ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಜೀವ, ಬೆಳೆ ಹಾನಿ


Team Udayavani, Aug 8, 2020, 12:36 PM IST

ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಜೀವ, ಬೆಳೆ ಹಾನಿ

ಹಾಸನ: ಜಿಲ್ಲೆಯಲ್ಲಿ ಕಳೆದ ಸೋಮವಾರದಿಂದ ಸುರಿಯುತ್ತಿರುವ ಮುಂಗಾರು ಮಳೆಯ ಆರ್ಭಟಕ್ಕೆ ಒಬ್ಬ ರೈತ ಮತ್ತು ಎರಡು ಜಾನುವಾರು ಬಲಿಯಾಗಿದ್ದು, 2100 ಹೆಕ್ಟೇರ್‌ ಮೆಕ್ಕೆ ಜೋಳ, 779 ಹೆಕ್ಟೇರ್‌ ಭತ್ತದ ಬೆಳೆ ನಾಶವಾಗಿದೆ. 196 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಹಾಸನ ಜಿಲ್ಲಾಡಳಿತ ಮಾಹಿತಿ ನೀಡಿದೆ.

ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಅತಿವೃಷ್ಟಿ ಹಾನಿ ಪರಿಶೀಲನಾ ಸಭೆಗೆ ಈ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಆರ್‌.ಗಿರೀಶ್‌ ಅವರು, ಸಕಲೇಶಪುರ ತಾಲೂಕು ಹಾನ  ಬಾಳು ಸಮೀಪದ ನಡಬೆಟ್ಟ ಗ್ರಾಮದ ಸಿದ್ಧಯ್ಯ (60) ಜಾನುವಾರುಗಳೊಂದಿಗೆ ಬರುತ್ತಿದ್ದಾಗ ಹಳ್ಳದಲ್ಲಿ ನೀರಿಗೆ ಸಿಕ್ಕಿ ಕೊಚ್ಚಿ ಹೋಗಿದ್ದಾರೆ ಎಂದು ತಿಳಿಸಿದರು.

ವಾಡಿಕೆಗಿಂತ ಹೆಚ್ಚು ಮಳೆ: ಆ.1 ರಿಂದ 6 ರವರೆಗೆ ವಾಡಿಕೆ ಮಳೆ ಜಿಲ್ಲೆಯಲ್ಲಿ 48 ಮಿ. ಮೀ. ಆಗಬೇಕಾಗಿತ್ತು. ಆದರೆ 135 ಮಿ,  ಮೀ. ಮಳೆ ಸುರಿದಿದ್ದು, ವಾಡಿಕೆಗಿಂತ ಶೇ.184 ರಷ್ಟು ಹೆಚ್ಚು ಮಳೆ ಸುರಿದಿದೆ. ಸಕಲೇಶಪುರ ತಾಲೂಕಿನಲ್ಲಿ 112 ವಾಡಿಕೆ ಮಳೆಗೆ ಬದಲಾಗಿ 484 ಮಿ.ಮೀ.ಮಳೆಯಾಗಿದ್ದು, ವಾಡಿಕೆಗಿಂತ ಶೇ.345 ರಷ್ಟು ಮಳೆಯಾಗಿದೆ ಎಂದು ವಿವರ ನೀಡಿದರು

771 ಹೆಕ್ಟೇರ್‌ ಬೆಳೆ ಹಾನಿ: ಮಳೆ ಮತ್ತು ಗಾಳಿ ಹೊಡೆತದಿಂದ 2100 ಹೆಕ್ಟೇರ್‌ ಮೆಕ್ಕೆ ಜೋಳ ನಾಶವಾಗಿದೆ. ಹಾಸನ ತಾಲೂಕಿನಲ್ಲಿ 350 ಹೆಕ್ಟೇರ್‌, ಆಲೂರು ತಾಲೂಕಿನಲ್ಲಿ 785 ಹೆಕ್ಟೇರ್‌, ಅರಕಲಗೂಡು ತಾಲೂಕಿನಲ್ಲಿ 570 ಹೆಕ್ಟೇರ್‌, ಬೇಲೂರು ತಾಲೂಕಿನಲ್ಲಿ 322 ಹೆಕ್ಟೇರ್‌ ಜೋಳದ ಬೆಳೆಗೆ ಹಾನಿಯಾಗಿದೆ. ಸಕಲೇಶಪುರ ತಾಲೂಕಿನಲ್ಲಿ 771 ಹೆಕ್ಟೇರ್‌ ಭತ್ತದ ಬೆಳೆಗೆ ಹಾನಿಯಾಗಿದೆ ಎಂದು ತಿಳಿಸಿದರು.

13 ಮನೆ ಕುಸಿತ: 191 ಮನೆಗಳ ಹಾನಿಯ ಪೈಕಿ ಸಕಲೇಶಪುರ ತಾಲೂಕಿನಲ್ಲಿ 135 ಮನೆ ಗಳು, ಬೇಲೂರು ತಾಲೂಕಿನಲ್ಲಿ 11, ಅರಕಲಗೂಡು ತಾಲೂಕಿನಲ್ಲಿ 17, ಹಾಸನ ತಾಲೂಕಿನಲ್ಲಿ 132, ಅರಸೀಕೆರೆ -2, ಹೊಳೆನರಸೀಪುರ – 3 ಮತ್ತು ಚನ್ನರಾಯ ಪಟ್ಟಣ ತಾಲೂಕಿನಲ್ಲಿ 13 ಮನೆಗಳು ಕುಸಿ ದಿವೆ ಎಂದು ಮಾಹಿತಿ ನೀಡಿದರು.

ಶಾಸಕ ಪ್ರೀತಂ ಜೆ.ಗೌಡ ಅವರು ಸಭೆಯಲ್ಲಿ ಹಾಜರಿದ್ದರೆ, ಅರಸೀಕೆರೆ ಶಾಸಕ ಕೆ. ಎಂ.ಶಿವಲಿಂಗೇಗೌಡ, ಅರಕಲಗೂಡು ಕ್ಷೇತ್ರದ ಶಾಸಕ ಎ.ಟಿ.ರಾಮಸ್ವಾಮಿ, ಬೇಲೂರು ಕ್ಷೇತ್ರದ ಶಾಸಕ ಕೆ.ಎಸ್‌.ಲಿಂಗೇಶ್‌ ಅವರು ವೀಡಿಯೋ ಸಂವಾದದ ಮೂಲಕ ಮಳೆಹಾನಿಯ ಬಗ್ಗೆ ಸಚಿವರ ಗಮನ ಸೆಳೆದರು. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್‌ರಾಜ್‌ಸಿಂಗ್‌, ಜಿಪಂ ಸಿಇಒ ಪರ ಮೇಶ್‌ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು

ಟಾಪ್ ನ್ಯೂಸ್

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

Karkala: ಕಾಂಗ್ರೆಸ್ಸಿನಿಂದ ಬೃಹತ್‌ ಪರಿವರ್ತನಾ ರ್‍ಯಾಲಿ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

ಕೊಪ್ಪಳ: ಮಗ ರಾಜಶೇಖರ ವಿರುದ್ಧ ತಂದೆ ನಾಮಪತ್ರ ಸಲ್ಲಿಕೆ!

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Sandalwood; ‘ಫಾರೆಸ್ಟ್‌’ನಲ್ಲಿ ಚಿಕ್ಕಣ್ಣ & ಟೀಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.