ನನ್ನ ಸಾಧನೆ ಪ್ರಜಾಪ್ರಭುತ್ವದ ವಿಸ್ಮಯ
Team Udayavani, Jan 25, 2018, 4:17 PM IST
ಹಾಸನ: ರಾಜಕಾರಣ, ಸಾಹಿತ್ಯ ಕ್ಷೇತ್ರದಲ್ಲಿ ನನ್ನ ಸಾಧನೆ ಪ್ರಜಾಪ್ರಭುತ್ವದ ವಿಸ್ಮಯ. ವಿಶಾಲ ಹೃದಯವಂತರು
ದೇಶದಲ್ಲಿದ್ದಾರೆಂಬುದಕ್ಕೆ ನನಗೆ ಸಿಕ್ಕ ಅವಕಾಶ, ಪ್ರೋತ್ಸಾಹವೇ ಸಾಕ್ಷಿ ಎಂದು ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಕವಿ ಎಂ.ವೀರಪ್ಪ ಮೊಯ್ಲಿ ನುಡಿದರು.
ಶ್ರೀಕ್ಷೇತ್ರ ಶ್ರವಣಬೆಳಗೊಳದ ಗೊಮ್ಮಟ ನಗರದ ಸಭಾಮಂಟಪದಲ್ಲಿ ಬುಧವಾರ ನಡೆದ ತಮ್ಮ “ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ’ ಮಹಾಕಾವ್ಯದ ಲೋಕಾರ್ಪಣೆ ನಂತರ ಮಾತನಾಡಿದರು.
ಕಾರ್ಕಳ ವಿಧಾನಸಭಾ ಕ್ಷೇತ್ರದಿಂದ 6 ಬಾರಿ ವಿಧಾನಸಭೆಗೆ ಆಯ್ಕೆಯಾಗಿ ಮುಖ್ಯಮಂತ್ರಿ ಹುದ್ದೆಗೇರುವವರೆಗೆ, ಸಂಪರ್ಕ, ಸಂಬಂಧವೇ ಇಲ್ಲದ, ನನ್ನ ಸಮುದಾಯದಲ್ಲಿ ನಾನೊಬ್ಬನೇ ಶಾಸಕನಾಗಿದ್ದರೂ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ 2 ಬಾರಿ ಸಂಸದನಾಗಿ ಕೇಂದ್ರ ಸರ್ಕಾರದಲ್ಲಿ ನಾಲ್ಕೈದು ಖಾತೆಯ ಸಚಿವನಾಗಿ ಸೇವೆ ಸಲ್ಲಿಸುವ ಅವಕಾಶ ಲಭಿಸಿತು. 4 ಕಾದಂಬರಿ, 3 ನಾಟಕ, 3 ಮಹಾಕಾವ್ಯ ರಚನೆಯ ಮೂಲಕ ಸಾರಸ್ವತ ಲೋಕದಲ್ಲಿ ಮಾಡಿದ ಸಾಧನೆ ಧರ್ಮಸ್ಥಳದ ಡಾ.ವೀರೇಂದ್ರಹೆಗ್ಗಡೆ, ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಶ್ರೀ ಚಾರುಕೀರ್ತಿ ಸ್ವಾಮೀಜಿಯವರ ಅನುಗ್ರಹದಿಂದ ಸಾಧ್ಯವಾಗಿದೆ ಎಂದು ಹೇಳಿದರು.
ಆತ್ಮಚರಿತ್ರೆ ಬರೆಯಲ್ಲ: ಇಷ್ಟೆಲ್ಲಾ ಸಾಹಿತ್ಯ ಕೃಷಿ, ರಾಜಕೀಯ ಕ್ಷೇತ್ರದಲ್ಲಿನ ಸಾಧನೆಯನ್ನು ಗುರ್ತಿಸಿರುವ ಕೆಲವರು ಆತ್ಮಚರಿತ್ರೆ ಬರೆಯ ಬೇಕೆಂದು ಸಲಹೆ ನೀಡಿದ್ದಾರೆ. ಆದರೆ ನನ್ನ ಆತ್ಮಚರಿತ್ರೆ ಬರೆಯುವುದಿಲ್ಲ. ನನ್ನ ಬದುಕೇ ಆತ್ಮಚರಿತ್ರೆ, ನಾನು ಬರೆದ ಕಾವ್ಯ, ಕಾದಂಬರಿಗಳೇ ಆತ್ಮಚರಿತ್ರೆ. ಜೈನಕಾಶಿಯೆಂದೇ ಕರೆಯವ ಮೂಡಬಿದಿರೆಯವನಾದ ನನ್ನ ಬಾಲ್ಯದಿಂದಲೂ ಶ್ರೀ ಬಾಹುಬಲಿಸ್ವಾಮಿ ನನ್ನ ಆಶಯದಲ್ಲಿ ನೆಲೆ ನಿಂತಿದ್ದಾನೆ.
ಶ್ರವಣಬೆಳಗೊಳದ ವಿಂಧ್ಯಗಿರಿಯಲ್ಲಿ ಬಾಹುಬಲಿ ನೆಲೆ ನಿಲ್ಲಬೇಕಾದರೆ ಚಾವುಂಡರಾಯನ ತಾಯಿಯ ಕನಸಿನಲ್ಲಿ
ಕಾಡಿದಂತೆ ನನ್ನನ್ನೂ ಬಾಹುಬಲಿ ಕಾಡಿದ್ದರಿಂದಲೇ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ರಚನೆ ನನ್ನಿಂದ ಸಾಧ್ಯವಾಗಿದೆ ಎಂದರು.
ಜಿಲ್ಲಾ ಉಸ್ತುವಾರಿ ಸಚಿವ ಎ.ಮಂಜು ಮಾತನಾಡಿ, ಎಂ.ವೀರಪ್ಪಮೊಯ್ಲಿಯವರ ಶ್ರೀ ಬಾಹುಬಲಿ ಅಹಿಂಸಾ ದಿಗ್ವಿಜಯಂ ಮಹಾಕಾವ್ಯ ಅಭೂತಪೂರ್ವ ಕೃತಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Lok sabha Constituency: ಪ್ರಜ್ವಲ್ ರೇವಣ್ಣ ನಾಮಪತ್ರ ಸಲ್ಲಿಕೆ
BJP-JDS; 28 ಲೋಕಸಭಾ ಕ್ಷೇತ್ರಗಳಲ್ಲೂ ಚುನಾವಣಾ ಪ್ರಚಾರ ನಡೆಸುವೆ: ಎಚ್ಡಿಡಿ
Lok Sabha Election;ಹಾಸನದಲ್ಲಿ ನಾಮಪತ್ರ ಅರ್ಜಿಗೆ ಪೂಜೆ: ಪ್ರೀತಂ ಗೌಡ ಬೆಂಬಲಿಗನ ಹೊಸ ವರಸೆ
Lok Sabha elections: ಬೇಲೂರು; ಕೈ ಒಳಜಗಳ, ಜೆಡಿಎಸ್ಗೆ ಲಾಭ?
Hassan; ಚೆನ್ನಿಗರಾಯಸ್ವಾಮಿಗೆ ಪೂಜೆ ಸಲ್ಲಿಸಿ ಪ್ರಜ್ವಲ್ ರೇವಣ್ಣ ಪ್ರಚಾರಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA