ಜಮೀನು ವಿವಾದ: 2 ಗುಂಪುಗಳ ನಡುವೆ ಬಡಿದಾಟ


Team Udayavani, May 12, 2019, 10:01 AM IST

HASAN-TDY-4..

ಜಮೀನಿಗೆ ವಿವಾದದಿಂದ ಹಲ್ಲೆಗೊಳಗಾದ ಗಾಯಾಳುವನ್ನು ಹಾಸನ ಆಸ್ಪತ್ರೆಗೆ ಕಳುಹಿಸಲಾಯಿತು.

ಬೇಲೂರು: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಎರಡು ಗುಂಪುಗಳು ತಾಲೂಕು ಪಂಚಾಯಿತಿ ಕಚೇರಿಯಲ್ಲಿರುವ ಶಾಸಕ ಲಿಂಗೇಶ್‌ ಅವರ ಕಚೇರಿ ಮುಂದೆ ಬಡಿದಾಡಿ ಗಾಯಗೊಂಡಿದ್ದಾರೆ. ಇಬ್ಬರಿಗೂ ಇಲ್ಲಿನ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಸಲಾಗಿದೆ.

ತಾಲೂಕಿನ ರಾಯಾಪುರ ಗ್ರಾಮದವರಾದ ಎಪಿಎಂಸಿ ಸದಸ್ಯ ನಾಗರಾಜು ಹಾಗೂ ಅದೇ ಗ್ರಾಮದ ವಸಂತ್‌ ಎಂಬುವವರೆ ಜಮೀನು ವಿವಾದದಲ್ಲಿ ಗಾಯ ಗೊಂಡಿದ್ದಾರೆ.

ಜಮೀನು ವಿವಾದ: ಬೇಲೂರಿನ ಯಗಚಿ ಜಲಾಶ ಯದಿಂದ ಹಾದು ಹೋಗಿರುವ ಎಡದಂಡೆ ನಾಲೆ ಗಾಗಿ ರಾಯಾಪುರ ಗ್ರಾಮದ ಕೆಲವರ ಜಮೀನನ್ನು ಭೂಸ್ವಾದೀನ ಪಡಿಸಿಕೊಳ್ಳಲಾಗಿದೆ. ಅಲ್ಲದೇ ನಾಲೆ ಪಕ್ಕದಲ್ಲಿರುವ ಜಾಗದ ಸುತ್ತಲೂ ತಂತಿ ಬೇಲಿ ಹಾಕಲಾಗಿದೆ. ಆದರೆ ರಾಯಾಪುರ ಗ್ರಾಮಸ್ಥರು ಓಡಾಡುವುದಕ್ಕೆಂದು 10 ಅಡಿಯಷ್ಟು ಜಾಗವನ್ನು ತಂತಿ ಬೇಲಿ ಹಾಕದೇ ಬಿಡಲಾಗಿದೆ. ಈ ಜಾಗದ ವಿಷಯಕ್ಕೆ ಸಂಬಂಧಿಸಿದಂತೆ ಇಬ್ಬರ ನಡುವೆ ಸಾಕಷ್ಟು ದಿನಗಳಿಂದ ವ್ಯಾಜ್ಯ ನಡೆಯುತಿತ್ತು.

ಶಾಸಕರ ಎದುರೇ ವಾಗ್ವಾದ: ಆದರೆ ಈ ವಿಷಯವು ತಾರಕಕ್ಕೇರದಂತೆ ಶಾಸಕರ ಸಮ್ಮುಖ ದಲ್ಲಿ ತೀರ್ಮಾನಿಸುವುದಕ್ಕಾಗಿ ತಾಪಂ ಕಚೇರಿ ಯಲ್ಲಿನ ಶಾಸಕರ ಕೊಠಡಿಗೆ ಎರಡು ಕಡೆಯ ವರನ್ನು ಕರೆದು ಚರ್ಚಿಸುತಿದ್ದರು. ಈ ಸಂದರ್ಭ ದಲ್ಲಿ ಎರಡು ಕಡೆಯವರು ಶಾಸಕರ ಎದುರಿನಲ್ಲಿ ಮನಸ್ಸಿಗೆ ಬಂದಂತೆ ಒಬ್ಬರಿಗೊಬ್ಬರು ಬೈದಾಡುತಿ ದ್ದರು. ಇದನ್ನು ಗಮನಿಸಿದ ಶಾಸಕರು ಶಾಂತಿ ಯಿಂದ ಕುಳಿತು ತೀರ್ಮಾನ ಮಾಡಿಕೊಳ್ಳಿ ಎಂದು ಎರಡು ಕಡೆಯವರನ್ನು ಕಚೇರಿಯಿಂದ ಹೊರಕ್ಕೆ ಕಳುಹಿಸಿದ್ದಾರೆ. ಆದರೆ ಎರಡೂ ಕಡೆಯವರು ಕಚೇರಿಯಿಂದ ಹೊರಗೆ ಬರುತಿದ್ದಂತೆ ಒಬ್ಬರಿ ಗೊಬ್ಬರು ಕೈ ಕೈ ಮಿಲಾಯಿಸಿದ್ದರಂದ ಎರಡು ಕಡೆಯವರು ಗಾಯಗೊಂಡರು.

