![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
ಪ್ರಜ್ವಲ್ ವಿರುದ್ಧ ದುರುದ್ದೇಶದಿಂದ ಅಪಪ್ರಚಾರ
Team Udayavani, May 17, 2019, 2:23 PM IST
![has-3](https://www.udayavani.com/wp-content/uploads/2019/05/has-3-2-400x465.jpg)
ಹಾಸನ: ಪ್ರಜ್ವಲ್ ರೇವಣ್ಣ ಅವರು ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ನಾಮ ಪತ್ರದೊಂದಿಗೆ ಸಲ್ಲಿಸಿರುವ ಪ್ರಮಾಣ ಪತ್ರದ ನೀಡಿ ರುವ ಎಲ್ಲಾ ಅಂಶಗಳೂ ಸಮರ್ಪಕ ವಾಗಿವೆ. ಕೆಲವರು ದುರುದ್ದೇಶ ದಿಂದ ಅಪಪ್ರಚಾರ ಮಾಡುತ್ತಿದ್ದಾರೆ ಅಷ್ಟೇ ಎಂದು ಲೋಕೋಪಯೋಗಿ ಸಚಿವ ಎಚ್.ಡಿ.ರೇವಣ್ಣ ಸ್ಪಷ್ಟಪಡಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ರೇವಣ್ಣ ಅವರ ಪ್ರಮಾಣಪತ್ರದಲ್ಲಿ ಲೋಪವಿದೆ ಎಂದು ಕೆಲವರು ದುರುದ್ದೇಶದಿಂದ ನಿರಂತರವಾಗಿ ಆರೋಪ ಮಾಡುತ್ತಲೇ ಬಂದಿದ್ದಾರೆ ಎಂದು ಬಿಜೆಪಿ ಅಭ್ಯರ್ಥಿ ಎ.ಮಂಜು ಅವರ ಹೆಸರು ಹೇಳದೇ ಆಕ್ರೋಶ ವ್ಯಕ್ತಪಡಿಸಿದರು.
ಕುಟುಂಬದ ವಿರುದ್ಧ ಆರೋಪ: ನಮ್ಮ ಕುಟುಂಬ ದವರ ವಿರುದ್ಧ ಆರೋಪ ಮಾಡುತ್ತಿರುವವ ರೊಂದಿಗೆ ಕೆಲವು ಮಾಧ್ಯಮದವೂ ಶಾಮೀಲಾಗಿ ದ್ದಾರೆ. ಲೋಕಸಭಾ ಚುನಾವಣೆ ಆರಂಭವಾಗಿದಾಗಿ ನಿಂದ ಕೆಲವು ಮಾಧ್ಯಮಗಳು ಹೇಗೆ ನಡೆದು ಕೊಂಡಿವೆ ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದ ಅವರು, ಈಗ ಏನೇನು ಆರೋಪ ಮಾಡು ತ್ತಿದ್ದಾರೋ ಅವುಗಳಿಗೆಲ್ಲ ಕಾನೂನು ಪ್ರಕಾರ ಏನು ಉತ್ತರ ಕೊಡಬೇಕೋ ಅದೆಲ್ಲಕ್ಕೂ ಜೆಡಿಎಸ್ನ ಚುನಾವಣಾ ಏಜೆಂಟರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.
ನಾಮಪತ್ರ ಪ್ರಶ್ನಿಸುವಂತಿಲ್ಲ: ಒಂದು ಬಾರಿ ಜಿಲ್ಲಾ ಚುನಾವಣಾಧಿಕಾರಿಯವರು ಅಭ್ಯರ್ಥಿಯ ನಾಮ ಪತ್ರವನ್ನು ಅಂಗೀಕರಿಸಿದ ನಂತರ ಅದರ ಬಗ್ಗೆ ಯಾರೂ ಪ್ರಶ್ನಿಸುವಂತಿಲ್ಲ. ಈ ಬಗ್ಗೆ ಚುನಾವಣಾ ಆಯೋಗವು 2014 ಚುನಾವಣಾ ಸಂದರ್ಭ ದಲ್ಲಿಯೇ ಸ್ಪಷ್ಟಪಡಿಸಿದೆ ಎಂದು ದಾಖಲೆಯ ಪ್ರತಿಯೊಂದನ್ನು ಪ್ರದರ್ಶಿಸಿದ ರೇವಣ್ಣ ಅವರು, ಜಿಲ್ಲಾ ಚುನಾವಣಾಧಿಕಾರಿಯವರು ಹಾಗೂ ರಾಜ್ಯ ಚುನಾವಣಾಧಿಕಾರಿಯವರು ತನಿಖೆ ಎಂದು ಹೇಳುತ್ತಿದ್ದಾರೋ, ಏನು ತನಿಖೆ ಮಾಡುತ್ತಾರೋ ನನಗೆ ಗೊತ್ತಿಲ್ಲ ಎಂದರು.
