ಆಯುರ್ವೇದ ಹೆಚ್ಚು ಜನರಿಗೆ ತಲುಪುವಂತಾಗಲಿ

ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಲಿ: ಡಾ.ವೀರೇಂದ್ರ ಹೆಗ್ಗ ಡೆ

Team Udayavani, May 12, 2019, 9:32 AM IST

HASAN-TDY-1..

ಹಾಸನ: ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಿ ಆಯುರ್ವೇದವು ಹೆಚ್ಚು ಜನರಿಗೆ ತಲಪುವಂತೆ ಮಾಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.

ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್‌ಡಿಎಂ) ಆಯುರ್ವೇದ ಕಾಲೇಜಿನ 22ನೇ ಪದವಿ ಪ್ರದಾನ ಸಮಾರಂಭವಾದ ಶಿಖಾನುಪ್ರವೇಶ ದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.

ಮನೋದೈಹಿಕ ಕಾಯಿಲೆ ನಿವಾರಣೆ: ಶರೀರ ಮನಸ್ಸುಗಳೆರಡರ ಅಸಮತೋಲನವನ್ನು ಸರಿದೂಗಿ ಸುವ ಆಯುರ್ವೇದ ವಿಜ್ಞಾನವು ಇಂದಿನ ದಿನಮಾನ ಗಳ ಮನೋದೈಹಿಕ ಕಾಯಿಲೆಗಳ ತಡೆಗಟ್ಟುವಿಕೆ ನಿವಾರಿಸುವಿಕೆಗೆ ಅತ್ಯವಶ್ಯಕ ಅನಿವಾರ್ಯವಾಗಿದೆ. ಆದ್ದರಿಂದ ಆಯುರ್ವೇದ ಹೆಚ್ಚು ಜನರಿಗೆ ತಲಪಬೇಕು ಎಂದರು.

ಎಸ್‌ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿ ಗಳು ವಿಶ್ವದೆಲ್ಲೆಡೆ ಆಯುರ್ವೇದ ವಲಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವುದು ನನಗೆ ಸಂತಸ ಉಂಟುಮಾಡಿದೆ ಎಂದು ಹೇಳಿದರು.

ಆಯುರ್ವೇದದ ಬೇಡಿಕೆ ಹೆಚ್ಚಲಿದೆ: ಪದವಿ ಪ್ರದಾನ ಮಾಡಿದ ಕೇಂದ್ರ ಸರ್ಕಾರದ ಆಯುಷ್‌ ಸಚಿವಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್‌ ಕೊಟೆಚಾ ಅವರು ಮಾತನಾಡಿ, 2013 ರಲ್ಲಿ ಆಯುಷ್‌ ಸಚಿವಾಲಯ ಅಸ್ತಿತ್ವಕ್ಕೆ ಬಂದ ನಂತರ ಆಯುಷ್‌ ವಲಯದಲ್ಲಿ ಪುನಶ್ಚೇತನ ಉಂಟಾಗುತ್ತಿದೆ. ಆದರೆ ವೀರೇಂದ್ರ ಹೆಗ್ಗಡೆಯವರು 30 ವರ್ಷಗಳ ಮುಂಚೆಯೇ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಬೆಳವಣಿಗೆಗೆ ನಾಂದಿ ಹಾಡಿದ್ದರು. ಈ ತರಹದ ಆಲೋಚನೆಗಳು ಇಂತಹ ಯುಗಪುರುಷರಲ್ಲಿ ಮಾತ್ರ ಸಾಧ್ಯ. ಮುಂಬರುವ ದಿನಗಳಲ್ಲಿ ಅನೇಕ ದೇಶಗಳಲ್ಲಿ ಆಯುರ್ವೇದದ ಬೇಡಿಕೆ ಹೆಚ್ಚಲಿದೆ ಎಂದು ತಿಳಿಸಿದರು.

