ಪಶುಭಾಗ್ಯ ಎಂಎಲ್‌ಎ, ಎಂಎಲ್‌ಸಿ ಗ್ರಾಮಕ್ಕೆ ಮಾತ್ರ ಸೀಮಿತ


Team Udayavani, Oct 24, 2019, 3:00 AM IST

passubagya

ಚನ್ನರಾಯಪಟ್ಟಣ: ಪಶುಭಾಗ್ಯ ಯೋಜನೆ ಶಾಸಕರು ಹಾಗೂ ವಿಧಾನ ಪರಿಷತ್‌ ಸದಸ್ಯರ ಗ್ರಾಮಕ್ಕೆ ಮಾತ್ರ ಸೀಮಿತವಾಗಿದ್ದು, ತಾಲೂಕು ಪಂಚಾಯಿತಿ ಸದಸ್ಯರು ತಮ್ಮ ಕ್ಷೇತ್ರದ ರೈತರಿಗೆ ಈ ಯೋಜನೆ ತಲುಪಿಸಲು ಸಾಧ್ಯವಾಗುತ್ತಿಲ್ಲ ಎಂದು ತಾಲೂಕು ಪಂಚಾಯಿತಿ ಸದಸ್ಯ ಡಿ.ಸಿ.ಮಂಜೇಗೌಡ ಆರೋಪಿಸಿದರು.

ಅಧಿಕಾರಿಗಳಿಗೆ ತರಾಟೆ: ತಾಲೂಕು ಪಂಚಾಯಿತಿ ಸಭಾಂಗಣದಲ್ಲಿ ತಾಪಂ ಅಧ್ಯಕ್ಷ ಇಂದಿರಾ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಬಡರೈತರ ಆರ್ಥಿಕಾಭಿವೃದ್ಧಿಗಾಗಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಪಶುಭಾಗ್ಯ ಯೋಜನೆ ಜಾರಿಗೆ ತಂದಿದ್ದರು. ಆದರೆ ಅಧಿಕಾರಿಗಳು ಶಾಸಕ ಸಿ.ಎನ್‌.ಬಾಲಕೃಷ್ಣ ಅವರ ಗ್ರಾಮ ಚೋಳೇನಹಳ್ಳಿ ಹಾಗೂ ವಿಧಾನ ಪರಿಷತ್‌ ಸದಸ್ಯ ಎಂ.ಎ.ಗೋಪಾಲಸ್ವಾಮಿ ಗ್ರಾಮ ಜಂಬೂರಿಗೆ ಸೀಮಿತ ಮಾಡಿದ್ದಾರೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.

ಸದಸ್ಯ ಭೈರೇಗೌಡ ಧ್ವನಿಗೂಡಿಸಿ 23 ಮಂದಿ ತಾಲೂಕು ಪಂಚಾಯಿತಿ ಸದಸ್ಯರು ಇದ್ದೇವೆ ಪ್ರತಿ ಸದಸ್ಯರ ಕ್ಷೇತ್ರಕ್ಕೆ ಎರಡು ಫ‌ಲಾನುಭವಿಗಳ ಆಯ್ಕೆ ಮಾಡಬೇಕು ಎಂಬ ನಿಯಮವನ್ನು ಪಾಲಿಸುತ್ತಿಲ್ಲ ಎಂದು ದೂರಿದರು. ಇದಕ್ಕುತ್ತರಿಸಿದ ಪಶು ಇಲಾಖೆ ಸಹಾಯಕ ನಿರ್ದೇಶಕ ಕೃಷ್ಣಮೂರ್ತಿ, ಪಶುಭಾಗ್ಯ ಯೋಜನೆಯಲ್ಲಿ ಆರು ಹೋಬಳಿಗೆ 31 ಮಂದಿ ಫ‌ಲಾನುಭವಿಗಳನ್ನು ಮಾತ್ರ ಆಯ್ಕೆ ಮಾಡಬೇಕಿದೆ. ಅಗತ್ಯಕ್ಕೆ ತಕ್ಕಂತೆ ಸರ್ಕಾರ ಅನುದಾನ ನೀಡುತ್ತಿಲ್ಲ ಏನು ಮಾಡೋಣ ಎಂದರು. ಸದಸ್ಯರು ಈ ಬಗ್ಗೆ ಸರ್ಕಾರಕ್ಕೆ ಪತ್ರ ಬರೆಯುವಂತೆ ಸೂಚಿಸಿದರು.

