ದೊಡ್ಡ ಕಾಡನೂರು ಕೃಷಿ ಪತ್ತಿನ ಸಂಘದಲ್ಲಿ ಅವ್ಯವಹಾರ

ರೈತರಿಗೆ ಮಾಹಿತಿ ನೀಡದೇ ಅವರ ಪಹಣಿಯ ಆಧಾರದ ಮೇಲೆ ಸಾಲ ಪಡೆದ ವಂಚನೆ

Team Udayavani, Jul 17, 2019, 3:24 PM IST

hasan-tdy-3..

ಹೊಳೆನರಸೀಪುರ ತಾಲೂಕಿನ ದೊಡ್ಡಕಾಡನೂರು ಗ್ರಾಮದ ಕೃಷಿಕರು ತಹಶೀಲ್ದಾರ್‌ಗೆ ದೂರು ನೀಡಿದರು.

ಹೊಳೆನರಸೀಪುರ: ತಾಲೂಕಿನ ಕೃಷಿ ಪತ್ತಿನ ಸಹಕಾರ ಬ್ಯಾಂಕ್‌ ಸಾಲ ನೀಡದೇ ರೈತರ ಕೃಷಿ ಭೂಮಿಯ ಪಹಣಿಯನ್ನು ಆಧಾರ ಮಾಡಿಕೊಂಡು ಲಕ್ಷಾಂತರ ರೂ. ಅವ್ಯವಹಾರ ಮಾಡಿದ ಪ್ರಕರಣ ತಾಲೂಕಿನ ದೊಡ್ಡಕಾಡನೂರು ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ನಡೆದಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ರೈತರಿಗೆ ಕೃಷಿ ಸಾಲ ಮಂಜೂರಾದರೆ ಸಾಲದ ಹಣವನ್ನು ಚೆಕ್‌ ನೀಡಬೇಕು ಅಥವಾ ರೈತರ ಬ್ಯಾಂಕ್‌ ಖಾತೆಗೆ ಜಮೆ ಮಾಡಬೇಕು. ಆದರೆ ಯಾವೊಬ್ಬ ರೈತರ ಖಾತೆಗೂ ಹಣ ಜಮೆ ಆಗಿಲ್ಲ.

ಕಳೆದ 2018ರ ಜನವರಿಯಲ್ಲಿ ಗ್ರಾಮದ ಸುಬ್ಬಮ್ಮ ಚನ್ನಯ್ಯ, ಕರಿನಾಯ್ಕ ಚಿಕ್ಕನಾಯ್ಕ ಬೋರೇಗೌಡ ಅಂದಾನೇ ಗೌಡ, ಗಂಗಾಧರ ಅಂದಾನೇಗೌಡ, ಲಲಿತಮ್ಮ ಚಂದ್ರೇಶಗೌಡ, ದೇವಮ್ಮ ಅಮಾಸೇನಾಯ್ಕ, ಸಿದ್ದನಾಯ್ಕ ಅಂದಾನೇಗೌಡ, ರಾಜಮ್ಮ, ನಾಗಣ್ಣ, ಹಾಗೂ ಪುಟ್ಟಮ್ಮ ಪುಟ್ಟೇಗೌಡ ಅವರ ಪಹಣಿಯಲ್ಲಿ ತಲಾ ಐವತ್ತು ಸಾವಿರಕ್ಕೆ ಆಧಾರವಾಗಿದೆ ಎಂಬುದು ದಾಖಲಾಗಿದೆ.

ಈವಿಷಯ ಗಮನಕ್ಕೆ ಬಂದ ನಂತರ ರೈತರು ಕೃಷಿ ಪತ್ತಿನ ಬ್ಯಾಂಕಿಗೆ ಹೋಗಿ ವಿಚಾರಣೆ ಮಾಡಿದರೆ ದಾಖಲೆ ಪ್ರಕಾರ ನಿಮಗೆ ಸಾಲದ ಹಣ ತಲುಪಿಸಿರು ವುದಾಗಿ ಮಾಹಿತಿ ನೀಡುವ ಅಧಿಕಾರಿ ಗಳು ಈ ಪ್ರಕರಣದಲ್ಲಿ ಯಾರೊಬ್ಬರಿಗೂ ಸಾಲದ ಹಣವನ್ನು ನೀಡಿಲ್ಲ.

ತಹಶೀಲ್ದಾರ್‌ಗೆ ದೂರು: ಈ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡಕಾಡನೂರು ಗ್ರಾಮದ ಹತ್ತಾರು ಮಂದಿ ಮಂಗಳ ವಾರ ತಾಲೂಕು ಕಚೇರಿಗೆ ಆಗಮಿಸಿ ದೊಡ್ಡಕಾಡನೂರು ಕೃಷಿಪತ್ತಿನ ಬ್ಯಾಂಕು ತಮಗೆ ಸಾಲ ನೀಡಿಯೇ ಇಲ್ಲ ನಮ್ಮ ಪಹಣಿಯಲ್ಲಿ ಸಾಲ ಪಡೆದಿರುವುದಾಗಿ ದಾಖಲಾಗಿದೆ ಎಂದು ತಾಲೂಕು ಕಚೇರಿಗೆ ಆಗಮಿಸಿ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಅವರಿಗೆ ದೂರು ನೀಡಿ ತಮಗೆ ನ್ಯಾಯ ಕೊಡಿಸುವಂತೆ ಮನವಿ ಸಲ್ಲಿಸಿದರು.

