Loan: ಸಾಲ ತೀರಿಸದಕ್ಕೆ ಮನೆಗೆ ಬೀಗ ಜಡಿದು ಮಹಿಳೆ ಹೊರದಬ್ಬಿದ ಬ್ಯಾಂಕ್‌ !


Team Udayavani, Nov 24, 2023, 2:23 PM IST

tdy-11

ಆಲೂರು: ಬ್ಯಾಂಕ್‌ ಸಾಲ ತೀರಿಸದ ಅರೋಪ ಹೊತ್ತಿದ್ದ ಒಂಟಿ ಮಹಿಳೆಯನ್ನ ಬ್ಯಾಂಕ್‌ ನವರು ಮನೆಯಿಂದ ಹೊರಗೆ ಹಾಕಿರೋ ಪ್ರಕರಣ ಕಾರಗೋಡು ಗ್ರಾಮದಲ್ಲಿ ನಡೆದಿದೆ.

ಕನಿಷ್ಠ ಮಾನವೀಯತೆಯನ್ನೂ ಮರೆತು ಒಂಟಿ ಮಹಿಳೆ ಪಾರ್ವತಮ್ಮಳನ್ನು ಮನೆಯಿಂದ ಹೊರ ಹಾಕಿರುವ ಬ್ಯಾಂಕ್‌ ಸಿಬ್ಬಂದಿಗಳ ಕಾರ್ಯದ ಬಗ್ಗೆ ಮಹಿಳೆ ಕಣ್ಣೀರು ಶಾಪ ಹಾಕುತ್ತಾ ಆಹಾರ ವಿಲ್ಲದೆ ಮನೆ ಹೊರಗೆ ಇದ್ದಾರೆ. ಮನೆಯಲ್ಲಿದ್ದ ಎಲ್ಲ ವಸ್ತುಗಳನ್ನು ಸೇರಿಸಿ ಬ್ಯಾಂಕ್‌ ಅಧಿಕಾರಿಗಳು ಬೀಗ ಜಡಿದಿದ್ದಾರೆ. ಕನಿಷ್ಠ ದನದ ಕೊಟ್ಟಿಗೆ ಬಿಡಿ ಎಂದರೂ ಬಿಡದೆ ಬೀಗ ಜಡಿದಿದ್ದಾರೆ.

ಪತಿಯಿಂದ ದೂರವಾಗಿದ್ದ ಪಾರ್ವತಮ್ಮ ತನ್ನ ಪಾಲಿನ ಆಸ್ತಿಯನ್ನು ಸಂಬಂಧಿಕ ರಾಯರ ಕೊಪ್ಪಲು ಗ್ರಾಮದ ರುದ್ರಪ್ಪ ಎಂಬುವವರಿಗೆ ಬರೆದಿದ್ದರು. ಇದರ ಬದಲಿಗೆ ರಾಯರಕೊಪ್ಪಲು ಗ್ರಾಮದಲ್ಲಿ ಮನೆ ಬರೆದುಕೊಡುವ ತೀರ್ಮಾನವಾಗಿತ್ತು. ರುದ್ರಪ್ಪ ಅದೇ ಜಮೀನಿನ ಮೇಲೆ 10 ಲಕ್ಷ ರೂ.ಸಾಲ ಪಡೆದಿದ್ದರು.

ಸಾಲ ತೀರಿಸದೆ ಇದ್ದುದರಿಂದ ರಾಯರಕೊಪ್ಪಲು ಕೆನರಾ ಬ್ಯಾಂಕ್‌ ಅಧಿಕಾರಿಗಳು ನ್ಯಾಯಾಲಯದಿಂದ ಆದೇಶ ಪಡೆದು ಮನೆಯನ್ನು ವಶಕ್ಕೆ ಪಡೆದು ಬೀಗ ಜಡಿದಿದ್ದಾರೆ ಎಂದು ತಿಳಿದು ಬಂದಿದೆ.

ವೃದ್ಧೆ ಪಾರ್ವತಮ್ಮ ಮಾತನಾಡಿ, ಕಾರಗೋಡು ಗ್ರಾಮದ ರುದ್ರಪ್ಪ ಎಂಬುವವರು ನಮಗೆ ಹತ್ತಿರದ ಸಂಬಂಧಿಕರಾಗಿದ್ದು, ಕಷ್ಟ-ಸುಖಗಳಿಗೆ ಸ್ಪಂದಿಸುವ ನಾಟಕವಾಡಿ ಹಣ ನೀಡದೇ ನಮ್ಮಿಂದ ಮೋಸ ಮಾಡಿ ಜಮೀನು ಬರೆಸಿಕೊಂಡ ನಂತರ ರಾಯರಕೊಪ್ಪಲು ಗ್ರಾಮದಲ್ಲಿರುವ ಕೆನರಾ ಬ್ಯಾಂಕ್‌ನಲ್ಲಿ ಜಮೀನಿನ ಮೇಲೆ 10 ಲಕ್ಷ ರೂ ಸಾಲ ಪಡೆದು ಸಾಲ ತೀರಿಸದೇ ಸಾಲದ ಮೊತ್ತ ಸುಮಾರು 45 ಲಕ್ಷ ರೂ.ಗೆ ಹೇರಿದೆ.

