ಬಹುಬೆಳೆ ಬೇಸಾಯ: ರೈತನಿಗೆ ಉತ್ತಮ ಆದಾಯ


Team Udayavani, Feb 17, 2020, 3:00 AM IST

bahubel-besaya

ಹಾಸನ: ಜಿಲ್ಲೆಯ ಹೊಳೆನರಸೀಪುರ ತಾಲೂಕು, ಕಸಬಾ ಹೋಬಳಿಯ ಯಲೇಚಾಗಹಳ್ಳಿ ಗ್ರಾಮದ 21 ವರ್ಷದ ಯುವ ರೈತ ರವಿ ಅವರು ತಮ್ಮ 6 ಎಕರೆ ಜಮೀನಿನಲ್ಲಿ ವಿವಿಧ ತೋಟಗಾರಿಕೆ ಬೆಳೆಗಳನ್ನು ಬೆಳೆದು ವಾರ್ಷಿಕ 20 ಲಕ್ಷ ರೂ. ಲಾಭ ಗಳಿಸುತ್ತಿದ್ದಾರೆ.

ರವಿ ಅವರ ತಂದೆ ಮಲ್ಲಪ್ಪ ಅವರು ಈ ಮೊದಲು ತಮ್ಮ ಜಮೀನಿನಲ್ಲಿ ರಾಗಿ ಬೆಳೆಯುತ್ತಿದ್ದರು. ಇದರಿಂದ ಅವರಿಗೆ ಒಟ್ಟು ಆದಾಯ 5 ಲಕ್ಷ ರೂ. ಬರುತ್ತಿತ್ತು. ತದನಂತರ 2011-2012 ನೇ ಸಾಲಿನ ನಂತರದ ದಿನಗಳಲ್ಲಿ ರವಿ ಅವರು ತೋಟಗಾರಿಕೆ ಇಲಾಖೆಯ ಅಧಿಕಾರಿಗಳಿಂದ ತಾಂತ್ರಿಕ ಮಾಹಿತಿ ಪಡೆದು ವಿವಿಧ ತೋಟಗಾರಿಕೆ ಬೆಳೆಗಳಾದ ಟೊಮೆಟೋವನ್ನು ಅರ್ಧ ಎಕರೆಯಲ್ಲಿ, ಚೆಂಡು ಹೂವು -2 ಎಕರೆ, ಬೀನ್ಸ್‌- ಅರ್ಧ ಎಕರೆ, ಎಲೆಕೋಸು-2 ಎಕರೆ ಮತ್ತು 75 ತೆಂಗು ಗಿಡಗಳನ್ನು ಬೆಳೆಯಲು ಮುಂದಾದರು.

ಕೃಷಿ ಸಿಂಚಾಯಿ ಯೋಜನೆ ನೆರವು: ತೋಟಗಾರಿಕೆ ಇಲಾಖೆಯಿಂದ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ 2018-19ನೇ ಸಾಲಿನಲ್ಲಿ 90 ಸಾವಿರ ರೂ. ಗಳ ಸಹಾಯಧನ ಪಡೆದ ರವಿ ಅವರು 2.5 ಎಕರೆಯಲ್ಲಿ ಎಲೆಕೋಸು ಮತ್ತು ಟೊಮೆಟೋ ಬೆಳೆಗಳನ್ನು ಬೆಳೆದಿದ್ದಾರೆ. ಹಾಗೆಯೇ 2018-19 ನೇ ಸಾಲಿನಲ್ಲಿ ಮಹಾತ್ಮಗಾಂಧಿ ಉದ್ಯೋಗ ಖಾತರಿ ಯೋಜನೆಯಡಿಯಲ್ಲಿ 25ಸಾವಿರ ರೂ. ಸಹಾಯಧನ ವನ್ನು 75 ತೆಂಗಿನ ಗಿಡಗಳ ನಿರ್ವಹಣೆಗೆ ಗುಂಡಿ ತೆಗೆಯುವುದು, ನಾಟಿ ಮಾಡುವುದು, ನೀರು ಹಾಯಿಸುವುದು, ಜೊತೆಗೆ ಕಳೆ ನಿಯಂತ್ರಣಕ್ಕೆ ಬಳಸಿದ್ದಾರೆ.

