ಸಂಬಂಧ ಗಟ್ಟಿಯಾದಾಗ ಜೀವನದಲ್ಲಿ ಸಂತೋಷ ಕಾಣಲು ಸಾಧ್ಯ


Team Udayavani, Feb 7, 2020, 3:00 AM IST

sambandha

ಹಳೇಬೀಡು: ಸಂಬಂಧಗಳು ಗಟ್ಟಿಯಾದಾಗ ಮಾತ್ರ ಜೀವನದಲ್ಲಿ ಸಂತೋಷ ಕಾಣಲು ಸಾಧ್ಯ ಎಂದು ಖ್ಯಾತ ಚಿಂತಕ ಡಾ. ಗುರುರಾಜ್‌ ಕರ್ಜಗಿ ತಿಳಿಸಿದರು. ತರಳಬಾಳು ಹುಣ್ಣಿಮೆ ಮಹೋತ್ಸದ ಕಾರ್ಯಕ್ರಮದಲ್ಲಿ ಬದುಕಿನಲ್ಲಿ ಸಂತೋಷ ಎಂಬ ವಿಷಯ ಕುರಿತು ಅವರು ಮಾತನಾಡಿದ ಅವರು, ಸಂತೋಷ ಎಂಬುದು ಅಂಗಡಿಗಳಲ್ಲಿ ಸಿಗುವ ವಸ್ತುವಲ್ಲ. ಅದು ಮನಸ್ಸಿನ ಆಲೋಚನೆಗಳಿಂದ ಸಿಗುವಂತಹದ್ದು ಎಂದು ಹೇಳಿದರು.

ಸಂತೋಷಕ್ಕೆ ಭಾವನೆ ಕಾರಣ: ಪಾಶ್ಚಿಮಾತ್ಯರು ಐಷಾರಾಮಿ ಜೀವನದಿಂದ ಪಡೆಯಬಹುದು ಎಂಬ ಭಾವನೆ ಹೊಂದಿರುತ್ತಾರೆ. ಆದರೆ ಭಾರತೀಯರು ಮನಸ್ಸಿನೊಳಗಿರುವ ಭಾವನೆಗಳಿಂದ ಸಂತೋಷ ಪಡುತ್ತಾರೆ. ಮಗು ತನ್ನ ತಾಯಿ ತೊಡೆ ಮೇಲೆ ಮಲಗಿ ನಿದ್ರಿಸುವಾಗ ಸಿಗುವ ಸಂತೋಷ ಕೋಟಿಗಟ್ಟಲೆ ಹಣ ಕೊಟ್ಟರೂ ಸಿಗುವುದಿಲ್ಲ ಎಂದರು.

ಕಳಚುತ್ತಿರುವ ಸಂಬಂಧದ ಕೊಂಡಿ: ಇತ್ತೀಚಿನ ದಿನಗಳಲ್ಲಿ ಪರಸ್ಪರ ಸಂಬಂಧಗಳ ಕೊಂಡಿ ಕಳಚುತ್ತಿದ್ದು, ಭಾವನಾತ್ಮಕ ಸ್ಪಂದನೆಗಳು ದೂರವಾಗುತ್ತಿವೆ. ಸಂತೋಷವನ್ನು ಅನುಭವಿಸುವಲ್ಲಿ ಭಾರತೀಯರಿಗೂ ಮತ್ತು ಪಾಶ್ಚಾತ್ಯರಿಗೂ ಬಹಳ ವ್ಯತ್ಯಾಸವಿದೆ ಎಂದರು.

ಅವಿಭಕ್ತ ಕುಟುಂಬ ವಿರಳ: ಮನೆಗೆ ಅತಿಥಿಗಳು ಬಂದಾಗ ಸಂತೋಷದಿಂದ ಬರಮಾಡಿಕೊಳ್ಳುವುದು ಭಾರತೀಯರ ಸಂಪ್ರದಾಯ. ಮನೆಗೆ ಬಂದು ಬಳಗ ಬಂದಾಗ ಸಿಗುವ ಸಂತೋಷ ಪದಗಳಿಂದ ವರ್ಣಿಸಲು ಸಾಧ್ಯವಿಲ್ಲ ಆದರೆ ಈಗ ಮನೆಗೆ ಸಂಬಂಧಿಕರು ಸ್ನೇಹಿತರು ಬಂದಾಗ ಗಂಟುಮುಖ ಹಾಕಿಕೊಂಡು ಒಳಗೆ ಕರೆಯುತ್ತಾರೆ.