ಬ್ಯಾಂಕ್‌ ನವರು ಏಕಾಏಕಿ ಬಂದು ನಮ್ಮನ್ನು ಹೊರಗಿಟ್ಟು ಮನೆ ಹಾಗೂ ದನ ಕಟ್ಟುವ ಕೊಟ್ಟಿಗೆಗೆ ಬೀಗ ಹಾಕಿಕೊಂಡು ಹೋಗಿದ್ದಾರೆ. ದನ-ಕರುಗಳು ಹೊರಗಡೆ ಇದ್ದು ರಾತ್ರಿಯಾದರೆ ಕಾಡಾನೆಗಳು ಮನೆ ಸುತ್ತಾ ಓಡಾಡುತ್ತವೆ. ಈ ಇಳಿ ವಯಸ್ಸಿನಲ್ಲಿ ನನ್ನ ಬದುಕು ಬೀದಿಗೆ ಬಿದ್ದಿದೆ ಎಂದು ತಮ್ಮ ಅಳಲು ತೋಡಿಕೊಂಡರು.

ಮೋಸ ಮಾಡಿ ಜಮೀನು ಬರೆಸಿಕೊಂಡಿಲ್ಲ 9.5ಲಕ್ಷಕ್ಕೆ ಜಮೀನು ಕೊಂಡುಕೊಂಡಿದ್ದೇನೆ. ನಾನು ಹನ್ನೆರಡು ವರ್ಷಗಳ ಹಿಂದೆ 7.5 ಎಕರೆ ಜಮೀನಿಗೆ 9.5 ಲಕ್ಷ ರೂ ಹಣ ನೀಡಿ ಜಮೀನು ಕೊಂಡು ಕೊಂಡಿದ್ದೇನೆ ಅದರೆ, ಪಾರ್ವತಮ್ಮ ತಂಗಿಯ ಮೂಲಕ ತಕರಾರು ತಗೆದು ಪುನಃ 2 ವರೆ ಎಕರೆ ಜಮೀನು ಪಡೆದಿದ್ದಾರೆ. ಉಳಿದಿರುವ ಜಮೀನಿನ ಮೇಲೆ ಕೆನರಾ ಬ್ಯಾಂಕ್‌ನಲ್ಲಿ ಸಾಲವನ್ನು ಪಡೆ ದಿದ್ದೇನೆ. ಅದರೆ, ಜಮೀನು ನೀಡಿದ ಪಾರ್ವತಮ್ಮ ತನ್ನ ತಂಗಿ ಮೂಲಕ ಪುನಃ ಉಳಿದ ಜಮೀನಿನ ಮೇಲೆ ಕೋರ್ಟ್‌ ಗೆ. ನಾವು 10 ವರ್ಷಗಳಿಂದ ಕೈಯಲ್ಲಿದ್ದ ಹಣ ಕಳೆದುಕೊಂಡು ಕೋರ್ಟ್‌ ಸುತ್ತಿದ್ದೇನೆ. ಈಗ ಈ ಜಮೀನಿಗಾಗಿ ಸಾಲ ಮಾಡಿಕೊಂಡಿದ್ದೇನೆ. ಬ್ಯಾಂಕ್‌ ನವರು ಜಮೀ ನನ್ನು 66ಲಕ್ಷ ರೂ.ಗೆ ಹರಾಜು ಮಾಡಿದ್ದಾರೆ. 45 ಲಕ್ಷ ತಿರುವಳಿ ಮಾಡಿಕೊಂಡು ಉಳಿದ ಹಣವನ್ನು ನಮಗೆ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

1-qweqewqe

BSNL 4G; ಆಗಸ್ಟ್‌ನಲ್ಲಿ ದೇಶಾದ್ಯಂತ ಸೇವೆ: ಮೂಲಗಳು

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ

Kasaragod ಸಾರಿಗೆ ಬಸ್‌ಗಳಲ್ಲಿ ಕೆಮರಾ ಅಳವಡಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

KR Nagar ಶಾಸಕರ ಚಿತಾವಣೆ ಮೇರೆಗೆ ರೇವಣ್ಣ ವಿರುದ್ಧ ಪ್ರಕರಣ: ಜೆಡಿಎಸ್‌

6–strike

Holenarasipur: ಶಾಸಕ ಹೆಚ್.ಡಿ. ರೇವಣ್ಣ ಬಂಧನ ಹಿನ್ನೆಲೆ ಬಂದ್ ಗೆ ಕರೆ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

Sakleshpur: ಮಲೆನಾಡಿಗರಿಗೆ ಕಾಡಾನೆ ಜತೆ ಚಿರತೆ ಭಯ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

HD Revanna ಫಾರ್ಮ್ ಹೌಸ್‌ನಲ್ಲಿ ಎಸ್‌ಐಟಿ ತಂಡ ಪರಿಶೀಲನೆ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

Prajwal Revanna ಲೈಂಗಿಕ ದೌರ್ಜನ್ಯ ಪ್ರಕರಣ: ಪೊಲೀಸರ  ಕಾರ್ಯವೈಖರಿ ಬಗ್ಗೆ ವಕೀಲರ ಸಂಶಯ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Mangaluru ಸಂಚಾರ ಯೋಗ್ಯವಲ್ಲದ ಹಡಗುಗಳ ಬಗ್ಗೆ ನಿಗಾ: ಡಾ| ರಮಣ

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Weather ಕಡಲಬ್ಬರ ತುಸು ಜೋರು; ಗಾಳಿ ಬಿರುಸು

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Manjeshwar: ಆಟವಾಡುತ್ತಿದ್ದ 8 ವರ್ಷದ ಬಾಲಕಿ ಕುಸಿದು ಬಿದ್ದು ಸಾವು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Kota ಕಾರ್ಮಿಕನ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.