ಅಕ್ರಮ ದಾಖಲೆ ಸೃಷ್ಟಿಸಿ ಪಪಂ ಆ ಪರಭಾರೆ


Team Udayavani, Nov 26, 2021, 1:23 PM IST

ಅಕ್ರಮ ದಾಖಲೆ ಸೃಷ್ಟಿಸಿ ಪಪಂ ಆ ಪರಭಾರೆ

ಅರಕಲಗೂಡು: ಪಟ್ಟಣದ ಪ್ರಮುಖ ರಸ್ತೆಗಳಲ್ಲಿರುವ ಲಕ್ಷಾಂತರ ಮೌಲ್ಯದ ಪಪಂ ಆಸ್ತಿಗಳು ಪರಭಾರೆಯಾಗುತ್ತಿವೆಯೋ ಎಂಬ ಅನುಮಾನಗಳು ಸಾರ್ವಜನಿಕರ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸರ್ಕಾರಿ ಆಸ್ತಿ ಕಬಳಿಸಲು ನಕಲಿ ಹಕ್ಕುಪತ್ರಗಳು ಹಾಗೂ ದಾಖಲೆಗಳು ಸೃಷ್ಟಿಯಾಗುತ್ತಿರುವುದು ಆತಂಕ ಮೂಡಿಸುತ್ತದೆ.

ಪಪಂ ವ್ಯಾಪ್ತಿಯ ಪ್ರಮುಖ ವಾಣಿಜ್ಯ ಸ್ಥಳಗಳು ಹಾಗೂ ಅನೇಕ ವಾರ್ಡ್‌ಗಳಲ್ಲಿರುವ ಉದ್ಯಾನವನ ಸಿ.ಎ ನಿವೇಶನಗಳ ಕಬಳಿಕೆ ಮತ್ತು ಒತ್ತುವರಿಯ ಪ್ರಕರಣಗಳು ಇತ್ತೀಚಿನ ದಿನಗಳಲ್ಲಿ ಅಧಿಕವಾಗುತ್ತಿದ್ದು, ಇದಕ್ಕೆ ಪುಷ್ಟಿಯಂತೆ 1976-77 ರಲ್ಲಿ ಕೊಳಚೆ ನಿರ್ಮೂಲನ ಮಂಡಳಿಯ ಅಧ್ಯಕ್ಷರಾಗಿದ್ದ ಶ್ರೀಕಂಠಯ್ಯನವರು ಪಟ್ಟಣದಲ್ಲಿ ವಾಸಕ್ಕೂ ಸ್ಥಳವಿಲ್ಲದ ಪರಿಸ್ಥಿತಿಯಲ್ಲಿದ್ದ ಜನರ ಸ್ಥಿತಿಯನ್ನ ಅವಲೋಕಿಸಿ ಅಂದು 13 ಎಕರೆ ಪ್ರದೇಶವನ್ನ ಬಡಕುಟುಂಬಗಳಿಗೆ ನಿವೇಶನ ನಿರ್ಮಿಸಲು ಮೀಸಲಿಟ್ಟಿದ್ದರು. ಆದರೆ, ಈ ನಿವೇಶನಗಳು 1979 ರಿಂದ 1989 ರವರೆಗೂ ಹಂಚಿಕೆ ಕಾರ್ಯ ನಡೆಯುತ್ತಲೇ ಬರುತ್ತಿತ್ತು. ಈ ಸ್ಥಳದಲ್ಲಿ ಬಹುತೇಕ 285ಕ್ಕೂ ಹೆಚ್ಚು ನಿವೇಶನಗಳನ್ನು ಹಂಚಲಾಯಿತು.

ಈಗಲೂ ಇನ್ನೂ ಹಲವಾರು ನಿವೇಶನಗಳಿಗೆ ಹಕ್ಕು ಪತ್ರವಿಲ್ಲದಿದ್ದರೂ ನಕಲಿ ದಾಖಲೆಗಳನ್ನ ಸೃಷ್ಟಿಸಿಕೊಂಡು ಹಣವಂತರೂ ಮತ್ತು ಪ್ರಭಾವಿಗಳು ನಿವೇಶನಗಳನ್ನು ಕಬಳಿಸಿಕೊಂಡಿರುವ ಉದಾಹರಣೆಗಳು ಬಹಳಷ್ಟಿವೆ. ಇದಕ್ಕೆ ಉದಾಹರಣೆ ಎಂದರೆ 1979 ರಲ್ಲಿ ನೀಡಿದ ಹಕ್ಕು ಪತ್ರದಂತೆ ನಿವೇಶನ ಸಂಖ್ಯೆ 189 ರ ನಿವೇಶನಕ್ಕೆ ಅಂದಿನ ಆಡಳಿತ ಅಧಿಕಾರಿ ಹಾಗೂ ಮುಖ್ಯಾಧಿಕಾರಿ ಸಹಿಯನ್ನು ನಕಲುಗೊಳಿಸಿ ಹಕ್ಕು ಪತ್ರವನ್ನ ಮೂರು ರೀತಿಯ ಬರವಣಿಗೆಯಲ್ಲಿ ಸಿದ್ಧಪಡಿಸಿ ಖಾತೆಗೆ ಮುಂದಾಗಿರುವ ದಾಖಲೆಯೇ ಸಾಕ್ಷಿಯಾಗಿದೆ.