ಹಾಳಾಗಿರುವ ಶುದ್ಧ ನೀರಿನ ಘಟಕಗಳು: ತಾಲೂಕಿನಲ್ಲಿ ಸುಮಾರು 10ಕ್ಕೂ ಹೆಚ್ಚು ಶುದ್ಧ ಕುಡಿಯುವ ನೀರಿನ ಘಟಕಗಳು ಹಾಳಾಗಿವೆ. ಕಳೆದ ಆರು ತಿಂಗಳಿನಿಂದ ಸಾರ್ವಜನಿಕರು ಕುಡಿಯುವ ನೀರಿಗೆ ಯಾತನೆ ಪಡುವಂತಾಗಿದೆ ಎಂದು ಸದಸ್ಯ ವಾಸು ಆರೋಪಿಸಿದರು. ಇವರ ಮಾತಿಗೆ ಧ್ವನಿ ಗೂಡಿಸಿದ ಸದಸ್ಯರಾದ ಶ್ಯಾಮಲಾ ಹಾಗೂ ಭೈರೇಗೌಡ ಸರ್ಕಾರ ಒಂದು ಘಟಕ ನಿರ್ಮಾಣಕ್ಕೆ 8 ರಿಂದ 10 ಲಕ್ಷ ರೂ. ಖರ್ಚಾಗುತ್ತಿದೆ. ಆದರೆ ಇದು ಸರಿಯಾಗಿ ಕೆಲಸ ಮಾಡುತ್ತಿಲ್ಲ. ಘಟಕ ನಿರ್ಮಿಸಿರುವ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌)ದ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ ಎಂದು ಆಪಾದಿಸಿದರು.

ಅಧಿಕಾರಿಗಳ ಗಮನಕ್ಕೆ ತರಲಾಗಿದೆ: ಗ್ರಾಮೀಣ ಕುಡಿಯುವ ನೀರು ಸರಬರಾಜು ಹಾಗೂ ನೈರ್ಮಲ್ಯ ಉಪವಿಭಾಗದ ಸಹಾಯಕ ಕಾರ್ಯಪಾಲಕರ ಅಭಿಯಂತರಾದ ನಳಿನಾ ಮಾತನಾಡಿ, ತಾಲೂಕಿನಲ್ಲಿ 91 ಶುದ್ಧ ಕುಡಿಯುವ ನೀರಿನ ಘಟಕಗಳಿವೆ. ಸಹಕಾರ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಗ್ರಾಮ ಪಂಚಾಯಿತಿಯಿಂದ ನಿರ್ವಹಣೆ ಮಾಡುತ್ತಿದ್ದು, ಯಾವುದೇ ತೊಂದರೆ ಇಲ್ಲ. ಆದರೆ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ (ಕೆಆರ್‌ಐಡಿಎಲ್‌) ಅವರು ಅಧೀನದಲ್ಲಿನ ಘಟಕಗಳು ಉತ್ತಮವಾಗಿ ನಿರ್ವಹಣೆ ಇಲ್ಲದೇ ತೊಂದರೆ ಆಗುತ್ತಿದೆ ಈ ಬಗ್ಗೆ ಮೇಲಧಿಕಾರಿಗಳ ಗಮನಕ್ಕೆ ತರಲಾಗಿದೆ ಎಂದು ಸಭೆ ಗಮನಕ್ಕೆ ತಂದರು.