ಅವಿಭಕ್ತ ಕುಟುಂಬ ನಶಿಸಿ ವಿಭಕ್ತ ಕುಟುಂಬಗಳು ಹೆಚ್ಚಾದಂತೆಲ್ಲಾ ಸಂತೋಷವು ದೂರವಾಗುತ್ತಾ ಬರುತ್ತಿದೆ. ಜೀವನ ರಸ ನಿಮಿಷಗಳನ್ನು ಸಂತೋಷದಿಂದ ಆಸ್ವಾದಿಸಬೇಕು. ಸಂಸಾರದಲ್ಲಿ ಜಂಜಾಟ ವಿರಸವಿದ್ದರೂ ಅಂತಃ ಕರಣ ಭಾವನೆ ಹೊಂದಿ ಎಲ್ಲರೊಂದಿಗೂ ಬೆರೆತಾಗ ಸಂತೋಷದ ಕ್ಷಣಗಳನ್ನು ಕಾಣಲು ಸಾಧ್ಯ ಎಂದು ಹೇಳಿದರು.

ನಾವು ನಮ್ಮ ಸುತ್ತಮುತ್ತಲಿನ ವಾತಾವರಣ ಅಹ್ಲಾದಕರವಾಗಿರುವಂತೆ ನೋಡಿಕೊಳ್ಳಬೇಕು ನಾನು ಸಂತೋಷವಾಗಿರಬೇಕಾದರೆ ನಮ್ಮ ನೆರೆ ಹೊರೆಯವರು ಖುಷಿಯಿಂದ ಇರುವಂತೆ ನಾವು ನಡೆದುಕೊಳ್ಳಬೇಕು. ಆಗ ಸಂತೋಷ ತಾನಾಗಿಯೇ ಬರುತ್ತದೆ ಎಂದರು.

ಜೇನು ಹುಳುಗಳಂತೆ ಬದುಕಿ: ಮನುಷ್ಯ ಬದುಕಿದರೆ ಜೇನು ಹುಳುಗಳಂತೆ ಬದುಕಬೇಕು. ನೊಣದಂತೆ ಕೆಟ್ಟದನ್ನು ಹುಡುಕಿಕೊಂಡು ಹೋಗಬಾರದು ಆಗ ಜೀವನ ಸಂಭ್ರಮವಾಗುತ್ತದೆ. ಜಗತ್ತಿನಲ್ಲಿ ನೂರಾರು ಸಂತೋಷ ತರುವ ಕೇಂದ್ರಗಳಿವೆ ಉತ್ತಮ ಸಾಹಿತ್ಯ ನೃತ್ಯ ಜತೆಗೆ ಒಳ್ಳೆಯ ಮಾತುಗಳನ್ನು ತುಂಬಿಕೊಂಡಾಗ ನಾವೇ ಸಂತೋಷದ ಕೇಂದ್ರವಾಗುತ್ತೇವೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಿ.ಸಿ. ಪಟೀಲ್‌ ಗಣಿ ಭೂವಿಜ್ಞಾನ ಮತ್ತು ವಾಣಿಜ್ಯ ಸಚಿವರು ಮಾತನಾಡಿದರು. ಮುರುಗರಾಜೇಂದ್ರ ಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಶಾಸಕ ಬಾಲಕೃಷ್ಣ, ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಅರುಣ್‌ ಕುಮಾರ್‌, ಸಾಹಿತಿ ಚಟ್ನಳ್ಳಿ ಮಹೇಶ್‌, ತಾಹಶೀಲ್ದಾರ್‌ ನಟೇಶ್‌, ಬೇಲೂರು ವಿಧಾನಸಭಾ ಕ್ಷೇತ್ರದ ಶಾಸಕ .ಕೆ.ಎಸ್‌.ಲಿಂಗೇಶ್‌, ಮಾಜಿ ಸಚಿವ ಶಿವರಾಂ ತರಳ ಬಾಳು ಹುಣ್ಣಿಮೆ ಮಹೋತ್ಸವ ಸಮಿತಿ ಅದ್ಯಕ್ಷ ಕಾಂತರಾಜು, ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Bantwal: ಮತದಾನ ಮಾಡಿ ಮದುವೆ ಮುಹೂರ್ತಕ್ಕೆ ಅಣಿಯಾದ ನವವಧು

Bantwal: ಮದುವೆ ಮುಹೂರ್ತಕ್ಕೂ ಮೊದಲೇ ಮತದಾನ ಹಕ್ಕು ಚಲಾಯಿಸಿದ ನವವಧು

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸಿಮರು: ಸಚಿವ ಪ್ರಹ್ಲಾದ್ ಜೋಶಿ

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.