ಭೂಕುಸಿತ ಸಂತ್ರಸ್ತರಿಗೆ ಶೀಘ್ರ ಪರಿಹಾರ: ಸಚಿವ
Team Udayavani, Aug 16, 2022, 4:10 PM IST
ಸಕಲೇಶಪುರ: ತಾಲೂಕಿನ ದೋಣಿಗಾಲ್ ಗ್ರಾಮ ದಲ್ಲಿ ಇತ್ತೀಚೆಗಷ್ಟೇ ಭೂಕುಸಿತದಿಂದಾಗಿ ಭೂಮಿ ಕಳೆದುಕೊಂಡವರಿಗೆ ಸೂಕ್ತ ಪರಿಹಾರ ನೀಡುವ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಗೋಪಾಲಯ್ಯ ಹೇಳಿದರು.
ತಾಲೂಕಿನ ದೋಣಿಗಾಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 75ರ ಕಾಮಗಾರಿಯಿಂದ ಭೂಕುಸಿತಕ್ಕೆ ಒಳಗಾಗಿ ತೋಟ, ಗದ್ದೆ ಜಾಗ ವೀಕ್ಷಿಸಿ ಮಾತನಾಡಿದ ಅವರು, ರಾಜ್ಕಮಲ್ ಕಂಪನಿ ಮಾಡಿದ ಎಡವಟ್ಟಿ ನಿಂದ 35ಕ್ಕೂ ಹೆಚ್ಚು ಎಕರೆ ಕಾಫಿ, ಮೆಣಸು, ಭತ್ತ ಬೆಳೆಯುತ್ತಿದ್ದ ಜಾಗ ಮಣ್ಣುಪಾಲಾಗಿರುವ ಮಾಹಿತಿ ನನಗೆ ದೊರಕಿದೆ. ಇಲ್ಲಿ ಪುನಃ ಬೆಳೆ ಬೆಳೆಯಲಾರದಂಹ ಪರಿಸ್ಥಿತಿ ನಿರ್ಮಾಣವಾಗಿದೆ. ಜಮೀನು ಕಳೆದುಕೊಂಡವರ ಕುರಿತು ಸರಿಯಾಗಿ ಮಾಹಿತಿ ಪಡೆದು ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ: ಭೂಕು ಸಿತ ಉಂಟಾಗಲು ಕಾರಣವಾಗಿರುವ ಗುತ್ತಿಗೆ ದಾರರೆ ಪರಿಹಾರ ನೀಡುವಂತೆ ಕ್ರಮ ಕೈಗೊಳ್ಳುತ್ತೇವೆ. ಒಟ್ಟಾರೆಯಾಗಿ ಬಡವರಿಗೆ ಯಾವುದೇ ರೀತಿಯಲ್ಲಿ ಅನ್ಯಾಯವಾಗದಂತೆ ನೋಡಿಕೊಳ್ಳುತ್ತೇವೆ. ತಾಲೂಕಿನಲ್ಲಿ ನಿರೀಕ್ಷೆಗೂ ಮೀರಿ ಹಿಂದೆಂದು ಕಾಣದ ಮಳೆ ಬಂದಿದೆ, ಮಳೆ ಕಡಿಮೆಯಾಯಿತು ಅನ್ನುವ ಹೊತ್ತಿಗೆ ಮತ್ತೆ ಮಳೆ ಬಂದು ಹಾನಿ ಮಾಡಿದೆ ಎಂದು ತಿಳಿಸಿದರು.
ಸದ್ಯಕ್ಕೆ ಮಳೆಯಿಂದಾಗಿ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ 5 ಲಕ್ಷ ರೂ. ಪರಿಹಾರ ನೀಡಲಾಗುತ್ತಿದೆ. ಇದೀಗ ಮಳೆ ತುಸು ಕಡಿಮೆಯಾಗಿದ್ದು, ಒಟ್ಟಾರೆಯಾಗಿ ಮಳೆ ನಿಂತ ನಂತರ ಬೆಳೆ ಇತರೆ ನಷ್ಟಗಳನ್ನು ಅಧಿಕಾರಿಗಳಿಂದ ವರದಿ ಪಡೆದು ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದರು.