ಯುವ ವೈದ್ಯರಿಗೆ ವೃತ್ತಿ ಪರತೆ ಅಗತ್ಯ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಎಸ್‌.ಸಚ್ಚಿದಾನಂದ ಅವರು ಮಾತ ನಾಡಿ, ಯುವ ವೈದ್ಯರು ಮಾದರಿ ಜೀವನ ನಡೆಸ ಬೇಕು. ತಮ್ಮ ಜ್ಞಾನವನ್ನು ಮೊನಚುಗೊಳಿಸುತ್ತಾ, ಇತರೆ ತಜ್ಞ ವೈದ್ಯರೊಡನೆ ಚರ್ಚಿಸುತ್ತಾ, ರೋಗಿ ಗಳೊಡನೆ ಉತ್ತಮ ಬಾಂಧವ್ಯ ಇರಿಸಿಕೊಂಡು ವೃತ್ತಿ ಪರತೆ ಹೊಂದಬೇಕು. ನೀವು ಹಣದ ಹಿಂದೆ ಹೋಗದೇ ಅದೇ ನಿಮ್ಮನ್ನು ಹಿಂಬಾಲಿಸುವಂತೆ ಸಾರ್ಥಕ ಕಾಯಕ ಮಾಡಿ. ನಿಮ್ಮ ಮಾತೃ ವಿದ್ಯಾ ಸಂಸ್ಥೆಯೊಡನೆ ನಿರಂತರ ಸಂಪರ್ಕದಲ್ಲಿರುವುದು ಒಳಿತು ಎಂದು ಕಿವಿಮಾತು ಹೇಳಿದರು.

ದೇಶ, ವಿದೇಶಗಳಲ್ಲಿ ಪ್ರಖ್ಯಾತಿ: ಕಾಲೇಜಿನ ಪ್ರಾಂಶು ಪಾಲ ಡಾ. ಪ್ರಸನ್ನ ನರಸಿಂಹರಾವ್‌ ಮಾತನಾಡಿ, ಹಾಸನದ ಎಸ್‌ಡಿಎಂ ಆಯುರ್ವೇದ ಕಾಲೇಜು ದೇಶದ ಹಲವು ರಾಜ್ಯಗಳ ಮತ್ತು ವಿದೇಶಗಳ ವಿದ್ಯಾರ್ಥಿಗಳನ್ನು ಹೊಂದಿದೆ. ಆ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆದು ಹೋದ ನಂತರ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ವೈಶಿಷ್ಟ್ಯತೆಯ ಮೂಲಕ ಪ್ರಸಿದ್ಧಿ ಪಡೆದು ನಮ್ಮ ಸಂಸ್ಥೆಯ ಹೆಸರನ್ನು ವಿಶ್ವದೆಲ್ಲೆಡೆ ಹರಡುವುದು ಸಂತಸದ ವಿಷಯ ಎಂದರು.

ಈ ಪದವಿ ಪ್ರದಾನ ಸಮಾರಂಭದಲ್ಲಿ 68 ಬಿಎಎಂಎಸ್‌ ಪದವೀಧರರು, 93 ವಿವಿಧ ಸ್ನಾತಕೋತ್ತರ ವಿಭಾಗಗಳ ಪದವೀಧರರು, ಒಬ್ಬ ಪಿಎಚ್‌ಡಿ ಪದವೀಧರ ಗಣ್ಯರಿಂದ ಪದಪ್ರಮಾಣ ಪತ್ರ ಸ್ವೀಕರಿಸಿದರು.

ಈ ಸಮಾರಂಭದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ.ಗುರುದೀಪ್‌ಸಿಂಗ್‌, ಉಡುಪಿಯ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಬಿ.ರವಿಶಂಕರ್‌, ಬೆಂಗಳೂರಿನ ಎಸ್‌.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್‌ ಕುಂಜಾಲ್, ಉಜಿರೆಯ ಎಸ್‌.ಡಿ.ಎಂ. ಯೋಗ ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್‌ ಶೆಟ್ಟಿ, ಉಡುಪಿಯ ಎಸ್‌.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ್‌ ಆಚಾರ್ಯ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್‌ ಡಾ.ಯು. ಶೈಲಜಾ, ಶೈಕ್ಷಣಿಕ ವಿಭಾಗದ ಡೀನ್‌ ಡಾ.ಕೆ.ಜೆ.ಗಿರೀಶ್‌, ಹೆಚ್ಚುವರಿ ಡೀನ್‌ ಡಾ.ಪ್ರಕಾಶ್‌ ಹೆಗಡೆ ಹಾಗೂ ವೈದ್ಯಕೀಯ ಅಧೀಕ್ಷಕ‌ ಡಾ.ಮುರಳೀಧರ್‌ ಪಿ.ಪ್ರಜಾರ್‌ ಉಪಸ್ಥಿತರಿದ್ದರು. ಡಾ.ಹರಿಣಿ ಡಾ.ಗುರುಬಸವರಾಜ್‌ ಯಲಗಚ್ಚಿನ ನಿರೂಪಿಸಿದರು.

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.