ವಿದ್ಯಾರ್ಥಿಗಳ ಕೊರತೆ, ಮುಚ್ಚುವ ಹಂತಕ್ಕೆ ಸರ್ಕಾರಿ ಶಾಲೆಗಳು
ಉಚಿತ ಪಠ್ಯಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದರೂ ಬಾರದ ಮಕ್ಕಳು
Team Udayavani, Jul 23, 2019, 1:23 PM IST
ಅರಸೀಕೆರೆಯ ವಿವಿಧ ಗ್ರಾಮಗಳಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಶಾಲೆಗಳ ಕಟ್ಟಡಗಳು.
ಅರಸೀಕೆರೆ: ಬಡವರು ಮತ್ತು ಮಧ್ಯಮ ವರ್ಗದ ಜನರ ಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಲ್ಲಿ ಸರ್ಕಾರ ಕಡ್ಡಾಯ ಶಿಕ್ಷಣ ಕಾಯ್ದೆಯನ್ನು ಜಾರಿಗೆ ತಂದು ಮಕ್ಕಳಿಗೆ ಉಚಿತ ಪಠ್ಯಪುಸ್ತಕ, ಸಮವಸ್ತ್ರ ಮತ್ತು ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ಅನೇಕ ಸೌಲಭ್ಯಗಳನ್ನು ನೀಡುತ್ತಿದ್ದರೂ ಅನೇಕ ಸರ್ಕಾರಿ ಪ್ರಾಥಮಿಕ ಶಾಲೆಗಳು ಮುಚ್ಚುವ ಹಂತಕ್ಕೆ ಬರುತ್ತಿರುವುದು ಅತ್ಯಂತ ದುರ್ದೈವದ ಸಂಗತಿಯಾಗಿದೆ.
ಗಡಿ ಭಾಗದ ಶಾಲೆಗಳಿಗೆ ಕುತ್ತು: ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ತಾಲೂಕಿನ ಎಚ್.ಮಂಗಳಾಪುರ, ನಾಗತೀಹಳ್ಳಿ, ಕರಿಮಾರನಹಳ್ಳಿ, ಮಲ್ಲಾಪುರ, ಹಾಗೂ ಚಿಂದೇನಹಳ್ಳಿ ಗಡಿ ಭಾಗದ ಸರ್ಕಾರಿ ಪ್ರಾಥಮಿಕ ಕಿರಿಯ ಶಾಲೆಗಳನ್ನು ಮಕ್ಕಳ ಹಾಜರಾತಿ ಕೊರತೆ ಕಾರಣ ಮುಚ್ಚಲಾಗಿದೆ. ಅಂತೆಯೇ ಈಗಾಗಲೇ ಮುಚ್ಚಲಾಗಿದೆ. ವಿಟ್ಲಾಪುರ, ಎ.ಮಲ್ಲಾಪುರ, ಚಿಕ್ಕ ಹೆರಗನಾಳು, ಸೂಳೇಕೆರೆ, ಹಾಗೂ ಜಿ.ಬಿ.ತಾಂಡಾದಲ್ಲಿ ಸರ್ಕಾರಿ ಪ್ರಾಥಮಿಕ ಕಿರಿಯ ಶಾಲೆಗಳನ್ನು ಮತ್ತೆ ಪ್ರಾರಂಭಿಸಲಾಗಿದೆ.
ತಾಲೂಕಿನಲ್ಲಿನ 201 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ 11,355 ವಿದ್ಯಾರ್ಥಿಗಳು , 180 ಹಿರಿಯ ಮಾಧ್ಯಮಿಕ ಶಾಲೆಗಳಲ್ಲಿ 9,755 ವಿದ್ಯಾರ್ಥಿಗಳು , ಹಾಗೂ 33 ಪ್ರೌಢಶಾಲೆಗಳಲ್ಲಿ 8,402 ವಿದ್ಯಾರ್ಥಿ ಗಳಿದ್ದು, ಒಟ್ಟು 29,512 ವಿದ್ಯಾರ್ಥಿಗಳು ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ.
ಪೋಷಕರ ಇಂಗ್ಲಿಷ್ ವ್ಯಾಮೋಹ: ಇತ್ತೀಚೆಗೆ ಆಧುನಿಕತೆ ಬೆಳೆದಂತೆ ಪೋಷಕ ವರ್ಗದಲ್ಲಿ ಆಂಗ್ಲ ಭಾಷೆಯ ಬಗ್ಗೆ ಹೆಚ್ಚಿನ ವ್ಯಾಮೋಹ ಬೆಳೆಯುತ್ತಿದ್ದು, ಸರ್ಕಾರಿ ಕನ್ನಡ ಶಾಲೆಯಲ್ಲಿ ತಮ್ಮ ಮಕ್ಕಳನ್ನು ಓದಿಸುವುದು ಸರಿಯಲ್ಲ ಎನ್ನುವ ಕೀಳರಿಮೆ ಎಲ್ಲ ರಲ್ಲೂ ಮನೆ ಮಾಡುತ್ತಿರುವ ಕಾರಣ ಸರ್ಕಾರಿ ಕನ್ನಡ ಮಾಧ್ಯಮ ಶಾಲೆಗಳು ಮುಚ್ಚುವ ಹಂತಕ್ಕೆ ಬರುತ್ತಿವೆ.
ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಸಾಧನೆ: ಕಳೆದ ಶೈಕ್ಷಣಿಕ ಸಾಲಿನ ಎಸ್ಸೆಸ್ಸೆಲ್ಸಿ, ಪರೀಕ್ಷೆಯಲ್ಲಿ ಹಾಸನ ಜಿಲ್ಲೆಯು ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದಿದ್ದು, ಅರಸೀಕೆರೆ ತಾಲೂಕಿನ 21 ಸರ್ಕಾರಿ ಪ್ರೌಢಶಾಲೆಗಳು ಶೇ. 100 ಫಲಿತಾಂಶವನ್ನು ಪಡೆದಿದೆ. ಪರೀಕ್ಷೆ ಬರೆದಿದ್ದ 3,273 ವಿದ್ಯಾರ್ಥಿಗಳ ಪೈಕಿ 2,934 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇ. 89.64 ಫಲಿತಾಂಶವನ್ನು ತಂದು ಕೊಟ್ಟಿರುವುದು ಖಾಸಗಿ ಶಾಲೆಗಳಿಗಿಂತಲೂ ಹೆಚ್ಚಿನ ಸಾಧನೆಯಾಗಿದೆ.
ಶೌಚಾಲಯ ಸೌಲಭ್ಯ: ತಾಲೂಕಿನ ಬಹುತೇಕ ಸರ್ಕಾರಿ ಶಾಲೆಗಳಲ್ಲಿ ಶೌಚಾಲಯಗಳನ್ನು ನಿರ್ಮಿಸ ಲಾಗಿದೆ. ನರೇಗಾ ಯೋಜನೆಯಡಿ 2ನೇ ಹಂತದಲ್ಲಿ 32 ಶಾಲೆಗಳ ಶೌಚಾಲಯಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದ್ದು,ಇನ್ನೂ 2 ಶಾಲೆಗಳಿಗೆ ಜಾಗದ ಕೊರತೆಯಿಂದ ಕಟ್ಟಡ ನಿರ್ಮಾಣ ಕಾರ್ಯ ನಡೆ ಯುತ್ತಿಲ್ಲ. ಹಿಂದಿನ 2018-19 ಸಾಲಿನಲ್ಲಿ ತಲಾ 10.60 ಲಕ್ಷ ರೂ. ವೆಚ್ಚದಲ್ಲಿ 11 ಹೊಸ ಕೊಠಡಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಶಾಸಕರ ವಿಶೇಷ ಅನುದಾನದ ಯೋಜನೆಯಡಿ 150 ಸರ್ಕಾರಿ ಶಾಲೆಗಳ ದುರಸ್ತಿ ಕಾರ್ಯ ಕೈಗೊಳ್ಳಲು ಹಾಗೂ ವಿಶೇಷಾಭಿವೃದ್ಧಿ ಯೋಜನೆಯಡಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಅಗತ್ಯವಿರುವ 25 ಕೊಠಡಿಗಳನ್ನು ನಿರ್ಮಿಸಲು 14.67 ಕೋಟಿ ರೂ. ವೆಚ್ಚದ ಕ್ರಿಯಾ ಯೋಜನೆಯ ಪ್ರಸ್ತಾವನೆಯನ್ನ ಸಲ್ಲಿಸ ಲಾಗಿದ್ದು, ತಾಲೂಕಿನ ಎಲ್ಲಾ ಶಾಲೆಯಲ್ಲಿ ವಿದ್ಯುತ್ ವ್ಯವಸ್ಥೆಯಿದ್ದು, ಮಕ್ಕಳಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಸಮರ್ಪಕವಾಗಿ ಮಾಡಲಾಗಿದೆ.
ಆಂಗ್ಲ ಮಾಧ್ಯಮ ಶಾಲೆಗಳು: ತಾಲೂಕಿನ ಕುರುವಂಕ (32) ಬಾಣಾವರ (43)ಜಾವಗಲ್(32) ಚಿಂದೇನ ಹಳ್ಳಿ ಗಡಿಯಲ್ಲಿ (20) ಹಾಗೂ ಅರಸೀಕೆರೆ ನಗರದ ಹಳೇಯ ಹಿರಿಯಪ್ರಾಥಮಿಕ ಶಾಲೆ ಆವರಣದ ಶಾಲೆಯಲ್ಲಿ (10) ಆಂಗ್ಲಮಾಧ್ಯಮ ಶಾಲೆಗಳನ್ನು ಸರ್ಕಾರದ ಆದೇಶದಂತೆ ಪ್ರಾರಂಭಿಸಿದ್ದು, ಈ ಎಲ್ಲಾ ಶಾಲೆಗಳಿಂದ ಒಟ್ಟು 137 ಮಕ್ಕಳು ಶಾಲೆಗೆ ಬರುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