ರಾಷ್ಟ್ರೀಕೃತ ಬ್ಯಾಂಕ್‌ ಸಾಲಮನ್ನಾ ನಾಡಿದ್ದು


Team Udayavani, Aug 14, 2018, 5:15 AM IST

ban14081.jpg

ಹಾಸನ: ರೈತರು ಸಹಕಾರಿ ಸಂಘಗಳಲ್ಲಿ ಮಾಡಿದ್ದ 10,734 ಕೋಟಿ ರೂ. ಬೆಳೆಸಾಲದ ಪೈಕಿ 9,448 ಕೋಟಿ ರೂ. ಮನ್ನಾ ಮಾಡಿ ಈಗಾಗಲೇ ಆದೇಶ ಹೊರಡಿಸಲಾಗಿದೆ. ಇನ್ನು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ರೈತರು ಮಾಡಿರುವ ಸಾಲದಲ್ಲಿ 2 ಲಕ್ಷರೂ.ವರೆಗಿನ ಸಾಲವನ್ನು ಮನ್ನಾ ಮಾಡುವ ಆದೇಶವನ್ನು ಗುರುವಾರ(ಆ.16) ಹೊರಡಿಸಲಾಗುವುದು ಎಂದು ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಪ್ರಕಟಿಸಿದರು.

ಹರದನಹಳ್ಳಿಯಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರು ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ
ಮಾಡಿರುವ ಕೃಷಿ ಸಾಲ 32,000 ಕೋಟಿ ರೂ. ಇದೆ. ಆ ಪೈಕಿ 2 ಲಕ್ಷ ರೂ.ವರೆಗೆ ಸುಸ್ತಿಸಾಲವನ್ನು ಮನ್ನಾ ಮಾಡಲು ನಿರ್ಧರಿಸಿರುವ ಸರ್ಕಾರ, ಸಾಲದ ಮೊತ್ತವನ್ನು 4 ಕಂತುಗಳಲ್ಲಿ ಬ್ಯಾಂಕುಗಳಿಗೆ ತುಂಬಿಕೊಡಲು ತೀರ್ಮಾನಿಸಿದೆ. ಮೊದಲ ಕಂತಿನ 6,500 ಕೋಟಿ ರೂ.ಗಳನ್ನು ಬಜೆಟ್‌ನಲ್ಲಿಯೇ ತೆಗೆದಿರಿಸಲಾಗಿದೆ.ಮುಂದಿನ ವರ್ಷದ ಬಜೆಟ್‌ನಲ್ಲಿ ಇನ್ನುಳಿದ 3 ಕಂತುಗಳ ಮೊತ್ತವನ್ನು ತೆಗೆದಿರಿಸಲು ಚಿಂತನೆ ನಡೆಸಿದ್ದೇನೆ ಎಂದರು.

ಸಾಲಮನ್ನಾ ಮಾಡಲು ನಾನೇನು ಜಾದೂ ಮಾಡುತ್ತಿಲ್ಲ. ಸರ್ಕಾರದ ಆದಾಯ ಸೋರಿಕೆ ತಡೆಯುವ ಪ್ರಯತ್ನ ಮಾಡಿ
ಅದರಲ್ಲಿನ ಉಳಿತಾಯವನ್ನು ಸಾಲಮನ್ನಾಕ್ಕೆ ಬಳಸಲಾಗುವುದು ಎಂದ ಅವರು, ಅಬಕಾರಿ ತೆರಿಗೆಯಲ್ಲಿ ಶೇ.7.8 ಸಂಗ್ರಹ ಹೆಚ್ಚಳವಾಗಿದೆ. ಜಿಎಸ್‌ಟಿ ಪಾಲಿನಲ್ಲಿ ಎಷ್ಟು ಸಂಗ್ರಹವಾಗುತ್ತದೆ ಎಂಬುದರ ಬಗ್ಗೆ ಲೆಕ್ಕಾಚಾರ ಮಾಡಲಾಗುತ್ತಿದೆ. ಆರ್ಥಿಕ ಶಿಸ್ತಿಗೆ ಧಕ್ಕೆಯಾಗದಂತೆ ಸಾಲಮನ್ನಾಕ್ಕೆ ಸಂಪನ್ಮೂಲ ಕ್ರೋಢೀಕರಿಸಲಾಗುತ್ತಿದೆ ಎಂದು ಹೇಳಿದರು.

