ಹೇಮೆ ನೀರಿಗಾಗಿ ರಾತ್ರಿಯಿಡೀ ಶಾಸಕರ ಪಹರೆ


Team Udayavani, Jul 19, 2018, 3:22 PM IST

has-1.jpg

ಕುಣಿಗಲ್‌: ಕುಣಿಗಲ್‌ ದೊಡ್ಡಕೆರೆ ಸೇರಿದಂತೆ ತಾಲೂಕಿನ ಕೆರೆ ಕಟ್ಟೆಗಳನ್ನು ತುಂಬಿಸಲು ಪಣ ತೊಟ್ಟಿ ರುವ ಶಾಸಕ ಡಾ.ಎಚ್‌.ಡಿ. ರಂಗನಾಥ್‌ ರಾತ್ರಿಯಿಡೀ ಅಧಿಕಾರಿಗಳೊಂದಿಗೆ ಹೇಮಾವತಿ ನಾಲೆ ಮೇಲೆ ಪಹರೆ ನಡೆಸಿ, ಬೇರೆ ತಾಲೂಕಿನ ಕೆರೆಗಳಿಗೆ ಕದ್ದು ಹರಿಸಿಕೊಳ್ಳುತ್ತಿದ್ದ ನೀರನ್ನು ತಡೆದು ಕುಣಿಗಲ್‌ ಕಡೆಗೆ ನೀರು ಸರಾಗವಾಗಿ ಹರಿಸಲು ಕ್ರಮ ಕೈಗೊಂಡಿದ್ದಾರೆ.

ಕೆರೆ, ಕಟ್ಟೆ ತುಂಬಿಸಲು ಕ್ರಮ: ತಾಲೂಕಿನಲ್ಲಿ ನಿರೀಕ್ಷಿತ ಪ್ರಮಾಣದಲ್ಲಿ ಮಳೆ ಬೀಳದೆ ಕೆರೆ-ಕಟ್ಟೆ ಹಾಗೂ ಜಲಾಶಯಗಳಲ್ಲಿ ನೀರಿಲ್ಲದೆ ಜನ ಜನುವಾರಗಳ ಕುಡಿಯುವ ನೀರು ಹಾಗೂ ರೈತರ ಬೇಸಾಯಕ್ಕೆ ಅನಾನುಕೂಲವಾಗಿ ಕಳೆದ ನಾಲ್ಕು-ಐದು ವರ್ಷಗಳಿಂದ ತಾಲೂಕು ಬರಗಾಲಕ್ಕೆ ತುತ್ತಾಗಿತ್ತು. 

ಇದನ್ನು ಗಂಭೀರವಾಗಿ ಪರಿಗಣಿಸಿರುವ ಶಾಸಕರು ಈ ಬಾರಿ ಶತಾಯ ಗತಾಯವಾಗಿ ತಾಲೂಕಿಗೆ ಹೇಮಾವತಿ ನೀರು ಹರಿಸಿ ಕೆರೆ ಕಟ್ಟೆ ಹಾಗೂ ಜಲಾಶಯವನ್ನು ತುಂಬಿಸಬೇಕೆಂದು ಪಣ ತೊಟ್ಟು ಕಳೆದ ಒಂದು ವಾರದಿಂದ ರಾತ್ರಿಯಿಡೀ ಹೇಮಾವತಿ ನಾಲೆ ಮೇಲೆ ಸಂಚರಿಸಿ ಮುಂಗಾರು ಪ್ರಾರಂಭದ ಹಂತದಲ್ಲೇ ಕುಣಿಗಲ್‌ ದೊಡ್ಡಕೆರೆಗೆ ನೀರು ಹರಿಸಲು ಯಶಸ್ವಿಯಾಗಿದ್ದಾರೆ.

ಬೆಳಗಿನಜಾವದ ವರೆಗೆ ಪಹರೆ: ಈ ಬಾರಿ ಉತ್ತಮ ಮಳೆಯಾಗಿ ಗೋರೂರು ಜಲಾಶಯ ತುಂಬಿ ಸಾಕಷ್ಟು ನೀರು ಶೇಖರಣೆಯಾಗಿರುವ ಹಿನ್ನೆಲೆಯಲ್ಲಿ ಹೇಮಾವತಿ ನಾಲೆ ಮೂಲಕ ಜಿಲ್ಲೆಗೆ ನೀರು ಹರಿದು ಬಿಡಲಾಗಿದೆ. ಆದರೆ ಜಿಲ್ಲೆಯ ಕೆಲ ತಾಲೂಕಿನ ಜನಪ್ರತಿನಿಧಿಗಳು ಕುಣಿಗಲ್‌ ಕಡೆಗೆ ಹರಿಯುತ್ತಿದ್ದ ನೀರನ್ನು ತಡೆದು ತಮ್ಮ ತಾಲೂಕಿನ ಕೆರೆಕಟ್ಟೆಗಳಿಗೆ ಹರಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಶಾಸಕ ಡಾ. ರಂಗನಾಥ್‌, ತುಮಕೂರು ಹೇಮಾವತಿ ನೀರಾವರಿ ನಿಗಮದ ಎಸ್‌.ಇ. ಮೋಹನ್‌ಕುಮಾರ್‌, ಕುಣಿಗಲ್‌ ವಿಭಾಗದ ಎಇಇ ಶಿವರಾಜ್‌, ದೇವರಾಜ್‌ ಸೇರಿದಂತೆ ವಿವಿಧ ಅಧಿಕಾರಿಗಳೊಂದಿಗೆ ಮಂಗಳವಾರ ಸಂಜೆ 4 ಗಂಟೆಯಿಂದ ತಡರಾತ್ರಿ 3 ಗಂಟೆಯವರೆಗೆ ಕುಣಿಗಲ್‌ ದೊಡ್ಡಕೆರೆಯಿಂದ ಬುಗುಡನಹಳ್ಳಿ ಕೆರೆಯ ವರೆಗೆ ನಾಲೆ ಮೇಲೆ ಪಹರೆ ನಡೆಸಿದರು.

ನೀರು ಕಳವಿಗೆ ತಡೆ: ಈ ವೇಳೆ ಕುಣಿಗಲ್‌ ಕಡೆ ಹರಿಯುತ್ತಿದ್ದ ನೀರನ್ನು ಬೇರೆ ತಾಲೂಕಿನ ಬುಗಡನಹಳ್ಳಿ, ಹರಿಯೂರು, ಹೆಬ್ಬೂರು, ನಾಗವಲ್ಲಿ ಸೇರಿದಂತೆ ಹಲವು ಗ್ರಾಮಗಳ ಸಣ್ಣ ಪುಟ್ಟ ಕೆರೆಗಳಿಗೆ ಜಾಕ್‌ ವೆಲ್‌ ತಿರುಗಿಸಿಕೊಂಡು ನೀರು ಹರಿಸಿಕೊಳ್ಳುತ್ತಿದ್ದರು. ಇದನ್ನು ಗಮನಿಸಿದ ಶಾಸಕರು ಅಧಿಕಾರಿಗಳ ಮೂಲಕ ತಡೆದು ಕುಣಿಗಲ್‌ ಕಡೆಗೆ ನೀರು ಸರಾಗವಾಗಿ ಹರಿಯಲು ಅನುವು ಮಾಡಿಕೊಟ್ಟರು.

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.