Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ


Team Udayavani, May 4, 2024, 3:03 PM IST

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

ಸಕಲೇಶಪುರ: ಈಗಾಗಲೇ ಕಾಡಾನೆ, ಕೋಣದ ಹಾವಳಿಯಿಂದ ತತ್ತರಿಸಿರುವ ಮಲೆನಾಡು ಭಾಗದ ರೈತರಿಗೆ ಇದೀಗ ಚಿರತೆ ಹಾವಳಿ ಎದುರಿಸುವ ಪರಿಸ್ಥಿತಿ ಎದುರಾಗಿದೆ.

ನೆರೆಯ ಜಿಲ್ಲೆಗಳಲ್ಲಿ ಸೆರೆಹಿಡಿದ ಚಿರತೆಗಳನ್ನು ಅರಣ್ಯ ಇಲಾಖೆ ಬಿಸಿಲೆ ರಕ್ಷಿತಾರಣ್ಯಕ್ಕೆ ಸದ್ದಿಲ್ಲದೆ ತಂದು ಬಿಡುತ್ತಿದೆ. ಇದು ಸ್ಥಳೀಯರಲ್ಲಿ ಆತಂಕ ಹುಟ್ಟಿಸಿದೆ. ಕೆಲವು ತಿಂಗಳ ಹಿಂದೆ ಅರಣ್ಯ ಇಲಾಖೆ ತುಮಕೂರು ಜಿಲ್ಲೆಯಲ್ಲಿ ಹಿಡಿದ ಚಿರತೆಯನ್ನು ಬಿಸಿಲೆ ಭಾಗದಲ್ಲಿ ಬಿಟ್ಟಿದ್ದಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ಚಿರತೆಯು ಹಲವು ಜಾನುವಾರುಗಳನ್ನು ತಿಂದು ಆತಂಕದ ಪರಿಸ್ಥಿತಿ ಹುಟ್ಟಿಹಾಕಿತ್ತು. ಇದೇ ರೀತಿ ಬುಧವಾರ ರಾತ್ರಿ ಆಲೂರು ತಾಲೂಕಿನಲ್ಲಿ ಹಿಡಿದ ಚಿರತೆಯನ್ನು ಇಲಾಖೆಯ ವಾಹನದಲ್ಲಿ ಬಿಸಿಲೆ ರಕ್ಷಿತಾರಣ್ಯಕ್ಕೆ ಬಿಡಲು ಹೋಗುತ್ತಿದ್ದಾಗ ಮಂಕನಹಳ್ಳಿ ಗ್ರಾಮಸ್ಥರು ವಿಷಯ ತಿಳಿದು ವಾಹನ ಅಡ್ಡಹಾಕಿ ಪ್ರತಿಭಟನೆ ಮಾಡಿದ್ದರು. ಇದರಿಂದ ಅರಣ್ಯ ಇಲಾಖೆ ಸಿಬ್ಬಂದಿ ಚಿರತೆ ವಾಪಸ್‌ ತೆಗೆದುಕೊಂಡು ಹೋಗಿದ್ದಾರೆ.

ಹೊರಜಿಲ್ಲೆಗಳಲ್ಲಿ ಉಪಟಳ ನೀಡುತ್ತಿರುವ ಚಿರತೆಗಳನ್ನು ತಂದು ತಾಲೂಕಿನಲ್ಲಿ ಬಿಡುತ್ತಿರುವ ಕೆಲ ಪ್ರಕರಣಗಳು ಮಾತ್ರ ಬೆಳಕಿಗೆ ಬಂದಿವೆ. ರಾತ್ರೋರಾತ್ರಿ ಎಷ್ಟು ಪ್ರಾಣಿಗಳು ಅರಣ್ಯ ಇಲಾಖೆ ತಂದು ಬಿಟ್ಟಿದಿಯೋ ಎಂಬ ಆತಂಕ ಬಿಸಿಲೆ ಸುತ್ತಮುತ್ತಲಿನ ಗ್ರಾಮಸ್ಥರಲ್ಲಿ ಉಂಟು ಮಾಡಿದೆ.

