![1-assam](https://www.udayavani.com/wp-content/uploads/2024/07/1-assam-415x233.jpg)
ಪರಿಶಿಷ್ಟರಿಗೆ ಸೌಲಭ್ಯ ತಲುಪದಿದ್ದಲ್ಲಿ ಕಠಿಣ ಕ್ರಮ
Team Udayavani, Sep 16, 2020, 5:05 PM IST
![hasan-tdy-1](https://www.udayavani.com/wp-content/uploads/2020/09/hasan-tdy-1-9-620x372.jpg)
ಸಕಲೇಶಪುರ/ಆಲೂರು: ದಲಿತ ಫಲಾನುಭವಿ ಗಳಿಗೆ ಸೌಲಭ್ಯಗಳನ್ನು ಅಧಿಕಾರಿಗಳು ನಿಯಮಿತ ಕಾಲಾವಧಿಯಲ್ಲಿ ತಲುಪಿಸಲು ಕ್ರಮ ಕೈಗೊಳ್ಳ ಬೇಕು ಎಂದು ಶಾಸಕ ಎಚ್.ಕೆ.ಕುಮಾರಸ್ವಾಮಿ ಹೇಳಿದರು.
ಆಲೂರು ಪಟ್ಟಣದ ಅಂಬೇಡ್ಕರ್ ಭವನದಲ್ಲಿ ತಾಲೂಕು ಮಟ್ಟದ ಪರಿಶಿಷ್ಟ ಜಾತಿ ಹಾಗೂವರ್ಗದ ಹಿತರಕ್ಷಣಾ ಸಮಿತಿ ಸಭೆಯಲ್ಲಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಹಲವುಕೆಲಸಗಳು ಮಂದಗತಿಯಿಂದ ಸಾಗುತ್ತಿರ ಬಹುದು. ಆದರೆ, ಮುಂದಿನ ದಿನಗಳಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸುವಾಗ ತಡ ವಾಗದಂತೆ ಅಧಿಕಾರಿಗಳು ಎಚ್ಚರವಹಿಸಬೇಕು ಎಂದು ಹೇಳಿದರು.
ಕೆಲಸ ಚುರುಕುಗೊಳಿಸಿ: ತಾಲೂಕಿನೆಲ್ಲೆಡೆ ಅಕ್ರಮ ಮದ್ಯ ಮಾರಾಟ ಮಿತಿಮೀರುತ್ತಿರುವ ಬಗ್ಗೆ ದೂರುಗಳಿದ್ದು, ಕೂಡಲೇ ಅಬಕಾರಿ ಇಲಾಖೆ ಸಿಬ್ಬಂದಿ, ಅಕ್ರಮ ಮದ್ಯ ಮಾರಾಟ ತಡೆಯಬೇಕು. ದೇವರಾಜ ಅರಸು ವಸತಿ ಯೋಜನೆ ಯಲ್ಲಿ 250 ಮನೆಗಳು ಮಂಜೂರಾಗಿವೆ. ಕೆಲವು ಪಿಡಿಒಗಳ ಕಾರ್ಯವೈಖರಿ ಬಗ್ಗೆ ದೂರುಗಳಿದ್ದು, ಕೂಡಲೇಕೆಲಸ ಚುರುಕಾಗಿ ಮಾಡಲು ಮುಂದಾ ಗಬೇಕು ಎಂದು ಸೂಚಿಸಿದರು.
