27ಕ್ಕೆ ಲೋಕ ‌ಅದಾಲತ್‌: 4 ಸಾವಿರ ಕೇಸು ಇತ್ಯರ್ಥ ಗುರಿ


Team Udayavani, Mar 18, 2021, 10:41 AM IST

27ಕ್ಕೆ  ಲೋಕ ‌ಅದಾಲತ್‌: 4 ಸಾವಿರ ಕೇಸು ಇತ್ಯರ್ಥ ಗುರಿ

ಹಾಸನ: ಜಿಲ್ಲೆಯ ಎಲ್ಲಾ ಕೋರ್ಟ್‌ಗಳಲ್ಲಿ ಮಾ.27ರಂದು ಬೃಹತ್‌ ಲೋಕ ಅದಾಲತ್‌ಹಮ್ಮಿಕೊಂಡು 4000 ಪ್ರಕರಣ ಇತ್ಯರ್ಥಪಡಿಸುವ ಗುರಿ ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಸಿವಿಲ್‌ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಬಿ.ಕೆ.ರವಿಕಾಂತ್‌ ತಿಳಿಸಿದರು.

ನಗರದ ಜಿಲ್ಲಾ ನ್ಯಾಯಲಯ ಆವರಣದಲ್ಲಿರುವಎಡಿಆರ್‌ ಕಟ್ಟಡದಲ್ಲಿ ಸುದ್ದಿಗೋಷ್ಠಿ ನಡೆಸಿ ಬೃಹತ್‌ ಲೋಕ ಅದಾಲತ್‌ ಕುರಿತು ಮಾಹಿತಿ ನೀಡಿದಅವರು, ಕೋರ್ಟ್‌ಗಳಲ್ಲಿ ಬಾಕಿ ಇರುವ ವಿವಿಧ ವ್ಯಾಜ್ಯಗಳು ಬಗೆಹರಿಸಬಹುದಾದ ಕ್ರಿಮಿನಲ್‌, ಚೆಕ್‌ ಬೌನ್ಸ್‌, ಬ್ಯಾಂಕ್‌ ವಸೂಲಾತಿ, ಮೋಟಾರು ವಾಹನವಿವಾದ, ಕೌಟುಂಬಿಕ, ಭೂಸ್ವಾಧೀನ, ಕಂದಾಯ,ಜನನ ಮತ್ತು ಮರಣ ನೋಂದಣಿ, ಜೀವನಾಂಶ,ಇನ್ನಿತರೆ ಲಘು ಕ್ರಿಮಿನಲ್‌ ಕೇಸುಗಳನ್ನು ರಾಜಿಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲುಅವಕಾಶವಿದೆ ಎಂದು ಹೇಳಿದರು.

ಸಂಬಂಧಪಟ್ಟ ಕಕ್ಷಿಗಾರರು ವಕೀಲರ ಮೂಲಕ ಅಥವಾ ಖುದ್ದಾಗಿ ರಾಜಿ ಸಂಧಾನದ ಮೂಲಕಪ್ರಕರಣ ಇತ್ಯರ್ಥಪಡಿಕೊಂಡು ಲೋಕ್‌ ಅದಾಲತ್‌ನ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ವಿವರಿಸಿದರು.

ಸಮಯ, ಹಣ ಉಳಿತಾಯ: ರಾಜಿ ಸಂಧಾನದ ಮೂಲಕ ಪ್ರಕರಣಗಳ ಇತ್ಯರ್ಥದಿಂದ ಸಮಯ, ಹಣ ಉಳಿಸಬಹುದಾಗಿದೆ. ಉಭಯ ಪಕ್ಷಗಾರರನಡುವಿನ ಬಾಂಧವ್ಯವು ವೃದ್ಧಿಸುತ್ತದೆ. ಹೀಗಾಗಿ ಕಕ್ಷಿದಾರರು ಲೋಕ್‌ ಅದಾಲತ್‌ನ ಅನುಕೂಲ ಪಡೆದುಕೊಳ್ಳಬಹುದು ಹೇಳಿದರು.

4000 ಪ್ರಕರಣ ಇತ್ಯರ್ಥದ ಗುರಿ: ಹಾಸನದ ಎಲ್ಲಾಕೋರ್ಟ್‌ಗಳಲ್ಲಿ ಒಟ್ಟು 72,881 ಪ್ರಕರಣ ಬಾಕಿಇದ್ದು, 16,738 ಪ್ರಕರಣ ರಾಜಿ ಸಂಧಾನದಮೂಲಕ ಇತ್ಯರ್ಥಕ್ಕೆ ಗುರ್ತಿಸಲಾಗಿದೆ. ಆ ಪೈಕಿ ಸದ್ಯಕ್ಕೆ 6751 ಪ್ರಕರಣಗಳಿಗೆ ಸಂಬಂಧಿಸಿದವರು ಲೋಕ ಅದಾಲತ್‌ ಮೂಲಕ ಇತ್ಯರ್ಥಕ್ಕೆ ನೋಂದಾಯಿಸಿ ಕೊಂಡಿದ್ದಾರೆ. ಮೇ 27 ರಂದುನಡೆಯುವ ಲೋಕ್‌ ಅದಾಲತ್‌ನಲ್ಲಿ 4000 ಕ್ಕೂ ಹೆಚ್ಚಿನ ಪ್ರಕರಣ ರಾಜಿ ಸಂಧಾನದ ಮೂಲಕ ಇತ್ಯರ್ಥಗೊಳಿಸುವ ಗುರಿ ಹೊಂದಲಾಗಿದೆ ಎಂದು ವಿವರ ನೀಡಿದರು.

ಹಿಂದೆ 4500 ಪ್ರಕರಣ ಇತ್ಯರ್ಥ: ಈ ಹಿಂದೆ ನಡೆದ ಡಿಸೆಂಬರ್‌ನಲ್ಲಿ ಲೋಕ್‌ ಅದಾಲತ್‌ ನಡೆದಿತ್ತು. ಆಗ4500 ಪ್ರಕರಣ ಇತ್ಯರ್ಥವಾಗಿದ್ದವು. ಹೈಕೋಟ್‌ಮತ್ತು ಕಾನೂನು ಸೇವೆಗಳ ಪ್ರಾಧಿಕಾರದ ಸೂಚನೆಯಂತೆ ಪ್ರತಿ ಮೂರು ತಿಂಗಳಿಗೊಮ್ಮೆಅದಾಲತ್‌ ನಡೆಸಲಾಗುವುದು ಎಂದು ತಿಳಿಸಿದರು. ಕಕ್ಷಿದಾರರು ಬೃಹತ್‌ ಲೋಕ ಅದಾಲತ್‌ನಲ್ಲಿಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದುನ್ಯಾ.ಬಿ.ಕೆ.ರವಿಕಾಂತ್‌ ಕೋರಿದ್ದಾರೆ. ಜಿಲ್ಲಾ ವಕೀಲರಸಂಘದ ಅಧ್ಯಕ್ಷ ಜೆ.ಪಿ.ಶೇಖರ್‌ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.