ಚಿರತೆ ಮಾತ್ರವಲ್ಲದೆ ವಿಷಕಾರಿ ಕಾಳಿಂಗಸರ್ಪ, ಕೊಳಕು ಮಂಡಲದಂತಹ ಹಾವುಗಳನ್ನೂ ಅರಣ್ಯ ಇಲಾಖೆಯವರು ಬಿಸಿಲೆ ಸುತ್ತಮುತ್ತ ಬಿಡುತ್ತಿದ್ದಾರೆ ಎಂಬ ಆರೋಪ ಇದೆ. ಬಿಸಿಲೆ ಸುತ್ತಮುತ್ತಲಿನ ಗ್ರಾಮಗಳಾದ ಮಂಕನಹಳ್ಳಿ, ಮಾವನೂರು, ಹುದಿನೂರು, ಆನೆಗುಂಡಿ, ಹೊನ್ನಾಟ್ಲು, ಪಟ್ಲ ಮುಂತಾದ ಗ್ರಾಮಗಳಲ್ಲಿ ಜನ ಕಷ್ಟದಿಂದ ಜೀವನ ಸಾಗಿಸುತ್ತಿದ್ದಾರೆ. ಈ ಭಾಗದಲ್ಲಿ ಪ್ರಮುಖವಾಗಿ ಕಾಫಿ, ಏಲಕ್ಕಿ, ಅಡಕೆ ಬೆಳೆಯಲಾಗುತ್ತದೆ. ತೋಟಗಳ ನಿರ್ವಹಣೆ ಮಾಡಲು ಕೂಲಿ ಕಾರ್ಮಿಕರು ಸಿಗದೆ ರೈತರು ತತ್ತರಿಸಿದ್ದಾರೆ. ಹವಮಾನ ವೈಪರೀತ್ಯವೂ ರೈತರನ್ನು ಕಷ್ಟಕ್ಕೆ ತಳ್ಳಿದೆ. ಅಲ್ಲದೆ, ಕಾಡಾನೆ, ಕಾಡು ಹಂದಿ, ಕಾಡು ಕೋಣ, ಮಂಗಗಳ ಹಾವಳಿಯಿಂದ ಕಷ್ಟಪಟ್ಟು ಬೆಳೆಯುವ ಬೆಳೆಗಳು ನಾಶವಾಗುತ್ತಿವೆ. ಇದರಿಂದ ರೈತರು ಅಪಾರ ನಷ್ಟ ಅನುಭವಿಸುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಚಿರತೆಗಳು ತಂದು ಬಿಟ್ಟರೆ ತೋಟದ ಕೆಲಸಕ್ಕೆ ಜನ ಎಲ್ಲಿ ಬರುತ್ತಾರೆ ಎಂಬ ಆತಂಕ ಮಾಲೀಕರದ್ದಾಗಿದೆ.

ಚಿರತೆಯಂತಹ ಅಪಾಯಕಾರಿ ಪ್ರಾಣಿಗಳನ್ನು ಮಲೆನಾಡು ಭಾಗದಲ್ಲಿ ಬಿಡಬಾರದು. ಒಂದು ವೇಳೆ ಬಿಟ್ಟರೆ ಮುಂದಿನ ದಿನಗಳಲ್ಲಿ ಬಿಸಿಲೆ ಸುತ್ತಮುತ್ತಲಿನ ಗ್ರಾಮಸ್ಥರೊಂದಿಗೆ ಅರಣ್ಯ ಇಲಾಖೆ ವಿರುದ್ಧ ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಸ್ಥಳೀಯರು ಎಚ್ಚರಿಕೆ ನೀಡಿದ್ದಾರೆ.

ಗ್ರಾಮಸ್ಥರು ತೀವ್ರ ವಿರೋಧ ವ್ಯಕ್ತಪಡಿಸಿದ್ದರಿಂದ ಚಿರತೆಯನ್ನು ಬಿಸಿಲೆ ರಕ್ಷಿತಾರಣ್ಯದಲ್ಲಿ ಬಿಟ್ಟಿಲ್ಲ. ಮುಂದಿನ ದಿನಗಳಲ್ಲಿ ಇತರೆ ಪ್ರದೇಶಗಳಲ್ಲಿ ಹಿಡಿದ ವನ್ಯಜೀವಿಗಳನ್ನು ಮಲೆನಾಡು ಭಾಗಕ್ಕೆ ಬಿಡದಂತೆ ಕ್ರಮ ಕೈಗೊಳ್ಳಲಾಗುವುದು.-ಮಹಾದೇವ್‌, ಉಪ ಅರಣ್ಯ ಸಂರಕ್ಷಣಾಧಿಕಾರಿ.

