ತಹಶೀಲ್ದಾರರು ಜಾಗರೂಕರಾಗಿ ಕಾರ್ಯ ನಿರ್ವಹಿಸಲಿ
Team Udayavani, May 14, 2020, 6:36 AM IST
ಹಾಸನ: ಜೆಲ್ಲೆಯಲ್ಲಿ ಕೋವಿಡ್ 19 ಪಾಸಿಟಿವ್ ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ ಎಲ್ಲಾ ತಾಲೂಕುಗಳ ತಹಶೀಲ್ದಾರರು ಹೆಚ್ಚಿನ ಜಾಗರೂಕತೆ ಹಾಗೂ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಸೂಚಿಸಿದರು.
ಡೀಸಿ ಕಚೇರಿಯಲ್ಲಿ ಎಲ್ಲಾ ತಾಲೂಕುಗಳ ತಹಶೀ ಲ್ದಾರರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಹೊರ ರಾಜ್ಯಗಳಿಂದ ಬರುವವರನ್ನು ಚೆಕ್ಪೋಸ್ಟ್ಗಳ ಲ್ಲಿಯೇ ತಡೆದು ಕ್ವಾರಂಟೈನ್ಗೆ ಕಳುಹಿಸಬೇಕು. ತಹಶೀ ಲ್ದಾರರು ಪ್ರತಿದಿನ ಚೆಕ್ಪೋಸ್ಟ್ಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದರು.
ಪ್ರತಿ ತಾಲೂಕಿನಲ್ಲಿ 2 ಹೋಟೆಲ್ಗಳನ್ನು ಹೋಂ ಕ್ವಾರಂಟೈನ್ ಮಾಡಬಹುದಾದ ಸ್ಥಳಗಳೆಂದು ಗುರುತಿಸ ಬೇಕು. ಪರಸ್ಥಳಗಳಿಂದ ಬಂದವರು ಜಿಲ್ಲಾಡಳಿತ ವ್ಯವಸ್ಥೆ ಮಾಡಿರುವ ಸ್ಥಳದಲ್ಲಿ ಕ್ವಾಂರಂಟೈನ್ ಇರಲು ಇಚ್ಛಿಸದಿದ್ದಲ್ಲಿ ನಿಗದಿತ ಶುಲ್ಕವನ್ನು ಪಾವತಿ ಮಾಡಿ ಹೋಟೆಲ್ಗಳಲ್ಲಿ ಹೋಂ ಕ್ವಾರಂಟೈನ್ ಆಗಲು ವ್ಯವಸ್ಥೆ ಮಾಡಬೇಕು ಎಂದರು.
ವಿಡಿಯೋ ಸಂವಾದದಲ್ಲಿ ಪಾಲ್ಗೊಂಡಿದ್ದ ಚನ್ನರಾಯ ಪಟ್ಟಣ ಶಾಸಕ ಸಿ.ಎನ್. ಬಾಲಕೃಷ್ಣ ಮಾತನಾಡಿ, ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿ ಯಾಗುತ್ತಿರುವುದರಿಂದ ಆರೋಗ್ಯ ಇಲಾಖೆ ಸಿಬ್ಬಂದಿಗೆ ಕಡ್ಡಾಯವಾಗಿ ಆರೋಗ್ಯ ಸುರಕ್ಷತಾ ಪರಿಕರಗಳನ್ನು ನೀಡಬೇಕು ಎಂದು ಹೇಳಿದರು. ಎಸ್ಪಿ ಆರ್. ಶ್ರೀನಿವಾಸ್ ಗೌಡ ಅವರು ಮಾತನಾಡಿ, ಚೆಕ್ಪೋಸ್ಟ್ಗಳಲ್ಲಿ ಸರಕು ಸಾಗಣೆ ವಾಹನಗಳಲ್ಲಿ ಚಾಲಕರನ್ನು ಹೊರತುಪಡಿಸಿ ಬೇರೆ ಯಾರೇ ಬಂದರೂ ಅವರನ್ನು ತಡೆದು ಪರಿಶೀಲಿಸಿ ಹೋಂ ಕ್ವಾರಂಟೈನ್ಗೆ ಕಳುಹಿಸಬೇಕು.
ಚೆಕ್ಪೋಸ್ಟ್ಗಳಲ್ಲಿ ಸೇವಾ ಸಿಂಧು ಪಾಸ್ ಇಲ್ಲದವರನ್ನು ಗುರುತಿಸಿ ತಪಾಸಣೆಗೆ ಒಳಪಡಿಸ ಬೇಕೆಂದು ಹೇಳಿದರು. ಸಭೆಯಲ್ಲಿ ಜಿಪಂ ಸಿಇಒ ಬಿ.ಎ. ಪರಮೇಶ್, ಎಡೀಸಿ ಕವಿತಾ ರಾಜರಾಂ, ನಗರಾಭಿವೃದಿಟಛಿ ಕೋಶದ ಯೋಜನಾ ನಿರ್ದೇಶಕ ಬಿ.ಎ. ಜಗದೀಶ್, ತಹಶೀಲ್ದಾರ್ ಶಿವಶಂಕರಪ್ಪ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್, ಸ್ಟೋಯಿನಿಸ್, ಅಗರ್ ಹೊರಕ್ಕೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