ಕೋವಿಡ್ ಕೇಂದ್ರಕ್ಕೆ ಶಾಸಕ ಭೇಟಿ
Team Udayavani, Jul 27, 2020, 9:17 AM IST
ಚನ್ನರಾಯಪಟ್ಟಣ: ಕೋವಿಡ್ ಕೇರ್ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ ಇಲ್ಲ ಎಂಬ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದರಿಂದ ಕೇಂದ್ರಕ್ಕೆ ಶಾಸಕ ಸಿ.ಎನ್.ಬಾಲಕೃಷ್ಣ ಭೇಟಿ ನೀಡಿ ಸಕಲ ಸೌಲಭ್ಯ ನೀಡುವುದಾಗಿ ಭರವಸೆ ನೀಡಿದರು.
ಜಿಲ್ಲಾಡಳಿತದ ಆದೇಶದಂತೆ ತಾಲೂಕಿನಲ್ಲಿ ಕೋವಿಡ್ ಕೇರ್ ಪ್ರಾರಂಭ ಮಾಡಲಾಗಿದ್ದು, ಗುರುಮಾರನಹಳ್ಳಿ ಮೊರಾರ್ಜಿ ವಸತಿ ಶಾಲೆಯಲ್ಲಿ ತೆರೆಯಲಾಗಿರುವ ಕೋವಿಡ್ ಕೇರ್ನಲ್ಲಿ ಸುಮಾರು 50ಕ್ಕೂ ಹೆಚ್ಚು ಮಂದಿ ಕೋವಿಡ್ ಸೋಂಕಿನ ಲಕ್ಷಣ ರಹಿತರು ಚಿಕಿತ್ಸೆ ಪಡೆಯುತ್ತಿದ್ದು ಬಿಸಿ ನೀರಿನ ಸಮಸ್ಯೆ ಇದೆ, ಬಟ್ಟೆ ಸ್ವತ್ಛತೆ ಮಾಡಿಕೊಳ್ಳಲು ಸರಿಯಾದ ವ್ಯವಸ್ಥೆ ಇಲ್ಲ ಎಂದು ಹಲವು ಸಮಸ್ಯೆಗಳನ್ನು ಶಾಸಕರ ಗಮನಕ್ಕೆ ತಂದಿದರು.
ತಾಲೂಕು ಆಡಳಿತದಿಂದ ಅಗತ್ಯವಿರುವ ಎಲ್ಲಾ ಸಮಸ್ಯೆಗಳನ್ನು ಬಗೆ ಹರಿಸಲಾಗುವುದು, ಜಿಲ್ಲಾಡಳಿತ ಹಾಗೂ ಆರೋಗ್ಯ ಇಲಾಖೆ ಅನುದಾನ ಉಪಯೋಗಿಸಿ ಕೊಳ್ಳಲಾಗುತ್ತಿದೆ. ಚಿಕಿತ್ಸೆ ಪಡೆಯುತ್ತಿರುವವರು ಭಯಪಡುವ ಅಗತ್ಯವಿಲ್ಲ, ತಮ್ಮಗಳಿಗೆ ರೋಗ ನಿರೋಧ ಶಕ್ತಿ ಹೆಚ್ಚಿಸುವ ಆಹಾರದ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕರು ಭರವಸೆ ನೀಡಿದರು.
ಕೋವಿಡ್ ನೋಡಲ್ ಅಧಿಕಾರಿ ಡಾ.ಗಣೇಶ್, ಕೋವಿಡ್ ಕೇರ್ ಕೇಂದ್ರದ ವೈದ್ಯ ಡಾ.ಲಕ್ಷ್ಮೀಕಾಂತ ಇದ್ದರು.