ಪುರಸಭೆ ಬಜೆಟ್‌ ಪೂರ್ವಭಾವಿ ಸಭೆಗೆ ನೀರಸ ಪ್ರತಿಕ್ರಿಯೆ


Team Udayavani, Feb 16, 2022, 2:45 PM IST

ಪುರಸಭೆ ಬಜೆಟ್‌ ಪೂರ್ವಭಾವಿ ಸಭೆಗೆ ನೀರಸ ಪ್ರತಿಕ್ರಿಯೆ

ಸಕಲೇಶಪುರ: ಪಟ್ಟಣದ ಪುರಸಭೆಯಲ್ಲಿ ಕರೆಯಲಾಗಿದ್ದ ಪುರಸಭೆಯ ಬಜೆಟ್‌ ಪೂರ್ವಭಾವಿ ಸಭೆಗೆ ನಾಗರಿಕರು ಹಾಗೂ ಸಂಘ ಸಂಸ್ಥೆಗಳಿಂದ ನೀರಸ ಪ್ರತಿಕ್ರಿಯೆ ವ್ಯಕ್ತವಾಯಿತು.

ಪಟ್ಟಣದ ಪುರಸಭಾ ಸಭಾಂಗಣದಲ್ಲಿ ಪುರಸಭಾ ಅಧ್ಯಕ್ಷ ಕಾಡಪ್ಪನವರ ಅಧ್ಯಕ್ಷತೆಯಲ್ಲಿ ಮಂಗಳವಾರ ನಡೆದ ಬಜೆಟ್‌ ಪೂರ್ವಭಾವಿ ಸಭೆಯಲ್ಲಿ ಅಭಿಪ್ರಾಯ ನೀಡಲು ಬೆರಳೆಣಿಕೆ ಸಾರ್ವಜನಿಕರುಹಾಜರಾಗಿದ್ದು ಸಭೆಯ ವರದಿ ಮಾಡಲು ಹೋಗಿದ್ದ ಪತ್ರಕರ್ತರೇ ಪಟ್ಟಣದ ಅಭಿವೃದ್ಧಿ ಕುರಿತು ಬಜೆಟ್‌ನಲ್ಲಿ ಸೇರಿಸಬೇಕಾದ ವಿಷಯಗಳ ಕುರಿತು ಸಲಹೆ ನೀಡಿದರು.

ಪ್ರಚಾರ ಮಾಡಿ: ಸಭೆಯಲ್ಲಿ ಹಾಜರಿದ್ದ ಪತ್ರಕರ್ತರು ಮಾತನಾಡಿ, ಈ ಹಿಂದೆ ಬಜೆಟ್‌ ಸಭೆಗಳಿಗೆ ನೂರಾರು ಜನ ಸಾರ್ವಜನಿಕರು ಹಾಜರಾಗಿ ತಮ್ಮ ಅಭಿಪ್ರಾಯ ಹೇಳುತ್ತಿದ್ದರು. ಈಹಿನ್ನೆಲೆ ಪುರಭವನದಲ್ಲಿ ಬಜೆಟ್‌ ಪೂರ್ವಭಾವಿ ಸಭೆಮಾಡಲಾಗುತ್ತಿತ್ತು. ಆದರೆ, ಇತ್ತೀಚಿನ ವರ್ಷಗಳಲ್ಲಿ ಪುರಸಭಾ ಸಭಾಂಗಣದಲ್ಲೇ ಸಭೆ ಮಾಡಿದರೂ ಬೆರಳೆಣಿಕೆಯಷ್ಟು ಸಾರ್ವಜನಿಕರು ಸಭೆಗೆಹಾಜರಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನಬಜೆಟ್‌ ಪೂರ್ವಭಾವಿ ಸಭೆ ಮಾಡುವ ಮೊದಲು ಆಟೋದಲ್ಲಿ ಧ್ವನಿವರ್ಧಕದ ಮುಖಾಂತರ ಪ್ರಚಾರ ಮಾಡಬೇಕೆಂದು ಹೇಳಿದರು.