ಇದನ್ನೂ ಓದಿ;- ಧರ್ಮಗಳ ನಡುವೆ ವಿಷ ಬೀಜ ಬಿತ್ತನೆ ಮಾಡಿದ್ದೇ ಕಾಂಗ್ರೆಸ್ ನವರು: ಗೋವಿಂದ ಕಾರಜೋಳ

ಈ ವಿಷಯದ ಬಗ್ಗೆ ಶಾಸಕರಿಗೆ 2020 ರಲ್ಲಿ ಸಾರ್ವಜನಿಕ ರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್‌ ವೈ.ಎಂ. ರೇಣುಕುಮಾರ್‌ರವರ ನೇತೃತ್ವದಲ್ಲಿ ತನಿಕೆ ನಡೆಸಿ ಇದು ಕಾನೂನು ಬಾಹಿರವಾಗಿ ಸುಳ್ಳು ದಾಖಲೆಗಳನ್ನ ಸೃಷ್ಟಿಸಿ ನಡೆಸಿರುವ ಕೃತ್ಯ ಎಂಬುದು ಮನವರಿಕೆಯಾದ ನಂತರ ಖಾತೆಯನ್ನ ರದ್ದುಗೊಳಿಸಿದರು. ಇಂತಹ ಹಲವು ಪ್ರಕರಣಗಳು ಹೊರ ಬರಬೇಕಿದೆ. ಈ ಸ್ಥಳವಲ್ಲದೆ ಪಟ್ಟಣದ ಅನೇಕ ಪ್ರದೇಶಗಳಲ್ಲಿ ಉದ್ಯಾನವನ ರಸ್ತೆ ಹಾಗೂ ಸಿ.ಎ. ನಿವೇಶನಗಳನ್ನ ಅತಿಕ್ರಮಿಸಿ ಹಾಗೂ ಒತ್ತುವರಿಗಳನ್ನು ನಡೆಸಿಕೊಂಡು ಪಪಂನಲ್ಲಿ ಖಾತೆ ಮಾಡಿಸಿಕೊಳ್ಳಲು ದಾಖಲೆ ಸೃಷ್ಟಿಯಾಗಿರುವುದು ಈ ಎಲ್ಲಾ ಅನುಮಾನಗಳಿಗೆ ದಾರಿಮಾಡಿ ಕೊಟ್ಟಿದೆ.

ಪ್ರಭಾವಿಗಳ ಕೈವಶವಾಗಿರುವ ಸ್ಥಳಗಳು: ಬಹುತೇಕ ಪ್ರಮುಖ ರಸ್ತೆಗಳಾದ ಹಾಸನ ರಸ್ತೆಯಲ್ಲಿ ಈಗಾಗಲೇ ಹಿಂದಿನ ಬಸ್‌ ನಿಲ್ದಾಣ, ಐತಿಹಾಸಿಕ ಕೊಳವೆ ಭಾವಿಗಳ ಸ್ಥಳಗಳಲ್ಲಿ ಈಗಾಗಲೇ ಪ್ರಭಾವಿಗಳು ಕಟ್ಟಡಗಳನ್ನು ನಿರ್ಮಿಸಿಕೊಂಡಿದ್ದಾರೆ. ಸಾರ್ವಜನಿಕರ ಆಸ್ತಿಯನ್ನು ಕಾಪಾಡಬೇಕಾದ ಅಧಿಕಾರಿಗಳೇ ಹಣವಂತರೊಂದಿಗೆ ಕೈಜೋಡಿಸಿರುವುದು ದುಸ್ಥಿತಿಯಾಗಿದೆ.

ಐತಿಹಾಸಿಕ ನೆಲಬಾವಿ ಮುಚ್ಚಿ ಅಂಗಡಿ ನಿರ್ಮಾಣ: ಐತಿಹಾಸಿಕ ಪಾಳೇಗಾರ ಕಾಲದಲ್ಲಿ ಪಟ್ಟಣದ ಜನತೆಗೆ ಕುಡಿವ ನೀರಿಗೋಸ್ಕರ ತೆರೆಯಲಾಗಿದ್ದ ನೆಲಬಾವಿಗಳನ್ನು ಈಗಾಗಲೇ ಮುಚ್ಚಿ ಅ ಸ್ಥಳಗಳಲ್ಲಿ ಕೆಲ ಪ್ರಭಾವಿಗಳು ಅಂಗಡಿ ಮಳಿಗೆಗಳನ್ನ ನಿರ್ಮಿಸಿ ಕೊಂಡಿದ್ದರೂ ಅಧಿಕಾರಿಗಳು ಮೌನವಹಿಸಿರುವುದು ಅನೇಕ ಸಂಶಯಗಳಿಗೆ ಎಡೆಮಾಡಿಕೊಟ್ಟಿದೆ.

