ಕೋವಿಡ್ 19 ಆಸ್ಪತ್ರೆಗೆ ಎಂಎಲ್ಸಿ ಭೇಟಿ
Team Udayavani, Apr 8, 2020, 1:15 PM IST
ಹಾಸನ: ಜಿಲ್ಲಾ ಕೋವಿಡ್ 19 ಆಸ್ಪತ್ರೆಯೆಂದು ಘೋಷಣೆಯಾಗಿರುವ ಹಾಸನ ವೈದ್ಯಕೀಯ ಕಾಲೇಜು (ಹಿಮ್ಸ್) ಬೋಧಕ ಆಸ್ಪತ್ರೆಗೆಪರಿಷತ್ ಸದಸ್ಯ ಎಂ.ಎ. ಗೋಪಾಲಸ್ವಾಮಿ ಅವರು ಮಂಗಳವಾರ ಭೇಟಿ ನೀಡಿ ವೈದ್ಯಕೀಯ ಸಿದ್ಧತೆಯನ್ನು ಪರಿಶೀಲಿಸಿದರು.
ಹಾಸನ ವೈದ್ಯಕೀಯ ಕಾಲೇಜು ನಿರ್ದೇಶಕ ಡಾ.ಬಿ.ಸಿ.ರವಿಕುಮಾರ್, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಆರ್.ಕೃಷ್ಣ ಮೂರ್ತಿ ಅವರು ಕೊರೊನಾ ಪ್ರಕರಣಗಳು ವರದಿಯಾದರೆ ಚಿಕಿತ್ಸೆ ನೀಡಲು ಸಜ್ಜುಗೊಳಿಸಿರುವ ಐಸೋಲೇಷನ್ ವಾರ್ಡ್, ಅಲ್ಲಿನಸಿದ್ಧತೆಯ ಬಗ್ಗೆ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಸ್ವಾಮಿ ಅವರು, ಅದೃಷ್ಟಾವಶಾತ್, ಜಿಲ್ಲೆಯಲ್ಲಿ ಈವರೆಗೂ ಕೊರೊನಾ ಪ್ರಕರಣಗಳೂ ವರದಿಯಾಗಿಲ್ಲ. ಇನ್ನು ಮುಂದೆಯೂ ಜಿಲ್ಲೆಯಲ್ಲಿ ಕೋವಿಡ್ 19 ಕಾಣಿಸಿಕೊಳ್ಳಬಾರದು ಎಂದು ದೇವರಲ್ಲಿ ಪ್ರಾರ್ಥಿಸುವೆ. ಹಿಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ 19 ಚಿಕಿತ್ಸೆಗೆ ಸುಸಜ್ಜಿತ ವ್ಯವಸ್ಥೆ ಮಾಡಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ವೈದ್ಯರು ಹಾಗೂ ಸಹಾಯಕ ಸಿಬ್ಬಂದಿಗಳ ಸೇವೆ ಅಮೂಲ್ಯ. ಅವರಿಗೆ ಅಗತ್ಯ ಸಾಧನ, ಸಲಕರಣಗಳನ್ನು ನೀಡಿ. ಪಿಪಿಇ ಕಿಟ್ ಹಾಗೂ ವೆಂಟಿಲೇಟರ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಡೆಯಲು ಪ್ರಯತ್ನಿಸ ಬೇಕು ಎಂದು ವೈದ್ಯರಿಗೆ ಸಲಹೆ ನೀಡಿದ ಅವರು, ಜಿಲ್ಲೆಯಲ್ಲಿ ಜನರು ಆರೋಗ್ಯ ಇಲಾಖೆಯ ಮಾರ್ಗದರ್ಶನವನ್ನು ಪಾಲಿಸಬೇಕು. ಕೋವಿಡ್ 19 ಶಂಕೆಯ ಪ್ರಕರಣಗಳ ಪರಿಶೀಲನೆ ವೇಲೆ ವೈದ್ಯ ಸಿಬ್ಬಂದಿಗೆ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