ಮಕ್ಕಳಲ್ಲಿ ಪಠ್ಯೇತರ ಪುಸ್ತಕ ಓದುವ ಹವ್ಯಾಸ ಬೆಳೆಯಲಿ


Team Udayavani, Nov 23, 2019, 3:00 AM IST

makkallalli

ಹಾಸನ: ಮಕ್ಕಳಿಗೆ ಪಠ್ಯದ ವಿಷಯದ ಜೊತೆಗೆ ದಿನ ಪತ್ರಿಕೆಗಳು, ಕಥೆ, ಕಾದಂಬರಿ, ಸಣ್ಣ ಕಥೆಗಳು ಸೇರಿದಂತೆ ಆಸಕ್ತಿದಾಯಕ ಪುಸ್ತಕಗಳನ್ನು ಓದುವ ಅಭ್ಯಾಸ ಬೆಳೆಸಬೇಕು ಎಂದು ಟೈಮ್ಸ್‌ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಹಾಗೂ ಅಕ್ಷರ್‌ ಬುಕ್‌ಹೌಸ್‌ ಮಾಲೀಕ ಬಿ.ಕೆ.ಗಂಗಾಧರ್‌ ಹೇಳಿದರು. ನಗರದ ಅಕ್ಷರ ಬುಕ್‌ಹೌಸ್‌ನಲ್ಲಿ ಏರ್ಪಡಿಸಿದ್ದ ಡಾ.ವಿ.ಎಲ್‌.ಶಾಲಿನಿ ಅವರ ಜಯಗಾನ ಕಾದಂಬರಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ಪುಸ್ತಕ ಓದುವವರ ಸಂಖ್ಯೆ ಕಡಿಮೆಯಾಗುತ್ತಿದೆ. ಅದರಲ್ಲೂ ಯುವಕರು ಪುಸ್ತಕ ಓದುವ ಕಡೆ ಹೆಚ್ಚು ಗಮನ ಹರಿಸುತ್ತಿಲ್ಲ. ಪ್ರತಿ ಮನೆಯಲ್ಲೂ ಗ್ರಂಥಾಲಯವಿರಬೇಕು, ಆಗ ಮಾತ್ರ ಮನೆ ಕುಟುಂಬದ ಉತ್ತಮ ವಾತಾವರಣ ನಿರ್ಮಾಣವಾಗಲು ಸಾಧ್ಯ. ಇದರಿಂದ ಮಕ್ಕಳು ಸಮಾಜದಲ್ಲಿ ಸಂಸ್ಕಾರಯುತವಾಗಿ ಬೆಳೆಯಲು ಸಹಕಾರಿಯಾಗುತ್ತದೆ ಎಂದರು.

ಸಾಹಿತ್ಯಿಕ ವಾತಾವರಣಕ್ಕೆ ಬೆಂಬಲ ನೀಡಿ: ಜಿಲ್ಲೆಯಲ್ಲಿ ಸಾಹಿತ್ಯಿಕ ವಾತಾವರಣಕ್ಕೆ ಬೆಂಬಲವಾಗಿ ನಿಲ್ಲಬೇಕು ಎನ್ನುವ ಉದ್ದೇಶದಿಂದ ಹಾಸನದಲ್ಲಿ ಅಕ್ಷರ ಬುಕ್‌ಹೌಸ್‌ ತೆರೆದಿದ್ದು, ಈ ಪುಸ್ತಕದ ಅಂಗಡಿಯ ವಿಳಾಸ ಇಂದಿಗೂ ಬಹುತೇಕ ಜನಿರಗೆ ಗೊತ್ತಿಲ್ಲ. ಆದರೆ ಬಾರ್‌ಅಂಡ್‌ ರೆಸ್ಟೋರೆಂಟ್‌ಗಳು ಸುಲಭವಾಗಿ ವಿಳಾಸದ ಗುರುತುಗಳಾಗುತ್ತಿವೆ ಎಂದು ವಿಷಾದಿಸಿದದರು.

ಪುಸ್ತಕ ಓದುವ ಹವ್ಯಾಸ ಬೆಳೆಸಿಕೊಳ್ಳಿ: ಪ್ರತಿ ಹೋಬಳಿ ಹಾಗೂ ಗ್ರಾಮ ಪಂಚಾಯತಿ ಮಟ್ಟದಲ್ಲೂ ಒಂದು ಉತ್ತಮ ಗ್ರಂಥಾಲಯ ಇಲ್ಲವೇ ಪುಸ್ತಕದ ಮಳಿಗೆಗಳು ಇರಬೇಕು. ಸಮಾಜದಲ್ಲಿ ಅನಾಗರಿಕತೆ ಹಾಗೂ ಅನಕ್ಷರತೆ ಹೋಗಲಾಡಿಸಬೇಕಾದರೆ ಅದು ಶಿಕ್ಷಣದಿಂದ ಮಾತ್ರವೇ ಸಾಧ್ಯ. ಹಾಗಾಗಿ ಗ್ರಾಮೀಣ ಭಾಗದ ಜನರಲ್ಲಿಯೂ ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಬೇಕಾಗಿದೆ ಎಂದು ಹೇಳಿದರು.