ರಾಷ್ಟ್ರೀಯ ತೋಟಗಾರಿಕೆ ಮಿಷನ್‌ ಅಡಿಯಲ್ಲಿ ಹೈಬ್ರಿಡ್‌ ತರಕಾರಿ ಬೇಸಾಯಕ್ಕೆ ಸಹಾಯಧನವಾಗಿ 1,500 ರೂ., ಹೈಬ್ರಿಡ್‌ ಟೊಮೆಟೋ ಮತ್ತು ಕ್ಯಾಪ್ಸಿಕಂ ಬೆಳೆಯ ನೆಲಹೊದಿಕೆಗೆ 6,400 ರೂ. ಸಹಾಯಧನ ಪಡೆದಿದ್ದಾರೆ. ಇಲಾಖೆಯ ಯೋಜನೆಗಳ ಸಹಾಯಧನದಿಂದ ಆರ್ಥಿಕ ನೆರವು ಪಡೆದು ಯಶಸ್ವಿ ರೈತನಾಗಿ ರವಿ ಹೊರಹೊಮ್ಮಿದ್ದಾರೆ.

ಕಡಿಮೆ ಖರ್ಚು- ಇಳುವರಿ ಹೆಚ್ಚು: ಹಿಂದೆ ರಾಗಿ ಮತ್ತು ಟೊಮೆಟೋ ಬೆಳೆಗಳನ್ನು ಬೆಳೆಯುತ್ತಿದ್ದಾಗ ವೈಜ್ಞಾನಿಕ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಂಡಿರಲಿಲ್ಲ, ಆದಾಯ ಬಂದರೂ ಖರ್ಚು ತುಂಬಾ ಇರುತ್ತಿದ್ದರಿಂದ ಹೆಚ್ಚಿನ ಆದಾಯವನ್ನು ಪಡೆಯಲು ಸಾಧ್ಯವಾಗುತ್ತಿರಲಿಲ್ಲ. ನಂತರ ತೋಟಗಾರಿಕೆ ಇಲಾಖೆಯ ಮಾರ್ಗದರ್ಶನ ಪಡೆದು ಹನಿ ನೀರಾವರಿ ಅಳವಡಿಕೆಯಿಂದ ನೀರಿನ ಸದ್ಭಳಕೆ, ಭೂಮಿಯಲ್ಲಿ ತೇವಾಂಶ ಕಾಪಾಡಲು ಮತ್ತು ಕಳೆ ನಿಯಂತ್ರಿಸಲು ನೆಲೆಹೊದಿಕೆ ಬಳಕೆಯಿಂದ ಕೂಲಿ ಆಳುಗಳ ಖರ್ಚು ಕಡಿಮೆಯಾಗುತ್ತದೆ ಮತ್ತು ಹೈಬ್ರಿಡ್‌ ತರಕಾರಿ ಬೀಜಗಳ ಬಳಕೆಯಿಂದ ಉತ್ತಮ ಇಳುವರಿ ಮತ್ತು ಹೆಚ್ಚಿನ ಆದಾಯವನ್ನು ಹೆಚ್ಚಿಸಿಕೊಂಡಿದ್ದಾರೆ.