ಅರಣ್ಯ ಇಲಾಖೆ ಬಿಸಿಲೆ ಭಾಗದಲ್ಲಿ ಕಾಡುಪ್ರಾಣಿಗಳನ್ನು ತಂದು ಬಿಡುವುದು ಸರಿಯಲ್ಲ, ಚಿರತೆಗಳು ಯಾವುದೇ ಸಂದರ್ಭದಲ್ಲಿ ಮನುಷ್ಯರ ಮೇಲೆ ದಾಳಿ ನಡೆಸುವ ಸಾಧ್ಯತೆಗಳಿದೆ. ಈಗಾಗಲೇ ಕಾಡಾನೆ, ಕಾಡು ಕೋಣಗಳ ಹಾವಳಿಯಿಂದ ಜನ ತತ್ತರಿಸಿದ್ದಾರೆ. ಮತ್ತೂಮ್ಮೆ ಯಾರಾದರು ಚಿರತೆಯಂತಹ ಪ್ರಾಣಿಗಳನ್ನು ಇಲ್ಲಿ ಬಿಡಲು ಬಂದರೆ ಉಗ್ರ ಹೋರಾಟ ಮಾಡಲಾಗುತ್ತದೆ.-ಗಣೇಶ್‌, ಗ್ರಾಮಸ್ಥರು, ಹುದಿನೂರು.

ಈಗಾಗಲೇ ಮಲೆನಾಡಿನ ಜನ ಕಾಡಾನೆಗಳ ಹಾವಳಿಯಿಂದ ತತ್ತರಿಸಿದ್ದಾರೆ. ಇನ್ನು ಚಿರತೆಯಂತಹ ಅಪಾಯಕಾರಿ ಪ್ರಾಣಿಯನ್ನು ಅರಣ್ಯ ಇಲಾಖೆ ಹೊರ ಊರುಗಳಿಂದ ಇಲ್ಲಿಗೆ ತಂದು ಬಿಡುವುದು ಸರಿಯಲ್ಲ. ಮತ್ತೂಮ್ಮೆ ಈ ರೀತಿಯ ಬೆಳವಣಿಗೆ ಆಗದಂತೆ ಅರಣ್ಯ ಇಲಾಖೆ ಎಚ್ಚರಿಕೆ ವಹಿಸಬೇಕು.-ಸಿಮೆಂಟ್‌ ಮಂಜು, ಶಾಸಕರು. 

-ಸುಧೀರ್‌ ಎಸ್‌.ಎಲ್‌.

ಟಾಪ್ ನ್ಯೂಸ್

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

1-aaasdeqweqw

India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್‌ ಯುಗಾರಂಭ

1-hockey

Paris Olympics ಹಾಕಿ ಕಂಚಿನಿಂದಾಚೆ ಮಿಂಚಲಿ ಭಾರತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hassan

Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ

Sakaleshpura

National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ

HDK

MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್‌ಡಿಕೆ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್‌ ವಸೂಲಿಗೆ ಬಿಡುವುದಿಲ್ಲ

MUST WATCH

udayavani youtube

ಸರ್ಕಾರದ ವಿರುದ್ಧ ವಿಧಾನಸಭೆಯಲ್ಲಿ ಬಿಜೆಪಿ-JDS ಶಾಸಕರಿಂದ ಭಜನೆ

udayavani youtube

ಶಿರೂರು ಗುಡ್ಡಕುಸಿತ; ಕಾಣೆಯಾದವರ ಹುಡುಕಾಟಕ್ಕೆ ಡ್ರೋನ್ ಬಳಸಿ ಕಾರ್ಯಾಚರಣೆ

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

ಹೊಸ ಸೇರ್ಪಡೆ

1-24-saturday

Daily Horoscope: ಪಾಲುದಾರಿಕೆ ವ್ಯವಹಾರದಲ್ಲಿ ಲಾಭ ಹೆಚ್ಚಳ, ಆರೋಗ್ಯ ಉತ್ತಮ

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್‌ಗೆ ವಿವರಣೆ?

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್‌’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.