ಮೆಕ್ಕೆ ಜೋಳ: ರೈತರ ಕೈ ಹಿಡಿದ ಬೆಲೆ


Team Udayavani, Oct 31, 2022, 4:49 PM IST

tdy-14

ಹಾಸನ: ಜಿಲ್ಲೆಯಲ್ಲಿ ಈಗ ಮೆಕ್ಕೆ ಜೋಳದ ಕಟಾವು ಆರಂಭವಾಗಿದೆ. ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಟ್ಟಿರುವುದು, ರೈತರು ಜೋಳವನ್ನು ಕಟಾವು ಮಾಡಿ, ರಾಶಿ ಹಾಕಿಕೊಳ್ಳುತ್ತಿದ್ದಾರೆ. ಕಳೆದೆರಡು ದಿನಗಳಿಂದ ಮೋಡ ಕವಿದ ವಾತಾವರಣವಿದ್ದು, ಮಳೆ ಆತಂಕದ ನಡುವೆಯೇ ಮೆಕ್ಕೆ ಜೋಳದ ಕಟಾವು ಮಾಡುತ್ತಿದ್ದಾರೆ.

ಈ ವರ್ಷ ಸುರಿದ ಭಾರೀ ಮಳೆಯಿಂದ ಮೆಕ್ಕೆ ಜೋಳದ ಬೆಳೆಗೂ ಹಾನಿಯಾಯಿತು. ಅತಿವೃಷ್ಟಿ ಯಿಂದಾಗಿ ನಿರೀಕ್ಷಿತ ಪ್ರಮಾಣದಲ್ಲಿ ಬೆಳೆ ಬೆಳೆಯಲಿಲ್ಲ. ಮಾನ್ಸೂನ್‌ ಮಳೆ ಆರಂಭವಾಗುವ ಮೊದಲೇ ಬಿತ್ತನೆ ಮಾಡಿದ್ದ ಬೆಳೆ ಹುಲುಸಾಗಿ ಬೆಳೆಯಿತು. ಆದರೆ, ಮಾನ್ಸೂನ್‌ ಮಳೆ ಆರಂಭದಲ್ಲಿ ಬಿತ್ತನೆ ಮಾಡಿದ ಮೆಕ್ಕೆ ಜೋಳ ಅತಿ ತೇವಾಂಶದಿಂದ ಬೆಳೆ ನಾಶವಾಯಿತು. ಅಳಿದುಳಿದ ಬೆಳೆಯಲ್ಲಿ ತೆನೆಗಳು ಚಿಕ್ಕದಾಗಿದ್ದು ಇಳುವರಿಯು ತೀವ್ರವಾಗಿ ಕುಸಿದಿದೆ.

ಜೋಳದ ಗುಣಮಟ್ಟವೂ ಹಾಳು: ಮೆಕ್ಕೆ ಜೋಳ ಕಟಾವಿಗೆ ಬಂದು ಸುಮಾರು ಒಂದು ತಿಂಗಳಾಗಿದೆ. ಆದರೆ, ಅಕ್ಟೋಬರ್‌ 3ನೇ ವಾರದವರೆಗೂ ಭಾರೀ ಮಳೆಯಾಗುತ್ತಿದ್ದರಿಂದ ಕಟಾವು ಮಾಡಲಾಗಿರಲಿಲ್ಲ. ಮಳೆ ಪರಿಣಾಮವಾಗಿ ತೆನೆಗಳಿಗೆ ನೀರು ಬಿದ್ದು, ಗಿಡದ ಮೇಲೆಯೇ ಫ‌ಂಗಸ್‌ ಕಾಣಿಸಿಕೊಂಡಿದ್ದು, ಜೋಳದ ಗುಣಮಟ್ಟವೂ ಹಾಳಾಗಿದೆ. ಕಳೆದ ಒಂದು ವಾರದಿಂದ ಮಳೆ ಬಿಡುವು ಕೊಟ್ಟಿರುವುದರಿಂದ ರೈತರು ಜೋಳದ ಕಟಾವು ಮಾಡುತ್ತಿದ್ದಾರೆ. ಒಂದು ಎಕರೆಗೆ ಸಾಮಾನ್ಯವಾಗಿ ಮೆಕ್ಕೆ ಜೋಳದ ಇಳುವರಿ 25ರಿಂದ 30 ಕ್ವಿಂಟಲ್‌ ಬರುತ್ತಿದೆ. ಆದರೆ, ಈ ವರ್ಷ 15ರಿಂದ 20 ಕ್ವಿಂಟಲ್‌ ಮಾತ್ರ ಇಳುವರಿಯಿದ್ದು, ನಿರೀಕ್ಷಿತ ಇಳುವರಿ ಇಲ್ಲ.

