ಪವಿತ್ರ ಸರ್ಕಾರ ಏನೇನು ಮಾಡುತ್ತೆ ನೋಡೋಣ


Team Udayavani, Aug 4, 2019, 3:00 AM IST

pavitra

ಹಾಸನ: ರಾಜ್ಯದಲ್ಲಿ ಪಾಪದ ಸರ್ಕಾರ ಹೋಗಿ ಪವಿತ್ರ ಸರ್ಕಾರ ಬಂದಿದೆಯಂತೆ. ಪವಿತ್ರ ಸರ್ಕಾರ ಎಷ್ಟು ದಿನ ಇರುತ್ತೆ, ಏನೇನು ಕಾರ್ಯಗಳನ್ನು ಮಾಡುತ್ತೆ, ಯಾರ್ಯಾರು ಪವಿತ್ರರಾಗ್ತಾರೋ ಕಾದು ನೋಡೋಣ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಪ್ರತಿಕ್ರಿಯಿಸಿದರು.

ಚಿಕ್ಕಮಗಳೂರಿನಿಂದ ಕೆ.ಆರ್‌.ಪೇಟೆಗೆ ಹೋಗುವ ಮಾರ್ಗ ಮಧ್ಯೆ ಹಾಸನದ ಪ್ರವಾಸಿ ಮಂದಿರಲ್ಲಿ ಕೆಲಕಾಲ ತಂಗಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಸಚಿವ ಸಂಪುಟ ರಚನೆ ಯಾಕೆ ಮಾಡಬೇಕು ? ಒಂದು ವಾರದಿಂದ ಮುಖ್ಯಮಂತ್ರಿಯೊಬ್ಬರೇ ಬಿರುಸಿನ ಆಡಳಿತ ನಡೆಸುತ್ತಿದ್ದಾರೆ. ಅವರೊಬ್ಬರೇ ಸಾಕು. ಇನ್ನೂ 6 ತಿಂಗಳು ಮುಖ್ಯಮಂತ್ರಿಯವರೊಬ್ಬರೇ ಆಡಳಿತ ನಡೆಸಬಹುದು. ನಡೆಸಲಿ ಎಂದು ವ್ಯಂಗ್ಯವಾಡಿದರು.

ಟಾರ್ಗೆಟ್‌ ಮಾಡ್ತಿರೋದು ಗೊತ್ತಾಗಲ್ಲವೇ?: ಕಳೆದ ಒಂದು ವಾರದಿಂದ ನಿರಂತರವಾಗಿ ಹಿರಿಯ ಅಧಿಕಾರಿಗಳ ವರ್ಗಾವಣೆ ನಡೆಯುತ್ತಿದೆ. ಅಧಿಕಾರಿಗಳ ವರ್ಗಾವಣೆ ಮುಖ್ಯಮಂತ್ರಿಯವರ ವಿವೇಚನೆಗೆ ಬಿಟ್ಟದ್ದು. ಆದರೆ ನಿನ್ನೆ ವರ್ಗಾವಣೆ ಮಾಡಿ ಇಂದು ರದ್ದುಪಡಿಸುವುದು. ಮತ್ತೆ ಅದೇ ಅಧಿಕಾರಿಗಳನ್ನು ಸ್ಥಳ ತೋರಿಸದೇ ವರ್ಗಾವಣೆ ಮಾಡುವುದು. ಈ ನಡವಳಿಕೆಗಳೆಲ್ಲಾ ಟಾರ್ಗೆಟ್‌ ಮಾಡಿ ವರ್ಗಾವಣೆ ಮಾಡಲಾಗುತ್ತಿದೆ ಎಂಬುದು ಗೊತ್ತಾಗುವುದಿಲ್ಲವೇ ಎಂದು ಪ್ರತಿಕ್ರಿಯಿಸಿದರು.

ರಾಜಕೀಯ ಸಾಕಾಗಿ ಹೋಗಿದೆ?: ಕೆ.ಆರ್‌.ಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ನಿಖಿಲ್‌ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆಯೇ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಕೆರೆಳಿದ ಎಚ್‌.ಡಿ.ಕುಮಾರಸ್ವಾಮಿ ಅವರು, ನಿಖಿಲ್‌ಕುಮಾರಸ್ವಾಮಿ ಕೆ.ಆರ್‌.ಪೇಟೆಯಿಂದ, ಪ್ರಜ್ವಲ್‌ ರೇವಣ್ಣ ಹುಣಸೂರಿನಿಂದ ಉಪ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂಬ ಸುದ್ದಿಗಳನ್ನು ಗಮನಿಸಿದ್ದೇನೆ. ಇದನ್ನು ಹೇಳಿದವರ್ಯಾರು ? ನಮ್ಮ ಪಕ್ಷದ ಯಾವುದಾದರೂ ಮುಖಂಡರು ಹೇಳಿದ್ದಾರೆಯೇ? ಕೆ.ಆರ್‌.ಪೇಟೆಯಲ್ಲಿ ನಿಖಿಲ್‌ ವರ್ಸಸ್‌ ಯಾರು ಎಂದು ಯಾರ್ಯಾರೋ ಹೆಸರು ಹೇಳಿಕೊಂಡು ಆಧಾರ ರಹಿತ ವರದಿ ಮಾಡುವುದನ್ನು ಮಾಧ್ಯಮಗಳು ಬಿಡಬೇಕು ಎಂದರು.