ಸಿಎಂ ಹುದ್ದೆ ಖಾಲಿ ಇಲ್ಲ: ರಾಜ್ಯದಲ್ಲಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿಯಾಗಿದ್ದಾರೆ. ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹಾಗಾಗಿ ರಾಜ್ಯದಲ್ಲಿ ಮುಖ್ಯಮಂತ್ರಿಯನ್ನು ಬದಲಿ ಸುವ ಪರಿಸ್ಥಿತಿಯೂ ಇಲ್ಲ. ಅತಂತ್ರ ರಾಜಕೀಯ ಪರಿಸ್ಥಿತಿಯೂ ನಿರ್ಮಾಣವಾಗುವುದಿಲ್ಲ. ಹಾಗಾಗಿ ನಾನು ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಯಾಗುವ ಅವಶ್ಯಕತೆ ನಿರ್ಮಾಣವಾಗುವುದೂ ಇಲ್ಲ ಎಂದರು.
ಭಿನ್ನಾಭಿಪ್ರಾಯವಿಲ್ಲ: ರೇವಣ್ಣ ಮತ್ತು ಕುಮಾರ ಸ್ವಾಮಿ ನಡುವೆ ಭಿನ್ನಾಭಿಪ್ರಾಯ ಮೂಡಿಸಲೂ ಯಾರಿಂದಲೂ ಸಾಧ್ಯವಿಲ್ಲ. ಅಣ್ಣ – ತಮ್ಮ ಜಗಳ, ಹೊಡೆದಾಡುವರೆಂಬ ಕೆಲವರ ಭ್ರಮೆ ಅಷ್ಟೇ. ಕುಮಾರಸ್ವಾಮಿ ಅವರೇ ಮುಂದಿನ ನಾಲ್ಕು ವರ್ಷ ಮುಖ್ಯಮಂತ್ರಿಯಾಗಿ ಮುಂದುವರಿಯುವರು. ಈ ಬಗ್ಗೆ ಯಾರಿಗೂ ಅನುಮಾನ ಬೇಡ ಎಂದು ಹೇಳಿದರು.
ಟಾಪ್ ನ್ಯೂಸ್
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-415x252.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?](https://www.udayavani.com/wp-content/uploads/2024/07/cm-7-150x91.jpg)
CM ಆಪ್ತರ ಜತೆ ನಾಡಿದ್ದು ಸಿಎಂ ದಿಲ್ಲಿಗೆ; ವಾಲ್ಮೀಕಿ, ಮುಡಾ ಹಗರಣ: ಹೈಕಮಾಂಡ್ಗೆ ವಿವರಣೆ?
![Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ](https://www.udayavani.com/wp-content/uploads/2024/07/Vidhana-Soudha-24-150x100.jpg)
Ramanagara ಜಿಲ್ಲೆ ಇನ್ನು ಬೆಂಗಳೂರು ದಕ್ಷಿಣ; ರಾಜ್ಯ ಸಚಿವ ಸಂಪುಟದಲ್ಲಿ ನಿರ್ಧಾರ
![Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ](https://www.udayavani.com/wp-content/uploads/2024/07/cm-g-150x100.jpg)
Siddaramaiah ನನ್ನ ವಿರುದ್ಧ ವಿಪಕ್ಷ ಷಡ್ಯಂತ್ರ
![Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!](https://www.udayavani.com/wp-content/uploads/2024/07/Pilikula-Biological-150x91.jpg)
Pilikula Biological Park: ಕಾಳಿಂಗ ಸರ್ಪಗಳಿಗೆ “ಮೈಕ್ರೋ ಚಿಪ್’!
![1-aaasdeqweqw](https://www.udayavani.com/wp-content/uploads/2024/07/1-aaasdeqweqw-150x100.jpg)
India-Sri Lanka ಟಿ20 ಸರಣಿ ಇಂದಿನಿಂದ : ಸೂರ್ಯ, ಗಂಭೀರ್ ಯುಗಾರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.