ಕ್ವಿಂಟಲ್‌ಗೆ 2000 ರೂ. ಮೀರಿದ ಬೆಲೆ: ಮೆಕ್ಕೆ ಜೋಳದ ಇಳುವರಿ ಕುಸಿದಿದ್ದರೂ, ಈಗ ಜೋಳದ ಬೆಲೆ ಕ್ವಿಂಟಲ್‌ಗೆ 2000 ರೂ. ಗಿಂತ ಹೆಚ್ಚಿದೆ. ಇದರಿಂದ ರೈತರಿಗೆ ತೀವ್ರ ನಷ್ಟವಾಗುವುದಿಲ್ಲ ಎಂಬ ಸಮಾಧಾನವಿದೆ. ಗ್ರಾಮಗಳಿಗೇ ಬರುತ್ತಿರುವ ಜೋಳದ ವ್ಯಾಪಾರಿಗಳು 2100 ರೂ.ನಿಂದ 2200 ರೂ. ದರದಲ್ಲಿ ಖರೀದಿಸುತ್ತಿದ್ದಾರೆ. ಕಳೆದ ವರ್ಷಗಳಲ್ಲಿ ಕ್ವಿಂಟಲ್‌ಗೆ 1500ರಿಂದ 1600 ರೂ. ದರದಲ್ಲಿ ಮಾರಾಟವಾಗಿತ್ತು. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷದ ಮೆಕ್ಕೆ ಜೋಳದ ಧಾರಣೆ ಸಮಾಧಾನಕರ ವಾಗಿದ್ದು, ಇಳುವರಿ ಕಡಿಮೆ ಇದ್ದರೂ ದರ ಹೆಚ್ಚಿರುವುದರಿಂದ ರೈತರು ನಷ್ಟ ಅನುಭವಿಸುವುದು ತಪ್ಪಿದೆ ಎಂಬ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಗುರಿ ಮೀರಿದ ಜೋಳದ ಬಿತ್ತನೆ: ಈ ವರ್ಷ ಮೆಕ್ಕೆ ಜೋಳದ ಬಿತ್ತನೆ ಗುರಿ ಮೀರಿ ಬಿತ್ತನೆಯಾಗಿತ್ತು. 1.05 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿಗೆ ಬದಲಾಗಿ 1.10 ಲಕ್ಷ ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿತ್ತು. ಜಿಲ್ಲೆಯ 8 ತಾಲೂಕುಗಳ ಪೈಕಿ 7 ತಾಲೂಕುಗಳಲ್ಲಿ ಮುಂಗಾರು ಹಂಗಾಮಿನಲ್ಲಿ ಮೆಕ್ಕೆ ಜೋಳದ ಪ್ರಧಾನ ಹಾಗೂ ವಾಣಿಜ್ಯ ಬೆಳೆಯಾಗಿದೆ. ಹಾಸನ ತಾಲೂಕಿನಲ್ಲಿ ಅತಿ ಹೆಚ್ಚು 37886 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿತ್ತು. ಆನಂತದ ಸ್ಥಾನ ಅರಕಲಗೂಡು ತಾಲೂಕಿನಲ್ಲಿ 21, 561 ಹೆಕ್ಟೇರ್‌ನಲ್ಲಿ ಬಿತ್ತನೆಯಾಗಿತ್ತು. ಬೇಲೂರು – 19.535 ಹೆಕ್ಟೇರ್‌, ಚನ್ನರಾಯಪಟ್ಟಣ – 10,198 ಹೆಕ್ಟೇರ್‌, ಅರಸೀಕೆರೆ – 9725 ಹೆಕ್ಟೇರ್‌, ಆಲೂರು – 8, 559 ಹೆಕ್ಟೇರ್‌, ಹೊಳೆನರಸೀಪುರ ತಾಲೂಕಿನಲ್ಲಿ 7,965 ಹೆಕ್ಟೇರ್‌ನಲ್ಲಿ ಮೆಕ್ಕೆ ಜೋಳ ಈ ವರ್ಷ ಬಿತ್ತನೆಯಾಗಿತ್ತು.