ಮರಳು ನೀತಿ ಬದಲಾವಣೆ: ಅಕ್ರಮ ಮರಳು ದಂಧೆಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಮರಳು ನೀತಿಯಲ್ಲಿ ಬದಲಾವಣೆ
ತರಲಾಗುವುದು. ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿ ನೀತಿ ರೂಪಿಸಿ, ಜನ ಸಾಮಾನ್ಯರು
ಮನೆ ನಿರ್ಮಿಸಿಕೊಳ್ಳಲು, ಆಶ್ರಯ ಮನೆ, ಶೌಚಾಲಯ ನಿರ್ಮಾಣಕ್ಕೆ ಸುಲಭವಾಗಿ ಮರಳು ಸಿಗುವಂತೆ ಮಾಡಲಾಗುವುದು ಎಂದರು.

ಆಲಮಟ್ಟಿಗೆ ಮುಂದಿನ ವಾರ ಭೇಟಿ: ಆಲಮಟ್ಟಿಗೆ ಮುಂದಿನವಾರ ಭೇಟಿ ನೀಡಿ ಬಾಗಿನ ಅರ್ಪಿಸುವೆ ಎಂದ ಅವರು, ಬೆಳಗಾವಿಗೆ ಪ್ರಮುಖ ಕಚೇರಿಗಳನ್ನು ಸ್ಥಳಾಂತರ ಮಾಡುವ ಸಂಬಂಧ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ
ನೀಡಲಾಗಿದೆ ಎಂದು ಪ್ರತಿಕ್ರಿಯಿಸಿದರು.

ದೇವೇಗೌಡರ ಪರಿವಾರದ ಪೂಜೆ
ಸಿಎಂ ಕುಮಾರಸ್ವಾಮಿ ದಂಪತಿ ಸಹಿತ ಮಾಜಿ ಪ್ರಧಾನಿ ಎಚ್‌. ಡಿ.ದೇವೇಗೌಡರ ಪರಿವಾರ ಹುಟ್ಟೂರು ಹರದನಹಳ್ಳಿ ಈಶ್ವರ ದೇವಾಲಯ ಹಾಗೂ ಹೊಳೆನರಸೀಪುರದ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ದೇವಾಲಯಲ್ಲಿ ಶ್ರಾವಣಮಾಸದ ಪ್ರಥಮ ಸೋಮವಾರದ ಪೂಜೆ ನೆರವೇರಿಸಿದರು.

ಭಾನುವಾರ ರಾತ್ರಿಯೇ ಹಾಸನಕ್ಕೆ ಬಂದು ತಂಗಿದ್ದ ದೇವೇಗೌಡ ದಂಪತಿ ಹಾಗೂ ಕುಮಾರಸ್ವಾಮಿ ದಂಪತಿ ಸೋಮವಾರ ಮುಂಜಾನೆ 7 ಗಂಟೆಗೆ ಹರದನಹಳ್ಳಿಯ ಈಶ್ವರ ದೇವಾಲಯಕ್ಕೆ ಆಗಮಿಸುವ ವೇಳೆಗೆ ಲೋಕೋಪಯೋಗಿ ಸಚಿವ ಎಚ್‌.ಡಿ.ರೇವಣ್ಣ ನೇತೃತ್ವದಲ್ಲಿ ಪೂಜಾ ಕಾರ್ಯದ ಸಿದ್ಧತೆ ನಡೆದಿತ್ತು. ಬೆಳಗ್ಗೆ 7 ಗಂಟೆಯಿಂದ 10 ಗಂಟೆಯವರೆಗೂ ಎಚ್‌.ಡಿ.ದೇವೇಗೌಡ, ಚನ್ನಮ್ಮ, ಎಚ್‌.ಡಿ.ಕುಮಾರಸ್ವಾಮಿ, ಅನಿತಾ ಮತ್ತು ಎಚ್‌.ಡಿ.ರೇವಣ್ಣ ಪೂಜೆ ಸಲ್ಲಿಸಿದರು. ಬಳಿಕ ಹೊಳೆನರಸೀಪುರದ ಶ್ರೀ ಲಕ್ಷ್ಮೀನರಸಿಂಹಸ್ವಾಮಿ ದೇಗುಲದಲ್ಲಿ ಪೂಜೆ ಸಲ್ಲಿಸಿದರು. ಹರದನಹಳ್ಳಿಯ ದೇವಾಲಯದಲ್ಲಿ ರೇವಣ್ಣ, ನಗರ ಸ್ಥಳೀಯ ಸಂಸ್ಥೆಗಳ ಚುನಾವನೆಗೆ ಜೆಡಿಎಸ್‌ ವಿತರಿಸಲಿರುವ ಬಿ ಫಾರಂ ಮತ್ತು ಇತರೆ ದಾಖಲೆಗಳಿಗೂ ಪೂಜೆ ಮಾಡಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್‌ಗೆ ವಿನಾಯಿತಿ

1-wewqeqwe

NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ

raLok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್‌ ಗಾಂಧಿ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.