ಕಾರ್ಯಕರ್ತರೊಂದಿಗೆ ಚರ್ಚೆ: ಉಪ ಚುನಾವಣೆ ನಡೆಯಲಿರುವ 17 ವಿಧಾನಸಭಾ ಕ್ಷೇತ್ರಗಳಲ್ಲೂ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿದ್ದಾರೆ. ಅವರೊಂದಿಗೆ ಚರ್ಚಿಸಿ ಅರ್ಹ ಅಭ್ಯರ್ಥಿಯನ್ನು ಸ್ಪರ್ಧೆಗಿಳಿಸುತ್ತೇವೆ. ಅದಕ್ಕೂ ಮೊದಲು ಮಾಧ್ಯಮಗಳು ಕಪೋಲ ಕಲ್ಪಿತ ವರದಿಗಳನ್ನು ಮಾಡಿ ನನ್ನ ಕುಟುಂಬವನ್ನು ಎಳೆದಾಡುವುದನ್ನು ಬಿಡಬೇಕು. ನನಗೆ ಸಾಕಾಗಿ ಹೋಗಿದೆ. ರಾಜಕೀಯದ ಸ್ಥಾನ,ಮಾನ ಬೇಡ. ರಾಜ್ಯದ ಜನರ ಹೃದಯದಲ್ಲಿ ಸ್ಥಾನ ಸಿಕ್ಕರೆ ಸಾಕು ಎಂದೆನಿಸಿದೆ ಎಂದರು.

ಎಚ್‌.ಡಿ.ದೇವೇಗೌಡರು ತುಮಕೂರು ಲೋಕಸಭಾ ಕ್ಷೇತ್ರದಲ್ಲಿ ಸೋತ ನಂತರವೂ ಪಕ್ಷದ ಸಭೆಗಳನ್ನು ಮಾಡಿ ಹೋರಾಟ ಮಾಡುತ್ತಿದ್ದಾರೆ. ಅವರು ರಾಜಕೀಯ ಪ್ರವೇಶ ಮಾಡಿದ ಸಂದರ್ಭದಲ್ಲಿದ್ದ ಪರಿಸ್ಥಿತಿ ಈಗಲೂ ಇದೆ ಎಂದು ಅವರು ಭಾವಿಸಿದ್ದಾರೆ. ಆದರೆ ಇಂದಿನ ರಾಜಕಾರಣ ಒಳ್ಳೆಯದಿಲ್ಲ. ಜಾತಿಯ ಬಳಕೆ, ದ್ವೇಷದ ರಾಜಕಾರಣ ನಡೆಯುತ್ತಿದೆ. ಯುವಕರು ದಾರಿತಪ್ಪಿ ಹೋಗಿದ್ದಾರೆಂಬುದೂ ನನಗೆ ಗೊತ್ತಿದೆ. ಈ ಕುತಂತ್ರದ ರಾಜಕಾರಣದಿಂದ ಬೇಸತ್ತು ಹೋಗಿದ್ದೇನೆ ಎಂದು ಕುಮಾರಸ್ವಾಮಿ ಅವರು ಕಿಡಿ ಕಾರಿದರು.

ಒತ್ತಡಕ್ಕೆ ಮಣಿದು ನಿಖಿಲ್‌ ಸ್ಪರ್ಧೆ: ನಿಖಿಲ್‌ಗೆ ಇನ್ನೂ 5 ವರ್ಷ ರಾಜಕೀಯ ಬೇಡ. ಚಿತ್ರರಂಗದಲ್ಲಿ ಮುಂದುವರಿ ಎಂದು ಹೇಳಿದ್ದೆ. ಆದರೆ ಒತ್ತಡಕ್ಕೆ ಮಣಿದು ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆಗಿಳಿಸಿದ ನಂತರ ನಿಖಿಲ್‌ ರಾಜಕೀಯ ಜೀವನ ಮುಗಿಸುವ ಸಂಚು ನಡೆಯಿತು. ನಾನೇ ರಾಜಕೀಯದಿಂದ ದೂರವಿರಬೇಕು ಎಂದುಕೊಂಡಿದ್ದವನು. ಅಕಸ್ಮಿಕವಾಗಿ ರಾಜಕೀಯಕ್ಕೆ ಬಂದು 2 ಬಾರಿ ಮುಖ್ಯಮಂತ್ರಿಯಾದೆ. ಆದು ದೇವರು ಕಲ್ಪಿಸಿಕೊಟ್ಟ ಅವಕಾಶ. 34 ತಿಂಗಳು ಪ್ರಾಮಾಣಿಕವಾಗಿ ಉತ್ತಮ ಆಡಳಿತ ನಡೆಸಿ ರಾಜ್ಯದ ಅಭಿವೃದ್ಧಿಗೆ ಶ್ರಮಿಸಿದ ತೃಪ್ತಿಯಿದೆ ಎಂದರು.

ಟಾಪ್ ನ್ಯೂಸ್

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

ಮಲೆನಾಡು ಸಮಸ್ಯೆ ಪ್ರಸ್ತಾಪಿಸಿದ್ದು ಜಯಪ್ರಕಾಶ್‌ ಹೆಗ್ಡೆ: ವಿಠಲ ಹೆಗ್ಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.