ಪಶು, ಕೋಳಿ ಆಹಾರಕ್ಕೆ ಹೆಚ್ಚು ಬಳಕೆ : ಮೆಕ್ಕೆ ಜೋಳದ ಬಳಕೆ ಅತಿ ಹೆಚ್ಚು ಬಳಕೆಯಾ ಗುವುದು ಪಶು ಆಹಾರ ಮತ್ತು ಕೋಳಿಗಳ ಆಹಾರ ತಯಾರಿಕೆಗೆ. ವಿವಿಧ ಆಹಾರ ಉತ್ಪನ್ನಗಳ ತಯಾರಿಗೆಗೂ ಅಲ್ಪ ಪ್ರಮಾಣದಲ್ಲಿ ಮೆಕ್ಕೆ ಜೋಳ ಬಳಕೆಯಾಗುತ್ತದೆ. ಪಶು ಆಹಾರ ತಯಾರಿಕಾ ಘಟಕಗಳು ಈ ಹಂಗಾಮಿನಲ್ಲಿ ಮೆಕ್ಕೆ ಜೋಳವನ್ನು ಖರೀದಿಸಿ, ದಾಸ್ತಾನಿರಿಸಿಕೊಂಡು ವರ್ಷ ಪೂರ್ಣ ಪಶು ಆಹಾರ ತಯಾರಿ ಕೆಗೆ ಬಳಕೆ ಮಾಡಿಕೊಳ್ಳುತ್ತವೆ. ಹಾಗೆಯೇ ಕೋಳಿ ಫಾರಂಗಳಿಗೆ ಆಹಾರ ಪೂರೈಕೆ ಮಾಡುವ ಘಟಕಗಳೂ ಮೆಕ್ಕೆ ಜೋಳ ಖರೀದಿಸಿ ದಾಸ್ತಾನಿರಿಸಿಕೊಳ್ಳುತ್ತವೆ. ಮುಂಗಾರು ಹಂಗಾಮಿನ ಮಳೆ ಆಶ್ರಯದಲ್ಲಿ ಅತಿ ಹೆಚ್ಚು ಮೆಕ್ಕೆ ಜೋಳ ಬೆಳೆಯಲಾಗುತ್ತಿದ್ದು, ನೀರಾವರಿ ಅಶ್ರಯದಲ್ಲಿ ಹಿಂಗಾರು ಹಂಗಾಮಿನಲ್ಲೂ ಕಡಿಮೆ ಪ್ರಮಾಣದಲ್ಲಿ ಮೆಕ್ಕೆ ಜೋಳ ಬೆಳೆಯಲಾಗುತ್ತದೆ.

-ಎನ್‌. ನಂಜುಂಡೇಗೌಡ

ಟಾಪ್ ನ್ಯೂಸ್

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

1-imek

ನಮ್ಮ ‘ಐಮೆಕ್‌’ ಪ್ರಾಜೆಕ್ಟ್ ಗೆ ಜಿ7 ನಾಯಕರ ಬೆಂಬಲ!

vande bharat

ಜೂ.20ಕ್ಕೆ ಬೆಂಗಳೂರು-ಮಧುರೈ ವಂದೇ ಭಾರತ್‌: ಕರ್ನಾಟಕಕ್ಕೆ 9ನೇ ರೈಲು

1-sugopi

ಇಂದಿರಾ ಗಾಂಧಿ ಕಾಂಗ್ರೆಸ್‌ ಮಾತೆ: ಉಲ್ಟಾ ಹೊಡೆದ ಸುರೇಶ್‌ ಗೋಪಿ

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌

ಶಕ್ತಿ ಯೋಜನೆಯಿಂದ ಪ್ರವಾಸೋದ್ಯಮ ಚುರುಕು: ಸಚಿವ ಎಚ್‌.ಕೆ. ಪಾಟೀಲ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Pen drive case: ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ ಬಂಧನ

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Prajwal Revanna: ಹೊಳೆನರಸೀಪುರಕ್ಕೆ ಪ್ರಜ್ವಲ್‌; ಲೈಂಗಿಕ ದೌರ್ಜನ್ಯ ಕೇಸಲ್ಲಿ ಸ್ಥಳ ಮಹಜರು

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತು, ಮೂವರಿಗೆ ಗಾಯ

Hassan: ಸಿಡಿಲು ಬಡಿದು ಇಬ್ಬರು ಮಹಿಳೆಯರು ಮೃತ್ಯು, ಮೂವರಿಗೆ ಗಾಯ

1-hasana’

Hasana Crime: ರೌಡಿಶೀಟರ್ ಚೈಲ್ಡ್ ರವಿ ಬರ್ಬರ ಹತ್ಯೆ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

HD Revanna: ಸಂಕಷ್ಟದ ನಡುವೆಯೂ ರಾಜಕೀಯ ಚಟುವಟಿಕೆಗಳಲ್ಲಿ ವ್ಯಸ್ತರಾದ ಎಚ್‌.ಡಿ.ರೇವಣ್ಣ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

1-MPP

Madhya Pradesh:ಡಿಸ್ಟಿಲರಿಯಲ್ಲಿದ್ದ 58 ಬಾಲ ಕಾರ್ಮಿಕರ ರಕ್ಷಣೆ

Ajit Doval

ಇಂದಿನಿಂದ ಅಮೆರಿಕ, ಭಾರತ ಭದ್ರತಾ ಸಲಹೆಗಾರರ ಸಭೆ

1-asdsadsad

T 20 WC; ಸೂಪರ್‌-8 ಗಡಿಯಲ್ಲಿ ಬಾಂಗ್ಲಾ: ನೇಪಾಲ ಕೊನೆಯ ಎದುರಾಳಿ

Mehabooba

POCSO ಪ್ರಕರಣದಲ್ಲಿ ಬಿಎಸ್‌ವೈಗೆ ಕೋರ್ಟ್‌ ರಕ್ಷಣೆ ಸರಿಯಲ್ಲ: ಮುಫ್ತಿ

1-imek-22

Controversy ನಡುವೆ “ಪ್ರೇರಣಾ ಸ್ಥಳ’ ಉದ್ಘಾಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.