ಸಹಕಾರ ಸಂಘಕ್ಕೆ ದೂರು ನೀಡಿ: ದೊಡ್ಡಕಾಡನೂರು ಗ್ರಾಮಸ್ಥರ ದೂರನ್ನು ಆಲಿಸಿದ ತಹಶೀಲ್ದಾರ್‌ ಕೆ.ಆರ್‌.ಶ್ರೀನಿವಾಸ್‌ ಜಿಲ್ಲಾ ಸಹಕಾರ ಸಂಘಗಳ ನಿರ್ದೇಶಕರಿಗೆ ದೂರವಾಣಿ ಮಾಹಿತಿ ನೀಡಿದರು. ತಮಗೆ ದೂರು ನೀಡಿದ ರೈತರನ್ನು ಜಿಲ್ಲಾ ಸಹಕಾರಿ ಸಂಘಗಳ ಕಚೇರಿಗೆ ತೆರಳಿ ದೂರು ದಾಖಲಿಸುವಂತೆ ಸೂಚಿಸಿದರು.

ಕಾರ್ಯದರ್ಶಿ ಹೇಳಿಕೆ: ಈ ಪ್ರಕರಣದ ಕುರಿತು ಸುದ್ದಿಗಾರರೊಂದಿಗೆ ಮಾತ ನಾಡಿದ ದೊಡ್ಡಕಾಡನೂರು ಕೃಷಿ ಪತ್ತಿನ ಬ್ಯಾಂಕಿನ ಕಾರ್ಯದರ್ಶಿ ಲೋಕೇಶ್‌ ರೈತರ ಪಹಣ ಆಧಾರದ ಮೇಲೆ ಸಾಲ ಮಂಜೂರಾಗಿರುವ ರೈತರಿಗೆ ಬ್ಯಾಂಕಿನಲ್ಲಿ ಹಣದ ಕೊರತೆ ಇದ್ದ ಕಾರಣ ಕೆಲವು ರೈತರಿಗೆ ಸಾಲದ ಹಣ ನೀಡಿಲ್ಲ ಎಂದು ಒಪ್ಪಿಕೊಂಡರು. ಈ ವರ್ಷ ಬರುವ ಹಣದಲ್ಲಿ ಬಾಕಿ ಉಳಿದಿರುವ ರೈತರಿಗೆ ಸಾಲವನ್ನು ಮಂಜೂರು ಮಾಡುವುದಾಗಿ ಹೇಳಿದರು.

ಈ ಬಗ್ಗೆ ಸಹಕಾರ ಸಂಘಗಳ ಆಯುಕ್ತರು ತನಿಖೆ ನಡೆಸಿ ತಪ್ಪಿತಸ್ಥರಿಗೆ ಕಾನೂನು ಕ್ರಮ ಜರುಗಿಸುವಂತೆ ಸಾಲ ಪಡೆಯದ ಫಲಾನುಭವಿಗಳು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

Madhya pradesh Lok Sabha 20204: ಮಧ್ಯಪ್ರದೇಶದಲ್ಲಿ ಕಾಂಗ್ರೆಸ್-‌ ಬಿಜೆಪಿ ನೇರ ಹಣಾಹಣಿ

8-pavagada

Pavagada: ಬೈಕ್ ಗೆ ‌ಕಾಡು ಹಂದಿ ‌ಡಿಕ್ಕಿಯಾಗಿ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasan: ಫೋನ್‌ ಕದ್ದಾಲಿಸಿದ್ದರೆ ತನಿಖೆ ಮಾಡಲಿ… ಕುಮಾರಸ್ವಾಮಿ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

Hasana: ಪಕ್ಕದಲ್ಲೇ ಕುಳಿತು ಹಳ್ಳ ತೋಡಿದ್ದೂ ನನಗೆ ನೆನಪಿದೆ: ಡಿಕೆಶಿಗೆ ಎಚ್‌ಡಿಕೆ ತಿರುಗೇಟು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Water Crisis; ರಾಜ್ಯ ಸರ್ಕಾರದಿಂದ ಟ್ಯಾಂಕರ್ ಲಾಬಿ: ಅರವಿಂದ ಬೆಲ್ಲದ್ ಆರೋಪ

Viral: ಕಚ್ಚಿದ ಹಾವನ್ನೇ ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

Video Viral: ಕಚ್ಚಿದ ಹಾವನ್ನೇ ಕೊಂದು ಆಸ್ಪತ್ರೆಗೆ ತಂದ ಮಹಿಳೆ… ಕಂಗಾಲಾದ ವೈದ್ಯರು

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

9-bng

Jai Shri Ram ಎಂದು ಕೂಗಿದ್ದಕ್ಕೆ ಅನ್ಯಕೋಮಿನ ಯುವಕರಿಂದ ಹಲ್ಲೆ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Shimoga; ಕೆ.ಎಸ್. ಈಶ್ವರಪ್ಪರನ್ನು ಭೀಷ್ಮರಿಗೆ ಹೋಲಿಸಿದ ಋಷಿಕುಮಾರ ಸ್ವಾಮೀಜಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.