ಸರ್ಕಾರಿ ಬೋರ್ವೆಲ್‌ ದುರ್ಬಳಕೆ: ಸದಸ್ಯ ಮೀನಾಕ್ಷಿ ಮಾತನಾಡಿ ದಮ್ಮನಿಂಗಲ ಗ್ರಾಮದಲ್ಲಿ ಇರುವ ಎರಡೂ ಸರ್ಕಾರಿ ಕೊಳವೆ ಬಾವಿಗೆ ಖಾಸಗಿಯವರು ಯಂತ್ರವನ್ನು ಬಿಟ್ಟಿದ್ದಾರೆ. ಒಂದರಲ್ಲಿ ಗ್ರಾಮಕ್ಕೆ ನೀರು ನೀಡಲಾಗುತ್ತಿದೆ. ಗ್ರಾಮದ ಹೊರ ಭಾಗದ ದೇವಾಲಯ ಸಮೀಪದಲ್ಲಿನ ಕೊಳವೆ ಬಾವಿಯರವರು ಇತರರಿಗೆ ನೀರು ನೀಡದೇ ತೊಂದರೆ ಮಾಡುತ್ತಿದ್ದಾರೆ, ಇಲಾಖೆಯಿಂದ ಕೊಳವೆ ಬಾವಿಗೆ ಯಂತ್ರಗಳನ್ನು ಅಳವಡಿಸಿ ಸಾರ್ವಜನಿಕರಿಗೆ ನೀರು ನೀಡಬೇಕು. ಸರ್ಕಾರಿ ಕೊಳವೆ ಬಾವಿಯನ್ನು ತಮ್ಮದು ಎಂಬಂತೆ ವರ್ತನೆ ಮಾಡುತ್ತಿರುವವರಿಂದ ಮುಕ್ತಿ ಕೊಡಿಸುವಂತೆ ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

200 ಜನರಿಂದ ಬಿಪಿಎಲ್‌ ಕಾರ್ಡ್‌ ವಾಪಸ್‌: ಆಹಾರ ಇಲಾಖೆ ಅಧಿಕಾರಿ ಶಂಕರ ಮಾತನಾಡಿ, ತಾಲೂಕಿನಲ್ಲಿ ಸುಮಾರು 200 ಮಂದಿ ಬಿಪಿಎಲ್‌ ಪಡಿತರ ಚೀಟಿ ದಾರರು ತಮ್ಮ ಚೀಟಿಯನ್ನು ಹಿಂತಿರುಗಿಸಿದ್ದಾರೆ. ಅವರಲ್ಲಿ ಕೆಲವರು ಅಕ್ರಮವಾಗಿದ್ದವು, ಇನ್ನು ಹಲವು ಒಂದು ಮನೆಗೆ ಎರಡು ಚೀಟಿ ಇದ್ದವು ಎಂದು ಸಭೆ ಗಮನಕ್ಕೆ ತಂದರು. ಸದಸ್ಯ ವಾಸು ಮಾತನಾಡಿ, ತಾಲೂಕಿನಲ್ಲಿ ವೃದ್ಧಾಪ್ಯ ವೇತನ ಹಾಗೂ ಬಿಪಿಎಲ್‌ ಕಾರ್ಡ್‌ ದಂಧೆಯಾಗಿದೆ. ಆರ್ಥಿಕವಾಗಿ ಸಬಲರಾದವರೂ ಬಿಪಿಎಲ್‌ ಕಾರ್ಡ್‌ ಹಾಗೂ ವೃದ್ಧಾಪ್ಯ ವೇತನ ಸೌಲಭ್ಯ ಪಡೆಯುತ್ತಿದ್ದಾರೆ ಎಂದು ಆಪಾದಿಸಿದರು.

ಇದಕ್ಕುತ್ತರಿಸಿದ ತಾಪಂ ಇಒ ಚಂದ್ರಶೇಖರ್‌ ಮಾತನಾಡಿ, ಅಕ್ರಮವಾಗಿ ಬಿಪಿಎಲ್‌ ಕಾರ್ಡ್‌ ಪೆದವರವ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಇದುವರೆಗೂ ಪಡೆದಿರುವ ಪಡಿತರದ ಹಣವನ್ನು ವಸೂಲು ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು. ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಗಿರೀಶ್‌, ಸ್ಥಾಯಿ ಸಮಿತಿ ಅಧ್ಯಕ್ಷ ಶಿವಸ್ವಾಮಿ ಮೊದಲಾದವರು ಉಪಸ್ಥಿತರಿದ್ದರು.