ಕಪ್ಪಳ್ಳಿ ಸಂಪರ್ಕ ರಸ್ತೆ ವೀಕ್ಷಣೆ: ಈ ವೇಳೆ ಏಕಮುಖ ಸಂಚಾರಕ್ಕೆ ಸಿದ್ಧತೆ ನಡೆಸುತ್ತಿರುವ ಕೆಸಗನಹಳ್ಳಿಯಿಂದ ಕಪ್ಪಳ್ಳಿಗೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ವೀಕ್ಷಿಸಿದ ಸಚಿವರು, ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಿ, ಮಂಗಳವಾರ ಸಂಜೆ ವೇಳೆಗೆ ಏಕಮುಖ ಸಂಚಾರದ ಕುರಿತು ತೀರ್ಮಾನಿಸಲಾಗುವುದು ಎಂದು ವಿವರಿಸಿದರು.
ಸಚಿವರ ಮುಂದೆ ಸಂತ್ರಸ್ತರ ಕಣ್ಣೀರು: ಇದೇವೇಳೆ ಸಚಿವರ ಮುಂದೆ ಕಣ್ಣೀರು ಹಾಕಿದ ಸಂತ್ರಸ್ತರು, ಬಹುತೇಕರಿಗೆ ಇಲ್ಲಿ ಸ್ವಲ್ಪ ಜಾಗ ಇದ್ದು, ಅದರಲ್ಲೇ ಕಷ್ಟಪಟ್ಟು ಕಾಫಿ, ಮೆಣಸು, ಅಡಕೆ, ಭತ್ತವನ್ನು ಬೆಳೆಯುತ್ತಿದ್ದೆವು. ಇದೀಗ ಹೆದ್ದಾರಿ ಕಾಮಗಾರಿ ಮಾಡುತ್ತಿರುವ ಗುತ್ತಿಗೆದಾರರು ಮಾಡಿದ ತಪ್ಪಿನಿಂದ ವಿನಾಕಾರಣ ನಾವು ಬಲಿಯಾಗಬೇಕಾಗಿದೆ ಎಂದು ಹೇಳಿದರು.
ನಮ್ಮ ಜೀವನಕ್ಕೆ ಆಧಾರವಾಗಿದ್ದ ಜಮೀನು ಇಲ್ಲವಾಗಿದೆ. ನಾವು ಮುಂದೆ ಏನು ಮಾಡುವುದು, ದಯವಿಟ್ಟು ನಮಗೆ ಬದಲಿ ಭೂಮಿ ನೀಡಬೇಕು, ಸೂಕ್ತ ಪರಿಹಾರ ನೀಡಬೇಕು ಎಂದು ಕಣ್ಣೀರು ಹಾಕಿದರು.
ಜಿಲ್ಲಾಧಿಕಾರಿ ಆರ್.ಗಿರೀಶ್, ಜಿಪಂ ಸಿಇಒ ಕಾಂತರಾಜ್, ಉಪವಿಭಾಗಾಧಿಕಾರಿ ಪ್ರತೀಕ್ ಬಾಯಲ್, ತಹಶೀಲ್ದಾರ್ ಜಯಕುಮಾರ್, ಲೋಕೋಪಯೋಗಿ ಇಲಾಖೆ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
BJP ಸ್ಥಳೀಯ ಮುಖಂಡರ ಅಸಹಕಾರ: ಬಿಎಸ್ವೈ ಬಳಿ ರಕ್ಷಣೆಗೆ ಮೊರೆಯಿಟ್ಟ ಎಚ್.ಡಿ.ರೇವಣ್ಣ
MUST WATCH
ಹೊಸ ಸೇರ್ಪಡೆ
Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ
ʼAadujeevithamʼ Twitter review: ಪೃಥ್ವಿರಾಜ್ ಅಭಿನಯಕ್ಕೆ ಬಹುಪರಾಕ್; ಹೇಗಿದೆ ಸಿನಿಮಾ?
Fire; ಬೈಕಂಪಾಡಿ ಕೈಗಾರಿಕಾ ಪ್ರದೇಶದಲ್ಲಿ ಅಗ್ನಿ ಅವಘಡ
ಮೈಸೂರು:ಶೃಂಗೇರಿ ಶಂಕರ ಮಠ-ಮಾ. 30ರಿಂದ ಅಭಿನವ ಶಂಕರಾಲಯದ ಶತಮಾನೋತ್ಸವ ಆಚರಣೆ
Delhi: ದುಬಾರಿ ಮರ್ಸಿಡೆಸ್ ಕಾರಿನಲ್ಲಿ ಡ್ರಗ್ಸ್ ಸಾಗಾಟ-ರಾಷ್ಟ್ರಮಟ್ಟದ ಕುಸ್ತಿಪಟು ಬಂಧನ!