ಮಾದರಿ ಬಜೆಟ್‌ ಉದ್ದೇಶ: ಸಭೆಯಲ್ಲಿ ಹಾಜರಿದ್ದ ಪುರಸಭಾ ಸದಸ್ಯರು ಹಾಗೂ ಸಾರ್ವಜನಿಕರುತಮ್ಮ ಅಭಿಪ್ರಾಯ ಮಂಡಿಸಿದರು. ಸಭೆ ಮುಕ್ತಾಯಗೊಂಡ ನಂತರ ಪುರಸಭಾ ಅಧ್ಯಕ್ಷ ಕಾಡಪ್ಪ ಮಾತನಾಡಿ, ಮಾದರಿ ಬಜೆಟ್‌ ಮಂಡಣೆ ಮಾಡುವುದು ನನ್ನ ಉದ್ದೇಶ. ಈ ನಿಟ್ಟಿನಲ್ಲಿಮತ್ತೂಂದು ಬಜೆಟ್‌ ಪೂರ್ವಭಾವಿ ಸಭೆಕರೆಯಲಾಗುತ್ತದೆ. ಬಜೆಟ್‌ನಲ್ಲಿ ಪಟ್ಟಣವನ್ನು ಮಾದರಿ ಪಟ್ಟಣವನ್ನಾಗಿಸಲು ಕೈಗೊಳ್ಳಬೇಕಾದ ಎಲ್ಲಾ ವಿಷಯಗಳನ್ನು ಗಮನದಲ್ಲಿಟ್ಟು ಬಜೆಟ್‌ ಮಂಡಿಸುತ್ತೇನೆ ಎಂದು ಹೇಳಿದರು. ಪುರಸಭೆ ಉಪಾಧ್ಯಕ್ಷೆ ಜ್ಯೋತಿ, ಮುಖ್ಯಾಧಿಕಾರಿ ಸ್ಟೀಫ‌ನ್‌ ಪ್ರಕಾಶ್‌ ಮತ್ತಿತರರು ಉಪಸ್ಥಿತರಿದ್ದರು.

 

ಹಲವು ಅಭಿಪ್ರಾಯ :  ಹಲವು ದಶಕಗಳ ಬೇಡಿಕೆಗಳಾದ ಪಟ್ಟಣಕ್ಕೆಪ್ರವೇಶ ಮಾಡುವ ಪ್ರಮುಖ ದ್ವಾರಗಳಲ್ಲಿ ಸ್ವಾಗತ ಫ‌ಲಕ, ಲೇಔಟ್‌ಗಳಲ್ಲಿ ಸಾರ್ವಜನಿಕಬಳಕೆ ನಿವೇಶನ ಸದ್ಭಳಕೆ ಮಾಡುವುದು,ಪುರಭವನಕ್ಕೆ ಸುಣ್ಣ ಬಣ್ಣ, ನಾಡ ಕಚೇರಿ ದುರಸ್ತಿ, ನಿವೇಶನ ರಹಿತರಿಗೆ ನಿವೇಶನ, ಎಸ್ಸಿ-ಎಸ್ಟಿಅಭಿವೃದ್ಧಿಗೆ ಕ್ರಮ, ಅತಿವೃಷ್ಟಿ ವೇಳೆ ನಾಗರಿಕರಿಗೆಪರಿಹಾರ, ಖಾಲಿ ಇರುವ ಪುರಸಭಾ ಮಳಿಗೆಹರಾಜು ಮಾಡುವುದು, ಅನುಮತಿ ಇಲ್ಲದೆಭಿತ್ತಿ ಪತ್ರ ಅಳವಡಿಸುವವರ ವಿರುದ್ಧ ಕ್ರಮ ಜರುಗಿಸುವುದು, ಘನತ್ಯಾಜ್ಯ ವಿಲೇವಾರಿಗೆ ಕ್ರಮ ಜರುಗಿಸುವುದು, ಪಟ್ಟಣದ ತೇಜಸ್ವಿವೃತ್ತದ ಅಗಲಿಕರಣ ಯೋಜನೆ ಸೇರಿದಂತೆಇನ್ನು ಹಲವು ವಿಷಯಗಳ ಕುರಿತು ಸದಸ್ಯರು,ಪತ್ರಕರ್ತರು, ನಾಗರಿಕರು ಅಭಿಪ್ರಾಯ ಮಂಡಿಸಿದ್ದಾರೆ. ಈ ಮೇಲ್ಕಂಡ ವಿಚಾರಗಳನ್ನು ಬಜೆಟ್‌ನಲ್ಲಿ ಅಳವಡಿಸಲು ಕ್ರಮ ಕೈಗೊಳ್ಳುತ್ತೇನೆ ಎಂದು ಪುರಸಭಾ ಅಧ್ಯಕ್ಷ ಕಾಡಪ್ಪ ತಿಳಿಸಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Mekedatu Dam ನಿರ್ಮಾಣಕ್ಕೆ ಕೇಂದ್ರMekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡಯುವೆ: ದೇವೇಗೌಡ

Mekedatu Dam ನಿರ್ಮಾಣಕ್ಕೆ ಕೇಂದ್ರದ ಅನುಮತಿ ಪಡೆಯುವೆ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.