ಆಯುರ್ವೇದ ಹೆಚ್ಚು ಜನರಿಗೆ ತಲುಪುವಂತಾಗಲಿ
ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಲಿ: ಡಾ.ವೀರೇಂದ್ರ ಹೆಗ್ಗ ಡೆ
Team Udayavani, May 12, 2019, 9:32 AM IST
ಹಾಸನ: ಯುವ ಆಯುರ್ವೇದ ವೈದ್ಯರು ನಿರಂತರ ಅಧ್ಯಯನ, ಸಂಶೋಧನೆ, ಸೇವಾ ಕಾರ್ಯದಲ್ಲಿ ತೊಡಗಿ ಆಯುರ್ವೇದವು ಹೆಚ್ಚು ಜನರಿಗೆ ತಲಪುವಂತೆ ಮಾಡಬೇಕು ಎಂದು ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದರು.
ನಗರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ (ಎಸ್ಡಿಎಂ) ಆಯುರ್ವೇದ ಕಾಲೇಜಿನ 22ನೇ ಪದವಿ ಪ್ರದಾನ ಸಮಾರಂಭವಾದ ಶಿಖಾನುಪ್ರವೇಶ ದಲ್ಲಿ ಗುರುವಂದನೆ ಸ್ವೀಕರಿಸಿ ಮಾತನಾಡಿದರು.
ಮನೋದೈಹಿಕ ಕಾಯಿಲೆ ನಿವಾರಣೆ: ಶರೀರ ಮನಸ್ಸುಗಳೆರಡರ ಅಸಮತೋಲನವನ್ನು ಸರಿದೂಗಿ ಸುವ ಆಯುರ್ವೇದ ವಿಜ್ಞಾನವು ಇಂದಿನ ದಿನಮಾನ ಗಳ ಮನೋದೈಹಿಕ ಕಾಯಿಲೆಗಳ ತಡೆಗಟ್ಟುವಿಕೆ ನಿವಾರಿಸುವಿಕೆಗೆ ಅತ್ಯವಶ್ಯಕ ಅನಿವಾರ್ಯವಾಗಿದೆ. ಆದ್ದರಿಂದ ಆಯುರ್ವೇದ ಹೆಚ್ಚು ಜನರಿಗೆ ತಲಪಬೇಕು ಎಂದರು.
ಎಸ್ಡಿಎಂ ಶಿಕ್ಷಣ ಸಂಸ್ಥೆಯಲ್ಲಿ ಓದಿದ ವಿದ್ಯಾರ್ಥಿ ಗಳು ವಿಶ್ವದೆಲ್ಲೆಡೆ ಆಯುರ್ವೇದ ವಲಯದಲ್ಲಿ ಅತ್ಯುತ್ತಮ ಕಾರ್ಯನಿರ್ವಹಿಸುತ್ತಿರುವುದು ನನಗೆ ಸಂತಸ ಉಂಟುಮಾಡಿದೆ ಎಂದು ಹೇಳಿದರು.
ಆಯುರ್ವೇದದ ಬೇಡಿಕೆ ಹೆಚ್ಚಲಿದೆ: ಪದವಿ ಪ್ರದಾನ ಮಾಡಿದ ಕೇಂದ್ರ ಸರ್ಕಾರದ ಆಯುಷ್ ಸಚಿವಾಲಯದ ಕಾರ್ಯದರ್ಶಿ ವೈದ್ಯ ರಾಜೇಶ್ ಕೊಟೆಚಾ ಅವರು ಮಾತನಾಡಿ, 2013 ರಲ್ಲಿ ಆಯುಷ್ ಸಚಿವಾಲಯ ಅಸ್ತಿತ್ವಕ್ಕೆ ಬಂದ ನಂತರ ಆಯುಷ್ ವಲಯದಲ್ಲಿ ಪುನಶ್ಚೇತನ ಉಂಟಾಗುತ್ತಿದೆ. ಆದರೆ ವೀರೇಂದ್ರ ಹೆಗ್ಗಡೆಯವರು 30 ವರ್ಷಗಳ ಮುಂಚೆಯೇ ಆಯುರ್ವೇದ, ಯೋಗ, ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಬೆಳವಣಿಗೆಗೆ ನಾಂದಿ ಹಾಡಿದ್ದರು. ಈ ತರಹದ ಆಲೋಚನೆಗಳು ಇಂತಹ ಯುಗಪುರುಷರಲ್ಲಿ ಮಾತ್ರ ಸಾಧ್ಯ. ಮುಂಬರುವ ದಿನಗಳಲ್ಲಿ ಅನೇಕ ದೇಶಗಳಲ್ಲಿ ಆಯುರ್ವೇದದ ಬೇಡಿಕೆ ಹೆಚ್ಚಲಿದೆ ಎಂದು ತಿಳಿಸಿದರು.