ಪಪಂ ನೌಕರನಿಗೆ ಕ್ವಾರ್ಟಸ್‌ ಖಾತೆ: ಪಪಂ ಗೊರೂರಿನಲ್ಲಿರುವ ಪಂಪ್‌ಹೌಸಿನ ಪಕ್ಕದಲ್ಲಿ ನೌಕರರಿಗೆಂದು ನಿರ್ಮಾಣಗೊಂಡಿದ್ದ ಕ್ವಾರ್ಟಸ್‌ಗಳನ್ನು ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಂಡು ಅಲ್ಲಿಯೇ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿ ತನ್ನ ಪತ್ನಿಯ ಹೆಸರಿಗೆ ಖಾತೆ ಮಾಡಿಸಿಕೊಂಡಿರುವುದು ಮತ್ತೂಂದು ಸಾಕ್ಷಿಯಾಗಿದೆ.

ಶಾಸಕರೇ ಸರ್ಕಾರಿ ಆಸ್ತಿ ಉಳಿಸಿ

ಶಾಸಕ ಎ.ಟಿ. ರಾಮಸ್ವಾಮಿ ರಾಜ್ಯಾದ್ಯಂತ ಭೂ ಕಬಳಿಕೆಯ ಬಗ್ಗೆ ಧ್ವನಿ ಎತ್ತಿ ಭೂ ಕಬಳಿಸಿದವರ ಪಾಲಿಗೆ ಸಿಂಹ ಸ್ವಪ್ನರಾಗಿದ್ದಾರೆ. ಇಂತಹ ಪ್ರಾಮಾಣಿಕ ಶಾಸಕರ ಕ್ಷೇತ್ರದಲ್ಲೇ ಇಂಥ ಅವ್ಯವಸ್ಥೆಗಳು ಹಾಗೂ ಪಟ್ಟಣದಲ್ಲಿರುವ ಸರ್ಕಾರಿ ಆಸ್ತಿಗಳನ್ನು ಕಬಳಿಸುತ್ತಿರುವವರ ವಿರುದ್ಧ ಹೋರಾಟಕ್ಕೆ ಮುಂದಾಗಿ ಆಸ್ತಿಗಳನ್ನು ರಕ್ಷಿಸಿಕೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಸರ್ಕಾರಿ ಆಸ್ತಿಗಳೇ ಕಣ್ಮರೆಯಾಗುವುದರಲ್ಲಿ ಸಂಶಯವಿಲ್ಲ. ಆದುದರಿಂದ ಶಾಸಕರು ಇತ್ತ ಗಮನ ಹರಿಸಿ ಸಾರ್ವಜನಿಕರ ಆಸ್ತಿಯನ್ನ ರಕ್ಷಣೆ ಮಾಡುವಂತೆ ಸಾರ್ವಜನಿಕರು ಮನವಿ ಮಾಡಿದ್ದಾರೆ.

“ಪಪಂ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗಗಳ ಕಬಳಿಕೆಯಾಗುತ್ತಿರುವ ಬಗ್ಗೆ ನನ್ನ ಗಮನಕ್ಕೂ ಬಂದಿದೆ. ಎಂಎಲ್‌ಸಿ ಚುನಾವಣೆಯ ನಂತರ ಪಪಂ ಆಸ್ತಿಯನ್ನು ಕಬಳಿಸಿರುವವರು ಎಷ್ಟೇ ಪ್ರಭಾವಿಗಳಾಗಿದ್ದರೂ ಮುಲಾಜು ತೋರಿಸದೆ ಕಾನೂನು ಕ್ರಮ ಜರುಗಿಸಿ ಆಸ್ತಿಯನ್ನು ಹಿಂಪಡೆಯಲಾಗುವುದು.” – ಹೂವಣ್ಣ, ಪಟ್ಟಣ ಪಂಚಾಯಿತಿ ಅಧ್ಯಕ್ಷ

“ಆಸ್ತಿ ಉಳಿಸುವುದೇ ನಮ್ಮಗಳ ಉದ್ದೇಶ. ಈಗಾಗಲೇ ಈ ವಿಷಯ ತಿಳಿದು ದಾಖಲೆಗಳನ್ನು ಸಂಗ್ರಹಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಅಧ್ಯಕ್ಷರು ಮತ್ತು ಶಾಸಕರುಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ಕೈಗೊಳ್ಳುವುದು.” – ಶಿವಕುಮಾರ್‌, ಅರಕಲಗೂಡು ಪಪಂ ಮುಖ್ಯಾಧಿಕಾರಿ

ಟಾಪ್ ನ್ಯೂಸ್

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ

1—eewqewq

World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

Politics: ಅಮಿತ್‌ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ 

1-asdasdad

Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್‌ಡಿಡಿ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ

13

Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್‌ಗೆ ಲಾಭ? 

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್‌ ರೇವಣ್ಣ ಪ್ರಚಾರಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

29

Hassan Lok sabha Constituency: ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Bike thief: ಬಜಪೆ ಪೊಲೀಸರಿಂದ ಅಂತರ್‌ ಜಿಲ್ಲಾ ಬೈಕ್‌ ಕಳ್ಳನ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.