ಸಮಸ್ಯೆ ಕೂಡಲೇ ಇತ್ಯರ್ಥಪಡಿಸಿ: ತಾಲೂಕು ಅಸ್ಪತ್ರೆಯಲ್ಲಿ ದಲಿತ ಮಹಿಳೆಯರ ಮೇಲೆ ದೌರ್ಜನ್ಯ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು, ಕೂಡಲೇ ಈ ಕುರಿತು ತಾಲೂಕು ಆರೋಗ್ಯಾಧಿಕಾರಿ ಡಾ.ಎಚ್.ಆರ್.ತಿಮ್ಮಯ್ಯ,ಆಡಳಿತ ವೈದ್ಯಾಧಿಕಾರಿ ಡಾ.ಚಿನ್ನನಾಗಪ್ಪರವರು ವಿಚಾರಣೆ ನಡೆಸಿ ಮುಂದಿನ ಕ್ರಮ ಕೈಗೊಳ್ಳ ಬೇಕು. ಒಟ್ಟಾರೆಯಾಗಿ ಅಧಿಕಾರಿಗಳು ದಲಿತರ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥ ಪಡಿಸಲು ಮುಂದಾಗಬೇಕು ಎಂದರು.
ಸಶ್ಮಾನಕ್ಕೆ ದಾರಿ: ತಹಶೀಲ್ದಾರ್ ಶಿರೀನ್ ತಾಜ್ ಮಾತನಾಡಿ, ತಾಲೂಕು ಆಡಳಿತ, ದಲಿತರ ಹಕ್ಕು ಗಳಿಗೆ ಚ್ಯುತಿ ಬರದಂತೆ ಕೆಲಸ ನಿರ್ವಹಿಸುತ್ತಿದೆ.ದಲಿತರ ಸ್ಮಶಾನಗಳಿಗೆ ಹೋಗಲು ದಾರಿಯಸಮಸ್ಯೆ ಇದ್ದಲ್ಲಿ ಕೂಡಲೇ ದಾರಿ ಬಿಡಿಸಿಕೊಡಲಾಗುತ್ತದೆ. ಚಿಕ್ಕಕಣಗಾಲು ಹೊಸಳ್ಳಿ ಗ್ರಾಮದ ನಿರ್ಗತಿಕ ಯುವತಿಯನ್ನು ಜೆ.ಎಂ.ಎಫ್ ನ್ಯಾಯಾ ಲಯದಲ್ಲಿ ಹಾಜರುಪಡಿಸಿ, ನ್ಯಾಯಾಧೀಶರ ಆದೇಶದಂತೆ ರಕ್ಷಣಾತ್ಮಕ ಕ್ರಮ ಕೈಗೊಳ್ಳಲಾಗುವುದು ಎಂದು ವಿವರಿಸಿದರು.
ಕೇಳಿ ಬಂದ ದೂರುಗಳು: ಸ್ಮಶಾನಕ್ಕೆ ದಾರಿ ಬಿಡಿಸಿ ಕೊಡಬೇಕು, ದಿನಸಿ ಅಂಗಡಿಗಳಲ್ಲಿ ಅಕ್ರಮಮದ್ಯ ಮಾರಾಟ ನಿಲ್ಲಬೇಕು, ಹೇಮಾವತಿಪುನರ್ವಸತಿ ಪ್ರದೇಶದಲ್ಲಿ ವಾಸಿಸುತ್ತಿರುವವರಿಗೆಹಕ್ಕು ಪತ್ರ ವಿತರಿಸಬೇಕು, ಮೂರು ವರ್ಷವಾದರೂ ಹಲವಾರು ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಿಲ್ಲ ಎಂಬ ಆರೋಪಗಳು ಸಭೆಯಲ್ಲಿ ದಲಿತ ಮುಖಂಡರಿಂದ ಕೇಳಿ ಬಂದವು. ಸಭೆಯಲ್ಲಿ ತಾಪಂ ಉಪಾಧ್ಯಕ್ಷೆ ರಮ್ಯಾ ಗೋಪಿನಾಥ್, ಎಪಿಎಂಸಿ ಅಧ್ಯಕ್ಷ ಕೆ.ಎಸ್. ಮಂಜೇಗೌಡ, ತಾಪಂ ಇಒ ಎಚ್.ಕೆ.ಸತೀಶ್, ಇನ್ಸ್ಪೆಕ್ಟರ್ ರೇವಣ್ಣ, ಸಮಾಜ ಕಲ್ಯಾಣಾಧಿಕಾರಿ ಪುಂಡಲೀಕ್ ಇತರರಿದ್ದರು.