ಈ ಸಂದರ್ಭ ಶಾಸಕರು ಮಧ್ಯಪ್ರವೇಶಿಸಿ ಸಮಾ ಧಾನಗೊಳಿಸಿ ಆಸ್ಪತ್ರೆಗೆ ಹೋಗುವಂತೆ ಕಳುಹಿಸಿ ದರು. ಆದರೆ ಆಸ್ಪತ್ರೆಗೆ ಸಮೀಪ ಎರಡು ಕಡೆ ಯವರು ಮತ್ತೆ ಮಾತಿಗೆ ಮಾತು ಬೆಳೆಸಿ ಹೊಡೆ ದಾಡುವುದಕ್ಕೆ ಮುಂದಾಗುತ್ತಿದ್ದರು. ಅಷ್ಟರಲ್ಲಿ ಸ್ಥಳಗ್ಕಾಮಿಸಿದ ಪೊಲೀಸರು ಅಲ್ಲಿದ್ದವರನ್ನು ಚದು ರಿಸಿ ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿದರು. ನಂತರ ಇಬ್ಬರೂ ಗಾಯಾಳುಗೂ ಚಿಕಿತ್ಸೆ ನೀಡದ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಹಾಸನ ಆಸ್ಪತ್ರೆಗೆ ಕಳುಹಿಸಿದರು.

ಘಟನೆಗೆ ಸಂಬಂಧಿಸಿದಂತೆ ಬೇಲೂರು ಪೊಲೀಸ್‌ ಠಾಣೆಯಲ್ಲಿ ಎರಡು ಕಡೆಯವರ ವಿರುದ್ದ ಪ್ರಕರಣ ದಾಖಲಿಸಿ ಕ್ರಮ ಕೈಗೊಂಡಿದ್ದಾರೆ.

ಶಾಸಕ ಕೆ.ಎಸ್‌.ಲಿಂಗೇಶ್‌ ಮಾತನಾಡಿ, ಜಮೀನಿನ ರಸ್ತೆ ವಿಷಯಕ್ಕೆ ಸಂಬಂಧಿಸಿದಂತೆ ರಾಯಾಪುರ ಗ್ರಾಮದವರು ಗಲಾಟೆ ಮಾಡಿಕೊಂಡಿರುವ ವಿಷಯ ಗಮನಕ್ಕೆ ಬಂತು. ಹಾಗೂ ಎರಡು ಕಡೆಯವರನ್ನು ನನ್ನ ಕಚೇರಿಗೆ ಕರೆಸಿ ಸೌಹಾರ್ದಯುತವಾಗಿ ಸಮಸ್ಯೆ ಬಗೆಹರಿಸುವುದಕ್ಕೆ ಮಾತುಕತೆ ನಡೆಸುತಿದ್ದೆವು.

ಆದರೆ ಇಬ್ಬರೂ ಮಾತಿಗೆ ಮಾತು ಬೆಳೆಸಿದ್ದರಿಂದ ಮುಂದೊಂದು ದಿನ ತೀರ್ಮಾನಿಸೋಣ ಎಂದು ಕಳುಹಿಸಿದ್ದೆ. ಆದರೆ ಇವರು ಕೆಳಕ್ಕೆ ಹೋಗುತ್ತಿದ್ದಂತೆ ಗಲಾಟೆ ಮಾಡಿ ಕೊಳ್ಳುತ್ತಿದ್ದರು. ಇಬ್ಬರನ್ನೂ ಸಮಾಧಾನಪಡಿಸಿ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

1-wewqewq

Mumbai; 2005ರ ಭೀಕರ ಪ್ರವಾಹ ನೆನಪಿಸಿದ ಮಳೆ!:19 ವರ್ಷ ಹಿಂದಿನ ಸ್ಥಿತಿ ಮರುಕಳಿಸಲಿದೆಯೇ?

rahul-Gandhi-Car

Defamation case; ಪ್ರಚಾರಕ್ಕಾಗಿ ನನ್ನ ವಿರುದ್ಧ ಮಾನಹಾನಿ ಕೇಸ್‌: ರಾಹುಲ್‌ ಆರೋಪ

1-dubey

Increase of Muslims; ಝಾರ್ಖಂಡ್‌,ಪಶ್ಚಿಮ ಬಂಗಾಲ ಕೇಂದ್ರಾಡಳಿತ ಪ್ರದೇಶವಾಗಿಸಿ: ದುಬೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-kanwar-msid

Uttara Khand; ಕನ್ವರ್‌ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!

court

Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!

robbers

Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!

Kohli IPL 2024

Champions Trophy; ಕೊಹ್ಲಿ ಪಾಕ್‌ನಲ್ಲಿ ಆಡಲಿ: ಯೂನಿಸ್‌ ಖಾನ್‌

1-tatoo

Mumbai: 22 ಶತ್ರುಗಳ ಹೆಸರು ಟ್ಯಾಟೂ ಹಾಕಿಸಿಕೊಂಡಾತನ ಕೊಲೆ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.