ಯುವ ವೈದ್ಯರಿಗೆ ವೃತ್ತಿ ಪರತೆ ಅಗತ್ಯ: ರಾಜೀವ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವ ವಿದ್ಯಾನಿಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಅವರು ಮಾತ ನಾಡಿ, ಯುವ ವೈದ್ಯರು ಮಾದರಿ ಜೀವನ ನಡೆಸ ಬೇಕು. ತಮ್ಮ ಜ್ಞಾನವನ್ನು ಮೊನಚುಗೊಳಿಸುತ್ತಾ, ಇತರೆ ತಜ್ಞ ವೈದ್ಯರೊಡನೆ ಚರ್ಚಿಸುತ್ತಾ, ರೋಗಿ ಗಳೊಡನೆ ಉತ್ತಮ ಬಾಂಧವ್ಯ ಇರಿಸಿಕೊಂಡು ವೃತ್ತಿ ಪರತೆ ಹೊಂದಬೇಕು. ನೀವು ಹಣದ ಹಿಂದೆ ಹೋಗದೇ ಅದೇ ನಿಮ್ಮನ್ನು ಹಿಂಬಾಲಿಸುವಂತೆ ಸಾರ್ಥಕ ಕಾಯಕ ಮಾಡಿ. ನಿಮ್ಮ ಮಾತೃ ವಿದ್ಯಾ ಸಂಸ್ಥೆಯೊಡನೆ ನಿರಂತರ ಸಂಪರ್ಕದಲ್ಲಿರುವುದು ಒಳಿತು ಎಂದು ಕಿವಿಮಾತು ಹೇಳಿದರು.
ದೇಶ, ವಿದೇಶಗಳಲ್ಲಿ ಪ್ರಖ್ಯಾತಿ: ಕಾಲೇಜಿನ ಪ್ರಾಂಶು ಪಾಲ ಡಾ. ಪ್ರಸನ್ನ ನರಸಿಂಹರಾವ್ ಮಾತನಾಡಿ, ಹಾಸನದ ಎಸ್ಡಿಎಂ ಆಯುರ್ವೇದ ಕಾಲೇಜು ದೇಶದ ಹಲವು ರಾಜ್ಯಗಳ ಮತ್ತು ವಿದೇಶಗಳ ವಿದ್ಯಾರ್ಥಿಗಳನ್ನು ಹೊಂದಿದೆ. ಆ ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆದು ಹೋದ ನಂತರ ತಮ್ಮ ತಮ್ಮ ರಾಜ್ಯಗಳಲ್ಲಿ ತಮ್ಮ ವೈಶಿಷ್ಟ್ಯತೆಯ ಮೂಲಕ ಪ್ರಸಿದ್ಧಿ ಪಡೆದು ನಮ್ಮ ಸಂಸ್ಥೆಯ ಹೆಸರನ್ನು ವಿಶ್ವದೆಲ್ಲೆಡೆ ಹರಡುವುದು ಸಂತಸದ ವಿಷಯ ಎಂದರು.
ಈ ಪದವಿ ಪ್ರದಾನ ಸಮಾರಂಭದಲ್ಲಿ 68 ಬಿಎಎಂಎಸ್ ಪದವೀಧರರು, 93 ವಿವಿಧ ಸ್ನಾತಕೋತ್ತರ ವಿಭಾಗಗಳ ಪದವೀಧರರು, ಒಬ್ಬ ಪಿಎಚ್ಡಿ ಪದವೀಧರ ಗಣ್ಯರಿಂದ ಪದಪ್ರಮಾಣ ಪತ್ರ ಸ್ವೀಕರಿಸಿದರು.
ಈ ಸಮಾರಂಭದಲ್ಲಿ ಕಾಲೇಜಿನ ಸ್ನಾತಕೋತ್ತರ ವಿಭಾಗದ ನಿರ್ದೇಶಕ ಡಾ.ಗುರುದೀಪ್ಸಿಂಗ್, ಉಡುಪಿಯ ಸಂಶೋಧನಾ ಸಂಸ್ಥೆಯ ಸಂಸ್ಥಾಪಕ ನಿರ್ದೇಶಕ ಡಾ.ಬಿ.ರವಿಶಂಕರ್, ಬೆಂಗಳೂರಿನ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಗದೀಶ್ ಕುಂಜಾಲ್, ಉಜಿರೆಯ ಎಸ್.ಡಿ.ಎಂ. ಯೋಗ ಪ್ರಕೃತಿ ಚಿಕಿತ್ಸಾ ವಿಜ್ಞಾನಗಳ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಶಾಂತ್ ಶೆಟ್ಟಿ, ಉಡುಪಿಯ ಎಸ್.ಡಿ.ಎಂ. ಆಯುರ್ವೇದ ಕಾಲೇಜಿನ ಪ್ರಾಂಶುಪಾಲ ಡಾ.ಜಿ.ಶ್ರೀನಿವಾಸ್ ಆಚಾರ್ಯ, ಕಾಲೇಜಿನ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ವಿಭಾಗದ ಡೀನ್ ಡಾ.ಯು. ಶೈಲಜಾ, ಶೈಕ್ಷಣಿಕ ವಿಭಾಗದ ಡೀನ್ ಡಾ.ಕೆ.ಜೆ.ಗಿರೀಶ್, ಹೆಚ್ಚುವರಿ ಡೀನ್ ಡಾ.ಪ್ರಕಾಶ್ ಹೆಗಡೆ ಹಾಗೂ ವೈದ್ಯಕೀಯ ಅಧೀಕ್ಷಕ ಡಾ.ಮುರಳೀಧರ್ ಪಿ.ಪ್ರಜಾರ್ ಉಪಸ್ಥಿತರಿದ್ದರು. ಡಾ.ಹರಿಣಿ ಡಾ.ಗುರುಬಸವರಾಜ್ ಯಲಗಚ್ಚಿನ ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