ಬಹು ಬೆಳೆ ಪದ್ಧತಿ ಲಾಭದಾಯಕ: ಇಲಾಖೆಯ ಹೊಸ ತಾಂತ್ರಿಕತೆಗಳು ಹಾಗೂ ಮಾರ್ಗದರ್ಶನದಿಂದಲೇ ನಾನು ಹೆಚ್ಚಿನ ಆದಾಯಗಳಿಸಲು ಸಹಾಯವಾಯಿತು. ಒಟ್ಟು 6 ಎಕರೆಯಿಂದ 20 ಲಕ್ಷ ರೂಗಳ ಆದಾಯವನ್ನು ಪಡೆಯುತ್ತಿದ್ದೇನೆ. ಒಂದು ಬೆಳೆಯನ್ನು ನಂಬಿ ಕೃಷಿ ಮಾಡುವುದು ಸೂಕ್ತವಾದ ಬೇಸಾಯ ಪದ್ಧತಿಯಲ್ಲ, ನಾಲ್ಕೈದು ಬೆಳೆ ಮಾಡಿದರೆ ಒಂದಿಲ್ಲ ಒಂದಕ್ಕೆ ಉತ್ತಮ ಬೆಲೆ ಸಿಕ್ಕಿ ಆದಾಯ ಸ್ಥಿರವಾಗಿರುತ್ತದೆ, ಜಮೀನನ್ನು ವೈಜ್ಞಾನಿಕವಾಗಿ ವಿಂಗಡಣೆ ಮಾಡಿ ಬಹು ಬೆಳೆ ಮಾಡಿದರೆ ನಷ್ಟದ ಮಾತಿಲ್ಲ. ರೈತರು ಇಲಾಖೆಯ ಸದುಪಯೋಗ ಪಡೆದುಕೊಳ್ಳಬೇಕು ಎಂಬುದು ರವಿ ಅವರ ಸಲಹೆ.

ಟಾಪ್ ನ್ಯೂಸ್

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

23

ಹೂಡಿಕೆದಾರರಿಗೆ ಲಾಭಾಂಶ ನೀಡದ ಆರೋಪ ʼManjummel Boysʼ ನಿರ್ಮಾಪಕರ ವಿರುದ್ದ ದೂರು ದಾಖಲು

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ

21

ಹೊಸ ಚಿತ್ರಕ್ಕೆ ಮಹೇಶ್‌ ಬಾಬು ರೆಡಿ: ‘ವೀರ ಮದಕರಿ’ ಬಾಲ ಕಲಾವಿದೆ ಈಗ ನಾಯಕಿ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

K. S. Eshwarappa ವಿರುದ್ಧ ಶಿಸ್ತು ಕ್ರಮ: ಬಿ.ವೈ. ವಿಜಯೇಂದ್ರ

9

Lok Sabha Election: ಕಾಂಗ್ರೆಸ್‌ನಲ್ಲಿ ಒಗ್ಗಟ್ಟಿನ ಜಪ; ಮೈತ್ರಿಗೆ ಆತಂಕ 

banHassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

Hassan: ಬಿಜೆಪಿ ಮುಖಂಡನ ಮೇಲೆ ಹಲ್ಲೆ: ಪ್ರೀತಂ ಗೌಡ ಬೆಂಬಲಿಗರಿಂದ ಹಲ್ಲೆ ನಡೆದಿರುವ ಶಂಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

24

OTT Release: ವಿಜಯ್‌ ದೇವರಕೊಂಡ ʼಫ್ಯಾಮಿಲಿ ಸ್ಟಾರ್‌ʼ ಓಟಿಟಿ ರಿಲೀಸ್‌ಗೆ ಡೇಟ್‌ ಫಿಕ್ಸ್

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

Theft ಶಿರೂರು: ಜ್ಯುವೆಲ್ಲರಿ ಅಂಗಡಿ ಶಟರ್‌ ಮುರಿದು ಕಳ್ಳತನ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

90 ದಿನದಲ್ಲಿ ನೇಹಾ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿದೆ..: ರಣದೀಪ್ ಸಿಂಗ್ ಸುರ್ಜೇವಾಲಾ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

ನಮ್ಮ ಆರಾಧನ ಪದ್ಧತಿ ಯುವ ಪೀಳಿಗೆಗೆ ಪರಿಚಯಿಸುವ ಅಗತ್ಯವಿದೆ: ರಾಕೇಶ್‌ ಶೆಟ್ಟಿ ಬೆಳ್ಳಾರೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.