ಟಾಪ್ ನ್ಯೂಸ್
![1-assam](https://www.udayavani.com/wp-content/uploads/2024/07/1-assam-415x233.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![hassan](https://www.udayavani.com/wp-content/uploads/2024/07/hassan-2-150x84.jpg)
Holiday: ಹಾಸನ ಜಿಲ್ಲೆಯ ನಾಲ್ಕು ತಾಲೂಕಿನ ಶಾಲೆಗಳಿಗೆ ಇಂದು (ಜುಲೈ 25) ರಜೆ ಘೋಷಣೆ
![Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ](https://www.udayavani.com/wp-content/uploads/2024/07/road-s-150x96.jpg)
Shiradi-Sampaje Ghat: ವಾಹನ ಸಂಚಾರ ಪುನರಾರಂಭ; ಸಂಪಾಜೆ: ರಾತ್ರಿಯ ಸಂಚಾರ ಮತ್ತೆ ಆರಂಭ
![Sakaleshpura](https://www.udayavani.com/wp-content/uploads/2024/07/Sakaleshpura-1-150x84.jpg)
National Highway ಅವೈಜ್ಞಾನಿಕ ಕಾಮಗಾರಿ: ಕೇಂದ್ರ ಸಚಿವ ಗಡ್ಕರಿಗೆ ಮಾಹಿತಿ
![HDK](https://www.udayavani.com/wp-content/uploads/2024/07/HDK-5-150x90.jpg)
MUDA Scam: ಸಿದ್ದರಾಮಯ್ಯನವರಿಗೆ ಪಾಪ ಪ್ರಜ್ಞೆ ಕಾಡುತ್ತಿದೆ: ಎಚ್ಡಿಕೆ
![Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ](https://www.udayavani.com/wp-content/uploads/2024/07/19-4-150x90.jpg)
Minister K.N. Rajanna: ಕೆಲಸ ಪೂರ್ಣಗೊಳಿಸುವವರೆಗೆ ಟೋಲ್ ವಸೂಲಿಗೆ ಬಿಡುವುದಿಲ್ಲ
MUST WATCH
ಹೊಸ ಸೇರ್ಪಡೆ
![1-assam](https://www.udayavani.com/wp-content/uploads/2024/07/1-assam-150x84.jpg)
UNESCO ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ‘ದಿಬ್ಬ ಸಮಾಧಿಗಳು’: ಏನಿದು ಮೊಯಿಡಮ್ಸ್?
![New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’](https://www.udayavani.com/wp-content/uploads/2024/07/POLICE-5-12-150x79.jpg)
New Gang; ಮೋಸದಾಟದಲ್ಲಿ ಸಕ್ರಿಯವಾಗಿದೆ “ಆರ್ಡರ್ ಗ್ಯಾಂಗ್’
![1-kanwar-msid](https://www.udayavani.com/wp-content/uploads/2024/07/1-kanwar-msid-150x84.jpg)
Uttara Khand; ಕನ್ವರ್ ಯಾತ್ರೆ: ಮಸೀದಿಗೇ ಪರದೆ ಹಾಕಿದ ಹರಿದ್ವಾರ ಆಡಳಿತ!
![court](https://www.udayavani.com/wp-content/uploads/2024/07/court-7-150x83.jpg)
Court; ದೇಶಾದ್ಯಂತ 5 ಕೋಟಿ ಕೇಸು ಇತ್ಯರ್ಥಕ್ಕೆ ಬಾಕಿ: ಉ.ಪ್ರ.ದಲ್ಲೇ ಹೆಚ್ಚು!
![robbers](https://www.udayavani.com/wp-content/uploads/2024/07/robbers-1-150x89.jpg)
Note!;ಕಳ್ಳತನಕ್ಕೆಂದು ಬಂದವ ತಾನೇ 20 ರೂಪಾಯಿ ನೋಟು ಇಟ್ಟು ಹೋದ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.