ಸಭೆಯಲ್ಲಿ “ಉದಯವಾಣಿ’ ವಿಶೇಷ ವರದಿ ಪ್ರಸ್ತಾವನೆ: ರಾಗಿ, ಮೆಕ್ಕೆ ಜೋಳಕ್ಕೆ ಹುಳುಬಾಧೆ ಹಾಗೂ ಸಾವಿರಾರು ಅರ್ಜಿ ಬಂದರೂ ಕೇವಲ 31 ಆಯ್ಕೆ ಮಿತಿ ಎಂಬ ಶೀರ್ಷಿಕೆಯಲ್ಲಿ ಪ್ರಕಟವಾಗಿದ್ದ “ಉದಯವಾಣಿ’ ಪತ್ರಿಕೆಯ ವಿಶೇಷ ವರದಿಗಳ ಬಗ್ಗೆ ತಾಲೂಕು ಪಂಚಾಯಿತಿ ಸಾಮಾನ್ಯ ಸಭೆಯಲ್ಲಿ ತಾಪಂ ಸದಸ್ಯರು ಹಾಗೂ ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಚಂದ್ರಶೇಖರ್‌ ವಿಷಯ ಪ್ರಸ್ತಾವಣೆ ಮಾಡಿದರು. ರೈತರು ಅನುಭವಿಸುತ್ತಿರುವ ಯಾತನೆ ಬಗ್ಗೆ “ಉದಯವಾಣಿ’ ಪತ್ರಿಕೆಯಲ್ಲಿ ಸಂಪೂರ್ಣ ಮಾಹಿತಿ ನೀಡಿದ್ದಾರೆ.

ರಾಗಿ ಜೋಳವು ರೋಗದಿಂದ ಮುಕ್ತವಾಗಲು ರೈತರು ಯಾವ ಮಾರ್ಗ ಅನುಸರಿಸಬೇಕು ಎನ್ನುವುದುನ್ನು ಸಭೆಯ ಗಮನಕ್ಕೆ ತರಬೇಕು ಎಂದು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಎಫ್.ಕೆ.ಗುರುಸಿದ್ದಪ್ಪ ಅವರಿಗೆ ಸೂಚಿಸಿದರು. ಪಶುಭಾಗ್ಯ ಯೋಜನೆಯ ಫ‌ಲಾನುಭವಿಗಳ ಸಂಖ್ಯೆ ಕಡಿತಮಾಡಿರುವುದಕ್ಕೆ ಅಧಿಕಾರಿಗಳು ಅನುಭವಿಸುತ್ತಿರುವ ಯಾತನೆಯನ್ನು “ಉದಯವಾಣಿ’ ಪತ್ರಿಕೆ ಪತ್ರಕ್ಷವರದಿ ಮಾಡುವ ಮೂಲಕ ಹೈನುಗಾರಿಕೆ ಹಾಗೂ ಪಶುಭಾಗ್ಯ ಯೋಜನೆ ಪಡೆಯುವವರಿಗೆ ಸಮಗ್ರ ಮಾಹಿತಿ ನೀಡಿದೆ ಎಂದು ಸಭೆ ಗಮನಕ್ಕೆ ಇಒ ತಂದರು.

ಇದಕ್ಕೆ ಧ್ವನಿ ಗೂಡಿಸಿದ ತಾಪಂ ಉಪಾಧ್ಯಕ್ಷ ಗಿರೀಶ್‌ ಹೌದು ಸಾವಿರಾರು ಅರ್ಜಿಗಳು ಧೂಳು ಹಿಡಿಯುತ್ತಿವೆ. ಸರ್ಕಾರ ಫ‌ಲಾನುವಿಗಳ ಸಂಖ್ಯೆ ಹೆಚ್ಚಿಸುವಂತೆ ವರದಿಯಲ್ಲಿ ತಿಳಿಸಿದ್ದಾರೆ ಎಂದು ಪತ್ರಿಕೆ ವರದಿಯನ್ನು ಸಭೆಯ ಗಮನಕ್ಕೆ ತಂದರು.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.