾಜ್ಯಕ್ಕೆ ಮುಂಗಾರು ಆಗಮಿಸಲಿದೆ ಎಂದು ಹಮಾಮಾನ ಇಲಾಖೆ ಮಾಹಿತಿ ನೀಡಿದೆ. ಇಲಾಖೆ ನೀಡಿರುವ ಮಾಹಿತಿ ಅನುಸರಿಸಿ ರೈತರು ತಮ್ಮ ಕೃಷಿ ಭೂಮಿ ಹದ ಮಾಡಿಕೊಂಡು ಬಿತ್ತನೆಗೆ ಸಿದ್ಧರಿದ್ದಾರೆ.

ತೋಟಗಾರಿಗೆ ಬಿತ್ತನೆ ಪ್ರಮಾಣ ಕುಂಠಿತ: ಪೂರ್ವ ಮುಗಾರು ಕೈ ಕೊಟ್ಟಿರುವುದರಿಂದ ಬಿತ್ತನೆ ಕಾರ್ಯ ಕುಂಠಿತವಾಗಿದೆ. ತೋಟಗಾರಿಕೆ ಬಳೆಯಾದ ಆಲೂಗಡ್ಡೆಯನ್ನು ದಂಡಿಗನಹಳ್ಳಿ, ಬಾಗೂರು ಹೋಬಳಿಯಲ್ಲಿ ಹೆಚ್ಚು ಬೆಳೆಯುತ್ತಿದ್ದು ಕಸಬಾ- ನುಗ್ಗೇಹಳ್ಳಿ ಹೋಬಳಿಯ ಕೆಲ ಗ್ರಾಮ ಸೇರಿದಂತೆ 900 ಹೆಕ್ಟೇರ್‌ ಕೃಷಿ ಭೂಮಿಯಲ್ಲಿ ಬಿತ್ತನೆ ಆಗಬೇಕಿತ್ತು. ಇದುವರೆಗೆ ಯಾವುದೇ ಪ್ರದೇಶದಲ್ಲಿ ಬಿತ್ತನೆಯಾಗಿಲ್ಲ. ಟೊಮೇಟೋ 220 ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ಆಗಬೇಕಿದ್ದು, ಕೊಳವೆ ಬಾವಿ ಹೊಂದಿರುವ 125 ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಬಿತ್ತನೆಯಾಗಿದೆ. ಮೆಣಸಿನಕಾಯಿ 200 ಹೆಕ್ಟೇರ್‌ಗೆ ಕೇವಲ 30 ಹೆಕ್ಟೇರ್‌ನಲ್ಲಿ ಮಾತ್ರ ರೈತ ಬೆಳೆದಿದ್ದಾನೆ.

ಇಲಾಖೆಯಲ್ಲಿ ಬಿತ್ತನೆ ಬೀಜ ದಾಸ್ತಾನು: ಈಗಾಗಲೆ ಸರ್ಕಾರ ಬಿತ್ತನೆ ಬೀಜವನ್ನು ತಾಲೂಕು ಕೃಷಿ ಇಲಾಖೆಗೆ ಸರಬರಾಜು ಮಾಡಿದ್ದು, ತಾಲೂಕಿನಲ್ಲೇ ಎಲ್ಲಾ ರೈತ ಸಂಪರ್ಕ ಕೇಂದ್ರಗಳಿಗೆ ಬಿತ್ತನೆ ಬೀಜವನ್ನು ರವಾನೆ ಮಾಡಲಾಗಿದೆ. ಕೊಳವೆ ಬಾವಿ ಹೊಂದಿರುವವರನ್ನು ಹೊರತು ಪಡಿಸಿದರೆ, ಮಳೆ ಕೈಕೊಟ್ಟಿರುವುದರಿಂದ ಬಿತ್ತನೆ ಬೀಜ ಪಡೆಯಲು ರೈತರು ಕೃಷಿ ಇಲಾಖೆಗೆ ಆಗಮಿಸದೆ ಇರುವುದಿಂದ ದಾಸ್ತಾನು ಇಲಾಖೆಯಲ್ಲಿ ಉಳಿದಿದೆ.

ಈಗಾಗಲೇ ಜಿಲ್ಲಾಡಳಿತ ಪೂರ್ವ ಮುಂಗಾರು ಬೆಳೆಯ ಬಿತ್ತನೆ ಬೀಜ, ಕೃಷಿಗೆ ಅಗತ್ಯ ಔಷಧ, ಗೊಬ್ಬರವನ್ನು ಸರಬರಾಜು ಮಾಡಿದೆ. ಆದರೆ, ಮಳೆ ಕೊರತೆಯಿಂದ ರೈತರು ಪಡೆಯಲು ಮುಂದೆ ಬಂದಿಲ್ಲ, ಈ ವಾರದಲ್ಲಿ ಮಳೆಯಾಗದಿದ್ದರೆ ತಾಲೂಕಿನಲ್ಲಿ ವಿವಿಧ ಕಾಳು ಬೆಳೆ ಬೆಳೆಯುವುದನ್ನು ಮರೆಯ ಬೇಕಾಗುತ್ತದೆ. -ಎಂ.ಎಸ್‌.ಜನಾರ್ದನ್‌, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ

ಯುಗಾದಿ ನಂತರ ವರ್ಷಧಾರೆ ಸಕಾಲಕ್ಕೆ ಆಗುವ ನಿರೀಕ್ಷೆ ಹೊಂದಿ ದ್ದೆವು. ಆದರೆ, ಮುಂಗಾರು ಆರಂಭದಲ್ಲಿ ಕುಂಠಿತ ಆಗಿದೆ. ಕೃಷಿಗಾಗಿ ಭೂಮಿಯನ್ನು ಸಿದ್ಧಪಡಿಸಿದ್ದೆವು. ಮಳೆಗಾಗಿ ಎದುರು ನೋಡು ತ್ತಿದ್ದೇವೆ. ದ್ವಿದಳ ಬೆಳೆ ಮಾಡಲು ಮಳೆ ಬರ ಲಿಲ್ಲ. ರಾಗಿ ಬೆಳೆಗಾದರು ಮಳೆ ಬಂದರೆ ಸಾಕು. -ಕಾಂತರಾಜು, ಕೃಷಿಕ, ಕುರುವಂಕ

-ಶಾಮಸುಂದರ್‌ ಕೆ. ಅಣ್ಣೇನಹಳ್ಳಿ

ಟಾಪ್ ನ್ಯೂಸ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂ…ಆದರೆ…

EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

Belthangady: ದಿಬ್ಬಣದಲ್ಲೇ ಮತಗಟ್ಟೆಗೆ ಬಂದು ಮತ ಚಲಾಯಿಸಿದ ವಧು

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…

LS Polls: ಚಿಕ್ಕಮಗಳೂರು… ವಿದೇಶದಿಂದ ಬಂದು ಮತದಾನ ಮಾಡಿ ಮಾದರಿಯಾದ ದಂಪತಿ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.