ಸಾಹಿತಿಗಳು ಗಟ್ಟಿತನ ಸಾಬೀತುಪಡಿಸಿ: ಪುಸ್ತಕಗಳನ್ನು ಓದುವವರಿಲ್ಲ ಎನ್ನುವ ನಾವು ಮಕ್ಕಳಿಗೆ ಮೊಬೈಲ್‌ ಕೊಟ್ಟು ಕೂರಿಸುತ್ತೇವೆ. ಇಂದಿಗೂ ಎಸ್‌.ಎಲ್‌.ಭೈರಪ್ಪ, ಪೂರ್ಣಚಂದ್ರ ತೇಜಸ್ವಿ ಅವರಂತಹ ಮೇರು ಸಾತಿಗಳ ಪುಸ್ತಕಗಳ ಸಾವಿರಾರು ಪ್ರತಿಗಳು ನಿತ್ಯವೂ ಮಾರಾಟವಾಗುತ್ತವೆ. ಲೇಖಕಕರು ಸತ್ವಯುತವಾಗಿ ಬರೆದರೆ ಅದನ್ನು ಓದುವವರು ಇದ್ದೇ ಇರುತ್ತಾರೆ.

ಹಾಗಾಗಿ ಯುವ ಸಾಹಿತಿಗಳು ತಮ್ಮ ಗಟ್ಟಿತನವನ್ನು ಸಾಬೀತು ಮಾಡುವ ಮೂಲಕ ಓದುಗ ವಲಯ ಸೃಷ್ಟಿಸಿಕೊಳ್ಳಬೇಕು ಎಂದು ಹೇಳಿದರು. ಆಲೂರು ತಾಲೂಕು ವೈದ್ಯಾಧಿಕಾರಿ ಡಾ.ತಿಮ್ಮಯ್ಯ ಮಾತನಾಡಿ, ಡಾ.ಶಾಲಿನಿ ಸರ್ಕಾರಿ ಆಸ್ಪತ್ರೆಯ ವೈದ್ಯಾಧಿಕಾರಿಯಾಗಿದ್ದರೂ ವೃತ್ತಿ ಒತ್ತಡದ ನಡುವೆ ಸಾಹಿತ್ಯಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು.

ಮಕ್ಕಳಿಗೆ ಪುಸ್ತಕ ಪರಿಚಯ: ಕೃತಿ ಕುರಿತು ಸಾಹಿತಿ ಶೈಲಜಾ ಹಾಸನ ಮಾತನಾಡಿ, ಡಾ..ಎಲ್‌.ಶಾಲಿನಿ ತಮ್ಮ ಮೂರನೇ ಕಾದಂಬರಿಯಲ್ಲಿ ಕ್ರೀಡಾಲೋಕದ ಹೋರಾಟವನ್ನು ತೆರೆದಿಟ್ಟಿದ್ದಾರೆ. ಪಾಲಕರು ತಮ್ಮ ಮಕ್ಕಳ ಕ್ರೀಡಾಸಕ್ತಿಯನ್ನು ಪ್ರೋತ್ಸಾಹಿಸುವುದರಿಂದ ಅವರು ಹೇಗೆ ಸಾಧಕರಾಗಬಲ್ಲರು ಎನ್ನುವ ಸಾಮಾನ್ಯ ಕತೆಯನ್ನು ಅತ್ಯಂತ ಆಸಕ್ತಿದಾಯಕವಾಗಿ ಓದುಗರ ಮುಂದಿಟ್ಟಿದ್ದಾರೆ.

ಮಕ್ಕಳಿಗೆ ಪುಸ್ತಕಗಳನ್ನು ಪರಿಚುಸುವ ಮೂಲಕ ಮುಂದಿನ ಪೀಳಿಗೆಯನ್ನು ಸಾಹಿತ್ಯದ ಓದುಗರಾಗಿ ರೂಪಿಸಬೇಕಿದೆ ಎಂದರು. ಹಾಸನ ಪ್ರಕಾಶನದ ಪ್ರಕಾಶಕ ಶಿವಕುಮಾರ್‌, ಟೈಮ್ಸ್‌ ವಿದ್ಯಾಸಂಸ್ಥೆಯ ಅಧ್ಯಕ್ಷ ಸುರೇಂದ್ರ, ಅಕ್ಷರ ಬುಕ್‌ ಹೌಸ್‌ನ ಶ್ರೀನಾಥ್‌ ಇತರರು ಇದ್ದರು.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.